Homeಮುಖಪುಟಮಹಿಷಾಸುರ ಐತಿಹಾಸಿಕ ವ್ಯಕ್ತಿಯೇ ಹೊರತು ಪುರಾಣವಲ್ಲ: ಡಾ.ಚಮರಂ

ಮಹಿಷಾಸುರ ಐತಿಹಾಸಿಕ ವ್ಯಕ್ತಿಯೇ ಹೊರತು ಪುರಾಣವಲ್ಲ: ಡಾ.ಚಮರಂ

ಮಹಿಷಾಸುರನ ಲಾಂಛನ ಎಮ್ಮೆಯಾಗಿರುವುದನ್ನು ಗಮನಿಸಬೇಕು. ಕೈಯಲ್ಲಿ ನಾಗರ ಹಾವು ಹಿಡಿದಿರುವುದು ಮಹಿಷನು ದ್ರಾವಿಡ ಪರಂಪರೆಯ ನಾಗಕುಲಕ್ಕೆ ಸೇರಿದವನೆಂಬುದಕ್ಕೆ ಸಾಕ್ಷಿಯಾಗಿದೆ.

- Advertisement -
- Advertisement -

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಮತ್ತು ಕಳೆದ ಎಂಟು ವರ್ಷಗಳಿಂದಲೂ ನಡೆದುಕೊಂಡು ಬರುತ್ತಿರುವ ಮಹಿಷ ದಸರ ಕುರಿತು ಮನುವಾದಿಗಳಿಗಿಂತ ಬಹುಜನರೇ ಹೆಚ್ಚು ಆತಂಕಕ್ಕೊಳಗಾಗಿರುವಂತೆ ಕಂಡುಬಂದಿದೆ. ನಮ್ಮ ಅನೇಕ ಹೋರಾಟಗಾರ ಸ್ನೇಹಿತರು ಮತ್ತು ಬುದ್ದಿಜೀವಿ ಬಳಗ ಇದೊಂದು ಪುರಾಣದ ಕತೆ, ನಮ್ಮ ಜನರನ್ನು ದಿಕ್ಕುತಪ್ಪಿಸಲು ಕೆಲವರು ಮಹಿಷನನ್ನು ಐತಿಹಾಸಿಕ ಪುರುಷ ಎಂದು ನಂಬಿಸುತ್ತಿದ್ದಾರೆ. ನಾವು ಬೌದ್ದರಾದರೆ ಸಾಕು. ಅದು ಬಿಟ್ಟು ಈ ಮಹಿಷನ ಕತೆ ಕಟ್ಟಿಕೊಂಡು ಏನಾಗಬೇಕಿದೆ? ಎಂದು ಜಾಲತಾಣದಲ್ಲಿ ವಾದಿಸುತ್ತಿದ್ದಾರೆ. ದಯಮಾಡಿ ಯಾರೂ ಗೊಂದಲಕ್ಕೊಳಗಾಗಬೇಡಿ. ಮಹಿಷಾಸುರ ಖಂಡಿತವಾಗಿ ಐತಿಹಾಸಿಕ ವ್ಯಕ್ತಿಯೇ ಹೊರತು ಪುರಾಣವಲ್ಲ.

ಮಹಿಷನಾಡು, ಮಹಿಷೂರು ನಂತರ ಮೈಸೂರು ಆಗಿದೆ. ಮೈಸೂರಲ್ಲಿ ಮಹಿಷಾಸುರನ ಹಲವು ಪ್ರತಿಮೆಗಳಿವೆ. ಈಗಿನ ಚಾಮುಂಡಿ ಬೆಟ್ಟ ಹಿಂದೆ ಮಹಿಷಗಿರಿ ಎಂದು ಪ್ರಚಲಿತದಲ್ಲಿತ್ತು ಅದನ್ನು ಮಹಾಬಲ ಬೆಟ್ಟ ಎಂತಲೂ ಕರೆದಿದ್ದಾರೆ.

ಮಹಿಷ ಎಂದರೆ ಎಮ್ಮೆ. ಮೈಸೂರು ಪ್ರಾಂತ್ಯದಲ್ಲಿ ಎಲ್ಲಾ ತರದ ಕೃಷಿ ಚಟುವಟಿಕೆಗಳಿಗೂ ಎಮ್ಮೆಯನ್ನೇ ಬಳಸುತ್ತಿದ್ದರು… ಎಮ್ಮೆ ಈ ಜನರ ಹೆಮ್ಮೆ. ದನಗಳು ಆರ್ಯರ ಜಾನುವಾರುಗಳು.
ಆರ್ಯರು ಎಮ್ಮೆಗಳನ್ನು ಕೀಳು ಮಾಡಿ ತಮ್ಮ ದನಗಳನ್ನು ಶ್ರೇಷ್ಟಗೊಳಿಸಿದರು.

