Homeಕರ್ನಾಟಕಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ - ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ

ಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ – ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ

- Advertisement -
- Advertisement -

ವಿಜಯ ನಗರ ಜಿಲ್ಲಾ ಉದ್ಘಾಟನೆಯ ಸಮಾರೋಪ ಸಮಾರಂಭದಲ್ಲಿ, ವೇದಿಕೆಯಲ್ಲಿ ಹಾಡು ಹಾಡುತ್ತಿದ್ದ ಗಾಯಕಿ ಹಿಂದುತ್ವದ ಪರವಾಗಿ ಘೋಷಣೆ ಕೂಗಿದ ಕಾರಣಕ್ಕೆ, ಕಾರ್ಯಕ್ರಮವನ್ನು ಮೊಟಕುಗೊಳಿಸಿರುವ ಘಟನೆ ಭಾನುವಾರ ವಿಜಯನಗರದಲ್ಲಿ ನಡೆದಿದೆ.

ನೂತನ ಜಿಲ್ಲೆ ಉದ್ಘಾಟನೆಯ ಸಮಾರೋಪ ಸಮಾರಂಭವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿತ್ತು. ಎರಡು ದಿನಗಳ ಈ ಕಾರ್ಯಕ್ರಮದಲ್ಲಿ ಹಲವಾರು ಸಾಂಸ್ಕೃತಿಕ ಪ್ರದರ್ಶನಗಳನ್ನೂ ಏರ್ಪಡಿಸಲಾಗಿತ್ತು. ಆದರೆ ಭಾನುವಾರ ನಡೆದ ಸಮಾರೋಪ ಸಮಾರಂಭದಲ್ಲಿ ಹಾಡುಗಾರ್ತಿ ಲಕ್ಷ್ಮಿದುಬೆ ಅವರು ಹಿಂದುತ್ವದ ಪರವಾಗಿ ಘೋಷಣೆಗಳನ್ನು ಕೂಗಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌‌ ಕಾರ್ಯಕ್ರಮವನ್ನು ಮೊಟಕುಗೊಳಿಸಲು ಆದೇಶಿದ್ದಾರೆ.

ಇದನ್ನೂ ಓದಿ: ಯುಪಿ ಸರ್ಕಾರದ ದಬ್ಬಾಳಿಕೆ ತಡೆಯಲು ಜಂಟಿ ವಿರೋಧದ ಅವಶ್ಯಕತೆಯಿದೆ- ಸಂಜಯ್ ರಾವತ್

ಲಕ್ಷ್ಮಿ ದುಬೆ ಅವರನ್ನು ಭಕ್ತಿಗೀತೆ ಹಾಡಿಸುವುದಾಗಿ ಗೊತ್ತು ಮಾಡಲಾಗಿತ್ತು. ಆದರೆ ಅವರು ವೇದಿಕೆಗೆ ಬರುವ ಮೊದಲೆ ಅವರದೇ ಕಲಾವಿದನೊಬ್ಬ ಲಕ್ಷ್ಮಿ ದುಬೆ ಮತ್ತು ಹಿಂದುತ್ವದ ಬಗ್ಗೆ ಹೊಗಳುವುದು ಸೇರಿದಂತೆ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದ್ದನು. (ವಿಡಿಯೊ ನೋಡಿ)

ನಂತರ ವೇದಿಕೆಗೆ ಆಗಮಿಸಿದ ಲಕ್ಷ್ಮಿ ದುಬೆ ಅವರು, ಅವಕಾಶ ನೀಡಿದ ಆನಂದ್ ಸಿಂಗ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಹಾಡುವುದಕ್ಕೆ ಮುಂಚೆಯೆ, ಅವರು ಕೂಡಾ ಹಿಂದುತ್ವದ ಗುಣಗಾಣ ಮಾಡುವುದಾಗಿ ಹೇಳಿದ್ದಾರೆ.

