Homeಚಳವಳಿರೈತರ ಹತ್ಯೆ: ರಾಹುಲ್‌, ಪ್ರಿಯಾಂಕಾ ಭೇಟಿಗೆ ಕೊನೆಗೂ ಅವಕಾಶ ನೀಡಿದ ಯುಪಿ ಸರ್ಕಾರ

ರೈತರ ಹತ್ಯೆ: ರಾಹುಲ್‌, ಪ್ರಿಯಾಂಕಾ ಭೇಟಿಗೆ ಕೊನೆಗೂ ಅವಕಾಶ ನೀಡಿದ ಯುಪಿ ಸರ್ಕಾರ

- Advertisement -
- Advertisement -

ರೈತರ ಹತ್ಯೆ ನಡೆದ ಉತ್ತರ ಪ್ರದೇಶದ ಲಖಿಂಪುರ್‌ ಖೇರಿಗೆ ಕಾಂಗ್ರೆಸ್ ನಾಯಕರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಪ್ರವೇಶಿಸದಂತೆ ತಡೆಯೊಡ್ಡಿದ್ದ ಉತ್ತರ ಪ್ರದೇಶ ಸರ್ಕಾರ ಕೊನೆಗೂ ಅವಕಾಶ ನೀಡಿದೆ.

ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಇತರರು ಮೂವರು ಘಟನಾ ಸ್ಥಳಕ್ಕೆ ಭೇಟಿ ನೀಡಬಹುದು ಎಂದು ಉತ್ತರ ಪ್ರದೇಶದ ಗೃಹ ಇಲಾಖೆ ಮಧ್ಯಾಹ್ನ ಸ್ಪಷ್ಟಪಡಿಸಿದೆ.

ಸೋಮವಾರ ಸ್ಥಳಕ್ಕೆ ಹೊರಟಿದ್ದ ಪ್ರಿಯಾಂಕಾ ಗಾಂಧಿಯವರನ್ನು ಯುಪಿ ಸರ್ಕಾರ ತಡೆದು ಗೃಹಬಂಧನದಲ್ಲಿ ಇರಿಸಿತ್ತು. ಇದನ್ನು ಪ್ರಿಯಾಂಕಾ ಗಾಂಧಿ ಅವರು ಸೇರಿದಂತೆ ಇತರ ನಾಯಕರು “ಅಕ್ರಮ ಬಂಧನ” ಎಂದು ಟೀಕಿಸಿದ್ದರು.

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗವು ಲಖಿಂಪುರ್ ಖೇರಿಗೆ ಭೇಟಿ ನೀಡಲು ಉತ್ತರ ಪ್ರದೇಶ ಸರ್ಕಾರ ಅನುಮತಿ ನಿರಾಕರಿಸಿತ್ತು. ಭಾನುವಾರ ನಡೆದ ಹಿಂಸಾಚಾರದಲ್ಲಿ ಮೃತಪಟ್ಟ ಎಂಟು ಜನರ ಪೈಕಿ ನಾಲ್ವರು ರೈತರ ಕುಟುಂಬ ಸದಸ್ಯರನ್ನು ಭೇಟಿಯಾಗಲು ಕಾಂಗ್ರೆಸ್ ನಿಯೋಗ ಹೊರಟಿತ್ತು.

ಲಖಿಂಪುರ್ ಖೇರಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ಹಾಕಲಾಗಿದೆ. ಇದರ ಅಡಿಯಲ್ಲಿ ಅನುಮತಿ ನಿರಾಕರಿಸಲಾಗಿದೆ ಎಂದು ಹೇಳಲಾಗಿತ್ತು. ಲಖಿಂಪುರ್ ಖೇರಿಯ ಜಿಲ್ಲಾ ಕೇಂದ್ರದಿಂದ 70 ಕಿಮೀ ದೂರದಲ್ಲಿರುವ ಟಿಕುನಿಯಾಕ್ಕೆ ಪ್ರತಿಪಕ್ಷ ನಾಯಕರು ಹೋಗುವುದನ್ನು ತಡೆಯಲು ಉತ್ತರ ಪ್ರದೇಶ ಸರ್ಕಾರವು ಬಿಗಿ ಬಂದೋಬಸ್ತ್ ಮತ್ತು ಪೊಲೀಸರನ್ನು ನಿಯೋಜಿಸಿದೆ.

ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ಛತ್ತೀಸ್‌ಘಡದ ಮುಖ್ಯಮಂತ್ರಿ ಭೂಪೇಶ್‌ ಭಾಗೇಲ್‌ ಮತ್ತು ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜಿತ್‌ ಚನ್ನಿ, ಹಿರಿಯ ನಾಯಕ ಕೆ.ಸಿ.ವೇಣುಗೋಪಲ್‌ ಮತ್ತು ಸಚಿನ್‌ ಪೈಲೆಟ್‌ ಅವರು ಸ್ಥಳಕ್ಕೆ ಹೊರಟಾಗ ದೆಹಲಿ-ಲಕ್ನೋ ವಿಮಾನವನ್ನು ಹತ್ತದಂತೆ ಬುಧವಾರ ಬೆಳಿಗ್ಗೆಯೂ ತಡೆಯಲಾಗಿತ್ತು. ಬುಧವಾರ ಬೆಳಿಗ್ಗೆ ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ ನಡೆಸಿದ್ದರು.

