Homeಕರ್ನಾಟಕಮಹಿಷ ದಸರಾ: ಅಂಬಾರಿಯಲ್ಲಿ ಗಾಂಧಿ, ಅಂಬೇಡ್ಕರ್, ನಾಲ್ವಡಿ ಫೋಟೊ ಇರಲಿ - ಮಹೇಶ್ ಚಂದ್ರ ಗುರು

ಮಹಿಷ ದಸರಾ: ಅಂಬಾರಿಯಲ್ಲಿ ಗಾಂಧಿ, ಅಂಬೇಡ್ಕರ್, ನಾಲ್ವಡಿ ಫೋಟೊ ಇರಲಿ – ಮಹೇಶ್ ಚಂದ್ರ ಗುರು

- Advertisement -
- Advertisement -

ಮೈಸೂರು ದಸರಾ ಅಂಬಾರಿಯಲ್ಲಿ ಚಾಮುಂಡಿಯ ಬದಲಾಗಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿಯ ಭಾವಚಿತ್ರ, ಸಂವಿಧಾನ ರಚನೆ ಮಾಡಿದ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ, ಸರ್ವರ ಸಮಾನತೆಗೆ ಶ್ರಮಿಸಿದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರವನ್ನು ಇಟ್ಟು ಮೆರವಣಿಗೆ ಮಾಡಬೇಕು ಎಂದು ವಿಶ್ರಾಂತ ಪ್ರಾಧ್ಯಾಪಕ ಡಾ. ಬಿ.ಪಿ. ಮಹೇಶ್ ಚಂದ್ರ ಗುರು ಒತ್ತಾಯಿಸಿದರು.

ಮೈಸೂರಿನ ಅಶೋಕಪುರಂನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ನಡೆದ ಮಹಿಷ ದಸರಾದಲ್ಲಿ ಮಾತನಾಡಿದ ಅವರು “ಮೈಸೂರು ದಸರಾ ಆಚರಣೆಗೆ ನಾವು ವಿರೋಧಿಗಳಲ್ಲ. ಪ್ರತಿಷ್ಠೆಗೊಸ್ಕರ ಮಹಿಷ ದಸರಾ ಆಚರಣೆ ಮಾಡುತ್ತಿಲ್ಲ. ಮೌಲ್ಯಗಳಿಗೆ ಶರಣಾಗಿ, ಪ್ರಕೃತಿಗೆ, ಸಂವಿಧಾನಕ್ಕೆ, ಚರಿತ್ರೆಗೆ, ಮೂಲ ನಿವಾಸಿಗಳಿಗೆ ಶರಣಾಗಿ ಮಹಿಷ ದಸರಾವನ್ನು ಆಚರಣೆ ಮಾಡಲಾಗುತ್ತಿದೆ” ಎಂದರು.

ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡಿ, ಮಹಿಷಾ ದಸರಾ ವೈಜ್ಞಾನಿಕ ಮತ್ತು ವಿಜ್ಞಾನದ ದಸರಾ. ಇದು ಮೌಢ್ಯವಲ್ಲ, ಬೌದ್ಧ ದೀಕ್ಷೆ ಸ್ವೀಕರಿಸುವ ಸಮಾವೇಶವಾಗಿದೆ.  ಜಾಗೃತ ಸಮಾಜದಿಂದ ದೇಶವನ್ನು ಆಳುವುದಕ್ಕೆ ಸಾಧ್ಯ. ಸತ್ತ ಸಮಾಜದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ. ಆದ್ದರಿಂದ ನಾವು ಜಾಗೃತರಾಗಬೇಕು ಎಂದರು.

ಪ್ರಸ್ತುತ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿ ಶಿಕ್ಷಣ ಕ್ಷೇತ್ರವನ್ನು ಮತ್ತೆ ಸಾಂಪ್ರದಾಯಿಕ ವ್ಯವಸ್ಥೆಗೆ ತಗೆದುಕೊಂಡು ಹೋಗಲಾಗುತ್ತಿದೆ. ಗುರುಕುಲದ ಶಿಕ್ಷಣ ಪದ್ಧತಿ ಬರಲಿದೆ. ಮಡಕೆ ಮಾಡುವವರು, ಚಪ್ಪಲಿ ಹೊಲೆಯುವವರು, ಜೀತ ಮಾಡುವವರು ಜೀತ ಮಾಡಬೇಕೆಂದು ಎನ್‌ಇಪಿ ಬಯಸುತ್ತದೆ. ಇಂಥ ಶಿಕ್ಷಣ ನಮಗೆ ಬೇಕೆ ಎಂದು ಪ್ರಶ್ನಿಸಿದರು.

