Homeಕರ್ನಾಟಕಮಹಿಷ ದಸರಾ: ಅಂಬಾರಿಯಲ್ಲಿ ಗಾಂಧಿ, ಅಂಬೇಡ್ಕರ್, ನಾಲ್ವಡಿ ಫೋಟೊ ಇರಲಿ - ಮಹೇಶ್ ಚಂದ್ರ ಗುರು

ಮಹಿಷ ದಸರಾ: ಅಂಬಾರಿಯಲ್ಲಿ ಗಾಂಧಿ, ಅಂಬೇಡ್ಕರ್, ನಾಲ್ವಡಿ ಫೋಟೊ ಇರಲಿ – ಮಹೇಶ್ ಚಂದ್ರ ಗುರು

- Advertisement -
- Advertisement -

ಮೈಸೂರು ದಸರಾ ಅಂಬಾರಿಯಲ್ಲಿ ಚಾಮುಂಡಿಯ ಬದಲಾಗಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿಯ ಭಾವಚಿತ್ರ, ಸಂವಿಧಾನ ರಚನೆ ಮಾಡಿದ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ, ಸರ್ವರ ಸಮಾನತೆಗೆ ಶ್ರಮಿಸಿದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರವನ್ನು ಇಟ್ಟು ಮೆರವಣಿಗೆ ಮಾಡಬೇಕು ಎಂದು ವಿಶ್ರಾಂತ ಪ್ರಾಧ್ಯಾಪಕ ಡಾ. ಬಿ.ಪಿ. ಮಹೇಶ್ ಚಂದ್ರ ಗುರು ಒತ್ತಾಯಿಸಿದರು.

ಮೈಸೂರಿನ ಅಶೋಕಪುರಂನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ನಡೆದ ಮಹಿಷ ದಸರಾದಲ್ಲಿ ಮಾತನಾಡಿದ ಅವರು “ಮೈಸೂರು ದಸರಾ ಆಚರಣೆಗೆ ನಾವು ವಿರೋಧಿಗಳಲ್ಲ. ಪ್ರತಿಷ್ಠೆಗೊಸ್ಕರ ಮಹಿಷ ದಸರಾ ಆಚರಣೆ ಮಾಡುತ್ತಿಲ್ಲ. ಮೌಲ್ಯಗಳಿಗೆ ಶರಣಾಗಿ, ಪ್ರಕೃತಿಗೆ, ಸಂವಿಧಾನಕ್ಕೆ, ಚರಿತ್ರೆಗೆ, ಮೂಲ ನಿವಾಸಿಗಳಿಗೆ ಶರಣಾಗಿ ಮಹಿಷ ದಸರಾವನ್ನು ಆಚರಣೆ ಮಾಡಲಾಗುತ್ತಿದೆ” ಎಂದರು.

ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡಿ, ಮಹಿಷಾ ದಸರಾ ವೈಜ್ಞಾನಿಕ ಮತ್ತು ವಿಜ್ಞಾನದ ದಸರಾ. ಇದು ಮೌಢ್ಯವಲ್ಲ, ಬೌದ್ಧ ದೀಕ್ಷೆ ಸ್ವೀಕರಿಸುವ ಸಮಾವೇಶವಾಗಿದೆ.  ಜಾಗೃತ ಸಮಾಜದಿಂದ ದೇಶವನ್ನು ಆಳುವುದಕ್ಕೆ ಸಾಧ್ಯ. ಸತ್ತ ಸಮಾಜದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ. ಆದ್ದರಿಂದ ನಾವು ಜಾಗೃತರಾಗಬೇಕು ಎಂದರು.

ಪ್ರಸ್ತುತ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿ ಶಿಕ್ಷಣ ಕ್ಷೇತ್ರವನ್ನು ಮತ್ತೆ ಸಾಂಪ್ರದಾಯಿಕ ವ್ಯವಸ್ಥೆಗೆ ತಗೆದುಕೊಂಡು ಹೋಗಲಾಗುತ್ತಿದೆ. ಗುರುಕುಲದ ಶಿಕ್ಷಣ ಪದ್ಧತಿ ಬರಲಿದೆ. ಮಡಕೆ ಮಾಡುವವರು, ಚಪ್ಪಲಿ ಹೊಲೆಯುವವರು, ಜೀತ ಮಾಡುವವರು ಜೀತ ಮಾಡಬೇಕೆಂದು ಎನ್‌ಇಪಿ ಬಯಸುತ್ತದೆ. ಇಂಥ ಶಿಕ್ಷಣ ನಮಗೆ ಬೇಕೆ ಎಂದು ಪ್ರಶ್ನಿಸಿದರು.

