Homeಕರ್ನಾಟಕಬುಡಕಟ್ಟು ಹಾಲಕ್ಕಿ ಒಕ್ಕಲಿಗರನ್ನು ಎಸ್‌‌ಟಿಗೆ ಸೇರಿಸಲು ಅಡ್ಡಗಾಲು ಹಾಕುತ್ತಿರುವುದು ಯಾರು?

ಬುಡಕಟ್ಟು ಹಾಲಕ್ಕಿ ಒಕ್ಕಲಿಗರನ್ನು ಎಸ್‌‌ಟಿಗೆ ಸೇರಿಸಲು ಅಡ್ಡಗಾಲು ಹಾಕುತ್ತಿರುವುದು ಯಾರು?

ಹಾಲಕ್ಕಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದರೆ ಮಂದೊಂದು ದಿನ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಪರಿಶಿಷ್ಟರಿಗೆ ಮೀಸಲಾಗುತ್ತದೆಂಬ ಭೀತಿ ಬಲಾಡ್ಯ ಜಾತಿ ಶಕ್ತಿಗಳನ್ನು ಕಾಡುತ್ತಿದೆಯೆಂಬ ಚರ್ಚೆ ನಡೆದಿದೆ.

- Advertisement -
- Advertisement -

ಸಹ್ಯಾದ್ರಿ ತಪ್ಪಲಲ್ಲಿರುವ ಉತ್ತರ ಕನ್ನಡದ ಪ್ರಾಕೃತಿಕ ಸೊಬಗಿಗೆ ಮೆರಗು ನೀಡಿರುವ ಆದಿವಾಸಿ ಹಾಲಕ್ಕಿ ಒಕ್ಕಲಿಗ ಸಮುದಾಯ ಮುಖ್ಯವಾಹಿನಿಗೆ ಬರಲಾಗದೆ ತೊಂದರೆಪಡುಡುತ್ತಿದೆ. ಆಧುನಿಕ ಸ್ಪರ್ಧೆಯಲ್ಲಿ ಬಲಾಢ್ಯರೊಂದಿಗೆ ಪೈಪೋಟಿ ನಡೆಸಲಾಗದೆ ತೀರಾ ಹಿಂದುಳಿದಿರುವ ಈ ಬುಡಕಟ್ಟು ಜನಾಂಗದವರು ತಮ್ಮನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಮುಂದುವರಿಕೆಗೆ ಅನುಕೂಲ ಕಲ್ಪಿಸುವಂತೆ ಬೇಡಿಕೆಯಿಟ್ಟು ಎರಡು ದಶಕಗಳೇ ಆಗಿಹೋಗಿದೆ. ಆದರೆ ಉತ್ತರ ಕನ್ನಡದ ಎಂಪಿ, ಎಂ.ಎಲ್‌.ಎ., ಮಂತ್ರಿಗಳ ಉದಾಸೀನ, ಇಚ್ಛಾ ಶಕ್ತಿಯ ಕೊರತೆಯಿಂದ ಹಾಲಕ್ಕಿ ಒಕ್ಕಲಿಗ ಸಮುದಾಯ ಅವಜ್ಞೆಗೀಡಾಗಿದೆ.

ಕಾರವಾರದ ಕಾಳಿ ನದಿಯಿಂದ ಹೊನ್ನಾವರದ ಶರಾವತಿ ನದಿ ತನಕದ ಕರಾವಳಿಯ ನಾಲ್ಕು ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ ಮತ್ತು ಹೊನ್ನಾವರದ ಕಾಡಿನಲ್ಲಿ ಬದುಕು ಕಟ್ಟಿಕೊಂಡಿರುವ ಹಾಲಕ್ಕಿ ಒಕ್ಕಲಿಗರು ಸರಿಸುಮಾರು ಒಂದೂವರೆ ಲಕ್ಷದಷ್ಟಿದ್ದಾರೆ. 7 ಸೀಮೆಗಳಲ್ಲಿ ಅಂದರೆ ಸುಮಾರು 169 ಹಳ್ಳಿಗಳಲ್ಲಿರುವ ಹಾಲಕ್ಕಿಗಳ ವಿಶಿಷ್ಟ ಉಡುಗೆ-ತೊಡುಗೆ, ಸಂಸ್ಕೃತಿ- ಸಂಪ್ರದಾಯ, ಕಲೆ-ಕಸಬು ಕಂಡರೆ ಎಂಥವರಿಗೂ ಇದೊಂದು ಬುಡಕಟ್ಟು ಸಮುದಾಯವೆಂಬುದು ನಿಸ್ಸಂಶಯವಾಗಿ ಖಾತ್ರಿಯಾಗುತ್ತದೆ. ಆದರೆ ಕುಲಶಾಸ್ತ್ರೀಯ ಅಧ್ಯಯದಿಂದಲೇ ಹಾಲಕ್ಕಿಗಳು ಬುಡಕಟ್ಟು ಮಂದಿಯೆಂಬುದು ಸಾಬೀತಾಗಿದ್ದರೂ ಆಳುವವರಿಗೆ ಮಾತ್ರ ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿಲ್ಲ!

