Homeಕರ್ನಾಟಕಮಂಗಳೂರಿನಲ್ಲಿ ಕೋಮು ಪ್ರಚೋದನೆ: ಚೈತ್ರ ಕುಂದಾಪುರ ವಿರುದ್ದ ದೂರು ದಾಖಲು

ಮಂಗಳೂರಿನಲ್ಲಿ ಕೋಮು ಪ್ರಚೋದನೆ: ಚೈತ್ರ ಕುಂದಾಪುರ ವಿರುದ್ದ ದೂರು ದಾಖಲು

ದೈವಗಳ ಕೈಯ್ಯಲ್ಲಿ ಇರುವುದು ‘ಸುರಿಯ’ ಹೊರತು, ತಲವಾರು ಅಲ್ಲ, ತಲವಾರು ಹಿಡಿಯುವುದು ರೌಡಿಗಳು ಮತ್ತು ದುಷ್ಟರು ಎಂದು ದೂರು ನೀಡಿರುವ ಚಿತ್ತರಂಜನ್‌ ಅವರು ಹೇಳಿದ್ದಾರೆ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಯಾದ ಭಜರಂಗದಳ ಮತ್ತು ದುರ್ಗಾವಾಹಿನಿ ಹಮ್ಮಿಕೊಂಡಿದ್ದ ಸಮಾವೇಶವೊಂದರಲ್ಲಿ, ಪ್ರಚೋದನಕಾರಿ ಮತ್ತು ಅಶ್ಲೀಲ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕುಂದಾಪುರ ಎಂಬವರ ಮೇಲೆ ಬುಧವಾರ ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಗಳವಾರ ನಡೆದ ಸಮಾವೇಶದಲ್ಲಿ ಚೈತ್ರ ಅವರು ಮುಸ್ಲಿಂ ಮಹಿಳೆಯರನ್ನು ಮತ್ತು ತುಳುನಾಡಿನ ದೈವಗಳಾದ ಕೋಟಿಚೆನ್ನಯ್ಯ ಅವರನ್ನು ಕೆಟ್ಟದಾಗಿ ಉದಾಹರಿಸಿ ಕೋಮುಗಲಭೆಗೆ ಪ್ರಚೋದಿಸಿದ್ದರು. ಇದರ ವಿರುದ್ದ ರಾಜ್ಯ ಕಾಂಗ್ರೆಸ್ ಸಂಯೋಜಕರಾದ ಬೊಂಡಾಲ ಚಿತ್ತರಂಜನ್‌ ಶೆಟ್ಟಿ ಅವರು ಸುರತ್ಕಲ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಚೈತ್ರ ಮತ್ತು ಕಾರ್ಯಕ್ರಮವನ್ನು ಸಂಘಟಿಸಿದವರನ್ನು ಬಂಧಿಸಬೇಕು ಎಂದು ದೂರಿನಲ್ಲಿ ವಿನಂತಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ – ಬಜರಂಗದಳ ಕಾರ್ಯಕರ್ತರ ಬಂಧನ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಚಿತ್ತರಂಜನ್ ಶೆಟ್ಟಿ ಅವರು, “ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಆದರೆ ಅಲ್ಲಿನ ಇನ್ಸ್‌‌ಪೆಕ್ಟರ್ ಮೊದಲಿಗೆ ದೂರು ಸ್ವೀಕರಿಸಲು ನಿರಾಕರಿಸಿ, ‘ದೂರು ನೀಡುವ ಅವಶ್ಯಕತೆಯಿಲ್ಲ, ಈ ಬಗ್ಗೆ ದೂರು ದಾಖಲಾಗಿದೆ. ಅದೇ ದೂರಿನಲ್ಲಿ ಕ್ರಮ ಕೈಗೊಳ್ಳುತ್ತೇನೆ’ ಎಂದು ಹೇಳಿದರು. ಆದರೆ ನಾನು ಒತ್ತಾಯ ಮಾಡಿ ದೂರು ದಾಖಲು ಮಾಡಿದ್ದೇನೆ. ಇನ್ನೂ ಎಫ್‌ಐಆರ್‌ ದಾಖಲಿಸಿಲ್ಲ, ನಾಳೆ ಕಮೀಷನ್ ಅವರನ್ನು ಭೇಟಿ ಮಾಡಲಿದ್ದೇನೆ. ನಾನು ಹೋರಾಟವನ್ನು ಮುಂದುವರೆಸಲಿದ್ದು, ಮುಖ್ಯಮಂತ್ರಿ ತನಕ ತೆರಳಲಿದ್ದೇನೆ” ಎಂದು ಹೇಳಿದರು.

