Homeಮುಖಪುಟಲಖಿಂಪುರ್‌‌ ಘಟನೆಯಲ್ಲಿ ಪತ್ರಕರ್ತನ ಹತ್ಯೆ: ನ್ಯಾಯಾಂಗ ತನಿಖೆಗೆ ಎಡಿಟರ್ಸ್‌ ಗಿಲ್ಡ್‌ ಆಗ್ರಹ

ಲಖಿಂಪುರ್‌‌ ಘಟನೆಯಲ್ಲಿ ಪತ್ರಕರ್ತನ ಹತ್ಯೆ: ನ್ಯಾಯಾಂಗ ತನಿಖೆಗೆ ಎಡಿಟರ್ಸ್‌ ಗಿಲ್ಡ್‌ ಆಗ್ರಹ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ಖೇರಿಯಲ್ಲಿ ರೈತರ ಮೇಲೆ ಸಚಿವರ ಪುತ್ರ ಹಾಗೂ ಆತನ ಗೂಂಡಾಪಡೆ ವಾಹನಗಳನ್ನು ಹತ್ತಿಸಿ ಕೊಲ್ಲುವ ವೇಳೆ ಓರ್ವ ಪತ್ರಕರ್ತನೂ ಹತ್ಯೆಗೀಡಾಗಿದ್ದಾನೆ.

ವರದಿಗಾರಿಕೆಗೆ ತೆರಳಿದ್ದ ಪತ್ರಕರ್ತ ರಮಣ್‌ ಕಶ್ಯಪ್‌ ಅವರು ಭಾನುವಾರ ನಡೆದ ಘಟನೆಯಲ್ಲಿ ಸಾವಿಗೀಡಾಗಿದ್ದಾರೆ. ಪತ್ರಕರ್ತನ ಸಾವಿನ ತನಿಖೆಗೆ ನ್ಯಾಯಾಂಗ ನೇತೃತ್ವದಲ್ಲಿ ವಿಶೇಷ ತನಿಖಾ ದಳ ರಚಿಸಬೇಕು ಎಂದು ಭಾರತದ ಎಡಿಟರ್ಸ್ ಗಿಲ್ಡ್‌ ಒತ್ತಾಯಿಸಿದೆ.

ಘಟನೆಯ ತನಿಖೆ ನಡೆಸಲು ಕಶ್ಯಪ್‌ ಅವರ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ಪಡೆದುಕೊಳ್ಳಬೇಕು ಎಂದು ಪತ್ರಕರ್ತರ ಸಂಘ ಒತ್ತಾಯಿಸಿದೆ.

“ಭಯೋತ್ಪಾದಕರ ದಾಳಿ ಎಂದರೆ ರೈತರಲ್ಲಿ ಭಯವನ್ನು ಹುಟ್ಟಿಸುವುದು ಎಂದರ್ಥ. ಪತ್ರಕರ್ತ ಕಶ್ಯಪ್‌ ಅವರ ಕೊಲೆಯು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ” ಎಂದು ಗಿಲ್ಡ್‌ ಹೇಳಿಕೆ ನೀಡಿದೆ.

ಕಶ್ಯಪ್‌ ಅವರ ಸಾವಿನ ಕುರಿತು ವಿವಿಧ ಅಭಿಪ್ರಾಯಗಳಿವೆ. “ಸ್ಪಷ್ಟವಾಗುವ ಸಂಗತಿ ಎಂದರೆ ಪ್ರತಿಭಟನೆಗೆ ತೆರಳಿದ್ದ ರೈತರ ಮೇಲೆ ವಾಹನಗಳು ಹರಿದಾಗ, ರೈತರೊಂದಿಗೆ ತಪ್ಪಿಸಿಕೊಳ್ಳಲು ಯತ್ನಿಸುವಾಗ ಕಶ್ಯಪ್‌ ಅವರನ್ನೂ ಕೊಲ್ಲಲಾಗಿದೆ” ಎಂದು ಗಿಲ್ಡ್‌ ಅಭಿಪ್ರಾಯಪಟ್ಟಿದೆ.

ಕಶ್ಯಪ್‌ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವ ಜೊತೆಗೆ, ಕಶ್ಯಪ್‌ ಅವರ ಪತ್ನಿಗೆ ಸರ್ಕಾರ ಉದ್ಯೋಗವನ್ನು ನೀಡಬೇಕು ಎಂದು ಲಿಖಿಂಪುರ್‌ ಖೇರಿಯ ಪತ್ರಕರ್ತರು ಒತ್ತಾಯಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿರಿ: ಲಖಿಂಪುರ್ ರೈತರ ಹತ್ಯೆ ಪ್ರಕರಣ: ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಸಚಿವರ ಪುತ್ರ ಕೃತ್ಯದಲ್ಲಿ ಭಾಗಿ: ಗಾಯಾಳು ರೈತ ಹೇಳಿಕೆ

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ಕು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ ಎರಡು ದಿನಗಳ ನಂತರ ಗಾಯಾಳು ರೈತ ಮುಖಂಡ ಹೇಳಿಕೆ ನೀಡಿದ್ದು, ಪ್ರತಿಭಟನಾಕಾರರ ಮೇಲೆ ಹರಿದ ಕಾರನ್ನು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಚಾಲನೆ ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ.

