Homeಮುಖಪುಟಲಖಿಂಪುರ್‌‌ ಘಟನೆಯಲ್ಲಿ ಪತ್ರಕರ್ತನ ಹತ್ಯೆ: ನ್ಯಾಯಾಂಗ ತನಿಖೆಗೆ ಎಡಿಟರ್ಸ್‌ ಗಿಲ್ಡ್‌ ಆಗ್ರಹ

ಲಖಿಂಪುರ್‌‌ ಘಟನೆಯಲ್ಲಿ ಪತ್ರಕರ್ತನ ಹತ್ಯೆ: ನ್ಯಾಯಾಂಗ ತನಿಖೆಗೆ ಎಡಿಟರ್ಸ್‌ ಗಿಲ್ಡ್‌ ಆಗ್ರಹ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ಖೇರಿಯಲ್ಲಿ ರೈತರ ಮೇಲೆ ಸಚಿವರ ಪುತ್ರ ಹಾಗೂ ಆತನ ಗೂಂಡಾಪಡೆ ವಾಹನಗಳನ್ನು ಹತ್ತಿಸಿ ಕೊಲ್ಲುವ ವೇಳೆ ಓರ್ವ ಪತ್ರಕರ್ತನೂ ಹತ್ಯೆಗೀಡಾಗಿದ್ದಾನೆ.

ವರದಿಗಾರಿಕೆಗೆ ತೆರಳಿದ್ದ ಪತ್ರಕರ್ತ ರಮಣ್‌ ಕಶ್ಯಪ್‌ ಅವರು ಭಾನುವಾರ ನಡೆದ ಘಟನೆಯಲ್ಲಿ ಸಾವಿಗೀಡಾಗಿದ್ದಾರೆ. ಪತ್ರಕರ್ತನ ಸಾವಿನ ತನಿಖೆಗೆ ನ್ಯಾಯಾಂಗ ನೇತೃತ್ವದಲ್ಲಿ ವಿಶೇಷ ತನಿಖಾ ದಳ ರಚಿಸಬೇಕು ಎಂದು ಭಾರತದ ಎಡಿಟರ್ಸ್ ಗಿಲ್ಡ್‌ ಒತ್ತಾಯಿಸಿದೆ.

ಘಟನೆಯ ತನಿಖೆ ನಡೆಸಲು ಕಶ್ಯಪ್‌ ಅವರ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ಪಡೆದುಕೊಳ್ಳಬೇಕು ಎಂದು ಪತ್ರಕರ್ತರ ಸಂಘ ಒತ್ತಾಯಿಸಿದೆ.

“ಭಯೋತ್ಪಾದಕರ ದಾಳಿ ಎಂದರೆ ರೈತರಲ್ಲಿ ಭಯವನ್ನು ಹುಟ್ಟಿಸುವುದು ಎಂದರ್ಥ. ಪತ್ರಕರ್ತ ಕಶ್ಯಪ್‌ ಅವರ ಕೊಲೆಯು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ” ಎಂದು ಗಿಲ್ಡ್‌ ಹೇಳಿಕೆ ನೀಡಿದೆ.

ಕಶ್ಯಪ್‌ ಅವರ ಸಾವಿನ ಕುರಿತು ವಿವಿಧ ಅಭಿಪ್ರಾಯಗಳಿವೆ. “ಸ್ಪಷ್ಟವಾಗುವ ಸಂಗತಿ ಎಂದರೆ ಪ್ರತಿಭಟನೆಗೆ ತೆರಳಿದ್ದ ರೈತರ ಮೇಲೆ ವಾಹನಗಳು ಹರಿದಾಗ, ರೈತರೊಂದಿಗೆ ತಪ್ಪಿಸಿಕೊಳ್ಳಲು ಯತ್ನಿಸುವಾಗ ಕಶ್ಯಪ್‌ ಅವರನ್ನೂ ಕೊಲ್ಲಲಾಗಿದೆ” ಎಂದು ಗಿಲ್ಡ್‌ ಅಭಿಪ್ರಾಯಪಟ್ಟಿದೆ.

ಕಶ್ಯಪ್‌ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವ ಜೊತೆಗೆ, ಕಶ್ಯಪ್‌ ಅವರ ಪತ್ನಿಗೆ ಸರ್ಕಾರ ಉದ್ಯೋಗವನ್ನು ನೀಡಬೇಕು ಎಂದು ಲಿಖಿಂಪುರ್‌ ಖೇರಿಯ ಪತ್ರಕರ್ತರು ಒತ್ತಾಯಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿರಿ: ಲಖಿಂಪುರ್ ರೈತರ ಹತ್ಯೆ ಪ್ರಕರಣ: ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಸಚಿವರ ಪುತ್ರ ಕೃತ್ಯದಲ್ಲಿ ಭಾಗಿ: ಗಾಯಾಳು ರೈತ ಹೇಳಿಕೆ

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ಕು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ ಎರಡು ದಿನಗಳ ನಂತರ ಗಾಯಾಳು ರೈತ ಮುಖಂಡ ಹೇಳಿಕೆ ನೀಡಿದ್ದು, ಪ್ರತಿಭಟನಾಕಾರರ ಮೇಲೆ ಹರಿದ ಕಾರನ್ನು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಚಾಲನೆ ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ.