“ಸುರತ್ಕಲ್‌‌‌ 20 ವರ್ಷದ ಹಿಂದೆ ಕೋಮು ಗಲಭೆಯಿಂದ ನಲುಗಿತ್ತು. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಂಘಪರಿವಾರದವರು ಅದನ್ನು ಇನ್ನೊಮ್ಮೆ ಮರುಕಳಿಸಲು ಪ್ರಯತ್ನಿಸುತ್ತಿದ್ದಾರೆ. ಇದರಿಂದ ರಾಜಕೀಯ ಲಾಭ ತೆಗೆದುಕೊಂಡು ಇವರು ಇನ್ನೊಮ್ಮೆ ಶಾಸಕ, ಸಚಿವರಾಗಿ ಅಧಿಕಾರ ಹಿಡಿಯುತ್ತಾರೆ. ಆದರೆ ಬಡಪಾಯಿ ಶೂದ್ರರು, ದಲಿತರು ಕತ್ತಿ ಹಿಡಿದುಕೊಂಡು ಜೈಲು ಪಾಲಾಗುತ್ತಾರೆ, ಇದು ಇವರ ಅಜೆಂಡಾ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಭರತ್‌ ಶೆಟ್ಟಿ ಕೂಡಾ ಇದ್ದರು ಎಂಬ ಮಾಹಿತಿಯಿದೆ. ಒಬ್ಬ ಶಾಸಕರಾಗಿ ಇಂತಹ ವಿಷಯಗಳಿಗೆ ಅವರು ಬೆಂಬಲ ಕೊಡುತ್ತಾರೆ ಎಂದರೆ ನಾಚಿಕೆಗೇಡಿನ ಸಂಗತಿ ಎಂದು ಚಿತ್ತರಂಜನ್ ಶೆಟ್ಟಿ ಎಂದು ತಿಳಿಸಿದರು.

“ಕೋಟಿ ಚೆನ್ನಯ್ಯ ಅವರನ್ನು ಕೂಡಾ ಕಾರ್ಯಕ್ರಮದಲ್ಲಿ ಅವಮಾನಿಸಿದ್ದಾರೆ. ದೈವಗಳ ಕೈಯ್ಯಲ್ಲಿ ಇರುವುದು ಸುರಿಯ ಎಂಬ ಆಯುಧವೇ ಹೊರತು, ತಲವಾರು ಅಲ್ಲ. ತಲವಾರು ಹಿಡಿಯುವುದು ರೌಡಿಗಳು, ದುಷ್ಟರು. ತುಳುನಾಡಿನ ಮಹಾಪುರುಷರು ಹೋರಾಡಿದ್ದು ಆಗಿನ ಜಮೀನ್ದಾರಿ ವಿರುದ್ದವೆ ಹೊರತು ಮುಸ್ಲಿಮರ ವಿರುದ್ದ ಅಲ್ಲ. ಆದರೆ ಇವರು ದೈವಗಳ ಕುರಿತು ತಪ್ಪು ಕಲ್ಪನೆಯನ್ನು ಜನರ ತಲೆಗೆ ತುಂಬಿಸಿ ಕೋಮುಗಲಭೆಗೆ ಪ್ರಚೋದಿಸಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದನ್ನೂ ಓದಿ: ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

