Homeಮುಖಪುಟಲಖಿಂಪುರ್‌‌ ಘಟನಾ ಸ್ಥಳದಲ್ಲಿ ರೈತರ ನಡುವೆ ಉಗ್ರರಿದ್ದರು: ಅಜಯ್ ಮಿಶ್ರಾ

ಲಖಿಂಪುರ್‌‌ ಘಟನಾ ಸ್ಥಳದಲ್ಲಿ ರೈತರ ನಡುವೆ ಉಗ್ರರಿದ್ದರು: ಅಜಯ್ ಮಿಶ್ರಾ

ತನ್ನ ಮಗ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಿದ್ದಾನೆ ಎಂಬ ಆರೋಪದ ನಡುವೆ ಸಚಿವ ಅಜಯ್ ಮಿಶ್ರಾ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿದ್ದಾರೆ

- Advertisement -
- Advertisement -

ಉತ್ತರಪ್ರದೇಶದ ಲಖಿಂಪುರ್‌‌ ಖೇರಿಯಲ್ಲಿ ತನ್ನ ಮಗ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಿದ್ದಾನೆ ಎಂಬ ಆರೋಪದ ನಡುವೆ, ಸಚಿವ ಅಜಯ್ ಮಿಶ್ರಾ ಅವರು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರನ್ನು ಬುಧವಾರ ಭೇಟಿ ಮಾಡಿದ್ದಾರೆ. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು, ಘಟನೆಯಲ್ಲಿ ನನ್ನ ಚಾಲಕ ಮತ್ತು ಇಬ್ಬರು ಕಾರ್ಯಕರ್ತರು ಮೃತರಾಗಿದ್ದಾರೆ, ಅಲ್ಲದೆ ಕಾರುಗಳನ್ನು ಸುಟ್ಟು ಹಾಕಿದ್ದು, ಇಂತಹ ಜನರು ಕೃಷಿಕರಾಗಲು ಸಾಧ್ಯವಿಲ್ಲ, ಇವರು ರೈತರ ನಡುವೆ ಅಡಗಿರುವ ಉಗ್ರರು” ಎಂದು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನನ್ನ ರಾಜೀನಾಮೆಗೆ ಯಾವುದೆ ಒತ್ತಡವಿಲ್ಲ ಎಂದು ಹೇಳಿರುವ ಅಜಯ್ ಮಿಶ್ರಾ, “ನಾನು ಯಾಕೆ ರಾಜೀನಾಮೆ ನೀಡಬೇಕು? ನನ್ನ ಮೇಲೆ ಯಾವುದೇ ಒತ್ತಡವಿಲ್ಲ. ಘಟನೆಯ ಬಗ್ಗೆ ನಾವು ತನಿಖೆ ಮಾಡುತ್ತೇವೆ, ಒಳಸಂಚು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌‌ ಖೇರಿ ಹಿಂಸಾಚಾರವು ಕೇಂದ್ರ ಸಚಿವ, ಆತನ ಮಗನಿಂದಾದ ‘ಯೋಜಿತ ಪಿತೂರಿ’: ಎಫ್‌ಐಆರ್‌‌

ಸಚಿವರ ಬೆಂಗಾವಲಿನಲ್ಲಿದ್ದ ಕಾರು ಪ್ರತಿಭಟನಾಕಾರರ ಮೇಲೆ ಹರಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಕಾರನ್ನು ಒಕ್ಕೂಟ ಸರ್ಕಾರದ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಚಾಲನೆ ಮಾಡುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಘಟನೆಯ ಕುರಿತು ಆಶಿಶ್ ಮಿಶ್ರಾ ವಿರುದ್ಧ ಯುಪಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ, ಆದರೆ ಇದುವರೆಗೂ ಬಂಧಿಸಿಲ್ಲ. ಘಟನಾ ಸ್ಥಳದಲ್ಲಿದ್ದ ವಾಹನ ತನಗೆ ಸೇರಿದ್ದು ಎಂದು ಸಚಿವರು ಒಪ್ಪಿಕೊಂಡಿದ್ದರೂ, ಅವರು ಹಾಗೂ ಅವರ ಮಗ ಆಶೀಶ್ ಮಿಶ್ರಾ ಸ್ಥಳದಲ್ಲಿ ಇರಲಿಲ್ಲ ಎಂದು ಪ್ರತಿಪಾದಿಸಿದ್ದಾರೆ.

