Homeಮುಖಪುಟಲಖಿಂಪುರ್‌ಖೇರಿ ಹಿಂಸಾಚಾರವು ಕೇಂದ್ರ ಸಚಿವ, ಆತನ ಮಗನಿಂದಾದ ‘ಯೋಜಿತ ಪಿತೂರಿ’: ಎಫ್‌ಐಆರ್‌‌

ಲಖಿಂಪುರ್‌ಖೇರಿ ಹಿಂಸಾಚಾರವು ಕೇಂದ್ರ ಸಚಿವ, ಆತನ ಮಗನಿಂದಾದ ‘ಯೋಜಿತ ಪಿತೂರಿ’: ಎಫ್‌ಐಆರ್‌‌

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿ ಜಿಲ್ಲೆಯಲ್ಲಿ ನಡೆದ ರೈತರ ಹತ್ಯೆಯು ಕೇಂದ್ರ ಸಚಿವ ಅಜಯ್‌‌ ಮಿಶ್ರಾ ಹಾಗೂ ಆತನ ಮಗ ಆಶೀಶ್‌ ಮಿಶ್ರಾನಿಂದ ನಡೆದ “ಅತ್ಯಂತ ಯೋಜಿತ ಪಿತೂರಿ” ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಲು ಸೇರಿದ್ದ ರೈತರ ಮೇಲೆ ಭಾನುವಾರ ವಾಹನಗಳನ್ನು ಹತ್ತಿಸಿದಾಗ ಒಟ್ಟು ಎಂಟು ಜನರು ಸಾವನ್ನಪ್ಪಿದ್ದರು. ಸೋಮವಾರ ಎಫ್‌ಐಆರ್‌ ದಾಖಲಾಗಿತ್ತು.

ಆಶೀಶ್‌ ಮಿಶ್ರಾ ಹಾಗೂ ಇತರರ ಗುಂಪು ರೈತರ ಮೇಲೆ ವಾಹನ ಹತ್ತಿಸಿದ್ದಾರೆ ಎಂದು ರೈತರು ಆರೋಪಿಸಿದ್ದರು. ಆದರೆ ಸಚಿವರು ರೈತರೇ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು ಎಂದು ಆರೋಪಿಸಿದ್ದರು.

ಇದನ್ನೂ ಓದಿರಿ: ನರೇಂದ್ರ ಮೋದಿಯವರೆ ಈ ವಿಡಿಯೋ ನೋಡಿದ್ದೀರಾ? ಪ್ರಿಯಾಂಕ ಗಾಂಧಿ ಆಕ್ರೋಶ

ಮಿಶ್ರಾ ಅವರನ್ನು ಇನ್ನೂ ಬಂಧಿಸಲಾಗಿಲ್ಲ. “ರೈತರೊಂದಿಗೆ ಮಾತುಕತೆ, ಮರಣೋತ್ತರ ಪರೀಕ್ಷೆ ಹಾಗೂ ಅಂತ್ಯಸಂಸ್ಕಾರದ ಕಾರ್ಯದಲ್ಲಿ ಪಾಲ್ಗೊಂಡಿದ್ದರಿಂದ ಇನ್ನೂ ಬಂಧಿಸಲಾಗಿಲ್ಲ” ಎಂದು ಪೊಲೀಸರು ಹೇಳಿದ್ದಾರೆ.

ಉತ್ತರ ಪ್ರದೇಶದ ಬಹರಿಚ್‌‌ ಜಿಲ್ಲೆಯ ನನ್ಪರ ಜಿಲ್ಲೆಯ ಜಗಜೀತ್‌ ಸಿಂಗ್‌ ಅವರ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದೆ. ಕೊಲೆ ಹಾಗೂ ನಿರ್ಲಕ್ಷ್ಯದಿಂದ ಸಾವು ಸೇರಿದಂತೆ ವಿವಿಧ ಕಾರಣಗಳಿಗಾಗಿ ಪ್ರಕರಣ ದಾಖಲಿಸಲಾಗಿದೆ.

“ಮೂರು ವಾಹನಗಳಲ್ಲಿ ಆಶೀಶ್‌ ಮಿಶ್ರಾ ಹಾಗೂ ಶಸ್ತ್ರಸಜ್ಜಿತ 10-20 ಮಂದಿ ನುಗ್ಗಿದಾಗ ರೈತರು ಶಾಂತಿಯುತ ಪ್ರತಿಭಟನೆಯಲ್ಲಿ ತೊಡಗಿದ್ದರು” ಎಂದು ಎಫ್‌ಐಆರ್‌ ಹೇಳಿದೆ. ಆತ ಎಡಬದಿಯಲ್ಲಿ ಕುಳಿತ್ತಿದ್ದಾಗ ಗುಂಡು ಹಾರುತ್ತಲೇ ಇದ್ದನು. ಜನರನ್ನು ಮೇಲೆ ಹರಿಯುತ್ತಲೇ ವಾಹನ ಮುನ್ನಡೆಯಿತು” ಎಂದು ಎಫ್‌ಐಆರ್‌ ಉಲ್ಲೇಖಿಸಿದೆ.

