Homeಚಳವಳಿಲಖಿಂಪುರ್ ಖೇರಿ ಭೇಟಿಗೆ ರಾಹುಲ್ ಗಾಂಧಿ ನೇತೃತ್ವದ ನಿಯೋಗಕ್ಕೆ ಅನುಮತಿ ನೀಡದ ಯುಪಿ ಸರ್ಕಾರ

ಲಖಿಂಪುರ್ ಖೇರಿ ಭೇಟಿಗೆ ರಾಹುಲ್ ಗಾಂಧಿ ನೇತೃತ್ವದ ನಿಯೋಗಕ್ಕೆ ಅನುಮತಿ ನೀಡದ ಯುಪಿ ಸರ್ಕಾರ

’ಬೇರೆ ಪಕ್ಷದವರಿಗೆ ಅನುಮತಿ ನಿಡಲಾಗುತ್ತಿದೆ. ನಮ್ಮನ್ನು ಮಾತ್ರ ತಡೆಯಲಾಗುತ್ತಿದೆ. ನಾವೇನು ತಪ್ಪು ಮಾಡಿದ್ದೇವೆ?’

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗವು ಲಖಿಂಪುರ್ ಖೇರಿಗೆ ಭೇಟಿ ನೀಡಲು ಉತ್ತರ ಪ್ರದೇಶ ಸರ್ಕಾರ ಅನುಮತಿ ನಿರಾಕರಿಸಿದೆ. ಭಾನುವಾರ ನಡೆದ ಹಿಂಸಾಚಾರದಲ್ಲಿ ಮೃತಪಟ್ಟ ಎಂಟು ಜನರ ಪೈಕಿ ನಾಲ್ವರು ರೈತರ ಕುಟುಂಬ ಸದಸ್ಯರನ್ನು ಭೇಟಿಯಾಗಲು ಕಾಂಗ್ರೆಸ್ ನಿಯೋಗ ಹೊರಟಿದೆ.

ಲಖಿಂಪುರ್ ಖೇರಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ಹಾಕಲಾಗಿದೆ. ಇದರ ಅಡಿಯಲ್ಲಿ ಅನುಮತಿ ನಿರಾಕರಿಸಲಾಗಿದೆ ಎಂದು ಹೇಳಲಾಗಿದೆ. ಲಖಿಂಪುರ್ ಖೇರಿಯ ಜಿಲ್ಲಾ ಕೇಂದ್ರದಿಂದ 70 ಕಿಮೀ ದೂರದಲ್ಲಿರುವ ಟಿಕುನಿಯಾಕ್ಕೆ ಪ್ರತಿಪಕ್ಷ ನಾಯಕರು ಹೋಗುವುದನ್ನು ತಡೆಯಲು ಉತ್ತರ ಪ್ರದೇಶ ಸರ್ಕಾರವು ಬಿಗಿ ಬಂದೋಬಸ್ತ್ ಮತ್ತು ಪೊಲೀಸರನ್ನು ನಿಯೋಜಿಸಿದೆ.

ಲಖಿಂಪುರ್ ಖೇರಿ ಹತ್ಯಾಕಾಂಡವನ್ನು ತನಿಖೆ ಮಾಡುವಂತೆ ರಾಜ್ಯ ಸರ್ಕಾರ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ಅಡಿಯಲ್ಲಿ ನ್ಯಾಯಾಂಗ ತನಿಖೆಗೆ ಘೋಷಿಸಿದೆ.

ಇದನ್ನೂ ಓದಿ: ರೈತರ ಮೇಲೆ ಹರಿದ ಕಾರನ್ನು ಅಜಯ್ ಮಿಶ್ರಾ ಪುತ್ರ ಆಶೀಶ್ ಚಲಾಯಿಸುತ್ತಿದ್ದರು: ಗಾಯಾಳು ರೈತ ಮುಖಂಡ

ಬುಧವಾರ ಬೆಳಿಗ್ಗೆ ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಮಂಗಳವಾರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ದ ನಾಯಕರು ಲಖಿಂಪುರ ಖೇರಿಗೆ ಭೇಟಿ ನೀಡಿದ್ದ ಹಿನ್ನೆಲೆ ಅನುಮತಿ ನಿರಾಕರಿಸಿದ್ದರೂ ಮೃತ ರೈತರ ಕುಟುಂಬಗಳನ್ನು ಭೇಟಿಯಾಗಲು ಲಖಿಂಪುರ್‌ ಖೇರಿಗೆ ಕಾಂಗ್ರೆಸ್ ನಿಯೋಗ ಹೊರಟಿದೆ.