PC : The Economic Times (ಮಾರ್ಗರೆಟ್ ಆಳ್ವ)

ಹಲವು ಮುಖ್ಯ ಮಂತ್ರಿಗಳು, ಮಂತ್ರಿಗಳು, ಸಂಸದರು, ಶಾಸಕರುಗಳ ಬಳಿ ಎಡತಾಕಿ ಮನವಿಗಳನ್ನು ಕೊಟ್ಟು ಸುಸ್ತಾಗಿರುವ ಹಾಲಕ್ಕಿಗಳೀಗ ಬೀದಿಗಿಳಿದು ಹೋರಾಡಬೇಕಾಗಿ ಬಂದಿದೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ತೀರಾ ಹಿಂದುಳಿದಿರುವ ಹಾಲಕ್ಕಿ ಸುಮುದಾಯದ ಹಲವು ಕುಟುಂಬಗಳಿಗೆ ಸೂರು ಕಟ್ಟಿಕೊಳ್ಳಲು ಕೂಡ ಒಂದು ಗುಂಟೆ ಜಾಗವಿಲ್ಲ. ಉತ್ತರ ಕನ್ನಡದ ಸಾಕ್ಷರತೆ ಶೆ.76ರಷ್ಟಿದೆ. ಆದರೆ ಹಾಲಕ್ಕಿಗಳ ಸಾಕ್ಷರತೆ ಪ್ರಮಾಣ ಶೇ.10 ಮಾತ್ರ! ಮೀಸಲಾತಿ ವ್ಯವಸ್ಥೆಯಲ್ಲಿ ಪ್ರ ವರ್ಗ-1ರಲ್ಲಿ ಸೇರಿಸಲ್ಪಟ್ಟಿರುವ ಹಾಲಕ್ಕಿಗಳಿಗೆ ಘನ ಘೋರ ಅನ್ಯಾಯ ಮಾಡಲಾಗಿದೆ ಎಂಬುದು ಸರ್ವವಿಧಿತ. ಪ್ರವರ್ಗ-1ರಲ್ಲಿರುವ ಪ್ರಬಲ ಜಾತಿಯ ಜನರೊಂದಿಗೆ ಅವಕಾಶಗಳಿಗಾಗಿ ಬಡಿದಾಡುವ ತ್ರಾಣ ಈ ಮುಗ್ದ ಸಮುದಾಯಕ್ಕಿಲ್ಲ. ಕೃಷಿ ಮತ್ತು ಕೃಷಿ ಕೂಲಿಗಳಾದ ಹಾಲಕ್ಕಿಗಳಿಗೆ ನಿರಂತರವಾಗಿ ಆಳುವವರು ಅನ್ಯಾಯ ಮಾಡುತ್ತಲೇ ಬಂದಿದ್ದಾರೆ. 25 ವರ್ಷದಿಂದ ತಮಗೆ ಮೀಸಲಾತಿಯಲ್ಲಾಗಿರುವ ವಂಚನೆ ಸರಿಪಡಿಸುವಂತೆ ಪರಿಪರಿಯಾಗಿ ಬೇಡುತ್ತಿದ್ದರು ಬದ್ಧತೆಯಿಂದ ಸ್ಪಂದಿಸುತ್ತಿಲ್ಲ.

ಇದನ್ನೂ ಓದಿರಿ: ಉತ್ತರ ಕನ್ನಡಕ್ಕೆ ಏಮ್ಸ್ ಆದರೂ ಕೊಡಿ; ಸಾಮಾಜಿಕ ಜಾಲತಾಣದಲ್ಲಿ ಹಕ್ಕೊತ್ತಾಯ

ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸುತ್ತಿರುವ ಪದ್ಮಶ್ರೀ ಸುಕ್ರಿ ಗೌಡರು. ಹಾಲಕ್ಕಿ ನಿಯೋಗ