ಹಾಡುಹಗಲೇ ರೈತರ ಮೇಲೆ ಕಾರು ಹರಿಸಿ ರೈತರನ್ನು ಕೊಲೆ ಮಾಡಿದ್ದಾರೆ. ಕೊಲೆ ಮಾಡಿದವರನ್ನು ಬಂಧಿಸುವುದನ್ನು ಬಿಟ್ಟು, ಮೃತರ ಕುಟುಂಬ ಸದಸ್ಯರ ಭೇಟಿ ಮಾಡಲು ಹೋದ ಪ್ರಿಯಾಂಕಾ ಗಾಂಧಿಯನ್ನು ಬಂಧಿಸಿದ್ದಾರೆ. ಇಲ್ಲಿ ಸಂವಿಧಾನ ಗಾಳಿಗೆ ತೂರಿದ್ದಾರೆ. ಪ್ರಜಾಪ್ರಭುತ್ವ ಸತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇತಿಹಾಸ ತಜ್ಞ ಪ್ರೊ. ನಂಜರಾಜೇ ಅರಸ್ ಮಾತನಾಡಿ “ನಮ್ಮದು ಜಾತ್ಯತೀತ ರಾಷ್ಟ್ರ. ಸರ್ಕಾರದ ವತಿಯಿಂದ ಯಾವುದೇ ಧಾರ್ಮಿಕ ಆಚರಣೆಗಳನ್ನು ಮಾಡಬಾರದು ಎಂದು 1974ರಲ್ಲಿ ಸಂವಿಧಾನದ ತಿದ್ದುಪಡಿಯಲ್ಲಿ ಹೇಳಲಾಗಿದೆ. ಆದರೆ ಕರ್ನಾಟಕ ಸರ್ಕಾರ ಸಾರ್ವಜನಿಕರ ತೆರಿಗೆ ಹಣದಿಂದ, 7-8 ಕೋಟಿ ರೂಪಾಯಿ ಖರ್ಚು ಮಾಡಿ ದಸರಾವನ್ನು ಆಚರಣೆ ಮಾಡುತ್ತಿದೆ. ಇದು ಸಂವಿಧಾನದ ವಿರೋಧಿ ಕೆಲಸ ಎಂದರು.

ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ “ಹಿಂದೂ ಧರ್ಮ ಗುಲಾಮಗಿರಿ ಧರ್ಮ. ಶೇ.4ರಷ್ಟು ಜನರು ಶೇ.96ರಷ್ಟು ಜನರನ್ನು ಆಳುತ್ತಿದ್ದಾರೆ. ಈ ಬಹುಸಂಖ್ಯಾತರು ತಲೆ ಬೆಳೆಸಿಕೊಂಡಿಲ್ಲ. ಶೇ.ನಾಲ್ಕರಷ್ಟಿರುವ ಜನರ ಕೈಗೆ ತಲೆಯನ್ನು ಕೊಟ್ಟುಬಿಟ್ಟಿದ್ದಾರೆ. ಅವರು ಪಂಚಾಂಗಗಳ ಮೂಲಕ ನಿಮ್ಮನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳುತ್ತಿದ್ದಾರೆ. ಆದ್ದರಿಂದ ಬಹುಸಂಖ್ಯಾತರು ಸ್ವಂತ ಬುದ್ಧಿಶಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕೊಳ್ಳೇಗಾಲದ ಜೇತವನದ ಮನೋರಕ್ಖಿತ ಭಂತೇಜಿ, ನಾಗಬಸವ ಸ್ವಾಮೀಜಿ, ಡಾ.ಕೃಷ್ಣಮೂರ್ತಿ ಚಮರಂ, ಬೆಟ್ಟಯ್ಯ ಕೋಟೆ, ಚಿಕ್ಕಂದಾನಿ, ಸಿದ್ಧಸ್ವಾಮಿ, ಪಾಲಿಕೆ ಸದಸ್ಯರಾದ ಪಲ್ಲವಿ ಬೇಗಂ, ಜಪರಪ್ಪ, ಮಲೆಯೂರು ಸೋಮಣ್ಣ, ಎನ್.ಸಿದ್ದರಾಜು, ಚೋರನಹಳ್ಳಿ ಶಿವಣ್ಣ, ಬಿ.ಡಿ.ಶಿವಬುದ್ಧಿ, ಶಂಭುಲಿಂಗಸ್ವಾಮಿ, ಮರಂಕಯ್ಯ, ರಾಜಶೇಖರ ಕೋಟೆ, ಚುಂಚನಹಳ್ಳಿ ಮಲ್ಲೇಶ್, ನಗರ್ಲೆ ಎಂ.ವಿಜಯಕುಮಾರ್, ಕಾರ್ಯ ಬಸವಣ್ಣ, ಯಡದೊರೆ ಮಹಾದೇವಯ್ಯ, ಮಹೇಶ್ ಸೋಸ್ಲೆ, ಮರಿದೇವರು, ಈಶ್ವರ ಚಕ್ಕಡಿ, ಅಲಗೂಡು ಶಿವಕುಮಾರ್, ರೇವಣ್ಣ, ಮುದ್ದುಮಾದಯ್ಯ,ಬೈರಾಪುರ ರಾಮು ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.


ಇದನ್ನೂ ಓದಿ: ಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ – ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...