Homeಮುಖಪುಟಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ಆಶಿಶ್ ಮಿಶ್ರಾ ನೇಪಾಳಕ್ಕೆ ಪರಾರಿಯಾಗಿದ್ದಾನೆ - ರೈತರ ಆರೋಪ

ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ಆಶಿಶ್ ಮಿಶ್ರಾ ನೇಪಾಳಕ್ಕೆ ಪರಾರಿಯಾಗಿದ್ದಾನೆ – ರೈತರ ಆರೋಪ

ಆಶಿಶ್ ಮಿಶ್ರಾ ಭಾನುವಾರ ಅಪರಾಧದ ಸ್ಥಳದಿಂದ ತಪ್ಪಿಸಿಕೊಳ್ಳಲು ಮತ್ತು ಈಗ ಬಂಧನದಿಂದ ತಪ್ಪಿಸಿಕೊಳ್ಳಲು ಪೊಲೀಸರು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ರೈತರು ಕಿಡಿಕಾರಿದ್ದಾರೆ.

- Advertisement -
- Advertisement -

ಲಖಿಂಪುರ್ ಖೇರಿ ಹತ್ಯಾಕಾಂಡ ಘಟನೆ ನಡೆದು ಮೂರು ದಿನಗಳಾದರೂ ಮುಖ್ಯ ಆರೋಪಿ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಬಂಧನವಾಗಿಲ್ಲದ ಕುರಿತು ರೈತರು ಉತ್ತರ ಪ್ರದೇಶ ಸರ್ಕಾರಕ್ಕೆ ಮೂರು ಪ್ರಶ್ನೆಗಳನ್ನು ಕೇಳಿದ್ದಾರೆ. ಭಾನುವಾರ ಶಾಂತಿಯುತ ಪ್ರತಿಭಟನಾನಿರತ ರೈತರ ಮೇಲೆ ಆಶಿಶ್ ಮಿಶ್ರಾ ಕಾರು ಹತ್ತಿಸಿ ನಾಲ್ವರು ರೈತರು ಸೇರಿ 8 ಜನರ ಸಾವಿಗೆ ಕಾರಣವಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.

ಮೊದಲನೇಯದಾಗಿ ಆರೋಪಿ ಆಶಿಶ್ ಮಿಶ್ರಾ ಇಂದು ಬೆಳಿಗ್ಗೆ 10 ಗಂಟೆಯೊಳಗೆ ಅವರು ಯುಪಿ ಕ್ರೈಮ್ ಬ್ರಾಂಚ್ ಎದುರು ಹಾಜರಾಗಬೇಕಿತ್ತು. ಅದಕ್ಕಾಗಿ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಅವರು ಅಪರಾಧ ಎಸಗದಿದ್ದಲ್ಲಿ ಏಕೆ ವಿಚಾರಣೆಗೆ ಹಾಜಾರಾಗಿಲ್ಲ? ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಶ್ನಿಸಿದೆ.

ಎರಡನೇಯದಾಗಿ ಘಟನೆ ನಡೆದು ಐದು ದಿನಗಳಾಗಿವೆ. ಆರೋಪಿ ಆಶಿಶ್ ಮಿಶ್ರಾ ರೈತರು ಕೊಲೆಯಾದ ಘಟನೆಯ ಸ್ಥಳದಲ್ಲಿ ಇರದಿದ್ದರೆ, ಬೇರೆ ಎಲ್ಲಿದ್ದರು ಎಂದು ಇದುವರೆಗೂ ಏಕೆ ಸಾಬೀತುಪಡಿಸಿಲ್ಲ ಎಂದು ರೈತರು ಪ್ರಶ್ನಿಸಿದ್ದಾರೆ.

ಲಖಿಂಪುರ್ ಖೇರಿ ಘಟನೆಯಲ್ಲಿ ಆಶಿಶ್ ಮಿಶ್ರಾ ಕೈವಾಡವಿಲ್ಲದಿದ್ದರೆ, ಆತನು ನೇಪಾಳಕ್ಕೆ ಏಕೆ ಓಡಿಹೋಗಿದ್ದಾನೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಶ್ನಿಸಿದೆ.

 

ಪೊಲೀಸರು ಕೇವಲ ಆಶಿಶ್ ಮಿಶ್ರಾನಿಗೆ ಸಮನ್ಸ್ ಕಳಿಸಿದ್ದಾರೆ. ಆದರೆ ಆತನೊಂದಿಗೆ ಸುಮಿತ್ ಜೈಸ್ವಾಲ್ ಮತ್ತು ಅಂಕಿತ್ ದಾಸ್ ಇದ್ದುದ್ದು ವಿಡಿಯೋಗಳಲ್ಲಿ, ಆನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದರಲ್ಲಿ ದಾಖಲಾಗಿದೆ. ಸುಮಿತ್ ಜೈಸ್ವಾಲ್ ಕಾರಿನಿಂದ ಇಳಿದು ಓಡಿ ಹೋಗುತ್ತಿರುವುದು ಸ್ಪಷ್ಟವಾಗಿ ದಾಖಲಾಗಿದೆ. ಹಾಗಾಗಿ ಅವರನ್ನು ಮತ್ತು ಹತ್ಯಾಕಾಂಡಕ್ಕೆ ಕಾರಣವಾದವರನ್ನು ಸಹ ಬಂಧಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆಯಲ್ಲಿ ತಿಳಿಸಿದೆ.