ಮಹಿಷ ಮಂಡಲ ಕೇರಳದ ವೈನಾಡು, ತಮಿಳುನಾಡಿನ ನೀಲಗಿರಿ ಪ್ರಾಂತ್ಯವನ್ನು ಒಳಗೊಂಡಿತ್ತು. ನೀಲಗಿರಿಯಲ್ಲಿ ಇಂದಿಗೂ ವಾಸವಾಗಿರುವ ತೋಡ ಎಂಬ ಗಿರಿಜನ ಮಹಿಷನ ವಂಶಸಂಸ್ಥರು ಎನ್ನಲಾಗಿದೆ. ಅವರು ಈಗಲೂ ಮಹಿಷನನ್ನು ಆರಾಧಿಸುತ್ತಾರೆ.
ನೀಲಗಿರಿ, ವೈನಾಡ್ ಜಿಲ್ಲೆಗಳಲ್ಲಿ ಇಂದಿಗೂ ಎಮ್ಮೆಗಳಿಂದಲೇ ಉಳುಮೆ ಮಾಡುತ್ತಾರೆ.

ಮಹಿಷಾಸುರನ ಲಾಂಛನ ಎಮ್ಮೆಯಾಗಿರುವುದನ್ನು ಗಮನಿಸಬೇಕು. ಕೈಯಲ್ಲಿ ನಾಗರ ಹಾವು ಹಿಡಿದಿರುವುದು ಮಹಿಷನು ದ್ರಾವಿಡ ಪರಂಪರೆಯ ನಾಗಕುಲಕ್ಕೆ ಸೇರಿದವನೆಂಬುದಕ್ಕೆ ಸಾಕ್ಷಿಯಾಗಿದೆ.

ಮಹಿಷ ಮಂಡಲವು ಮೈಸೂರು, ನೀಲಗಿರಿ, ವೈನಾಡು ಇಷ್ಟು ಭೂಪ್ರದೇಶವನ್ನು ಹೊಂದಿತ್ತು. ಇದನ್ನು “ಎರುಮೈನಾಡು” ಎಂದು ಕರೆದಿರುವುದು ಅನೇಕ ಇತಿಹಾಸದ ಸಂಶೋಧನೆಗಳಿಂದ ದೃಢಪಟ್ಟಿದೆ ಮತ್ತು ದಾಖಲಾಗಿದೆ. “ಎರುಮೈ” ಎಂದರೆ ಎಮ್ಮೆ ಎಂದರ್ಥ.

ಆದ್ದರಿಂದ ಮಹಿಷನ ಕುರಿತು ಯಾವುದೇ ಕೀಳರಿಮೆ, ಗೊಂದಲಗಳನ್ನು ನಮ್ಮ ಜನರು ಇಟ್ಟುಕೊಳ್ಳುವ ಅಗತ್ಯವಿಲ್ಲ. ಮಹಿಷ ನಿಶ್ಚಿತವಾಗಿ ದ್ರಾವಿಡ ದೊರೆ, ನಾಗವಂಶದ ರಾಜ ಮತ್ತು ಬೌದ್ದಾನುಯಾಯಿಯಾಗಿದ್ದ ಎಂಬುದಕ್ಕೆ ಅನೇಕ ದಾಖಲೆಗಳು ಲಭ್ಯವಿವೆ.

ಇತ್ತೀಚಗೆ ಗುಲ್ಬರ್ಗದ ಬಳಿ ನಡೆಸಿದ ಐತಿಹಾಸಿಕ ಉತ್ಖನನದಲ್ಲಿ ಮಹಿಷ ನಾಡಿನ ತೋಡರು ಬೌದ್ದವಿಹಾರಗಳಿಗೆ ಹಲವು ಕೊಡುಗೆಗಳನ್ನು ಕೊಟ್ಟಿರುವ ಬೌದ್ಧಶಾಸನಗಳು ದೊರೆತಿವೆ. ಈ ಕುರಿತು ಕಳೆದ ಭಾನುವಾರದ (೩.೧೦.೨೧) ಪ್ರಜಾವಾಣಿಯ ವಾರದ ಪುರವಣಿಯಲ್ಲಿ ಇತಿಹಾಸ ಸಂಶೋಧಕ ಷ.ಶಟರ್ ಅವರು ಬರೆದಿರುವ ಲೇಖನ ಹೆಚ್ಚು ಬೆಳಕು ಚಲ್ಲಿದೆ.

