Homeಕರ್ನಾಟಕRSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

RSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

- Advertisement -
- Advertisement -

ಆರ್‌ಎಸ್‌ಎಸ್‌ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನಡುವೆ ಮಾತಿನ ಸಮರ ನಡೆಯುತ್ತಿದೆ. ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳಲು ಸಂಘದ ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ, “ಸಿ.ಟಿ.ರವಿ ಅವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. RSS ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು ನನಗೆ ಆಹ್ವಾನ ಕೊಟ್ಟಿದ್ದೀರಿ. ನಿಮ್ಮ ಸಂಘದೊಳಗಿನ ವಾಸ್ತಾವಾಂಶಗಳನ್ನು ಪ್ರತ್ಯಕ್ಷವಾಗಿ ನೋಡಿದವರೇ ಬರೆದ ಪುಸ್ತಕ ಓದಿ ನನಗೆ ಅಲ್ಲಿನ ವ್ಯವಹಾರಗಳ ವಿರಾಟ್ ದರ್ಶನ ಆಗಿದೆ. ಇನ್ನು ಶಾಖೆಯನ್ನೇ ಸೇರಿಕೊಂಡರೆ ಇನ್ನೆಷ್ಟು ಸತ್ಯ ಸಂಗತಿಗಳು ಗೊತ್ತಾಗಬಹುದು. ನೀವೇ ಒಮ್ಮೆ ಊಹಿಸಿ” ಎಂದು ವ್ಯಂಗ್ಯವಾಡಿದ್ದಾರೆ.

“ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದ್ದೀರಿ. ನಿಮ್ಮ ಪಕ್ಷ ಮತ್ತು ನಿಮ್ಮ ಸರಕಾರದಲ್ಲಿ ತಾಂಡವವಾಡುತ್ತಿರುವ ಅಪರಿಮಿತ ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತದ ಬಗ್ಗೆಯೂ ನೀವು ಹೇಳಬೇಕು. ಅದಕ್ಕೂ RSS ಶಾಖೆಯಲ್ಲೇ ತರಬೇತಿ ನೀಡಲಾಯಿತಾ..?” ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಸಿಬ್ಬಂದಿಯ ಹೆಂಡತಿ, ಮಕ್ಕಳ ಆತ್ಮಹತ್ಯೆ: ಕೊಲೆಗಡುಕ ಸರ್ಕಾರ ಎಂದ ಎಚ್‌.ಡಿ.ಕುಮಾರಸ್ವಾಮಿ

“ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂಥ ʼಆಪರೇಷನ್ ಕಮಲʼದಂಥ ʼಅನೈತಿಕʼ, ʼನಿರ್ಲಜ್ಜʼ, ʼನೀಚʼ ರಾಜಕಾರಣವನ್ನು RSS ಶಾಖೆಯಲ್ಲೇ ಕಲಿಸಲಾಯಿತಾ ಎಂಬುದನ್ನೂ ನೀವು ಜನರಿಗೆ ಹೇಳಬೇಕು. ಜನರು ಕಣ್ಣೀರಿನಲ್ಲಿ ಕೈತೊಳೆಯುತ್ತಿದಾರೆ. ಇವತ್ತಿನ ಪ್ರಜಾವಾಣಿ ಪತ್ರಿಕೆ ಓದಿ. ಅದರಲ್ಲಿ “ಬದುಕು ಸಾಕೆನಿದೆ-ಭಗವಂತನಿಗೂ ಕರುಣೆ ಇಲ್ಲ” ಎನ್ನುವ ವರದಿ ಇದೆ. ಬೆಂಗಳೂರಿನ ಶ್ರೀನಿವಾಸನಗರದ ಬಿ.ಆರ್.ವಾಸುದೇವ ಎಂಬ ಬೀದಿಬದಿ ವ್ಯಾಪಾರಿ ಹೇಳಿರುವ ಮಾತುಗಳನ್ನು ಒಮ್ಮೆ ಓದಿ. ಆಗಲಾದರೂ ನಿಮ್ಮ ಕಲ್ಲು ಹೃದಯ ಕರಗಬಹುದು” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಶಿವಮೊಗ್ಗದಲ್ಲಿ 2,000 ರೂ. ಪರಿಹಾರ ಪಡೆಯಲು 100 ರೂ. ಲಂಚ ಕೇಳಿದ ವರದಿಗಳು ಬಂದಿವೆ. ಇದಾ ನಿಮ್ಮ ಸಮಾಜ ಸೇವೆ..? ಛಿದ್ರವಾದ ಬದುಕುಗಳನ್ನೊಮ್ಮೆ ನೋಡಿ. ಜನರ ಬವಣೆಗಳ ಬಗ್ಗೆ RSS ಶಾಖೆಗಳಲ್ಲಿ ನಿಮಗೆಲ್ಲರಿಗೂ ಏನನ್ನೂ ಹೇಳಿಕೊಡುವುದಿಲ್ಲವಾ ಸಿ.ಟಿ.ರವಿಯವರೇ..? ” ಎಂದು ಪ್ರಶ್ನಿಸಿ ಆಕ್ರೋಶ ಹೊರಹಾಕಿದ್ದಾರೆ.

“ಸೇವೆಯ ಸೋಗಿನಲ್ಲಿ ಸಂಸ್ಥೆಗಳು ರಾಜಕೀಯ ಮಾಡಬಾರದು. ಜನರ ಬವಣೆಗಳ ನಿವಾರಣೆ ನಿಟ್ಟಿನಲ್ಲಿ ದುಡಿಯಬೇಕೆ ಹೊರತು ಬದುಕಿಗೇ ಬೆಂಕಿ ಇಡಬಾರದು. ಸಮಾಜದ ಶಾಂತಿಯನ್ನು ಕಾಪಾಡಬೇಕೇ ಹೊರತು, ಅದಕ್ಕೆ ಕೊಳ್ಳಿ ಇಡಬಾರದು. RSS ಹುಟ್ಟಿದಾಗಿನಿಂದಲೂ ಏನೆಲ್ಲ ಮಾಡಿಕೊಂಡು ಬಂದಿದೆ ಎನ್ನುವುದು ಜಗತ್ತಿಗೇ ಗೊತ್ತಿರುವ ಸಂಗತಿ. ಜನ ಪ್ರತಿನಿಧಿಗಳನ್ನು, ಸರಕಾರಗಳನ್ನು, ಆಡಳಿತ ಯಂತ್ರಾಂಗವನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುವ ಪರಿಪಾಠ ದೇಶಕ್ಕೆ ಒಳ್ಳೆಯದಲ್ಲ. ಅರ್ಥ ಮಾಡಿಕೊಳ್ಳಿ ಸಿ.ಟಿರವಿಯರೇ. ನಾನು ಸತ್ಯದ ಪರ” ಎಂದು ಸಿ.ಟಿ.ರವಿಗೆ ತಿರುಗೇಟು ನೀಡಿದ್ದಾರೆ.


ಇದನ್ನೂ ಓದಿ: ಪಕ್ಷ ಬಿಟ್ಟು ಹೋಗುವವರು ಪಕ್ಷದ ಬಗ್ಗೆ ಲಘುವಾಗಿ ಮಾತನಾಡಬಾರದು: ಹೆಚ್.ಡಿ.ಕುಮಾರಸ್ವಾಮಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...