ರೈತರು ತಾವೇ ಮೊದಲು ಕಲ್ಲು ಹೊಡೆದು ಪ್ರಚೋದನೆ ನೀಡಿದರು ಎಂಬ ಬಿಜೆಪಿ ಬೆಂಬಲಿಗರ ವಾದವನ್ನು ಸಂಯುಕ್ತ ಕಿಸಾನ್ ಮೋರ್ಚಾ ಅಲ್ಲಗೆಳೆದಿದೆ. ಅದರ ವಿಡಿಯೋ ಸಾಕ್ಷ್ಯ ಒದಿಗಿಸಿ ಆ ಎಸ್‌ಯುವಿ ಕಾರು ಹೋಗುವಾಗ ರೈತರು ಯಾವುದೇ ಹಾನಿ ಮಾಡದೇ ಶಾಂತಿಯುತ ಪ್ರತಿಭಟನೆ ನಡೆಸಿರುವುದನ್ನು ತೋರಿಸಿದೆ.

ಉತ್ತರ ಪ್ರದೇಶ ಪೊಲೀಸರು ಆಶಿಶ್ ಮಿಶ್ರಾ ಮತ್ತು ಸಹಚರರನ್ನು ಭಾನುವಾರ ಅಪರಾಧದ ಸ್ಥಳದಿಂದ ತಪ್ಪಿಸಿಕೊಳ್ಳಲು ಮತ್ತು ಈಗ ಬಂಧನದಿಂದ ತಪ್ಪಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಆರೋಪಿಸಿದೆ.

ರೈತರ ಮೇಲೆ ಹರಿದ ವಾಹನದ ಮೇಲೆ ಏಕೆ ವಿಐಪಿ ಸೈರನ್ ಅಳವಡಿಸಲಾಗಿದೆ ಎಂದು ಯೋಗಿ ಸರ್ಕಾರ ಹೇಳಬೇಕು? ಮೋದಿಜಿ ಕೆಲವು ವರ್ಷಗಳ ಹಿಂದೆ ಕೆಂಪು ದೀಪವನ್ನು ತೆಗೆದು ವಿಐಪಿ ಸಂಸ್ಕೃತಿಯನ್ನು ಕೊನೆಗೊಳಿಸುತ್ತೇವೆ ಎಂದಿದ್ದರು. ಆದರೂ ಇಲ್ಲಿ ಏಕಿದೆ? ವಾಸ್ತವವಾಗಿ, ಯೋಗಿ ಸರ್ಕಾರವು ರೈತರ ವಿರುದ್ಧದ ಅಪರಾಧವನ್ನು ಉತ್ತೇಜಿಸುತ್ತಿದೆ ಎಂದು ಕಿಸಾನ್ ಮೋರ್ಚಾ ಕಿಡಿಕಾರಿದೆ.

ಹೀಗಿರುವಾಗ ಯುಪಿ ಪೊಲೀಸರು ಸಮಯ ವ್ಯರ್ಥ ಮಾಡಬಾರದು, ಆಶಿಶ್ ಮಿಶ್ರಾ ಪರಾರಿಯಾಗಿದ್ದಾನೆ ಎಂದು ಘೋಷಿಸಬೇಕು ಮತ್ತು ನೇಪಾಳದೊಂದಿಗೆ ಅಂತರರಾಷ್ಟ್ರೀಯ ಗಡಿಗಳನ್ನು ಮುಚ್ಚಬೇಕು, ಅವರ ತಂದೆಯನ್ನು ಕೇಂದ್ರ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹಿಸಿದೆ.

ರೈತರ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ಕ್ರಮದ ನಿರ್ಧಾರವನ್ನು ಅಂತಿಮ್ ಅರ್ದಾಸ್ (antim ardaas) ದಿನದಂದು (ಅಕ್ಟೋಬರ್ 12) ಘೋಷಿಸಲಾಗುವುದು ಎಂದು ಎಸ್‌ಕೆಎಂ ತಿಳಿಸಿದೆ.


ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ ತಪ್ಪಿಸಿಕೊಳ್ಳಲು ಯುಪಿ ಪೊಲೀಸರೇ ಅನುಕೂಲ ಮಾಡಿಕೊಟ್ಟರು- ಎಸ್‌ಕೆಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...