ಚಿತ್ರರಂಜನ್ ಅವರ ದೂರಿನ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಸುರತ್ಕಲ್ ಠಾಣೆಯ ಇನ್ಸ್‌ಪೆಕ್ಟರ್‌ ಚಂದ್ರಪ್ಪ ನಾಯಕ್, “ಮಂಗಳೂರಿಗೆ ನಾಳೆ ರಾಷ್ಟ್ರಪತಿ ಆಗಮಿಸುತ್ತಿರುವುದರಿಂದ ಈಗ ಅದರ ಬಂದೋಬಸ್ತಿನಲ್ಲಿ ಇದ್ದೇನೆ. ದೂರು ನೀಡಿದ್ದಾರೆ, ಇನ್ನೂ ಎಫ್‌ಐಆರ್‌ ಆಗಿಲ್ಲ, ಆಗಬಹುದು. ಠಾಣೆಗೆ ತೆರಳಿ ದೂರಿನ ಬಗ್ಗೆ ಪರಿಶೀಲಿಸುತ್ತೇನೆ” ಎಂದು ತಿಳಿಸಿದರು.

ಚೈತ್ರ ಕುಂದಾಪುರ ಅವರು ಮಂಗಳವಾರ ನಡೆದ ಸಭೆಯಲ್ಲಿ, “70% ದಷ್ಟು ಇರುವ ಹಿಂದೂಗಳು, ಮುಸ್ಲಿಂ ಹೆಣ್ಣು ಮಕ್ಕಳನ್ನು ಮತಾಂತರ ಮಾಡುವುದಕ್ಕೆ ಎರಡು ದಿನ ಸಾಕು. ಭಜರಂಗದಳದ ಕಾರ್ಯಕರ್ತರು ಮುಸ್ಲಿಂ ಹೆಣ್ಣು ಮಕ್ಕಳನ್ನು ಲವ್ ಮಾಡೋಕೆ ಹೊರಟರೆ, ಮುಸ್ಲಿಮರ ಮನೆಯಲ್ಲಿ ಬುರ್ಖಾ ಕಾಣುವುದಿಲ್ಲ. ಪ್ರತೀ ಮನೆಯ ಮುಸ್ಲಿಂ ಹೆಣ್ಣುಮಕ್ಕಳ ಹಣೆಗೆ ಕುಂಕುಮ ಇಟ್ಟು ಕರೆದುಕೊಂಡು ಬರುತ್ತೇವೆ. ನಮಗೆ ತಲವಾರು ಹಿಡಿಯಲು ಕಲಿಸಿದ್ದು ಕೋಟಿ ಚೆನ್ನಯ್ಯ..” ಎಂದು ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಜೊತೆಗೆ, ಕಾಂಗ್ರೆಸ್‌ ನಾಯಕರೊಬ್ಬರ ಮಗಳನ್ನು ವೈಯಕ್ತಿವಾಗಿ ನಿಂದಿಸಿದ್ದರು.

ಸುರತ್ಕಲ್‌ನಲ್ಲಿ ಇತ್ತೀಚೆಗೆ, ಕಾರಿನಲ್ಲಿ ಜೊತೆಯಾಗಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು, ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳ ಕಾರ್ಯಕರ್ತರು ತಡೆದು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದರು. ಘಟನೆ ವಿರೋಧಿಸಿ ರಾಷ್ಟ್ರಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಐವರನ್ನು ಬಂಧಿಸಲಾಗಿತ್ತು. ಆದರೆ ಅವರಿಗೆ ಠಾಣೆಯಲ್ಲೇ ಜಾಮೀನು ನೀಡಿ ಬಿಡುಗಡೆ ಮಾಡಲಾಗಿತ್ತು. ಇದನ್ನು ಕೂಡಾ ಸಾರ್ವಜನಿಕರು ಪ್ರಶ್ನಿಸಿದ್ದರು. ಆದರೆ ಬಜರಂಗದಳ ಈ ಘಟನೆಯನ್ನು ಬೆಂಬಲಿಸಿ ಮಂಗಳವಾರ ಸಮಾವೇಶವನ್ನು ನಡೆಸಿತ್ತು. ಇದರಲ್ಲಿ ಚೈತ್ರ ಕುಂದಾಪುರ ಅವರು ಭಾಷಣ ಮಾಡಿದ್ದರು.

ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ಮರುಕಳಿಸುತ್ತಿದೆ ಧರ್ಮಾಧಾರಿ ಪೊಲೀಸ್‌ಗಿರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...