ಇದಾದ ನಂತರ ಹಾಡುವುದಕ್ಕೆ ಶುರುಮಾಡಿದ ಲಕ್ಷ್ಮಿ ಅವರು, ಹಾಡಿನ ಮಧ್ಯೆ, ‘‘ಶ್ರೀರಾಮನ ದರ್ಶನ ಪಡೆಯಲು ಸ್ವಲ್ಪ ಹೊತ್ತಾಗುತ್ತದೆ. ಭಗವಾಧ್ವಜದ ಬಲದ ಎದುರು ಬ್ರಹ್ಮಾಂಡವೆ ತಲೆಬಾಗಿಸುತ್ತದೆ. ಹೀಗಾಗಿಯೆ ನನ್ನ ಭಗವಾಧ್ವಜ ಎತ್ತರದಲ್ಲಿ ಹಾರಾಡುತ್ತಾ ಇರುತ್ತದೆ. ಕಣಕಣದಲ್ಲೂ ಶ್ರೀರಾಮ್‌ ಎಂದು ಬರೆಯುತ್ತೇವೆ. ಇಲ್ಲಿ ನನ್ನ ಅಣ್ಣ ಆನಂದ್ ಸಿಂಗ್‌ ಕೂತಿದ್ದಾರೆ” ಎಂದೆಲ್ಲಾ ಹೇಳಿದ್ದಾರೆ. (ವಿಡಿಯೊ ನೋಡಿ)

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಮರಣೋತ್ತರ ಪರೀಕ್ಷೆ ವರದಿ ಬರುವವರೆಗೂ ಅಂತ್ಯಸಂಸ್ಕಾರಕ್ಕೆ ಒಪ್ಪದ ಕುಟುಂಬ

ನಂತರ ಮತ್ತೆ ಹಾಡಲು ಶುರು ಮಾಡಿದ ಲಕ್ಷ್ಮಿ ಹಾಡಿನ ಮಧ್ಯೆ, “ಗೋ ಹತ್ಯೆಯನ್ನು ನಿಲ್ಲಿಸಿ, ಇದು ಪ್ರತಿ ಹಿಂದೂಗಳ ಮಾತಾಗಿದೆ. ಹಿಂದೂಸ್ಥಾನದಲ್ಲಿ ಇರಬೇಕೆಂದರೆ ವಂದೇ ಮಾತರಂ ಹೇಳಬೇಕು” ಎಂದು ಹೇಳಿದ್ದಲ್ಲದೆ, ಬಹಳ ದೇಶದ್ರೋಹಿಗಳು ಭಾರತದಲ್ಲಿ ಇದ್ದಾರೆ ಎಂದು ಅವರು ಹೇಳಿದ್ದಾರೆ.

ಇದರ ನಂತರ ಹಾಡು ಮುಗಿಸಿದ ಅವರು, “ಕರ್ನಾಟಕದಲ್ಲಿ ಮೊದಲ ಬಾರಿಗೆ ಹಿಂದುತ್ವದ ದೀಪ ಬೆಳಗಿಸಲು ನನ್ನ ಅಣ್ಣ ಆನಂದ್‌ ಸಿಂಗ್‌ ನನಗೆ ಅವಕಾಶ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

“ಶ್ರೀರಾಮನ ಮಂದಿರ ನಿರ್ಮಾಣದ ಬಗ್ಗೆ ಜನ ಹಲವು ವರ್ಷಗಳಿಂದ ಕನಸು ಕಾಣುತ್ತಿದ್ದರು. ಅದನ್ನು ಪ್ರಧಾನಿ ಮೋದಿಯವರು ಸಾಧ್ಯವಾಗಿಸಿದ್ದಾರೆ. ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ಮಾಡಿದ್ದಾರೆ… ಮೋದಿಯವರಿಗೆ ಇಲ್ಲಿಂದಲೇ ಸಾಷ್ಟಾಂಗ ನಮಸ್ಕಾರ ಮಾಡುವೆ. ಭಾರತದಲ್ಲಿ ಇರುವ ಶತ್ರುಗಳನ್ನು ಒದ್ದೋಡಿಸುವ ಸಮಯ ಬಂದಿದೆ” ಎಂದು ಹೇಳಿದ್ದಾರೆ. ಇದಕ್ಕೆ ಕಾರ್ಯಕ್ರಮದ ಸಂಘಟಕರು ಆಕ್ಷೇಪ ವ್ಯಕ್ತಪಡಿಸಿ, ಪದ ಬಳಕೆ ಮಾಡಬಾರದು ಎಂದು ಸೂಚಿಸಿದ್ದಾರೆ.

