Homeಚಳವಳಿಕೊಲ್ಕತ್ತಾ: ದುರ್ಗಾ ಪೂಜೆ ಮಂಟಪಗಳಲ್ಲಿ ಹೊರಹೊಮ್ಮಿದ ರೈತ ಹೋರಾಟದ ಚಿತ್ರಗಳು

ಕೊಲ್ಕತ್ತಾ: ದುರ್ಗಾ ಪೂಜೆ ಮಂಟಪಗಳಲ್ಲಿ ಹೊರಹೊಮ್ಮಿದ ರೈತ ಹೋರಾಟದ ಚಿತ್ರಗಳು

- Advertisement -
- Advertisement -

ನವರಾತ್ರಿಗೆ ತಯಾರಾಗುತ್ತಿರುವ ಕೊಲ್ಕತ್ತಾದಲ್ಲಿ ದುರ್ಗಾ ಪೂಜೆ ಮಂಟಪಗಳನ್ನು ವಿಭಿನ್ನವಾಗಿ ಅಲಂಕರಿಸಲಾಗುತ್ತಿದೆ. ಉತ್ತರ ಕೊಲ್ಕತ್ತಾದ ಸ್ಥಳೀಯ ಕ್ಲಬ್‌ವೊಂದು, ಸುಮಾರು ಒಂದು ವರ್ಷದಿಂದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಹೋರಾಟವನ್ನು ಗೌರವಿಸುವ ಮೂಲಕ ದುರ್ಗಾ ಪೂಜೆಯನ್ನು ಆಚರಿಸುತ್ತಿದೆ.

ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ರಚಿಸಿರುವ ಬೃಹತ್ ಕಲಾಕೃತಿಗಳು ರೈತರ ಸಂಕಷ್ಟವನ್ನು ಚಿತ್ರಿಸುತ್ತವೆ. ಇದರ ಜೊತೆಗೆ ಭಾನುವಾರ ನಡೆದ ಯುಪಿಯ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ನಡೆದ ಹತ್ಯಾಕಾಂಡವನ್ನು ತೀವ್ರವಾಗಿ ಟೀಕಿಸಿ ಚಿತ್ರಗಳನ್ನು ರಚಿಸಲಾಗಿದೆ.

ಡುಮ್‌ಡಮ್ ಉದ್ಯಾನವನದ ಭಾರತ ಚಕ್ರ ಪೆಂಡಾಲ್‌ನಲ್ಲಿ ಪ್ರವೇಶದ್ವಾರದಲ್ಲಿ ಟ್ರ್ಯಾಕ್ಟರ್‌ನ ಬೃಹತ್ ಪ್ರತಿರೂಪವನ್ನು ರಚಿಸಲಾಗಿದೆ. ಗೋಡೆ ಮೇಲೆ ಬಿಡಿಸಲಾಗಿರುವ ಭಿತ್ತಿ ಚಿತ್ರಗಳಲ್ಲಿ ಕಾರು ರೈತನ ಮೇಲೆ ಹರಿದು ಹೋಗುತ್ತಿರುವ ಚಿತ್ರವಿದೆ.

ಇದನ್ನೂ ಓದಿ: ಲಖಿಂಪುರ್ ರೈತರ ಹತ್ಯೆ ಪ್ರಕರಣ: ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ದೊಡ್ಡ ಟ್ಯ್ರಾಕ್ಟರ್‌ ಮೇಲೆ ದೊಡ್ಡ ರೆಕ್ಕೆಗಳನ್ನು ರಚಿಸಲಾಗಿದ್ದು, ಈ ರೆಕ್ಕೆಗಳಲ್ಲಿ ಪ್ರತಿಭಟನೆ ವೇಳೆ ಹುತಾತ್ಮರಾದ ರೈತರ ಹೆಸರುಗಳನ್ನು ಬರೆಯಲಾಗಿದೆ ಎಂದು ಈ ಕಲಾಕೃತಿಗಳನ್ನು ರಚಿಸಿರುವ ಕಲಾವಿದ ಅನಿರ್ಬನ್ ದಾಸ್ ಹೇಳಿದ್ದಾರೆ.