ದೆಹಲಿಯ ಮೇದಂತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ರೈತ ಮುಖಂಡ ತೇಜಿಂದರ್ ಸಿಂಗ್ ವಿರ್ಕ್, 72 ಗಂಟೆಗಳ ನಂತರವೂ ಆರೋಪಿಗಳನ್ನು ಬಂಧಿಸದಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ.

ಭಾನುವಾರ ಕೇಂದ್ರ ಸಚಿವ ಅಜಯ್ ಮಿಶ್ರಾ ಭೇಟಿ ಮತ್ತು ಉಪಮುಖ್ಯಮಂತ್ರಿ ಕೇಶವ್ ಶರ್ಮಾ ವಿರುದ್ಧ ನಡೆದ ಪ್ರತಿಭಟನೆಯನ್ನು ರೈತ ಮುಖಂಡ ಮತ್ತು ಎಸ್‌ಕೆಎಂ ಸದಸ್ಯ ತೇಜಿಂದರ್ ಸಿಂಗ್ ವಿರ್ಕ್ ಆಯೋಜಿಸಿದ್ದರು.

ಜೊತೆಗೆ ಮಾತನಾಡಿರುವ ತೇಜಿಂದರ್ ವಿರ್ಕ್, “ಇದು ನಮ್ಮನ್ನು ಕೊಲ್ಲುವ ಪಿತೂರಿಯಾಗಿತ್ತು. ಅಜಯ್ ಮಿಶ್ರಾ ಅವರು ಲಖಿಂಪುರವನ್ನು ಬಿಟ್ಟು ಉತ್ತರ ಪ್ರದೇಶದಲ್ಲಿ ರೈತರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯ ವಿರುದ್ಧ ನಾವು ಪ್ರತಿಭಟನೆ ನಡೆಸುತ್ತಿದ್ದೆವು. ನಾವು ಪೊಲೀಸರು ಮತ್ತು ಆಡಳಿತದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೆವು. ಅವರ ಮೇಲೆ ಕಪ್ಪು ಬಾವುಟ ಬೀಸಲು ಮಾರ್ಗದುದ್ದಕ್ಕೂ ನಿಂತಿದ್ದೆವು” ಎಂದಿದ್ದಾರೆ.

“ಅವರ ಮಾರ್ಗ ಬದಲಾಗಿದೆ ಎಂದು ನಮಗೆ ಮಧ್ಯಾಹ್ನ 3 ಗಂಟೆಗೆ ತಿಳಿಯಿತು. ನಾವು ಶಾಂತಿಯುತವಾಗಿ ಹಿಂತಿರುಗಲಾರಂಭಿಸಿದೆವು. ಇದ್ದಕ್ಕಿದ್ದಂತೆ, ವೇಗವಾಗಿ ಬಂದ ಕಾರುಗಳು ನಮಗೆ ಹಿಂದಿನಿಂದ ಡಿಕ್ಕಿ ಹೊಡೆದವು. ಕಾರು ಗಂಟೆಗೆ 100 ಕಿಮೀ ವೇಗದಲ್ಲಿತ್ತು. ಅವರು ಉದ್ದೇಶಪೂರ್ವಕವಾಗಿ ನಮ್ಮ ಮೇಲೆ ಕಾರು ಹರಿಸಿದರು. ಅಜಯ್ ಮಿಶ್ರಾ ಅವರ ಮಗ ಮತ್ತು ಅವನ ಸಹಚರರು ಕಾರಿನಲ್ಲಿದ್ದರು. ಆಗ ನನಗೆ ಪ್ರಜ್ಞೆ ತಪ್ಪಿತು” ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸಚಿವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿರುವ ರೈತ ಮುಖಂಡ, “ನಾನು ಸಾಕ್ಷಿ ಹೇಳಲು ಸಿದ್ಧನಿದ್ದೇನೆ. ಯೋಗಿ ಆದಿತ್ಯನಾಥ್ ಸರ್ಕಾರ ದಾಳಿಕೋರರಿಗೆ ಸಹಾಯ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಭಾನುವಾರದ ಹಿಂಸಾಚಾರದಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯ ತೇಜಿಂದರ್ ಸಿಂಗ್ ವಿರ್ಕ್ ಸದ್ಯ ದೆಹಲಿಯ ಮೇದಂತದಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿರಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಲು ವಕೀಲರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...