“ಗುಂಡು ಹಾರಿಸಿದ್ದರಿಂದ ಗುರ್‍ವಿಂದರ್‌ ಸಿಂಗ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎರಡು ಬದಿಯಲ್ಲಿದ್ದ ರೈತರನ್ನು ಅಪ್ಪಚ್ಚಿ ಮಾಡುತ್ತಾ ವಾಹನ ವೇಗವಾಗಿ ಚಲಿಸಿತು. ರೈತರನ್ನು ಛಿದ್ರಛಿದ್ರ ಮಾಡಿದ ನಂತರ, ನಿಯಂತ್ರಣ ಕಳೆದುಕೊಂಡ ವಾಹನ ಕಂದಕಕ್ಕೆ ಉರುಳಿದೆ” ಎಂದು ಹೇಳಲಾಗಿದೆ.

“ಇಲ್ಲಿಯವರೆಗೆ ಬಂದ ಮಾಹಿತಿಯ ಪ್ರಕಾರ, ನಾಲ್ಕು ರೈತರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ” ಎಂದು ಎಫ್ಐಆರ್ ಹೇಳಿದೆ. ಸಚಿವರ ಮಗನ ಹೆಸರನ್ನು ಎಫ್‌ಐಆರ್ ಸೇರಿಸಲಾಗಿದೆ. ಘಟನೆಯ ಬಳಿಕ ಜನರು ಕಬ್ಬಿನ ಹೊಲಕ್ಕೆ ಓಡಿಹೋದರು ಮತ್ತು ಗುಂಡು ಹಾರಿಸುವುದನ್ನು ಮುಂದುವರಿಸಲಾಗಿತ್ತು” ಎಂದು ತಿಳಿಸಲಾಗಿದೆ. ಕೇಂದ್ರ ಸಚಿವರ ವಿಡಿಯೋ ಕೂಡ ಎಫ್‌ಐಆರ್‌ನ ಭಾಗವಾಗಿದೆ.

“ಭಾನುವಾರದ ಘಟನೆಯ ಹಿಂದಿನ ದಿನ, ಕೇಂದ್ರ ಸಚಿವರು ರೈತರಿಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದರು” ಎಂದು ಎಫ್ಐಆರ್ ಹೇಳಿದೆ. “ಸಚಿವರು ಮಾತನಾಡುತ್ತಿರುವ ವಿಡಿಯೋ ವೈರಲ್‌ ಆಗಿದೆ.”

ವೀಡಿಯೊದಲ್ಲಿ, ಪ್ರತಿಭಟನಾ ನಿರತ ರೈತರನ್ನು ‘ಸರಿದಾರಿಗೆ ತರುವ ಬಗ್ಗೆ’ ಸಚಿವರು ಮಾತನಾಡಿದ್ದರು. “ನಿಮ್ಮ ಮಾರ್ಗಗಳನ್ನು ಸರಿಪಡಿಸಿಕೊಳ್ಳಿ. ಇಲ್ಲದಿದ್ದರೆ ನಾವು ಅವುಗಳನ್ನು ಸರಿಪಡಿಸುತ್ತೇವೆ” ಎಂದು ಅವರು ಹೇಳಿದ್ದರು. “ಸರಿಪಡಿಸುವ ಕಾರ್ಯ ಕೇವಲ ಎರಡು ನಿಮಿಷಗಳನ್ನು ತೆಗೆದುಕೊಳ್ಳುತ್ತದೆ.” ಎಂದಿದ್ದರು.

ಸ್ಥಳೀಯರು ನೀಡಿದ ದೂರಿನ ಅನ್ವಯ, ನಾಲ್ಕು ಜನರನ್ನು ಹೊಡೆದು ಸಾಯಿಸಿದ ಆರೋಪದ ಮೇಲೆ ಸುಮಿತ್ ಜೈಸ್ವಾಲ್ ಎಂದು ಗುರುತಿಸಲಾಗಿರುವ ವ್ಯಕ್ತಿಯ ವಿರುದ್ಧ ಎರಡನೇ ಎಫ್‌ಐಆರ್ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 302 (ಕೊಲೆ), 323 (ಸ್ವಯಂಪ್ರೇರಿತವಾಗಿ ಹಿಂಸಾಕೃತ್ಯ), 336 (ಇತರರ ಜೀವನ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ತರುವ ಕ್ರಿಯೆ) ಆಪಾದನೆಗಳನ್ನು ಹೊರಿಸಲಾಗಿದೆ. ಈ ಪ್ರಕರಣದ ತನಿಖೆಗೆ ಇಬ್ಬರು ಉಪ ಅಧೀಕ್ಷಕರ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.

ಇದನ್ನೂ ಓದಿರಿ: ಲಖಿಂಪುರ್‌‌ ಘಟನೆಯಲ್ಲಿ ಪತ್ರಕರ್ತನ ಹತ್ಯೆ: ನ್ಯಾಯಾಂಗ ತನಿಖೆಗೆ ಎಡಿಟರ್ಸ್‌ ಗಿಲ್ಡ್‌ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...