Homeಮುಖಪುಟಲಖಿಂಪುರ್‌ ಭೇಟಿ: ರಾಹುಲ್‌ ಗಾಂಧಿಗೆ ಅನುಮತಿ ನೀಡಿ ಏರ್‌ಪೋರ್ಟ್‌ನಲ್ಲಿ ತಡೆದ ಆದಿತ್ಯನಾಥ್‌ ಸರ್ಕಾರ

ಲಖಿಂಪುರ್‌ ಭೇಟಿ: ರಾಹುಲ್‌ ಗಾಂಧಿಗೆ ಅನುಮತಿ ನೀಡಿ ಏರ್‌ಪೋರ್ಟ್‌ನಲ್ಲಿ ತಡೆದ ಆದಿತ್ಯನಾಥ್‌ ಸರ್ಕಾರ

ಸರ್ಕಾರಕ್ಕೆ ಇಷ್ಟೊಂದು ಭಯ ಯಾಕೆ? ಎಂದು ಅವರು ಕೇಳಿದ್ದಾರೆ

- Advertisement -
- Advertisement -

ರೈತರ ಹತ್ಯಾಕಾಂಡ ನಡೆದ ಲಖಿಂಪುರ್‌ ಗೆ ತೆರಳಲು ಮಧ್ಯಾಹ್ನ ಲಕ್ನೋಗೆ ತೆರಳಿದ್ದ ರಾಹುಲ್ ಗಾಂಧಿ ಅವರನ್ನು ವಿಮಾನ ನಿಲ್ದಾಣಲ್ಲಿ ತಡೆಯಲಾಗಿದೆ. ಭದ್ರತಾ ಸಿಬ್ಬಂದಿಗಳು ಅವರನ್ನು ಪೊಲೀಸ್‌ ಕಾರಿನಲ್ಲಿ ತೆರಳಲು ಕೇಳಿಕೊಂಡಿದ್ದು, ಇದಕ್ಕೆ ರಾಹುಲ್ ಗಾಂಧಿ ನಿರಾಕರಿಸಿದ್ದಾರೆ. ನಂತರ ರಾಹುಲ್ ಗಾಂಧಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದು, ಕೊನೆಗೆ ಅವರದೆ ಸ್ವಂತ ಕಾರಿನಲ್ಲಿ ತೆರಳಲು ಅನುಮತಿ ನೀಡಲಾಗಿದೆ.

ಉತ್ತರ ಪ್ರದೇಶದ ಭದ್ರತಾ ಸಿಬ್ಬಂದಿಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ನನ್ನ ಪ್ರಯಾಣ ವ್ಯವಸ್ಥೆ ಮಾಡಲು ನೀವು ಯಾರು? ನಾನು ನನ್ನ ಕಾರಿನಲ್ಲಿ ತೆರಳಲು ಬಯಸುತ್ತೇನೆ” ಹೇಳಿದ್ದಾರೆ.

“ಅವರು 100% ಏನೋ ಕಿಡಿಗೇಡಿ ಕ್ರಮಕ್ಕೆ ಹೊಂಚು ಹಾಕಿದ್ದಾರೆ” ಎಂದು ರಾಹುಲ್ ಗಾಂಧಿ ಸುದ್ದಿಗಾರರಿಗೆ ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಭೇಟಿಗೆ ರಾಹುಲ್ ಗಾಂಧಿ ನೇತೃತ್ವದ ನಿಯೋಗಕ್ಕೆ ಅನುಮತಿ ನೀಡದ ಯುಪಿ ಸರ್ಕಾರ

ಲಖಿಂಪುರಕ್ಕೆ ರಾಜಕೀಯ ನಾಯಕರ ಭೇಟಿಗೆ ಬಿಜೆಪಿ ಸರ್ಕಾರ ನಿರ್ಬಂಧಿಸಿತ್ತು ಮತ್ತು ಸೋಮವಾರದಂದು ಅಲ್ಲಿಗೆ ತೆರಳಿದ್ದ ಪ್ರಿಯಾಂಕ ಗಾಂಧಿ ಅವರನ್ನು ಗೃಹ ಬಂಧನದಲ್ಲಿ ಇಟ್ಟಿತ್ತು. ಇಂದು ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ರಾಹುಲ್ ಗಾಂಧಿ ಅವರ ನಿಯೋಗಕ್ಕೆ ಲಖಿಂಪುರಕ್ಕೆ ತೆರಳಲು ಅನುಮತಿ ನೀಡಿದೆ.

ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಚನ್ನಿ, ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ವೇಣುಗೋಪಾಲ್‌ ಅವರೊಂದಿಗೆ ವಿಮಾನ ನಿಲ್ದಾಣದಲ್ಲಿ ಕೂತಿರುವ ಚಿತ್ರವನ್ನು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಚಿತ್ರದಲ್ಲಿ ಕಾಂಗ್ರೆಸ್ ನಾಯಕರು ಸ್ಥಳವನ್ನು ಬಿಟ್ಟು ಮುಂದೆ ಬರದಂತೆ ಭದ್ರತಾ ಸಿಬ್ಬಂದಿ ಹಗ್ಗ ಹಿಡಿದು ಅಡ್ಡ ನಿಂತಿದ್ದಾರೆ. ಈ ಟ್ವೀಟ್‌ನಲ್ಲಿ, “ಇದು ಬಿಜೆಪಿ ಸರ್ಕಾರದ ‘ಅನುಮತಿ’. ಸರ್ಕಾರಕ್ಕೆ ಇಷ್ಟೊಂದು ಭಯ ಯಾಕೆ?” ಎಂದು ರಾಹುಲ್ ಗಾಂಧಿ ಬರೆದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಮಹಿಳೆಯರನ್ನು ಅವಮಾನಿಸಿಲ್ಲ, ಅರ್ಧ ಭಾಷಣ ಹಂಚಿಕೊಳ್ಳಲಾಗುತ್ತಿದೆ

“ನನ್ನನ್ನು ಹೊರಡಲು ಬಿಡಿ, ಅವರು ನನ್ನನ್ನು ವಿಮಾನ ನಿಲ್ದಾಣದಿಂದ ಹೊರಡಲು ಬಿಡುತ್ತಿಲ್ಲ. ಇದನ್ನು ನೋಡಿ – ಇದು ಯಾವ ರೀತಿಯ ಅನುಮತಿ? ಯುಪಿ ಸರ್ಕಾರದ ‘ಅನುಮತಿ’ ಯ ಸ್ಥಿತಿಯನ್ನು ನೋಡಿ. ನಾನು ವಿಮಾನ ನಿಲ್ದಾಣವನ್ನು ತೊರೆಯಲು ಬಯಸುತ್ತಿದ್ದೇನೆ, ಆದರೆ ಅವರು ಅನುಮತಿಸುತ್ತಿಲ್ಲ. ಈ ದೃಶ್ಯವನ್ನು ಸರಿಯಾಗಿ ತೋರಿಸಿ” ಎಂದು ರಾಹುಲ್ ಗಾಂಧಿ ಮಾಧ್ಯಮದತ್ತ ತಿರುಗಿ ಹೇಳಿದ್ದಾರೆ.

“ನಾನು ಇಲ್ಲಿ 10 ದಿನಗಳೋ, 20 ದಿನಗಳೋ, ಎಷ್ಟಾದರೂ ಆಗಲಿ, ಇಲ್ಲೇ ಇರುತ್ತೇನೆ” ಎಂದು ಅವರು ಘೋಷಿಸಿದ್ದಾರೆ.

ಅಧಿಕಾರಿಗಳ ಜೊತೆಗೆ ರಾಹುಲ್ ಗಾಂಧಿ ವಾಗ್ವಾದ ನಡೆಸಿದ ನಂತರ, ಕೊನೆಗೆ ಅವರದೆ ಸ್ವಂತ ಕಾರಿನಲ್ಲಿ ತೆರಳಲು ಅನುಮತಿ ನೀಡಿದ್ದಾರೆ. ನಂತರ ವಿಮಾನ ನಿಲ್ದಾಣದಿಂದ ರಾಹುಲ್ ಗಾಂಧಿ ಲಿಖಿಂಪುರಕ್ಕೆ ತೆರಳಿದ್ದು, ಮೊದಲಿಗೆ ಸೋಮವಾರದಿಂದ ಬಂಧನದಲ್ಲಿದ್ದ ತನ್ನ ಸಹೊದರಿ ಪ್ರಿಯಾಂಕ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ.

ಇದನ್ನೂ ಓದಿ: RSS ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...