Homeಚಳವಳಿಲಖಿಂಪುರ್ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾಗೆ ಸಮನ್ಸ್ ನೀಡಿದ ಯುಪಿ ಪೊಲೀಸರು

ಲಖಿಂಪುರ್ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾಗೆ ಸಮನ್ಸ್ ನೀಡಿದ ಯುಪಿ ಪೊಲೀಸರು

- Advertisement -
- Advertisement -

ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ವಿಚಾರಣೆಗೆ ಕರೆಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಲಕ್ನೋ ಐಜಿ ಲಕ್ಷ್ಮಿ ಸಿಂಗ್, “ನಾವು ಆಶಿಶ್ ಮಿಶ್ರಾ ಅವರನ್ನು ವಿಚಾರಣೆಗೆ ಕರೆದಿದ್ದೇವೆ. ಅವರ ಹೇಳಿಕೆಯನ್ನು ದಾಖಲಿಸುತ್ತೇವೆ, ಅದರ ಆಧಾರದ ಮೇಲೆ ನಾವು ಸಾಕ್ಷ್ಯವನ್ನು ಸಂಗ್ರಹಿಸುತ್ತೇವೆ” ಎಂದಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತರ ಇಬ್ಬರನ್ನು ಸಹ ಪ್ರಶ್ನಿಸಲಾಗುತ್ತಿದೆ ಎಂದು ಲಕ್ನೋ ಐಜಿ ಲಕ್ಷ್ಮಿ ಸಿಂಗ್, ಹೇಳಿದ್ದಾರೆ. ಬುಧವಾರ ಉತ್ತರ ಪ್ರದೇಶ ಸರ್ಕಾರಕ್ಕೆ ಲಖಿಂಪುರ್ ಹಿಂಸಾಚಾರ ಪ್ರಕರಣದ ಆರೋಪಿಗಳ ಕುರಿತು ಸ್ಥಿತಿ ಮತ್ತು  ಅವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಸುಪ್ರೀಂಕೋರ್ಟ್ ಕೇಳಿತ್ತು.

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: 100 ಗಂಟೆಯಾದರೂ ಆರೋಪಿಗಳ ಬಂಧನವಿಲ್ಲ – ರೈತರ ಆಕ್ರೋಶ

“ನೀವು ಯಾರ ವಿರುದ್ಧ ಎಫ್ಐಆರ್ ದಾಖಲಿಸಿದ್ದೀರಿ..? ನೀವು ಅವರನ್ನು ಬಂಧಿಸಿದ್ದೀರೋ ಇಲ್ಲವೋ ಎಂಬುದನ್ನು ನಾವು ತಿಳಿದುಕೊಳ್ಳಬೇಕು” ಎಂದು ನ್ಯಾಯಾಲಯ ಹೇಳಿತ್ತು.

ಅಕ್ಟೋಬರ್ 3 ರಂದು, ಕೇಂದ್ರ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಮಗನ ಬೆಂಗಾವಲು ವಾಹನ ಪ್ರತಿಭಟನಾ ನಿರತ ರೈತರ ಮೇಲೆ ಹರಿದು ನಾಲ್ವರು ಹತ್ಯೆಗೀಡಾಗಿದ್ದರು. ನಂತರ ನಡೆದ ಹಿಂಸಾಚಾರದಲ್ಲಿ ಇನ್ನೂ ನಾಲ್ಕು ಜನರು ಸಾವನ್ನಪ್ಪಿದ್ದಾರೆ.

ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಏಕಾಏಕಿ ಉದ್ದೇಶಪೂರ್ವಕವಾಗಿ ಕಾರು ನುಗ್ಗಿಸಿ 4 ರೈತರ ಹತ್ಯೆಗೆ ಕಾರಣವಾದ ಆರೋಪದ ಮೇಲೆ ಇಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಆದರೆ ಪ್ರಕರಣದ ಮುಖ್ಯ ಆರೋಪಿ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಮಗ ಆಶಿಶ್ ಮಿಶ್ರಾ ತಲೆಮರೆಸಿಕೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ ಎಂದು ಯುಪಿ ಪೊಲೀಸರು ತಿಳಿಸಿದ್ದಾರೆ.

ಈ ಹಿಂದೆ ಸಚಿವನ ಪುತ್ರ ಆಶಿಶ್ ಮಿಶ್ರಾ ರೈತರ ಮೇಲೆ ಹರಿದ ಕಾರು ತಮ್ಮದೇ ಎಂದು ಒಪ್ಪಿಕೊಂಡಿದ್ದ. ಆದರೆ ಘಟನೆ ಸ್ಥಳದಲ್ಲಿ ತಾನಿರಲಿಲ್ಲ ಎಂಬುದು ಅವರ ವಾದವಾಗಿತ್ತು. ಆಗ ಸಚಿವ ಅಜಯ್ ಮಿಶ್ರಾ ಯಾವ ಸಂದರ್ಭದಲ್ಲಿ ಬೇಕಾದರೂ ತನ್ನ ಮಗ ವಿಚಾರಣೆಗೆ ಹಾಜರಾಗುತ್ತಾನೆ ಎಂದು ಹೇಳಿಕೆ ನೀಡಿದ್ದರು. ಆದರೆ ಈಗ ಘಟನೆ ನಡೆದ ನಾಲ್ಕು ದಿನ ಆದರೂ ಪೊಲೀಸರಿಗೆ ಆತನ ಸುಳಿವು ಸಿಕ್ಕಿಲ್ಲ. ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳುತ್ತಿದ್ದಾರೆ.


ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ: ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ತನಿಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...