Homeಮುಖಪುಟಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ಆಶಿಶ್ ಮಿಶ್ರಾ ನೇಪಾಳಕ್ಕೆ ಪರಾರಿಯಾಗಿದ್ದಾನೆ - ರೈತರ ಆರೋಪ

ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ಆಶಿಶ್ ಮಿಶ್ರಾ ನೇಪಾಳಕ್ಕೆ ಪರಾರಿಯಾಗಿದ್ದಾನೆ – ರೈತರ ಆರೋಪ

ಆಶಿಶ್ ಮಿಶ್ರಾ ಭಾನುವಾರ ಅಪರಾಧದ ಸ್ಥಳದಿಂದ ತಪ್ಪಿಸಿಕೊಳ್ಳಲು ಮತ್ತು ಈಗ ಬಂಧನದಿಂದ ತಪ್ಪಿಸಿಕೊಳ್ಳಲು ಪೊಲೀಸರು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ರೈತರು ಕಿಡಿಕಾರಿದ್ದಾರೆ.

- Advertisement -
- Advertisement -

ಲಖಿಂಪುರ್ ಖೇರಿ ಹತ್ಯಾಕಾಂಡ ಘಟನೆ ನಡೆದು ಮೂರು ದಿನಗಳಾದರೂ ಮುಖ್ಯ ಆರೋಪಿ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಬಂಧನವಾಗಿಲ್ಲದ ಕುರಿತು ರೈತರು ಉತ್ತರ ಪ್ರದೇಶ ಸರ್ಕಾರಕ್ಕೆ ಮೂರು ಪ್ರಶ್ನೆಗಳನ್ನು ಕೇಳಿದ್ದಾರೆ. ಭಾನುವಾರ ಶಾಂತಿಯುತ ಪ್ರತಿಭಟನಾನಿರತ ರೈತರ ಮೇಲೆ ಆಶಿಶ್ ಮಿಶ್ರಾ ಕಾರು ಹತ್ತಿಸಿ ನಾಲ್ವರು ರೈತರು ಸೇರಿ 8 ಜನರ ಸಾವಿಗೆ ಕಾರಣವಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.

ಮೊದಲನೇಯದಾಗಿ ಆರೋಪಿ ಆಶಿಶ್ ಮಿಶ್ರಾ ಇಂದು ಬೆಳಿಗ್ಗೆ 10 ಗಂಟೆಯೊಳಗೆ ಅವರು ಯುಪಿ ಕ್ರೈಮ್ ಬ್ರಾಂಚ್ ಎದುರು ಹಾಜರಾಗಬೇಕಿತ್ತು. ಅದಕ್ಕಾಗಿ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಅವರು ಅಪರಾಧ ಎಸಗದಿದ್ದಲ್ಲಿ ಏಕೆ ವಿಚಾರಣೆಗೆ ಹಾಜಾರಾಗಿಲ್ಲ? ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಶ್ನಿಸಿದೆ.

ಎರಡನೇಯದಾಗಿ ಘಟನೆ ನಡೆದು ಐದು ದಿನಗಳಾಗಿವೆ. ಆರೋಪಿ ಆಶಿಶ್ ಮಿಶ್ರಾ ರೈತರು ಕೊಲೆಯಾದ ಘಟನೆಯ ಸ್ಥಳದಲ್ಲಿ ಇರದಿದ್ದರೆ, ಬೇರೆ ಎಲ್ಲಿದ್ದರು ಎಂದು ಇದುವರೆಗೂ ಏಕೆ ಸಾಬೀತುಪಡಿಸಿಲ್ಲ ಎಂದು ರೈತರು ಪ್ರಶ್ನಿಸಿದ್ದಾರೆ.

ಲಖಿಂಪುರ್ ಖೇರಿ ಘಟನೆಯಲ್ಲಿ ಆಶಿಶ್ ಮಿಶ್ರಾ ಕೈವಾಡವಿಲ್ಲದಿದ್ದರೆ, ಆತನು ನೇಪಾಳಕ್ಕೆ ಏಕೆ ಓಡಿಹೋಗಿದ್ದಾನೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಶ್ನಿಸಿದೆ.

 

ಪೊಲೀಸರು ಕೇವಲ ಆಶಿಶ್ ಮಿಶ್ರಾನಿಗೆ ಸಮನ್ಸ್ ಕಳಿಸಿದ್ದಾರೆ. ಆದರೆ ಆತನೊಂದಿಗೆ ಸುಮಿತ್ ಜೈಸ್ವಾಲ್ ಮತ್ತು ಅಂಕಿತ್ ದಾಸ್ ಇದ್ದುದ್ದು ವಿಡಿಯೋಗಳಲ್ಲಿ, ಆನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದರಲ್ಲಿ ದಾಖಲಾಗಿದೆ. ಸುಮಿತ್ ಜೈಸ್ವಾಲ್ ಕಾರಿನಿಂದ ಇಳಿದು ಓಡಿ ಹೋಗುತ್ತಿರುವುದು ಸ್ಪಷ್ಟವಾಗಿ ದಾಖಲಾಗಿದೆ. ಹಾಗಾಗಿ ಅವರನ್ನು ಮತ್ತು ಹತ್ಯಾಕಾಂಡಕ್ಕೆ ಕಾರಣವಾದವರನ್ನು ಸಹ ಬಂಧಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆಯಲ್ಲಿ ತಿಳಿಸಿದೆ.