“ಹಿಂದೆ ಪ್ರಜಾಪ್ರಭುತ್ವವಿತ್ತು, (ಈಗ) ಭಾರತದಲ್ಲಿ ಸರ್ವಾಧಿಕಾರವಿದೆ. ರಾಜಕಾರಣಿಗಳು ಉತ್ತರ ಪ್ರದೇಶಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ನಾವು ಉತ್ತರ ಪ್ರದೇಶಕ್ಕೆ ಹೋಗಲು ಸಾಧ್ಯವಿಲ್ಲ ಎಂದು ನಿನ್ನೆಯಿಂದ ಹೇಳಲಾಗುತ್ತಿದೆ” ಎಂದು ರಾಹುಲ್‌ ಗಾಂಧಿ ಟೀಕಿಸಿದ್ದರು.

ಮಂಗಳವಾರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ದ ನಾಯಕರು ಲಖಿಂಪುರ ಖೇರಿಗೆ ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಮೃತ ರೈತರ ಕುಟುಂಬಗಳನ್ನು ಭೇಟಿಯಾಗಲು ಲಖಿಂಪುರ್‌ ಖೇರಿಗೆ ಕಾಂಗ್ರೆಸ್ ನಿಯೋಗ ಹೊರಟಿತ್ತು.

“ಸೆಕ್ಷನ್ 144 ಜಾರಿಯಿದ್ದರೂ ಮೂರು ಜನರ ತಂಡ ಹೋಗಬಹುದು. ಸೆಕ್ಷನ್ 144 ನಲ್ಲಿ 5 ಜನರ ತಂಡ ಹೋಗಬಾರದು. ಇದರಿಂದಾಗಿ ನಾವು ಪತ್ರ ಬರೆದಿದ್ದೇವೆ. ಬೇರೆ ಪಕ್ಷದವರಿಗೆ ಅನುಮತಿ ನೀಡಲಾಗುತ್ತಿದೆ. ನಮ್ಮನ್ನು ಮಾತ್ರ ತಡೆಯಲಾಗುತ್ತಿದೆ. ನಾವೇನು ತಪ್ಪು ಮಾಡಿದ್ದೇವೆ..?” ಎಂದು ಪ್ರಶ್ನಿಸಿದ್ದರು.

“ನಾವು ವಿರೋಧ ಪಕ್ಷದವರು. ನಾವು ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಹತ್ರಾಸ್‌ನಲ್ಲಿ ನಾವು ಒತ್ತಡ ಹಾಕಿದ ಕಾರಣಕ್ಕೆ ಅಲ್ಲಿ ತನಿಖೆ ಆರಂಭವಾಯಿತು. ಇದರಿಂದಾಗಿ ರೈತರ ವಿಷಯದಲ್ಲಿಯೂ ನಾವು ಒತ್ತಡ ಹಾಕುತ್ತಿದ್ದೇವೆ. ರೈತರನ್ನು ಕೊಲೆ ಮಾಡಲಾಗಿದೆ, ಅವರಿಗೆ ಅನ್ಯಾಯವಾಗಿದೆ. ನಿಜ ಹೇಳಬೇಕೆಂದರೆ ಇದು ನಿಮ್ಮ (ಮಾಧ್ಯಮ) ಕೆಲಸ. ನೀವು ನಿಮ್ಮ ಜವಾಬ್ದಾರಿ ಮರೆತು ಕುಳಿತಿದ್ದಿರಿ ಅದಕ್ಕೆ ನಾವು ಮಾಡುತ್ತಿದ್ದೆವೆ” ಎಂದು ಮಾಧ್ಯಮದವರ ವಿರುದ್ದ ಕಿಡಿ ಕಾರಿದ್ದರು.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಸೀತಾಪುರದಲ್ಲಿ 10 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಿಯಾಂಕಾ ಗಾಂಧಿಯನ್ನು ಅತಿಥಿ ಗೃಹದಲ್ಲಿ ಬಂಧನದಲ್ಲಿರಿಸಲಾಗಿದೆ. ಪ್ರಿಯಾಂಕಾ, ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು, ಪಕ್ಷದ ನಾಯಕ ದೀಪೇಂದ್ರ ಹೂಡಾ ಮತ್ತು ಇತರರ ವಿರುದ್ಧ  (ಸಿಆರ್‌ಪಿಸಿ) ಸೆಕ್ಷನ್ 151, 107, 116 ರ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದು ಉಲ್ಲೇಖನೀಯ. ಈ ಎಲ್ಲ ಬೆಳವಣಿಗೆಗಳ ನಡುವೆ ಅಂತಿಮವಾಗಿ ಕಾಂಗ್ರೆಸ್ ನಾಯಕರು ಸ್ಥಳಕ್ಕೆ ತೆರಳಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿರಿ: ರೈತರ ಹತ್ಯೆಯಲ್ಲಿ ಸಚಿವ ‘ಅಜಯ್‌ ಮಿಶ್ರಾ’‍ ಹೆಸರು: ಯುಪಿ ಬ್ರಾಹ್ಮಣ ಪ್ರಾತಿನಿಧ್ಯಕ್ಕೆ ಸಂಕಷ್ಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...