ಪೋಲಿಸರ ಹಲ್ಲೆಗಳಿಂದ ತಪ್ಪಿಸಿಕೊಳ್ಳುವಾಗ ಪ್ರತಿಭಟನಾಕಾರರು ತಮ್ಮ ಚಪ್ಪಲಿಗಳನ್ನು ಕಳೆದುಕೊಂಡು ಕಾಲ್ನಡಿಗೆಯಲ್ಲಿ ಆಂದೋಲನ ನಡಸುವುದನ್ನು ಸಂಕೇತಿಸಲು ನೂರಾರು ಚಪ್ಪಲಿಗಳನ್ನು ಇಳಿಬಿಡಲಾಗಿದೆ.  ಮುಖ್ಯ ಪೆಂಡಾಲ್‌ನ ಛಾವಣಿಯನ್ನು ಭತ್ತದಿಂದ ಅಲಂಕರಿಸಲಾಗಿದೆ. ದೆಹಲಿಯಲ್ಲಿರುವ ಮಾದರಿಯ ಬ್ಯಾರಿಕೇಡ್‌ಗಳನ್ನು ತಯಾರಿಸಿ ಇಲ್ಲಿ ಇರಿಸಲಾಗಿದೆ.

“ನಾವು ರೈತರು, ಭಯೋತ್ಪಾದಕರಲ್ಲ. ರೈತರು ಆಹಾರ ನೀಡುವ ಸೈನಿಕರು” ಎಂದು ಪೋಸ್ಟರ್‌ನಲ್ಲಿ, ಬರೆಯಲಾಗಿದೆ.

ಪೂಜಾ ಸಮಿತಿಯ ಕಾರ್ಯದರ್ಶಿ ಪ್ರತೀಕ್ ಚೌಧರಿ ಅವರು ರೈತರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ಎತ್ತಿ ತೋರಿಸಲು ಬಯಸಿದ್ದೇವೆ ಎಂದಿದ್ದಾರೆ.

“1946-47ರಲ್ಲಿ ತೆಭಾಗ (Tebhaga movement)ಚಳುವಳಿಯ ದಿನಗಳಿಂದ ಹಿಡಿದು ಇತ್ತೀಚಿನ ಮೂರು ಕಾರ್ಪೊರೇಟ್ ಪರ ಕೃಷಿ ಮಸೂದೆಗಳ ವಿರುದ್ಧದ ಆಂದೋಲನದವರೆಗೆ, ನಮಗೆ ಆಹಾರವನ್ನು ಒದಗಿಸುವ ರೈತರ ಕಥೆಯನ್ನು ಹೇಳಲು ನಾವು ಪ್ರಯತ್ನಿಸಿದ್ದೇವೆ” ಎಂದು ಹೇಳಿದ್ದಾರೆ.

“ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ನಾಲ್ಕು ರೈತರ ಮೇಲೆ ಕಾರು ಹರಿಸಿ ಕೊಲೆ ಮಾಡಿರುವ ಘಟನೆ ನಮ್ಮ ಪೆಂಡಾಲ್ ಬಹುತೇಕ ಸಿದ್ಧವಾಗಿದ್ದಾಗ ಸಂಭವಿಸಿದೆ. ಆದರೂ, ನಾವು ಅದನ್ನು ಸೇರಿಸಿದ್ದೇವೆ” ಎಂದು ಚೌಧರಿ ಹೇಳಿದ್ದಾರೆ.


ಇದನ್ನೂ ಓದಿ: ರೈತರ ಮೇಲೆ ಹರಿದ ಕಾರನ್ನು ಅಜಯ್ ಮಿಶ್ರಾ ಪುತ್ರ ಆಶೀಶ್ ಚಲಾಯಿಸುತ್ತಿದ್ದರು: ಗಾಯಾಳು ರೈತ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...