ಹಾಲಕ್ಕಿ ಒಕ್ಕಲಿಗ ಮುಖಂಡರು ಜಿಲ್ಲೆಯನ್ನು ಬಹುಕಾಲ ಮಂತ್ರಿಯಾಗಿ ಆಳಿದ ಆರ್.ವಿ.ದೇಶಪಾಂಡೆಯವರನ್ನು ಪದೇ ಪದೇ ಭೇಟಿಯಾಗಿ ತಮ್ಮನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಪ್ರಯತ್ನಿಸುವಂತೆ ಒತ್ತಡ ಹಾಕಹತ್ತಿದ್ದರು. ಹಾಗಾಗಿ 2002ರಲ್ಲಿ ಅಂದಿನ ಜಿಲ್ಲಾ ಉಸ್ತುವಾರಿ ಮಂತ್ರಿ ದೇಶಪಾಂಡೆಯವರು ಹಾಲಕ್ಕಿಗಳ ಬೇಡಿಕೆಯತ್ತ ಗಮನ ಹರಿಸಬೇಕಾಗಿ ಬಂತು. ಒಂಚೂರು ಆಸಕ್ತಿಯಿಂದ ಹಾಲಕ್ಕಿಗಳತ್ತ ಪ್ರಮಾಣಿಕವಾಗಿ ಗಮನಹರಿಸಿದಿದ್ದೆಂದರೆ ಸ್ಥಳೀಯ ಸಂಸದೆಯಾಗಿದ್ದ ಮಾರ್ಗರೆಟ್ ಆಳ್ವ ಒಬ್ಬರೇ. ಆನಂತರ ರಾಜ್ಯ ಸರ್ಕಾರ ಹಾಲಕ್ಕಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿವಂತೆ ಶಿಫಾರಸು ಮಾಡಿತ್ತು. ಆದರೆ ಸಂಸದ ಅನಂತಕುಮಾರ್ ಹೆಗಡೆಯವರ ನಿರಾಸಕ್ತಿಯಿಂದ ದಿಲ್ಲಿಯಲ್ಲಿ ಕಡತ ಮುಂದಕ್ಕೆ ಹೋಗದೆ ಧೂಳುತ್ತಿನ್ನುತ ಕೂತಿದೆ ಎಂಬ ಅಳಲು ಹಾಲಕ್ಕಿ ಸಮುದಾಯಲ್ಲಿದೆ.

ಈಗ ಹಾಲಕ್ಕಿ ಮುಂದಾಳುಗಳು ಸಂಸದ ಹೆಗಡೆಯವರ ಬೆನ್ನುಬಿದ್ದಿದ್ದಾರೆ. ಹೆಗಡೆ ಒಂದೊಂದೇ ಸಬೂಬು ಹೇಳಿ ಕಾಲಹರಣ ಮಾಡುತ್ತಿದ್ದಾರೆಂದು ಹೆಸರು ಹೇಳಲಿಚ್ಚಿಸದ ಹಾಲಕ್ಕಿ ಹಿರಿಯರೊಬ್ಬರು ‘ನಾನು ಗೌರಿ.ಕಾಂ’ ನೊಂದಿಗೆ ಮಾತನಾಡುತ್ತ ಬೇಸರಿಸಿದರು. ಕಳೆದ ವರ್ಷ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಮಂತ್ರಿಯನ್ನು ಬೇಟಿ ಮಾಡಿಸುವೆನೆಂದು ಸಂಸದ ಹೆಗಡೆಯವರು ಹಾಲಕ್ಕಿ ಮುಖಂಡರಿಗೆ ಹೇಳಿದ್ದರಂತೆ. ಹಾಲಕ್ಕಿಗಳ ನಿಯೋಗ ವಿಮಾನ ಟಿಕೆಟ್ ತೆಗೆದು ಪ್ರಯಾಣಕ್ಕೆ ಸಿದ್ದವಾಗಿತ್ತು. ಆದರೆ ಅದೇ ಸಮಯದಲ್ಲಿ ಚೀನಾದಲ್ಲಿ ಕೊರೊನಾ ಶುರುವಾಗಿತ್ತು. ಇದೆ ನೆಪ ಮಾಡಿ ಹಾಲಕ್ಕಿ ನಿಯೋಗಕ್ಕೆ ದಿಲ್ಲಿಗೆ ಬರುವುದು ಬೇಡವೆಂದು ಸಂಸದರು ಹೇಳಿದರಂತೆ! ಹಾಲಕ್ಕಿ ಹೋರಾಟಗರರು ಸಂಸದರಿಗೆ ಪೋನಾಯಿಸುತ್ತಲೇ ಇದ್ದಾರೆ. ಸದ್ಯ ಕೊರೊನಾ ಹಾವಳಿಯಿರುವುದರಿಂದ ದಿಲ್ಲಿಗೆಲ್ಲ ಬರುವುದು ಬೇಡ; ಕರ್ನಾಟಕದವರೆ ಕೇಂದ್ರದಲ್ಲಿ ಸಾಮಾಜಿಕ ನ್ಯಾಯ ಸಬಲೀಕರಣ ಇಲಾಖೆಗೆ ಸಹಾಯಕ ಮಂತ್ರಿ[ನಾರಾಯಣಸ್ವಾಮಿ] ಆಗಿದ್ದಾರೆ. ಅವರನ್ನು ಬೆಂಗಳೂರಲ್ಲೇ ಭೇಟಿ ಮಾಡಿಸುತ್ತೇನೆ ಎಂದು ಈಗ ಸಂಸದರು ಹೇಳುತ್ತಿದ್ದಾರಂತೆ.

