Homeಮುಖಪುಟಲಖಿಂಪುರ್‌‌ ಘಟನಾ ಸ್ಥಳದಲ್ಲಿ ರೈತರ ನಡುವೆ ಉಗ್ರರಿದ್ದರು: ಅಜಯ್ ಮಿಶ್ರಾ

ಲಖಿಂಪುರ್‌‌ ಘಟನಾ ಸ್ಥಳದಲ್ಲಿ ರೈತರ ನಡುವೆ ಉಗ್ರರಿದ್ದರು: ಅಜಯ್ ಮಿಶ್ರಾ

ತನ್ನ ಮಗ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಿದ್ದಾನೆ ಎಂಬ ಆರೋಪದ ನಡುವೆ ಸಚಿವ ಅಜಯ್ ಮಿಶ್ರಾ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿದ್ದಾರೆ

- Advertisement -
- Advertisement -

ಉತ್ತರಪ್ರದೇಶದ ಲಖಿಂಪುರ್‌‌ ಖೇರಿಯಲ್ಲಿ ತನ್ನ ಮಗ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಿದ್ದಾನೆ ಎಂಬ ಆರೋಪದ ನಡುವೆ, ಸಚಿವ ಅಜಯ್ ಮಿಶ್ರಾ ಅವರು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರನ್ನು ಬುಧವಾರ ಭೇಟಿ ಮಾಡಿದ್ದಾರೆ. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು, ಘಟನೆಯಲ್ಲಿ ನನ್ನ ಚಾಲಕ ಮತ್ತು ಇಬ್ಬರು ಕಾರ್ಯಕರ್ತರು ಮೃತರಾಗಿದ್ದಾರೆ, ಅಲ್ಲದೆ ಕಾರುಗಳನ್ನು ಸುಟ್ಟು ಹಾಕಿದ್ದು, ಇಂತಹ ಜನರು ಕೃಷಿಕರಾಗಲು ಸಾಧ್ಯವಿಲ್ಲ, ಇವರು ರೈತರ ನಡುವೆ ಅಡಗಿರುವ ಉಗ್ರರು” ಎಂದು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನನ್ನ ರಾಜೀನಾಮೆಗೆ ಯಾವುದೆ ಒತ್ತಡವಿಲ್ಲ ಎಂದು ಹೇಳಿರುವ ಅಜಯ್ ಮಿಶ್ರಾ, “ನಾನು ಯಾಕೆ ರಾಜೀನಾಮೆ ನೀಡಬೇಕು? ನನ್ನ ಮೇಲೆ ಯಾವುದೇ ಒತ್ತಡವಿಲ್ಲ. ಘಟನೆಯ ಬಗ್ಗೆ ನಾವು ತನಿಖೆ ಮಾಡುತ್ತೇವೆ, ಒಳಸಂಚು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌‌ ಖೇರಿ ಹಿಂಸಾಚಾರವು ಕೇಂದ್ರ ಸಚಿವ, ಆತನ ಮಗನಿಂದಾದ ‘ಯೋಜಿತ ಪಿತೂರಿ’: ಎಫ್‌ಐಆರ್‌‌

ಸಚಿವರ ಬೆಂಗಾವಲಿನಲ್ಲಿದ್ದ ಕಾರು ಪ್ರತಿಭಟನಾಕಾರರ ಮೇಲೆ ಹರಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಕಾರನ್ನು ಒಕ್ಕೂಟ ಸರ್ಕಾರದ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಚಾಲನೆ ಮಾಡುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಘಟನೆಯ ಕುರಿತು ಆಶಿಶ್ ಮಿಶ್ರಾ ವಿರುದ್ಧ ಯುಪಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ, ಆದರೆ ಇದುವರೆಗೂ ಬಂಧಿಸಿಲ್ಲ. ಘಟನಾ ಸ್ಥಳದಲ್ಲಿದ್ದ ವಾಹನ ತನಗೆ ಸೇರಿದ್ದು ಎಂದು ಸಚಿವರು ಒಪ್ಪಿಕೊಂಡಿದ್ದರೂ, ಅವರು ಹಾಗೂ ಅವರ ಮಗ ಆಶೀಶ್ ಮಿಶ್ರಾ ಸ್ಥಳದಲ್ಲಿ ಇರಲಿಲ್ಲ ಎಂದು ಪ್ರತಿಪಾದಿಸಿದ್ದಾರೆ.

