HomeಮುಖಪುಟNMP ಯೋಜನೆ: ಕಾಂಗ್ರೆಸ್ ಡಿಎನ್‌ಎಯಲ್ಲಿ ಲೂಟಿ ಇದೆ ಎಂದ ಸಚಿವೆ ನಿರ್ಮಲಾ ಸೀತಾರಾಮನ್

NMP ಯೋಜನೆ: ಕಾಂಗ್ರೆಸ್ ಡಿಎನ್‌ಎಯಲ್ಲಿ ಲೂಟಿ ಇದೆ ಎಂದ ಸಚಿವೆ ನಿರ್ಮಲಾ ಸೀತಾರಾಮನ್

- Advertisement -
- Advertisement -

ಕೇಂದ್ರ ಸರ್ಕಾರದ ’ಸರ್ಕಾರಿ ಆಸ್ತಿ ನಗದೀಕರಣ’ (ನ್ಯಾಷನಲ್ ಮಾನಿಟೈಸೆಶನ್ ಪೈಪ್‌ಲೈನ್ – NMP) ಯೋಜನೆ ವಿರುದ್ದ ಅಸಾಮಾಧಾನವನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್‌ ವಿರುದ್ಧ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಿಡಿ ಕಾರಿದ್ದಾರೆ.

ಬಿಜೆಪಿಯು ದೇಶದ ಸಾರ್ವಜನಿಕ ಆಸ್ತಿಯನ್ನು ಮಾರಾಟ ಮಾಡುತ್ತಿದೆ ಎಂದು ಕಾಂಗ್ರೆಸ್ ಹೇಳಿದ್ದು ಕಾಂಗ್ರೆಸ್‌ ಟೀಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕಾಂಗ್ರೆಸ್‌ ಪಕ್ಷದ ಡಿಎನ್ಎಯಲ್ಲಿಯೇ “ಲೂಟಿ” ಇದೆ ಎಂದು ಆರೋಪಿಸಿದ್ದಾರೆ.

ಛತ್ತೀಸ್‌ಗಢ ರಾಜಧಾನಿ ರಾಯ್ಪುರದಲ್ಲಿ ಮಾತನಾಡುತ್ತಿದ್ದ ಸೀತಾರಾಮನ್ , “ಲೂಟಿಯು ಕಾಂಗ್ರೆಸ್‌ನ ಮನಸ್ಸಿನಿಂದ ಹೊರಹೋಗುವುದಿಲ್ಲ. ಅವರ ಆಳ್ವಿಕೆಯಲ್ಲಿ ಸ್ಪೆಕ್ಟ್ರಮ್, ಗಣಿ, ನೀರು ಮತ್ತು ಎಲ್ಲಾ ವಲಯದಲ್ಲೂ ಲೂಟಿ ಹರಡಿಕೊಂಡಿತ್ತು” ಎಂದು ಹೇಳಿದ್ದಾರೆ.

ಇದುವರೆಗೂ ಉಪಯೋಗವಾಗಿಲ್ಲದ ಅಥವಾ ಹೆಚ್ಚು ಉಪಯೋಗಕ್ಕೆ ಬಂದಿಲ್ಲದ ಸರ್ಕಾರದ ಆಸ್ತಿಗಳ ನಿರ್ವಹಣೆಯನ್ನು ಖಾಸಗಿಯವರಿಗೆ ಕೊಟ್ಟು, ಅವರಿಂದ ಮುಂದಿನ ನಾಲ್ಕು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ ಶುಲ್ಕ ಸಂಗ್ರಹಿಸುತ್ತೇವೆ  ಎಂದು ಈವರ್ಷದ ಆಗಸ್ಟ್‌ನಲ್ಲಿ ನ್ಯಾಷನಲ್ ಮಾನಿಟೈಸೆಶನ್ ಪೈಪ್‌ಲೈನ್ ಯೋಜನೆಯನ್ನು ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ.

ಇದನ್ನೂ ಓದಿ: ಭಾರತ ಮಾರಾಟಕ್ಕಿದೆ: ಸಾರ್ವಜನಿಕ ಸಂಸ್ಥೆಗಳ ಖಾಸಗೀಕರಣದ ಕುರಿತು ಗಮನ ಸೆಳೆದ ಕಾರ್ಟೂನ್‌ಗಳು

ಈ ಯೋಜನೆ ಬಗ್ಗೆ ಟೀಕೆ ವ್ಯಕ್ತಪಡಿಸಿರುವ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ವಿತ್ತ ಸಚಿವೆ, “ಜನರಿಗೆ ಸೇವೆ ಮಾಡವ ಹೊರತಾಗಿಯೂ, ಕಾಂಗ್ರೆಸ್ ನಾಯಕ ಕೇವಲ ಅಧಿಕಾರದಲ್ಲಿ ಉಳಿಯುವತ್ತ ಗಮನ ಹರಿಸಿದ್ದಾರೆ. ಕಾಂಗ್ರೆಸ್ ಜನರ ಆಶೀರ್ವಾದದಿಂದ ಪಡೆಯುವ ಬಹುಮತವನ್ನು ನಿಭಾಯಿಸಲು ಸಾಧ್ಯವಾಗಿಲ್ಲ. ಅವರ ಶಾಸಕರು ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಆದರೆ, ಮುಖ್ಯಮಂತ್ರಿಗಳು ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳುತ್ತಿದ್ದಾರೆ” ಎಂದು ಕೇಂದ್ರ ಸಚಿವೆ ವ್ಯಂಗ್ಯವಾಡಿದ್ದಾರೆ.

ಮಂಗಳವಾರ ಕೂಡ ಇಂಧನ ಬೆಲೆಗಳು ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳು ಅಂತರಾಷ್ಟ್ರೀಯ ತೈಲ ದರಗಳ ಮೇಲೆ ಅವಲಂಬಿತವಾಗಿವೆ ಎಂದು ಸೀತಾರಾಮನ್ ಹೇಳಿದ್ದಾರೆ.

“ದೇಶವು ತನಗೆ ಅಗಶ್ಯವಿರುವ ಪೆಟ್ರೋಲ್ ಮತ್ತು ಡೀಸೆಲ್‌ನ ಶೇ.99 ರಷ್ಟು ಭಾಗವನ್ನು ಆಮದು ಮಾಡಿಕೊಳ್ಳಬೇಕಾಗಿತ್ತು. ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ಹೆಚ್ಚುತ್ತಿರುವ ವೆಚ್ಚದ ಸಮಸ್ಯೆಯನ್ನು ನಿಭಾಯಿಸಬೇಕಾಗಿದೆ” ಎಂದು ಹೇಳಿದ್ದಾರೆ. ಜೊತೆಗೆ ಏರುತ್ತಿರುವ ಇಂಧನ ಬೆಲೆಗಳು ಸಾಮಾನ್ಯ ಜನರ ಮೇಲೆ ಆರ್ಥಿಕ ಹೊರೆ ಹೆಚ್ಚಿಸಿದೆ ಎಂದು ಅವರು ಒಪ್ಪಿಕೊಂಡಿದ್ದಾರೆ.


ಇದನ್ನೂ ಓದಿ: ಬಡ – ಮಧ್ಯಮ ವರ್ಗವನ್ನು ಮತ್ತಷ್ಟು ಹಿಂಡಲಿರುವ ನ್ಯಾಷನಲ್ ಮಾನಿಟೈಸೇಶನ್ ಪೈಪ್‌ಲೈನ್ – NMP ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...