ಹಿಂದೆ ನಮ್ಮ ಸಮಾಜ ಪರಿವರ್ತನ ಪತ್ರಿಕೆಯಲ್ಲಿ ಸಹ ಈ ಕುರಿತು ಅನೇಕ ಲೇಖಕರು ಸರಣಿ ಬರಹಗಳನ್ನು ಬರೆದಿದ್ದಾರೆ. ಮೈಸೂರಿನ ನಮ್ಮ ಲೇಖಕ ಸ್ನೇಹಿತರಾದ ಸಿದ್ದಸ್ವಾಮಿಯವರು “ಮಹಿಷ ಮಂಡಲ” ಎಂಬ ತಮ್ಮ ಸಂಶೋಧಿತ ಕೃತಿಯಲ್ಲಿ ಐತಿಹಾಸಿಕ ವಿಚಾರಗಳೊಡನೆ ವರ್ತಮಾನದ ದಾಖಲೆಗಳನ್ನಿಟ್ಟು ಚರ್ಚಿಸಿದ್ದಾರೆ.

ಈ ಎಲ್ಲಾ ಹಿನ್ನೆಲೆಯಲ್ಲಿಯೇ ನಾವಿಂದು ಎಲ್ಲರೂ ಸೇರಿ ಮಹಿಷ ದಸರ ಆಚರಿಸಿಕೊಂಡು ಚಾರಿತ್ರಿಕ ಅನ್ಯಾಯವನ್ನು ಎತ್ತಿ ಹಿಡಿತುತ್ತಾ ನಮ್ಮ ಅಸ್ಮಿತೆಯನ್ನು ಉಳಿಸಲು ಕಾರ್ಯಕ್ರಮ ರೂಪಿಸಿಕೊಂಡು ಬರುತ್ತಿದ್ದೇವೆ. ಇದರ ಸತ್ಯವು ಗೊತ್ತಿದ್ದೇ ಮನುವಾದಿಗಳು ಬೆಚ್ಚಿದ್ದಾರೆ. ಅವರು ಬೆಚ್ಚಿದ್ದಾರೆ ಎಂದರೆ ವಿಷಯವು ಸ್ಪಷ್ಟವಿದೆ ಎಂದರ್ಥ. ಅವರು ಅದನ್ನು ತಮ್ಮ ಅಧಿಕಾರ ಬಳಸಿ ತಡೆಯಲು ಯತ್ನಿಸುತ್ತಲೇ ಇದ್ದಾರೆ ಎಂದರೆ ಅದು ಸ್ಪಷ್ಟವಾಗಿ ನಮ್ಮ ಸ್ವಾಭೀಮಾನದ ಇತಿಹಾಸ ಎಂಬುದು ಖಚಿತವಾಗುತ್ತದೆ.

ಆದ್ದರಿಂದ ನಮ್ಮೊಳಗೆ ಅವರು ಗೊಂದಲ ಸೃಷ್ಟಿಸಲು ಆರಂಭಿಸಿದ್ದಾರೆ. ನಮ್ಮ ಜನರು ಗೊಂದಲಕ್ಕೊಳಗಾಗಬೇಡಿ. ಸತ್ಯವನ್ನು ಅರಿಯೋಣ. ಸತ್ಯವನ್ನು ಸಾರೋಣ. ಸತ್ಯವನ್ನು ಉಳಿಸೋಣ.

ಬಾಬಾಸಾಹೇಬರ ಬರಹಗಳಲ್ಲೂ ಅಸುರರು, ದಾಸರು, ದಸ್ಯುಗಳ ಕುರಿತ ದಾಖಲೆಗಳಿವೆ. ಮನುವಾದಿಗಳ ಕುತಂತ್ರಕ್ಕೆ ಬಲಿಯಾದ ನಮ್ಮ ವೀರರು ಮತ್ತು ಶೂರರು ಇತಿಹಾಸದಲ್ಲಿ ಅಸುರರೆಂದು, ರಾಕ್ಷಸರೆಂದು ಬಿಂಬಿಸಲ್ಪಟ್ಟಿದ್ದಾರೆ.

ಈ ರೀತಿ ಮಾಡುವ ಮೂಲಕ ನಮ್ಮಿಂದ ನಮ್ಮ ಪೂರ್ವಿಕರನ್ನು ದೂರಮಾಡುವ ಹುನ್ನಾರವೇ ಮನುವಾದಿಗಳದ್ದಾಗಿದೆ. ಆದ್ದರಿಂದಲೇ ನಮ್ಮ ಜನರು ನಮ್ಮ ಪೂರ್ವಿಕರ ಶೌರ್ಯದ ಇತಿಹಾಸ ಮರೆತು ಇದೇ ಮನುವಾದಿಗಳು ಸೃಷ್ಟಿಸಿರುವ ಕಾಲ್ಪನಿಕ ದೇವರುಗಳನ್ನು ನಂಬಿ ಆರಾಧಿಸುತ್ತಾ ಮನುವಾದಿಗಳಿಗೆ ಲಾಭ ಮಾಡುತ್ತಾ ತಮ್ಮ ನೈಜ ಸಂಸ್ಕೃತಿಯನ್ನು ಮರೆತು ಮನುವಾದಿಗಳ ಗುಲಾಮರಾಗಿದ್ದಾರೆ.