“ಸೆಕ್ಷನ್ 144 ಜಾರಿಯಿದ್ದರೂ ಮೂರು ಜನರ ತಂಡ ಹೋಗಬಹುದು. ಸೆಕ್ಷನ್ 144 ನಲ್ಲಿ 5 ಜನರ ತಂಡ ಹೋಗಬಾರದು. ಇದರಿಂದಾಗಿ ನಾವು ಪತ್ರ ಬರೆದಿದ್ದೇವೆ. ಬೇರೆ ಪಕ್ಷದವರಿಗೆ ಅನುಮತಿ ನಿಡಲಾಗುತ್ತಿದೆ. ನಮ್ಮನ್ನು ಮಾತ್ರ ತಡೆಯಲಾಗುತ್ತಿದೆ. ನಾವೇನು ತಪ್ಪು ಮಾಡಿದ್ದೇವೆ..?” ಎಂದು ಪ್ರಶ್ನಿಸಿದ್ದಾರೆ.

“ನಾವು ವಿರೋಧ ಪಕ್ಷದವರು. ನಾವು ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಹತ್ರಾಸ್‌ನಲ್ಲಿ ನಾವು ಒತ್ತಡ ಹಾಕಿದ ಕಾರಣಕ್ಕೆ ಅಲ್ಲಿ ತನಿಖೆ ಆರಂಭವಾಯಿತು. ಇದರಿಂದಾಗಿ ರೈತರ ವಿಷಯದಲ್ಲಿಯೂ ನಾವು ಒತ್ತಡ ಹಾಕುತ್ತಿದ್ದೇವೆ. ರೈತರನ್ನು ಕೊಲೆ ಮಾಡಲಾಗಿದೆ, ಅವರಿಗೆ ಅನ್ಯಾಯವಾಗಿದೆ. ನಿಜ ಹೇಳಬೇಕೆಂದರೆ ಇದು ನಿಮ್ಮ (ಮಾಧ್ಯಮ) ಕೆಲಸ. ನೀವು ನಿಮ್ಮ ಜವಾಬ್ದಾರಿ ಮರೆತು ಕುಳಿತಿದ್ದಿರಿ ಅದಕ್ಕೆ ನಾವು ಮಾಡುತ್ತಿದ್ದೆವೆ” ಎಂದು ಮಾಧ್ಯಮದವರ ವಿರುದ್ದ ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಸೀತಾಪುರದಲ್ಲಿ 10 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಿಯಾಂಕಾ ಗಾಂಧಿಯನ್ನು ಅತಿಥಿ ಗೃಹದಲ್ಲಿ ಬಂಧನದಲ್ಲಿರಿಸಲಾಗಿದೆ. ಪ್ರಿಯಾಂಕಾ, ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು, ಪಕ್ಷದ ನಾಯಕ ದೀಪೇಂದ್ರ ಹೂಡಾ ಮತ್ತು ಇತರರ ವಿರುದ್ಧ  (ಸಿಆರ್‌ಪಿಸಿ) ಸೆಕ್ಷನ್ 151, 107, 116 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು  ಭೇಟಿಯಾಗಿ ಲಖಿಂಪುರ್ ಖೇರಿ ಘಟನೆ ಕುರಿತು ಚರ್ಚಿಸಿದ್ದಾರೆ. ಇಂತಹ ಅನಾಗರಿಕ ಕೃತ್ಯಗಳನ್ನು ಸಹಿಸುವುದಿಲ್ಲ ಎಂದಿರುವ ಚನ್ನಿ, ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಲು ಹೊರಟಿದ್ದ ಕಾಂಗ್ರೆಸ್ ನಾಯಕರನ್ನು ಬಂಧಿಸಿರುವ ರೀತಿಯನ್ನು ಖಂಡಿಸಿದ್ದಾರೆ.


ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ಬಿಡುಗಡೆಯಾಗದಿದ್ದರೆ ಲಖಿಂಪುರ್ ಖೇರಿಗೆ ಪಾದಯಾತ್ರೆ: ಸಿಧು ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...