ಅದಾಗ್ಯೂ, ಇಷ್ಟಕ್ಕೆ ನಿಲ್ಲದ ಲಕ್ಷ್ಮಿ ಅವರು, ಮತ್ತೆ ಎರಡು ಲೈನ್ ಭಜನೆ ಹಾಡುವುದಾಗಿ ಅನುಮತಿ ಕೇಳಿದ್ದಾರೆ. ಈ ಸಮಯದಲ್ಲೂ ಲಕ್ಷ್ಮಿ ಅವರು, “ಎಲ್ಲೆಡೆ ಗೋ ಹತ್ಯೆ ನಿಲ್ಲಿಸುತ್ತೇವೆ, ಅದು ನಮ್ಮ ಸಂಕಿಲ್ಪ. ಅದು ಭಾರತದ ಫೋಷಣೆಯೂ ಹೌದು. ಭಾರತದ ಅಭಿಮಾನ ಹಿಂದೂ” ಎಂದು ಹಾಡಿದ್ದಾರೆ. (ವಿಡಿಯೊ ನೋಡಿ)

ಇದನ್ನೂ ಓದಿ: ನರೇಂದ್ರ ಮೋದಿಯವರೆ ಈ ವಿಡಿಯೋ ನೋಡಿದ್ದೀರಾ? ಪ್ರಿಯಾಂಕ ಗಾಂಧಿ ಆಕ್ರೋಶ

ಈ ವೇಳೆ ಬಹಳ ಸಿಟ್ಟಾದ ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌ ಅವರು ಅವರ ಕಾರ್ಯಕ್ರಮ ಮೊಟಕುಗೊಳಿಸಲು ಆದೇಶ ನೀಡಿದ್ದಾರೆ. ಜೊತೆಗೆ ಮುಖ್ಯವೇದಿಕೆಯ ವಿದ್ಯುತ್‌ ದೀಪ ಆರಿಸಲಾಗಿದೆ. ಬಳಿಕ ಲಕ್ಷ್ಮಿದುಬೆ ಮತ್ತು ಅವರ ತಂಡದವರು ವೇದಿಕೆಯಿಂದ ನಿರ್ಗಮಿಸಿದರು ಎಂದು ವರದಿಯಾಗಿದೆ. ಇದರ ನಂತರ ಕಾರ್ಯಕ್ರಮ ಮುಗಿದಿದೆ ಎಂದು ಸಂಘಟಕರು ಘೋಷಿಸಿದ್ದಾರೆ.

“ಲಕ್ಷ್ಮಿ ದುಬೆ ಅವರು ಭಕ್ತಿ ಗೀತೆ ಹಾಡುವುದಾಗಿ ಹೇಳಿದ್ದರು. ಆದರೆ ವೇದಿಕೆಯಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಈ ಬಗ್ಗೆ ಅವರನ್ನು ವಿವರಣೆ ಕೇಳಲಾಗಿದೆ” ಎಂದು ಘಟನೆಯ ಬಗ್ಗೆ ಜಿಲ್ಲಾಧಿಕಾರಿ ಅನಿರುದ್ದ್ ಪಿ. ಶ್ರವಣ್ ಹೇಳಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಉಂಟಾಗಿದ್ದು ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಘೋಷಣೆ ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, ಸಮಯಕ್ಕೆ ಸರಿಯಾಗಿ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿಗೆ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಜನರು ಅಭಿನಂಧನೆಗಳನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ: ವೈರುಧ್ಯಗಳ ನಡುವೆ ’ಪರ್ಯಾಯವಾಗಲು ಹೆಣಗುತ್ತಿರುವ’ ಕಾಂಗ್ರೆಸ್; ’ಪ್ರಾದೇಶಿಕ ಪಕ್ಷವಾಗದ’ ಜೆಡಿಎಸ್

ಇದನ್ನೂ ಓದಿ: ಬೆಳಗಾವಿ ಮುಸ್ಲಿಂ ಯುವಕನ ಬರ್ಬರ ಕೊಲೆ: 7 ಹಿಂದುತ್ವ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...