Homeಕರ್ನಾಟಕಮಹಿಷ ದಸರಾ: ಅಂಬಾರಿಯಲ್ಲಿ ಗಾಂಧಿ, ಅಂಬೇಡ್ಕರ್, ನಾಲ್ವಡಿ ಫೋಟೊ ಇರಲಿ - ಮಹೇಶ್ ಚಂದ್ರ ಗುರು

ಮಹಿಷ ದಸರಾ: ಅಂಬಾರಿಯಲ್ಲಿ ಗಾಂಧಿ, ಅಂಬೇಡ್ಕರ್, ನಾಲ್ವಡಿ ಫೋಟೊ ಇರಲಿ – ಮಹೇಶ್ ಚಂದ್ರ ಗುರು

- Advertisement -
- Advertisement -

ಮೈಸೂರು ದಸರಾ ಅಂಬಾರಿಯಲ್ಲಿ ಚಾಮುಂಡಿಯ ಬದಲಾಗಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿಯ ಭಾವಚಿತ್ರ, ಸಂವಿಧಾನ ರಚನೆ ಮಾಡಿದ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ, ಸರ್ವರ ಸಮಾನತೆಗೆ ಶ್ರಮಿಸಿದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರವನ್ನು ಇಟ್ಟು ಮೆರವಣಿಗೆ ಮಾಡಬೇಕು ಎಂದು ವಿಶ್ರಾಂತ ಪ್ರಾಧ್ಯಾಪಕ ಡಾ. ಬಿ.ಪಿ. ಮಹೇಶ್ ಚಂದ್ರ ಗುರು ಒತ್ತಾಯಿಸಿದರು.

ಮೈಸೂರಿನ ಅಶೋಕಪುರಂನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ನಡೆದ ಮಹಿಷ ದಸರಾದಲ್ಲಿ ಮಾತನಾಡಿದ ಅವರು “ಮೈಸೂರು ದಸರಾ ಆಚರಣೆಗೆ ನಾವು ವಿರೋಧಿಗಳಲ್ಲ. ಪ್ರತಿಷ್ಠೆಗೊಸ್ಕರ ಮಹಿಷ ದಸರಾ ಆಚರಣೆ ಮಾಡುತ್ತಿಲ್ಲ. ಮೌಲ್ಯಗಳಿಗೆ ಶರಣಾಗಿ, ಪ್ರಕೃತಿಗೆ, ಸಂವಿಧಾನಕ್ಕೆ, ಚರಿತ್ರೆಗೆ, ಮೂಲ ನಿವಾಸಿಗಳಿಗೆ ಶರಣಾಗಿ ಮಹಿಷ ದಸರಾವನ್ನು ಆಚರಣೆ ಮಾಡಲಾಗುತ್ತಿದೆ” ಎಂದರು.

ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡಿ, ಮಹಿಷಾ ದಸರಾ ವೈಜ್ಞಾನಿಕ ಮತ್ತು ವಿಜ್ಞಾನದ ದಸರಾ. ಇದು ಮೌಢ್ಯವಲ್ಲ, ಬೌದ್ಧ ದೀಕ್ಷೆ ಸ್ವೀಕರಿಸುವ ಸಮಾವೇಶವಾಗಿದೆ.  ಜಾಗೃತ ಸಮಾಜದಿಂದ ದೇಶವನ್ನು ಆಳುವುದಕ್ಕೆ ಸಾಧ್ಯ. ಸತ್ತ ಸಮಾಜದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ. ಆದ್ದರಿಂದ ನಾವು ಜಾಗೃತರಾಗಬೇಕು ಎಂದರು.

ಪ್ರಸ್ತುತ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿ ಶಿಕ್ಷಣ ಕ್ಷೇತ್ರವನ್ನು ಮತ್ತೆ ಸಾಂಪ್ರದಾಯಿಕ ವ್ಯವಸ್ಥೆಗೆ ತಗೆದುಕೊಂಡು ಹೋಗಲಾಗುತ್ತಿದೆ. ಗುರುಕುಲದ ಶಿಕ್ಷಣ ಪದ್ಧತಿ ಬರಲಿದೆ. ಮಡಕೆ ಮಾಡುವವರು, ಚಪ್ಪಲಿ ಹೊಲೆಯುವವರು, ಜೀತ ಮಾಡುವವರು ಜೀತ ಮಾಡಬೇಕೆಂದು ಎನ್‌ಇಪಿ ಬಯಸುತ್ತದೆ. ಇಂಥ ಶಿಕ್ಷಣ ನಮಗೆ ಬೇಕೆ ಎಂದು ಪ್ರಶ್ನಿಸಿದರು.