PC : Prajavani (ಅನಂತಕುಮಾರ್ ಹೆಗಡೆ)

ಹಾಲಕ್ಕಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಸ್ತಾವನೆ ಪ್ರಕ್ರಿಯೆ ಪಾರ್ಲಿಮೆಂಟಲ್ಲಿ ಮಂಡಿಸಿ ಒಪ್ಪಿಗೆ ಪಡೆಯುವ ಹಂತಕ್ಕೆ ಬಂದಿದೆ. ಸಂಸದ ಹೆಗಡೆ ಸ್ವಲ್ಪ ಮುತುರ್ವಜಿ ವಹಿಸಿದರೆ ತಮ್ಮ ಬಹುದಿನದ ಕನಸು ನನಸಾಗುತ್ತದೆಯೆಂದು ಹಾಲಕ್ಕಿ ಹೋರಾಟದ ಮುಂಚೂಣಿಯಲ್ಲಿರುವವರು ಹೇಳುತ್ತಾರೆ. ತಮ್ಮ ಬೇಡಿಕೆ ಈಡೇರದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಹೋರಾಟ ಮಾಡುತ್ತೇವೆಂದು ಹಾಲಕ್ಕಿ ನೇತಾರರು ಎಚ್ಚರಿಕೆ ಕೊಟ್ಟಿದ್ದಾರೆ. ಹಾಲಕ್ಕಿ ಸಮುದಾಯದ ಜಾನಪದ ಕೋಗಿಲೆ ಖ್ಯಾತಿಯ ಸುಕ್ರಿ ಗೌಡ ತಮ್ಮ ಶೋಷಿತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ತನಗೆ ಬಂದಿರುವ ಪದ್ಮಶ್ರೀ ಪ್ರಶಸ್ತಿ ಮರುಳಿಸಿ ಈ ಇಳಿವಯಸ್ಸಿನಲ್ಲಿ ಹೋರಾಟಕ್ಕೆ ಧುಮುಕಲು ಸಿದ್ದರೆಂದು ಹೇಳುತ್ತಿದ್ದಾರೆ! ಹಾಲಕ್ಕಿಗಳ ಮೀಸಲಾತಿ ಹೋರಾಟ ಜೋರಾಗುವ ಎಲ್ಲ ಲಕ್ಷಣಗಳೀಗ ಗೋಚರಿಸುತ್ತದೆ.

ಸಾಮಾಜಿಕ ನ್ಯಾಯ ತತ್ವದಂತೆ ಪರಿಶಿಷ್ಟ ಪಂಗಡಕ್ಕೆ ಸೇರುವ ಸಕಲ ಅರ್ಹತೆಯಿರುವ ಹಾಲಕ್ಕಿ ಒಕ್ಕಲಿಗರನ್ನು ವಂಚಿಸುತ್ತಿರುವುದರ ಹಿಂದೆ ಮೇಲು ವರ್ಗದ ಪಟ್ಟಭದ್ರ ರಾಜಕೀಯ ಹಿತಾಸಕ್ತಿ ಅಡಗಿದೆಯೆಂಬ ಭಾವನೆ ಉತ್ತರ ಕನ್ನಡದಲ್ಲಿದೆ. ಹಾಲಕ್ಕಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದರೆ ಮಂದೊಂದು ದಿನ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಪರಿಶಿಷ್ಟರಿಗೆ ಮೀಸಲಾಗುತ್ತದೆಂಬ ಭೀತಿ ಬಲಾಡ್ಯ ಜಾತಿ ಶಕ್ತಿಗಳನ್ನು ಕಾಡುತ್ತಿದೆಯೆಂಬ ಚರ್ಚೆ ನಡೆದಿದೆ.


ಇದನ್ನೂ ಓದಿ: ಉತ್ತರ ಕನ್ನಡ: ಹೆಬ್ಬಾರ್‌ರ ಯಲ್ಲಾಪುರದಿಂದ ಸ್ಪರ್ಧೆಗೆ ದೇಶಪಾಂಡೆ ಮಗ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...