Homeಮುಖಪುಟ‘ಅತ್ಯಂತ ಸ್ಪಷ್ಟ’ - ಮತ್ತೆ ರೈತರ ಪರ ಟ್ವೀಟ್ ಮಾಡಿದ ಬಿಜೆಪಿ ನಾಯಕ ವರುಣ್ ಗಾಂಧಿ

‘ಅತ್ಯಂತ ಸ್ಪಷ್ಟ’ – ಮತ್ತೆ ರೈತರ ಪರ ಟ್ವೀಟ್ ಮಾಡಿದ ಬಿಜೆಪಿ ನಾಯಕ ವರುಣ್ ಗಾಂಧಿ

- Advertisement -
- Advertisement -

ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಮತ್ತೊಮ್ಮೆ ಲಿಖಿಂಪುರ್‌ ಹತ್ಯಾಕಾಂಡದ ರೈತರ ಪರವಾಗಿ ನಿಂತಿದ್ದು, ರೈತರ ಅಮಾಯಕ ರಕ್ತಕ್ಕೆ ಉತ್ತರದಾಯಿತ್ವ ಇರಬೇಕು ಎಂದು ಅವರು ಹೇಳಿದ್ದಾರೆ. ಭಾನುವಾರ ಯುಪಿಯ ಲಖಿಂಪುರ್ ಖೇರಿಯಲ್ಲಿ ಏನಾಯಿತು ಎಂಬುದನ್ನು ಬಹಿರಂಗಪಡಿಸುವ ದೀರ್ಘ ಮತ್ತು ಉತ್ತಮ ಗುಣಮಟ್ಟದ ವೀಡಿಯೊವನ್ನು ಅವರು ಟ್ವೀಟ್ ಮಾಡಿದ್ದಾರೆ.

ಆಡಳಿತಾರೂಢ ಬಿಜೆಪಿ ಪಕ್ಷದ ನಾಯಕರಾಗಿರುವ ವರುಣ್‌ ಗಾಂಧಿ ಅವರು ಭಾನುವಾರ ಲಖಿಂಪುರ್ ಖೇರಿಯಲ್ಲಿ ನಡೆದ ಘಟನೆಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಹತ್ಯಾಕಾಂಡಲ್ಲಿ ನಾಲ್ವರು ರೈತರು ಸೇರಿದಂತೆ ಒಟ್ಟು ಎಂಟು ಜನರು ಮೃತಪಟ್ಟಿದ್ದರು.

ಇದನ್ನೂ ಓದಿ: ರೈತರ ಮೇಲೆ ಕಾರು ಹರಿಸುತ್ತಿರುವ ವೈರಲ್ ವಿಡಿಯೋ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ

ಗುರುವಾರ ಘಟನೆಯ ಸ್ಪಷ್ಟ ಮತ್ತು ಧೀರ್ಘ ವಿಡಿಯೊವನ್ನು ಟ್ವೀಟ್ ಮಾಡಿರುವ ವರುಣ್‌ ಗಾಂಧಿ, “ವೀಡಿಯೊ ಅತ್ಯಂತ ಸ್ಪಷ್ಟವಾಗಿದೆ. ಪ್ರತಿಭಟನಾಕಾರರನ್ನು ಕೊಲೆ ಮಾಡುವ ಮೂಲಕ ಮೌನಗೊಳಿಸಲು ಸಾಧ್ಯವಿಲ್ಲ. ಅಂದು ಚೆಲ್ಲಿದ ರೈತರ ಮುಗ್ಧ ರಕ್ತಕ್ಕೆ ಹೊಣೆಗಾರಿಕೆ ವಹಿಸಬೇಕು. ಪ್ರತಿಯೊಬ್ಬ ರೈತನ ಮನಸ್ಸಿನಲ್ಲಿ ಹಠ ಮತ್ತು ಕ್ರೌರ್ಯದ ಸಂದೇಶ ಪ್ರವೇಶಿಸುವ ಮೊದಲು ನ್ಯಾಯ ಒದಗಿಸಬೇಕು” ಎಂದು ಹೇಳಿದ್ದಾರೆ.

ಮಂಗಳವಾರ ಘಟನೆಯ ಬಗ್ಗೆಗಿನ ಸಣ್ಣ ವೈರಲ್ ವಿಡಿಯೊವನ್ನು ಹಂಚಿಕೊಂಡಿದ್ದ ವರುಣ್‌, “ಈ ವೀಡಿಯೊ ಎಲ್ಲರ ಆತ್ಮವನ್ನು ಕಲಕುತ್ತದೆ” ಎಂದು ಹೇಳಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದ್ದರು.

ಅಂದು ಅವರು ತನ್ನ ಟ್ವೀಟ್‌ನಲ್ಲಿ, “ಲಖಿಂಪುರ್ ಖೇರಿಯಲ್ಲಿ ಉದ್ದೇಶಪೂರ್ವಕವಾಗಿ ವಾಹನವನ್ನು ರೈತರ ಮೇಲೆ ಹರಿಸಿರುವ ಈ ವಿಡಿಯೋ ಎಲ್ಲರ ಆತ್ಮವನ್ನೂ ಕಲಕುತ್ತದೆ. ಪೊಲೀಸರು ಈ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿ ಈ ವಾಹನಗಳ ಮಾಲೀಕರು, ಅದರಲ್ಲಿ ಕುಳಿತಿರುವ ಜನರು ಮತ್ತು ಈ ಪ್ರಕರಣದಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳನ್ನು ತಕ್ಷಣ ಬಂಧಿಸಬೇಕು” ಎಂದು ಬರೆದಿದ್ದರು.

ರೈತರ ಸಾವಿನಲ್ಲಿ ಭಾಗಿಯಾದವರನ್ನು ಖಂಡಿಸಿದ್ದಲ್ಲದೆ, ಸರ್ಕಾರವು ತಾಳ್ಮೆಯಿಂದ ಮತ್ತು ಸಂಯಮದಿಂದ ವರ್ತಿಬೇಕು ಎಂದು ಒತ್ತಾಯಿಸಿದ್ದರು. ಪ್ರಕರಣವನ್ನು ಸಿಬಿಐ ತನಿಖೆ ನಡೆಸಬೇಕು ಮತ್ತು ಮೃತಪಟ್ಟ ರೈತರ ಕುಟುಂಬಗಳಿಗೆ 1 ಕೋಟಿ ರೂ. ಪರಿಹಾರ ನೀಡುವಂತೆ ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದರು.

 ಇದನ್ನೂ ಓದಿ: ರೈತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯಿಸಿ ಯುಪಿ ಸಿಎಂಗೆ ಪತ್ರ ಬರೆದ ಬಿಜೆಪಿ ಸಂಸದ ವರುಣ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...