ಬಲಿ ಚಕ್ರವರ್ತಿ ಮತ್ತು ನರಕಾಸುರ ಎಂಬ ನಮ್ಮ ಪೂರ್ವಿಕರನ್ನು ಮನುವಾದಿಗಳು ಮೋಸದಿಂದ ಕೊಂದು ರಾಜ್ಯ ಕಬಳಿಸಿ ಅವರನ್ನು ದುಷ್ಟರೆಂದು ಚಿತ್ರಿಸಿ ಪಟಾಕಿ ಸಿಡಿಸಿ ನಮ್ಮಿಂದಲೇ ನಮ್ಮವರ ಸಾವನ್ನು ಸಂಭ್ರಮಿಸುವಂತೆ ಮಾಡಿದ್ದಾರೆ. ಹೀಗೆ ಇತಿಹಾಸದ ಉದ್ದಕ್ಕೂ ನಮ್ಮ ಪರಂಪರೆಯನ್ನು ನಾಶಗೊಳಿಸಿ ನಮ್ಮನ್ನು ದಿಕ್ಕುತಪ್ಪಿಸಿರುವ ಮನುವಾದಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ನಾವು ಮಾನಸಿಕವಾಗಿ ಬಿಡುಗಡೆ ಹೊಂದಿದಾಗ ಮಾತ್ರವೇ ಕಳೆದುಕೊಂಡಿರು ಅಧಿಕಾರವನ್ನು ಮರಳಿ ಪಡೆಯಬೇಕಿದೆ. ಇದೇ ನಮ್ಮ ಪರಂಪರೆಯಾಗಿದೆ. ಒಂದು ಸಮುದಾಯವನ್ನು ನಾಶ ಪಡಿಸಬೇಕಿದ್ದರೆ ಅದರ ಪರಂಪರೆಯನ್ನು ನಾಶ ಪಡಿಸಬೇಕು ಎಂಬುದು ಮನುವಾದಿಗಳ ಕುತಂತ್ರವಾಗಿದೆ ಎಂದು ಬಾಬಾಸಾಹೇಬರು ಹೇಳುತ್ತಾರೆ. ನಮ್ಮ ಪರಂಪರೆಯನ್ನು ಹುಡುಕಿ ಮರಳಿ ಪಡೆದರೆ ಮಾತ್ರ ಮನುವಾದಿಗಳ ಪರಂಪರೆಯಿಂದ ಹೊರಬಂದರೆ ಮಾತ್ರ ನಮಗೆ ಅಧಿಕಾರವು ದಕ್ಕಲಿದೆ. ಅಧಿಕಾರದಿಂದ ಮಾತ್ರ ನಮ್ಮ ಹಕ್ಕುಗಳು ದೊರೆಯಲಿವೆ. ಇದೆಲ್ಲವೂ ಬೌದ್ದೀಯತೆಯೇ ಆಗಿದೆ ಎಂಬುದನ್ನು ನೆನಪಿಡಿ.

  • ಡಾ.ಕೃಷ್ಣಮೂರ್ತಿ ಚಮರಂ

(ಡಾ.ಕೃಷ್ಣಮೂರ್ತಿ ಚಮರಂರವರು ಸಾಮಾಜಿಕ ಕಾರ್ಯಕರ್ತರು ಮತ್ತು ಬರಹಗಾರರು. ಲೇಖನದಲ್ಲಿನ ಅಭಿಪ್ರಾಯಗಳು ವೈಯಕ್ತಿಕವಾದವು. ಈ ಕುರಿತು ಚರ್ಚೆಗೆ ಆಹ್ವಾನವಿದೆ. ಮಹಿಷಾಸುರ ಸಂಬಂಧಿತ ಲೇಖನಗಳನ್ನು [email protected] ಗೆ ಕಳಿಸಬಹುದು)


ಇದನ್ನೂ ಓದಿ: ಮಹಿಷ ದಸರಾ: ಅಂಬಾರಿಯಲ್ಲಿ ಗಾಂಧಿ, ಅಂಬೇಡ್ಕರ್, ನಾಲ್ವಡಿ ಫೋಟೊ ಇರಲಿ – ಮಹೇಶ್ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...