ರೈತರು ತಾವೇ ಮೊದಲು ಕಲ್ಲು ಹೊಡೆದು ಪ್ರಚೋದನೆ ನೀಡಿದರು ಎಂಬ ಬಿಜೆಪಿ ಬೆಂಬಲಿಗರ ವಾದವನ್ನು ಸಂಯುಕ್ತ ಕಿಸಾನ್ ಮೋರ್ಚಾ ಅಲ್ಲಗೆಳೆದಿದೆ. ಅದರ ವಿಡಿಯೋ ಸಾಕ್ಷ್ಯ ಒದಿಗಿಸಿ ಆ ಎಸ್‌ಯುವಿ ಕಾರು ಹೋಗುವಾಗ ರೈತರು ಯಾವುದೇ ಹಾನಿ ಮಾಡದೇ ಶಾಂತಿಯುತ ಪ್ರತಿಭಟನೆ ನಡೆಸಿರುವುದನ್ನು ತೋರಿಸಿದೆ.

ಉತ್ತರ ಪ್ರದೇಶ ಪೊಲೀಸರು ಆಶಿಶ್ ಮಿಶ್ರಾ ಮತ್ತು ಸಹಚರರನ್ನು ಭಾನುವಾರ ಅಪರಾಧದ ಸ್ಥಳದಿಂದ ತಪ್ಪಿಸಿಕೊಳ್ಳಲು ಮತ್ತು ಈಗ ಬಂಧನದಿಂದ ತಪ್ಪಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಆರೋಪಿಸಿದೆ.

ರೈತರ ಮೇಲೆ ಹರಿದ ವಾಹನದ ಮೇಲೆ ಏಕೆ ವಿಐಪಿ ಸೈರನ್ ಅಳವಡಿಸಲಾಗಿದೆ ಎಂದು ಯೋಗಿ ಸರ್ಕಾರ ಹೇಳಬೇಕು? ಮೋದಿಜಿ ಕೆಲವು ವರ್ಷಗಳ ಹಿಂದೆ ಕೆಂಪು ದೀಪವನ್ನು ತೆಗೆದು ವಿಐಪಿ ಸಂಸ್ಕೃತಿಯನ್ನು ಕೊನೆಗೊಳಿಸುತ್ತೇವೆ ಎಂದಿದ್ದರು. ಆದರೂ ಇಲ್ಲಿ ಏಕಿದೆ? ವಾಸ್ತವವಾಗಿ, ಯೋಗಿ ಸರ್ಕಾರವು ರೈತರ ವಿರುದ್ಧದ ಅಪರಾಧವನ್ನು ಉತ್ತೇಜಿಸುತ್ತಿದೆ ಎಂದು ಕಿಸಾನ್ ಮೋರ್ಚಾ ಕಿಡಿಕಾರಿದೆ.

ಹೀಗಿರುವಾಗ ಯುಪಿ ಪೊಲೀಸರು ಸಮಯ ವ್ಯರ್ಥ ಮಾಡಬಾರದು, ಆಶಿಶ್ ಮಿಶ್ರಾ ಪರಾರಿಯಾಗಿದ್ದಾನೆ ಎಂದು ಘೋಷಿಸಬೇಕು ಮತ್ತು ನೇಪಾಳದೊಂದಿಗೆ ಅಂತರರಾಷ್ಟ್ರೀಯ ಗಡಿಗಳನ್ನು ಮುಚ್ಚಬೇಕು, ಅವರ ತಂದೆಯನ್ನು ಕೇಂದ್ರ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹಿಸಿದೆ.

ರೈತರ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ಕ್ರಮದ ನಿರ್ಧಾರವನ್ನು ಅಂತಿಮ್ ಅರ್ದಾಸ್ (antim ardaas) ದಿನದಂದು (ಅಕ್ಟೋಬರ್ 12) ಘೋಷಿಸಲಾಗುವುದು ಎಂದು ಎಸ್‌ಕೆಎಂ ತಿಳಿಸಿದೆ.


ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ ತಪ್ಪಿಸಿಕೊಳ್ಳಲು ಯುಪಿ ಪೊಲೀಸರೇ ಅನುಕೂಲ ಮಾಡಿಕೊಟ್ಟರು- ಎಸ್‌ಕೆಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...