“ಮೊದಲ ದಿನದಿಂದ, ಥಾರ್(ವಾಹನ) ನಮ್ಮದು, ಅದು ನಮ್ಮ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ ಎಂದು ನಾವು ಸ್ಪಷ್ಟಪಡಿಸಿದ್ದೇವೆ. ನಮ್ಮ ಕಾರ್ಯಕರ್ತರನ್ನು ಕರೆದುಕೊಂಡು ಯಾರನ್ನೋ ಬರಮಾಡಿಕೊಳ್ಳಲು ಹೋಗುತ್ತಿತ್ತು. ಈ ವೇಳೆ ನನ್ನ ಮಗ ಇನ್ನೊಂದು ಸ್ಥಳದಲ್ಲಿದ್ದನು. ಬೆಳಿಗ್ಗೆ 11 ಗಂಟೆಯಿಂದ ಸಂಜೆವರೆಗೆ ಅವರು ಇನ್ನೊಂದು ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದರು” ಎಂದು ಅಜಯ್ ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ: NMP ಯೋಜನೆ: ಕಾಂಗ್ರೆಸ್ ಡಿಎನ್‌ಎಯಲ್ಲಿ ಲೂಟಿ ಇದೆ ಎಂದ ಸಚಿವೆ ನಿರ್ಮಲಾ ಸೀತಾರಾಮನ್

“ನನ್ನ ಮಗ ಅಲ್ಲಿ ಹಾಜರಿದ್ದನು ಮತ್ತು ಅಲ್ಲಿ ಸಾವಿರಾರು ಜನರು ಇದ್ದರು. ನೀವು ಅವರ ಕಾಲ್ ರೆಕಾರ್ಡ್, ಲೊಕೇಶನ್ ಎಲ್ಲವನ್ನು ಪರಿಶೀಲಿಸಬಹುದು. ಆಶಿಶ್ ಮಿಶ್ರಾ ಅಲ್ಲಿದ್ದರು ಎಂಬುವುದಕ್ಕೆ ಸಾವಿರಾರು ಜನರು ಸಾಕ್ಷಿಗಳಿದ್ದಾರೆ” ಎಂದು ಅವರು ಹೇಳಿದ್ದಾರೆ.

“ವಾಹನದ ಬಗ್ಗೆ ಹೇಳುವುದಾದರೆ, ನನ್ನ ಚಾಲಕ, ಇಬ್ಬರು ಕಾರ್ಯಕರ್ತರು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಕಾರ್ಯಕರ್ತ ಪರಾರಿಯಾಗಿದ್ದಾರೆ ಹಾಗೂ ಮೂವರು ಕಾರ್ಯಕರ್ತರು ಗಾಯಗೊಂಡಿದ್ದಾರೆ. ಕಾರನ್ನು ತಳ್ಳಿ, ಎರಡು ವಾಹನ ಸುಟ್ಟು ಹಾಕಲಾಗಿದೆ. ಇಂತಹ ಜನರು ಕೃಷಿಕರಾಗಲು ಸಾಧ್ಯವಿಲ್ಲ, ಇವರು ರೈತರ ನಡುವೆ ಅಡಗಿರುವ ಉಗ್ರರು” ಎಂದು ಅಜಯ್ ಮಿಶ್ರಾ ತಿಳಿಸಿದ್ದಾರೆ.

ಲಖಿಂಪುರ್‌‌ ಖೇರಿಯಲ್ಲಿ ಭಾನುವಾರದಂದು ಕಾರ್ಯಕ್ರಮವೊಂದಕ್ಕೆ ಅಜಯ್ ಮಿಶ್ರಾ ಆಗಮಿಸಿದ್ದಾಗ, ರೈತರು ಅವರ ವಿರುದ್ದ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನೆ ಮುಗಿಸಿ ವಾಪಾಸು ಹೋಗುತ್ತಿದ್ದ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಲಾಗಿತ್ತು. ಘಟನೆಯ ವಿಡಿಯೊ ಕೂಡಾ ವೈರಲ್ ಆಗಿದೆ. ಘಟನೆಯಲ್ಲಿ ನಾಲ್ಕು ರೈತರು ಸೇರಿದಂತೆ ಒಟ್ಟು ಎಂಟು ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ತಲೆ ಬೋಳಿಸಿಕೊಂಡು ಬಿಜೆಪಿ ತೊರೆಯಲು ಸಿದ್ದರಾದ ತ್ರಿಪುರ ಶಾಸಕ- ಟಿಎಂಸಿ ಸೇರುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...