ಹಾಡುಹಗಲೇ ರೈತರ ಮೇಲೆ ಕಾರು ಹರಿಸಿ ರೈತರನ್ನು ಕೊಲೆ ಮಾಡಿದ್ದಾರೆ. ಕೊಲೆ ಮಾಡಿದವರನ್ನು ಬಂಧಿಸುವುದನ್ನು ಬಿಟ್ಟು, ಮೃತರ ಕುಟುಂಬ ಸದಸ್ಯರ ಭೇಟಿ ಮಾಡಲು ಹೋದ ಪ್ರಿಯಾಂಕಾ ಗಾಂಧಿಯನ್ನು ಬಂಧಿಸಿದ್ದಾರೆ. ಇಲ್ಲಿ ಸಂವಿಧಾನ ಗಾಳಿಗೆ ತೂರಿದ್ದಾರೆ. ಪ್ರಜಾಪ್ರಭುತ್ವ ಸತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇತಿಹಾಸ ತಜ್ಞ ಪ್ರೊ. ನಂಜರಾಜೇ ಅರಸ್ ಮಾತನಾಡಿ “ನಮ್ಮದು ಜಾತ್ಯತೀತ ರಾಷ್ಟ್ರ. ಸರ್ಕಾರದ ವತಿಯಿಂದ ಯಾವುದೇ ಧಾರ್ಮಿಕ ಆಚರಣೆಗಳನ್ನು ಮಾಡಬಾರದು ಎಂದು 1974ರಲ್ಲಿ ಸಂವಿಧಾನದ ತಿದ್ದುಪಡಿಯಲ್ಲಿ ಹೇಳಲಾಗಿದೆ. ಆದರೆ ಕರ್ನಾಟಕ ಸರ್ಕಾರ ಸಾರ್ವಜನಿಕರ ತೆರಿಗೆ ಹಣದಿಂದ, 7-8 ಕೋಟಿ ರೂಪಾಯಿ ಖರ್ಚು ಮಾಡಿ ದಸರಾವನ್ನು ಆಚರಣೆ ಮಾಡುತ್ತಿದೆ. ಇದು ಸಂವಿಧಾನದ ವಿರೋಧಿ ಕೆಲಸ ಎಂದರು.

ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ “ಹಿಂದೂ ಧರ್ಮ ಗುಲಾಮಗಿರಿ ಧರ್ಮ. ಶೇ.4ರಷ್ಟು ಜನರು ಶೇ.96ರಷ್ಟು ಜನರನ್ನು ಆಳುತ್ತಿದ್ದಾರೆ. ಈ ಬಹುಸಂಖ್ಯಾತರು ತಲೆ ಬೆಳೆಸಿಕೊಂಡಿಲ್ಲ. ಶೇ.ನಾಲ್ಕರಷ್ಟಿರುವ ಜನರ ಕೈಗೆ ತಲೆಯನ್ನು ಕೊಟ್ಟುಬಿಟ್ಟಿದ್ದಾರೆ. ಅವರು ಪಂಚಾಂಗಗಳ ಮೂಲಕ ನಿಮ್ಮನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳುತ್ತಿದ್ದಾರೆ. ಆದ್ದರಿಂದ ಬಹುಸಂಖ್ಯಾತರು ಸ್ವಂತ ಬುದ್ಧಿಶಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕೊಳ್ಳೇಗಾಲದ ಜೇತವನದ ಮನೋರಕ್ಖಿತ ಭಂತೇಜಿ, ನಾಗಬಸವ ಸ್ವಾಮೀಜಿ, ಡಾ.ಕೃಷ್ಣಮೂರ್ತಿ ಚಮರಂ, ಬೆಟ್ಟಯ್ಯ ಕೋಟೆ, ಚಿಕ್ಕಂದಾನಿ, ಸಿದ್ಧಸ್ವಾಮಿ, ಪಾಲಿಕೆ ಸದಸ್ಯರಾದ ಪಲ್ಲವಿ ಬೇಗಂ, ಜಪರಪ್ಪ, ಮಲೆಯೂರು ಸೋಮಣ್ಣ, ಎನ್.ಸಿದ್ದರಾಜು, ಚೋರನಹಳ್ಳಿ ಶಿವಣ್ಣ, ಬಿ.ಡಿ.ಶಿವಬುದ್ಧಿ, ಶಂಭುಲಿಂಗಸ್ವಾಮಿ, ಮರಂಕಯ್ಯ, ರಾಜಶೇಖರ ಕೋಟೆ, ಚುಂಚನಹಳ್ಳಿ ಮಲ್ಲೇಶ್, ನಗರ್ಲೆ ಎಂ.ವಿಜಯಕುಮಾರ್, ಕಾರ್ಯ ಬಸವಣ್ಣ, ಯಡದೊರೆ ಮಹಾದೇವಯ್ಯ, ಮಹೇಶ್ ಸೋಸ್ಲೆ, ಮರಿದೇವರು, ಈಶ್ವರ ಚಕ್ಕಡಿ, ಅಲಗೂಡು ಶಿವಕುಮಾರ್, ರೇವಣ್ಣ, ಮುದ್ದುಮಾದಯ್ಯ,ಬೈರಾಪುರ ರಾಮು ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.


ಇದನ್ನೂ ಓದಿ: ಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ – ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...