Homeಮುಖಪುಟಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ಆಶಿಶ್ ಮಿಶ್ರಾ ನೇಪಾಳಕ್ಕೆ ಪರಾರಿಯಾಗಿದ್ದಾನೆ - ರೈತರ ಆರೋಪ

ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ಆಶಿಶ್ ಮಿಶ್ರಾ ನೇಪಾಳಕ್ಕೆ ಪರಾರಿಯಾಗಿದ್ದಾನೆ – ರೈತರ ಆರೋಪ

ಆಶಿಶ್ ಮಿಶ್ರಾ ಭಾನುವಾರ ಅಪರಾಧದ ಸ್ಥಳದಿಂದ ತಪ್ಪಿಸಿಕೊಳ್ಳಲು ಮತ್ತು ಈಗ ಬಂಧನದಿಂದ ತಪ್ಪಿಸಿಕೊಳ್ಳಲು ಪೊಲೀಸರು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ರೈತರು ಕಿಡಿಕಾರಿದ್ದಾರೆ.

- Advertisement -
- Advertisement -

ಲಖಿಂಪುರ್ ಖೇರಿ ಹತ್ಯಾಕಾಂಡ ಘಟನೆ ನಡೆದು ಮೂರು ದಿನಗಳಾದರೂ ಮುಖ್ಯ ಆರೋಪಿ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಬಂಧನವಾಗಿಲ್ಲದ ಕುರಿತು ರೈತರು ಉತ್ತರ ಪ್ರದೇಶ ಸರ್ಕಾರಕ್ಕೆ ಮೂರು ಪ್ರಶ್ನೆಗಳನ್ನು ಕೇಳಿದ್ದಾರೆ. ಭಾನುವಾರ ಶಾಂತಿಯುತ ಪ್ರತಿಭಟನಾನಿರತ ರೈತರ ಮೇಲೆ ಆಶಿಶ್ ಮಿಶ್ರಾ ಕಾರು ಹತ್ತಿಸಿ ನಾಲ್ವರು ರೈತರು ಸೇರಿ 8 ಜನರ ಸಾವಿಗೆ ಕಾರಣವಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.

ಮೊದಲನೇಯದಾಗಿ ಆರೋಪಿ ಆಶಿಶ್ ಮಿಶ್ರಾ ಇಂದು ಬೆಳಿಗ್ಗೆ 10 ಗಂಟೆಯೊಳಗೆ ಅವರು ಯುಪಿ ಕ್ರೈಮ್ ಬ್ರಾಂಚ್ ಎದುರು ಹಾಜರಾಗಬೇಕಿತ್ತು. ಅದಕ್ಕಾಗಿ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಅವರು ಅಪರಾಧ ಎಸಗದಿದ್ದಲ್ಲಿ ಏಕೆ ವಿಚಾರಣೆಗೆ ಹಾಜಾರಾಗಿಲ್ಲ? ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಶ್ನಿಸಿದೆ.

ಎರಡನೇಯದಾಗಿ ಘಟನೆ ನಡೆದು ಐದು ದಿನಗಳಾಗಿವೆ. ಆರೋಪಿ ಆಶಿಶ್ ಮಿಶ್ರಾ ರೈತರು ಕೊಲೆಯಾದ ಘಟನೆಯ ಸ್ಥಳದಲ್ಲಿ ಇರದಿದ್ದರೆ, ಬೇರೆ ಎಲ್ಲಿದ್ದರು ಎಂದು ಇದುವರೆಗೂ ಏಕೆ ಸಾಬೀತುಪಡಿಸಿಲ್ಲ ಎಂದು ರೈತರು ಪ್ರಶ್ನಿಸಿದ್ದಾರೆ.

ಲಖಿಂಪುರ್ ಖೇರಿ ಘಟನೆಯಲ್ಲಿ ಆಶಿಶ್ ಮಿಶ್ರಾ ಕೈವಾಡವಿಲ್ಲದಿದ್ದರೆ, ಆತನು ನೇಪಾಳಕ್ಕೆ ಏಕೆ ಓಡಿಹೋಗಿದ್ದಾನೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಶ್ನಿಸಿದೆ.

 

ಪೊಲೀಸರು ಕೇವಲ ಆಶಿಶ್ ಮಿಶ್ರಾನಿಗೆ ಸಮನ್ಸ್ ಕಳಿಸಿದ್ದಾರೆ. ಆದರೆ ಆತನೊಂದಿಗೆ ಸುಮಿತ್ ಜೈಸ್ವಾಲ್ ಮತ್ತು ಅಂಕಿತ್ ದಾಸ್ ಇದ್ದುದ್ದು ವಿಡಿಯೋಗಳಲ್ಲಿ, ಆನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದರಲ್ಲಿ ದಾಖಲಾಗಿದೆ. ಸುಮಿತ್ ಜೈಸ್ವಾಲ್ ಕಾರಿನಿಂದ ಇಳಿದು ಓಡಿ ಹೋಗುತ್ತಿರುವುದು ಸ್ಪಷ್ಟವಾಗಿ ದಾಖಲಾಗಿದೆ. ಹಾಗಾಗಿ ಅವರನ್ನು ಮತ್ತು ಹತ್ಯಾಕಾಂಡಕ್ಕೆ ಕಾರಣವಾದವರನ್ನು ಸಹ ಬಂಧಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆಯಲ್ಲಿ ತಿಳಿಸಿದೆ.