“ಮೊದಲ ದಿನದಿಂದ, ಥಾರ್(ವಾಹನ) ನಮ್ಮದು, ಅದು ನಮ್ಮ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ ಎಂದು ನಾವು ಸ್ಪಷ್ಟಪಡಿಸಿದ್ದೇವೆ. ನಮ್ಮ ಕಾರ್ಯಕರ್ತರನ್ನು ಕರೆದುಕೊಂಡು ಯಾರನ್ನೋ ಬರಮಾಡಿಕೊಳ್ಳಲು ಹೋಗುತ್ತಿತ್ತು. ಈ ವೇಳೆ ನನ್ನ ಮಗ ಇನ್ನೊಂದು ಸ್ಥಳದಲ್ಲಿದ್ದನು. ಬೆಳಿಗ್ಗೆ 11 ಗಂಟೆಯಿಂದ ಸಂಜೆವರೆಗೆ ಅವರು ಇನ್ನೊಂದು ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದರು” ಎಂದು ಅಜಯ್ ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ: NMP ಯೋಜನೆ: ಕಾಂಗ್ರೆಸ್ ಡಿಎನ್‌ಎಯಲ್ಲಿ ಲೂಟಿ ಇದೆ ಎಂದ ಸಚಿವೆ ನಿರ್ಮಲಾ ಸೀತಾರಾಮನ್

“ನನ್ನ ಮಗ ಅಲ್ಲಿ ಹಾಜರಿದ್ದನು ಮತ್ತು ಅಲ್ಲಿ ಸಾವಿರಾರು ಜನರು ಇದ್ದರು. ನೀವು ಅವರ ಕಾಲ್ ರೆಕಾರ್ಡ್, ಲೊಕೇಶನ್ ಎಲ್ಲವನ್ನು ಪರಿಶೀಲಿಸಬಹುದು. ಆಶಿಶ್ ಮಿಶ್ರಾ ಅಲ್ಲಿದ್ದರು ಎಂಬುವುದಕ್ಕೆ ಸಾವಿರಾರು ಜನರು ಸಾಕ್ಷಿಗಳಿದ್ದಾರೆ” ಎಂದು ಅವರು ಹೇಳಿದ್ದಾರೆ.

“ವಾಹನದ ಬಗ್ಗೆ ಹೇಳುವುದಾದರೆ, ನನ್ನ ಚಾಲಕ, ಇಬ್ಬರು ಕಾರ್ಯಕರ್ತರು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಕಾರ್ಯಕರ್ತ ಪರಾರಿಯಾಗಿದ್ದಾರೆ ಹಾಗೂ ಮೂವರು ಕಾರ್ಯಕರ್ತರು ಗಾಯಗೊಂಡಿದ್ದಾರೆ. ಕಾರನ್ನು ತಳ್ಳಿ, ಎರಡು ವಾಹನ ಸುಟ್ಟು ಹಾಕಲಾಗಿದೆ. ಇಂತಹ ಜನರು ಕೃಷಿಕರಾಗಲು ಸಾಧ್ಯವಿಲ್ಲ, ಇವರು ರೈತರ ನಡುವೆ ಅಡಗಿರುವ ಉಗ್ರರು” ಎಂದು ಅಜಯ್ ಮಿಶ್ರಾ ತಿಳಿಸಿದ್ದಾರೆ.

ಲಖಿಂಪುರ್‌‌ ಖೇರಿಯಲ್ಲಿ ಭಾನುವಾರದಂದು ಕಾರ್ಯಕ್ರಮವೊಂದಕ್ಕೆ ಅಜಯ್ ಮಿಶ್ರಾ ಆಗಮಿಸಿದ್ದಾಗ, ರೈತರು ಅವರ ವಿರುದ್ದ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನೆ ಮುಗಿಸಿ ವಾಪಾಸು ಹೋಗುತ್ತಿದ್ದ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಲಾಗಿತ್ತು. ಘಟನೆಯ ವಿಡಿಯೊ ಕೂಡಾ ವೈರಲ್ ಆಗಿದೆ. ಘಟನೆಯಲ್ಲಿ ನಾಲ್ಕು ರೈತರು ಸೇರಿದಂತೆ ಒಟ್ಟು ಎಂಟು ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ತಲೆ ಬೋಳಿಸಿಕೊಂಡು ಬಿಜೆಪಿ ತೊರೆಯಲು ಸಿದ್ದರಾದ ತ್ರಿಪುರ ಶಾಸಕ- ಟಿಎಂಸಿ ಸೇರುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...