ಹಾಡುಹಗಲೇ ರೈತರ ಮೇಲೆ ಕಾರು ಹರಿಸಿ ರೈತರನ್ನು ಕೊಲೆ ಮಾಡಿದ್ದಾರೆ. ಕೊಲೆ ಮಾಡಿದವರನ್ನು ಬಂಧಿಸುವುದನ್ನು ಬಿಟ್ಟು, ಮೃತರ ಕುಟುಂಬ ಸದಸ್ಯರ ಭೇಟಿ ಮಾಡಲು ಹೋದ ಪ್ರಿಯಾಂಕಾ ಗಾಂಧಿಯನ್ನು ಬಂಧಿಸಿದ್ದಾರೆ. ಇಲ್ಲಿ ಸಂವಿಧಾನ ಗಾಳಿಗೆ ತೂರಿದ್ದಾರೆ. ಪ್ರಜಾಪ್ರಭುತ್ವ ಸತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇತಿಹಾಸ ತಜ್ಞ ಪ್ರೊ. ನಂಜರಾಜೇ ಅರಸ್ ಮಾತನಾಡಿ “ನಮ್ಮದು ಜಾತ್ಯತೀತ ರಾಷ್ಟ್ರ. ಸರ್ಕಾರದ ವತಿಯಿಂದ ಯಾವುದೇ ಧಾರ್ಮಿಕ ಆಚರಣೆಗಳನ್ನು ಮಾಡಬಾರದು ಎಂದು 1974ರಲ್ಲಿ ಸಂವಿಧಾನದ ತಿದ್ದುಪಡಿಯಲ್ಲಿ ಹೇಳಲಾಗಿದೆ. ಆದರೆ ಕರ್ನಾಟಕ ಸರ್ಕಾರ ಸಾರ್ವಜನಿಕರ ತೆರಿಗೆ ಹಣದಿಂದ, 7-8 ಕೋಟಿ ರೂಪಾಯಿ ಖರ್ಚು ಮಾಡಿ ದಸರಾವನ್ನು ಆಚರಣೆ ಮಾಡುತ್ತಿದೆ. ಇದು ಸಂವಿಧಾನದ ವಿರೋಧಿ ಕೆಲಸ ಎಂದರು.

ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ “ಹಿಂದೂ ಧರ್ಮ ಗುಲಾಮಗಿರಿ ಧರ್ಮ. ಶೇ.4ರಷ್ಟು ಜನರು ಶೇ.96ರಷ್ಟು ಜನರನ್ನು ಆಳುತ್ತಿದ್ದಾರೆ. ಈ ಬಹುಸಂಖ್ಯಾತರು ತಲೆ ಬೆಳೆಸಿಕೊಂಡಿಲ್ಲ. ಶೇ.ನಾಲ್ಕರಷ್ಟಿರುವ ಜನರ ಕೈಗೆ ತಲೆಯನ್ನು ಕೊಟ್ಟುಬಿಟ್ಟಿದ್ದಾರೆ. ಅವರು ಪಂಚಾಂಗಗಳ ಮೂಲಕ ನಿಮ್ಮನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳುತ್ತಿದ್ದಾರೆ. ಆದ್ದರಿಂದ ಬಹುಸಂಖ್ಯಾತರು ಸ್ವಂತ ಬುದ್ಧಿಶಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕೊಳ್ಳೇಗಾಲದ ಜೇತವನದ ಮನೋರಕ್ಖಿತ ಭಂತೇಜಿ, ನಾಗಬಸವ ಸ್ವಾಮೀಜಿ, ಡಾ.ಕೃಷ್ಣಮೂರ್ತಿ ಚಮರಂ, ಬೆಟ್ಟಯ್ಯ ಕೋಟೆ, ಚಿಕ್ಕಂದಾನಿ, ಸಿದ್ಧಸ್ವಾಮಿ, ಪಾಲಿಕೆ ಸದಸ್ಯರಾದ ಪಲ್ಲವಿ ಬೇಗಂ, ಜಪರಪ್ಪ, ಮಲೆಯೂರು ಸೋಮಣ್ಣ, ಎನ್.ಸಿದ್ದರಾಜು, ಚೋರನಹಳ್ಳಿ ಶಿವಣ್ಣ, ಬಿ.ಡಿ.ಶಿವಬುದ್ಧಿ, ಶಂಭುಲಿಂಗಸ್ವಾಮಿ, ಮರಂಕಯ್ಯ, ರಾಜಶೇಖರ ಕೋಟೆ, ಚುಂಚನಹಳ್ಳಿ ಮಲ್ಲೇಶ್, ನಗರ್ಲೆ ಎಂ.ವಿಜಯಕುಮಾರ್, ಕಾರ್ಯ ಬಸವಣ್ಣ, ಯಡದೊರೆ ಮಹಾದೇವಯ್ಯ, ಮಹೇಶ್ ಸೋಸ್ಲೆ, ಮರಿದೇವರು, ಈಶ್ವರ ಚಕ್ಕಡಿ, ಅಲಗೂಡು ಶಿವಕುಮಾರ್, ರೇವಣ್ಣ, ಮುದ್ದುಮಾದಯ್ಯ,ಬೈರಾಪುರ ರಾಮು ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.


ಇದನ್ನೂ ಓದಿ: ಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ – ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...