ದೆಹಲಿಯ ಮೇದಂತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ರೈತ ಮುಖಂಡ ತೇಜಿಂದರ್ ಸಿಂಗ್ ವಿರ್ಕ್, 72 ಗಂಟೆಗಳ ನಂತರವೂ ಆರೋಪಿಗಳನ್ನು ಬಂಧಿಸದಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ.

ಭಾನುವಾರ ಕೇಂದ್ರ ಸಚಿವ ಅಜಯ್ ಮಿಶ್ರಾ ಭೇಟಿ ಮತ್ತು ಉಪಮುಖ್ಯಮಂತ್ರಿ ಕೇಶವ್ ಶರ್ಮಾ ವಿರುದ್ಧ ನಡೆದ ಪ್ರತಿಭಟನೆಯನ್ನು ರೈತ ಮುಖಂಡ ಮತ್ತು ಎಸ್‌ಕೆಎಂ ಸದಸ್ಯ ತೇಜಿಂದರ್ ಸಿಂಗ್ ವಿರ್ಕ್ ಆಯೋಜಿಸಿದ್ದರು.

ಜೊತೆಗೆ ಮಾತನಾಡಿರುವ ತೇಜಿಂದರ್ ವಿರ್ಕ್, “ಇದು ನಮ್ಮನ್ನು ಕೊಲ್ಲುವ ಪಿತೂರಿಯಾಗಿತ್ತು. ಅಜಯ್ ಮಿಶ್ರಾ ಅವರು ಲಖಿಂಪುರವನ್ನು ಬಿಟ್ಟು ಉತ್ತರ ಪ್ರದೇಶದಲ್ಲಿ ರೈತರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯ ವಿರುದ್ಧ ನಾವು ಪ್ರತಿಭಟನೆ ನಡೆಸುತ್ತಿದ್ದೆವು. ನಾವು ಪೊಲೀಸರು ಮತ್ತು ಆಡಳಿತದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೆವು. ಅವರ ಮೇಲೆ ಕಪ್ಪು ಬಾವುಟ ಬೀಸಲು ಮಾರ್ಗದುದ್ದಕ್ಕೂ ನಿಂತಿದ್ದೆವು” ಎಂದಿದ್ದಾರೆ.

“ಅವರ ಮಾರ್ಗ ಬದಲಾಗಿದೆ ಎಂದು ನಮಗೆ ಮಧ್ಯಾಹ್ನ 3 ಗಂಟೆಗೆ ತಿಳಿಯಿತು. ನಾವು ಶಾಂತಿಯುತವಾಗಿ ಹಿಂತಿರುಗಲಾರಂಭಿಸಿದೆವು. ಇದ್ದಕ್ಕಿದ್ದಂತೆ, ವೇಗವಾಗಿ ಬಂದ ಕಾರುಗಳು ನಮಗೆ ಹಿಂದಿನಿಂದ ಡಿಕ್ಕಿ ಹೊಡೆದವು. ಕಾರು ಗಂಟೆಗೆ 100 ಕಿಮೀ ವೇಗದಲ್ಲಿತ್ತು. ಅವರು ಉದ್ದೇಶಪೂರ್ವಕವಾಗಿ ನಮ್ಮ ಮೇಲೆ ಕಾರು ಹರಿಸಿದರು. ಅಜಯ್ ಮಿಶ್ರಾ ಅವರ ಮಗ ಮತ್ತು ಅವನ ಸಹಚರರು ಕಾರಿನಲ್ಲಿದ್ದರು. ಆಗ ನನಗೆ ಪ್ರಜ್ಞೆ ತಪ್ಪಿತು” ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸಚಿವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿರುವ ರೈತ ಮುಖಂಡ, “ನಾನು ಸಾಕ್ಷಿ ಹೇಳಲು ಸಿದ್ಧನಿದ್ದೇನೆ. ಯೋಗಿ ಆದಿತ್ಯನಾಥ್ ಸರ್ಕಾರ ದಾಳಿಕೋರರಿಗೆ ಸಹಾಯ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಭಾನುವಾರದ ಹಿಂಸಾಚಾರದಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯ ತೇಜಿಂದರ್ ಸಿಂಗ್ ವಿರ್ಕ್ ಸದ್ಯ ದೆಹಲಿಯ ಮೇದಂತದಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿರಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಲು ವಕೀಲರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...