Homeಮುಖಪುಟರೈತ ಪರ ದನಿ ಎತ್ತಿದ ಬಿಜೆಪಿ ನಾಯಕರಿಗೆ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಗೇಟ್‌ಪಾಸ್

ರೈತ ಪರ ದನಿ ಎತ್ತಿದ ಬಿಜೆಪಿ ನಾಯಕರಿಗೆ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಗೇಟ್‌ಪಾಸ್

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ದನಿ ಎತ್ತಿದ್ದ ಬಿಜೆಪಿ ನಾಯಕರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಪಟ್ಟಿಯಿಂದ ಕೈಬಿಡಲಾಗಿದೆ. ಬಿಜೆಪಿ ಸಂಸದರಾದ ವರುಣ್ ಗಾಂಧಿ, ಸುಬ್ರಮಣಿಯನ್ ಸ್ವಾಮಿ, ಮೇನಕಾ ಗಾಂಧಿ ಮತ್ತು ಮಾಜಿ ಕೇಂದ್ರ ಸಚಿವ ಚೌಧರಿ ಬೀರೇಂದ್ರ ಸಿಂಗ್ ಅವರನ್ನು ಹೊರಗಿಡಲಾಗಿದೆ.

ಬಿಜೆಪಿ ಗುರುವಾರ 80 ಸದಸ್ಯರೊಂದಿಗೆ ಹೊಸ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು ರಚಿಸಿದೆ. ಪಕ್ಷದ ಪ್ರಮುಖ ನಾಯಕರಾದ ಪಕ್ಷದ ಸಂಸದ ವರುಣ್ ಗಾಂಧಿ, ಸುಬ್ರಮಣಿಯನ್ ಸ್ವಾಮಿ ಮತ್ತು ಮಾಜಿ ಕೇಂದ್ರ ಸಚಿವ ಚೌಧರಿ ಬೀರೇಂದ್ರ ಸಿಂಗ್ ಅವರನ್ನೂ ಪಟ್ಟಿಯಿಂದ ಹೊರಗಿಟ್ಟಿದೆ. ಇವರು ಒಕ್ಕೂಟ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಟೀಕಿಸಿದ್ದಾರೆ.

ಲಖಿಂಪುರ್‌ ಖೇರಿ ಹತ್ಯಾಕಾಂಡದಲ್ಲಿ ರೈತರ ಪರವಾಗಿ ಟ್ವೀಟ್ ಮಾಡುತ್ತಿರುವ ಬಿಜೆಪಿ ನಾಯಕ ವರುಣ್ ಗಾಂಧಿ ಮತ್ತು ಅವರ ತಾಯಿ ಮೇನಕಾ ಗಾಂಧಿ ಅವರನ್ನು ಇಂದು ಬಿಡುಗಡೆಯಾದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಪಟ್ಟಿಯಿಂದ ಕೈಬಿಡಲಾಗಿದೆ.

ಇದನ್ನೂ ಓದಿ: ಆರ್ಥಿಕತೆ ಸರಿಪಡಿಸಲು 12 ಪತ್ರ ಬರೆದೆ, ಕ್ರಮ ಕೈಗೊಳ್ಳದ ಮೋದಿ ಸರ್ಕಾರ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಟೀಕೆ

ರಾಜ್ಯಸಭೆಯ ಸಂಸದ ಸುಬ್ರಮಣಿಯನ್ ಸ್ವಾಮಿಯನ್ನೂ ಹೊಸ ಕಾರ್ಯಕಾರಿಣಿಯಿಂದ ಕೈಬಿಡಲಾಗಿದೆ. ಹೊಸದಾಗಿ ನೇಮಕಗೊಂಡ ಕೇಂದ್ರ ಸಚಿವರಾದ ಅಶ್ವಿನಿ ವೈಶೋ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಹೊಸ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ.

80 ಸಾಮಾನ್ಯ ಸದಸ್ಯರಲ್ಲದೆ, 50 ವಿಶೇಷ ಆಹ್ವಾನಿತರು ಮತ್ತು 179 ಖಾಯಂ ಆಹ್ವಾನಿತರು ಸಮಿತಿಯಲ್ಲಿ ಇರುತ್ತಾರೆ. 80 ಸದಸ್ಯರಲ್ಲಿ 37 ಮಂದಿ ಕೇಂದ್ರ ಸಚಿವರು ಮತ್ತು ರಾಜ್ಯದ ಹಲವಾರು ಸಚಿವರು ಸಮಿತಿಯ ಭಾಗವಾಗಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಅವರನ್ನು ಒಳಗೊಂಡಂತೆ, ಪಕ್ಷದ ಹಿರಿಯರಾದ ಎಲ್.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಸಮಿತಿಯ ಸದಸ್ಯರಾಗಿದ್ದಾರೆ.

ಲಖಿಂಪುರ್‌ ಖೇರಿ ಹತ್ಯಾಕಾಂಡದ ಬಳಿಕ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ವರುಣ್ ಗಾಂಧಿ ಗುರುವಾರ ಘಟನೆಯ ಸ್ಪಷ್ಟ ಮತ್ತು ದೀರ್ಘ ವಿಡಿಯೊವನ್ನು ಟ್ವೀಟ್ ಮಾಡಿ, “ವೀಡಿಯೊ ಅತ್ಯಂತ ಸ್ಪಷ್ಟವಾಗಿದೆ. ಪ್ರತಿಭಟನಾಕಾರರನ್ನು ಕೊಲೆ ಮಾಡುವ ಮೂಲಕ ಮೌನಗೊಳಿಸಲು ಸಾಧ್ಯವಿಲ್ಲ. ಅಂದು ಚೆಲ್ಲಿದ ರೈತರ ಮುಗ್ಧ ರಕ್ತಕ್ಕೆ ಹೊಣೆಗಾರಿಕೆ ವಹಿಸಬೇಕು. ಪ್ರತಿಯೊಬ್ಬ ರೈತನ ಮನಸ್ಸಿನಲ್ಲಿ ಹಠ ಮತ್ತು ಕ್ರೌರ್ಯದ ಸಂದೇಶ ಪ್ರವೇಶಿಸುವ ಮೊದಲು ನ್ಯಾಯ ಒದಗಿಸಬೇಕು” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಜೈಲಿನಲ್ಲಿ ಇರಬೇಕಾದವರು ಕಾರ್ಯಕ್ರಮ ಉದ್ಘಾಟಿಸುತ್ತಿದ್ದಾರೆ: ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...