ರೈತರು ತಾವೇ ಮೊದಲು ಕಲ್ಲು ಹೊಡೆದು ಪ್ರಚೋದನೆ ನೀಡಿದರು ಎಂಬ ಬಿಜೆಪಿ ಬೆಂಬಲಿಗರ ವಾದವನ್ನು ಸಂಯುಕ್ತ ಕಿಸಾನ್ ಮೋರ್ಚಾ ಅಲ್ಲಗೆಳೆದಿದೆ. ಅದರ ವಿಡಿಯೋ ಸಾಕ್ಷ್ಯ ಒದಿಗಿಸಿ ಆ ಎಸ್‌ಯುವಿ ಕಾರು ಹೋಗುವಾಗ ರೈತರು ಯಾವುದೇ ಹಾನಿ ಮಾಡದೇ ಶಾಂತಿಯುತ ಪ್ರತಿಭಟನೆ ನಡೆಸಿರುವುದನ್ನು ತೋರಿಸಿದೆ.

ಉತ್ತರ ಪ್ರದೇಶ ಪೊಲೀಸರು ಆಶಿಶ್ ಮಿಶ್ರಾ ಮತ್ತು ಸಹಚರರನ್ನು ಭಾನುವಾರ ಅಪರಾಧದ ಸ್ಥಳದಿಂದ ತಪ್ಪಿಸಿಕೊಳ್ಳಲು ಮತ್ತು ಈಗ ಬಂಧನದಿಂದ ತಪ್ಪಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಆರೋಪಿಸಿದೆ.

ರೈತರ ಮೇಲೆ ಹರಿದ ವಾಹನದ ಮೇಲೆ ಏಕೆ ವಿಐಪಿ ಸೈರನ್ ಅಳವಡಿಸಲಾಗಿದೆ ಎಂದು ಯೋಗಿ ಸರ್ಕಾರ ಹೇಳಬೇಕು? ಮೋದಿಜಿ ಕೆಲವು ವರ್ಷಗಳ ಹಿಂದೆ ಕೆಂಪು ದೀಪವನ್ನು ತೆಗೆದು ವಿಐಪಿ ಸಂಸ್ಕೃತಿಯನ್ನು ಕೊನೆಗೊಳಿಸುತ್ತೇವೆ ಎಂದಿದ್ದರು. ಆದರೂ ಇಲ್ಲಿ ಏಕಿದೆ? ವಾಸ್ತವವಾಗಿ, ಯೋಗಿ ಸರ್ಕಾರವು ರೈತರ ವಿರುದ್ಧದ ಅಪರಾಧವನ್ನು ಉತ್ತೇಜಿಸುತ್ತಿದೆ ಎಂದು ಕಿಸಾನ್ ಮೋರ್ಚಾ ಕಿಡಿಕಾರಿದೆ.

ಹೀಗಿರುವಾಗ ಯುಪಿ ಪೊಲೀಸರು ಸಮಯ ವ್ಯರ್ಥ ಮಾಡಬಾರದು, ಆಶಿಶ್ ಮಿಶ್ರಾ ಪರಾರಿಯಾಗಿದ್ದಾನೆ ಎಂದು ಘೋಷಿಸಬೇಕು ಮತ್ತು ನೇಪಾಳದೊಂದಿಗೆ ಅಂತರರಾಷ್ಟ್ರೀಯ ಗಡಿಗಳನ್ನು ಮುಚ್ಚಬೇಕು, ಅವರ ತಂದೆಯನ್ನು ಕೇಂದ್ರ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹಿಸಿದೆ.

ರೈತರ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ಕ್ರಮದ ನಿರ್ಧಾರವನ್ನು ಅಂತಿಮ್ ಅರ್ದಾಸ್ (antim ardaas) ದಿನದಂದು (ಅಕ್ಟೋಬರ್ 12) ಘೋಷಿಸಲಾಗುವುದು ಎಂದು ಎಸ್‌ಕೆಎಂ ತಿಳಿಸಿದೆ.


ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ ತಪ್ಪಿಸಿಕೊಳ್ಳಲು ಯುಪಿ ಪೊಲೀಸರೇ ಅನುಕೂಲ ಮಾಡಿಕೊಟ್ಟರು- ಎಸ್‌ಕೆಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...