Homeಕರ್ನಾಟಕ"ಕಲ್ಯಾಣ ನಾಡಿನಲ್ಲಿ ಕೋಮುವಾದಕ್ಕೆ ಮಣೆ": ಹೈ.ಕ ಚುನಾವಣಾ ಫಲಿತಾಂಶ ವಿಶ್ಲೇಷಣೆ

“ಕಲ್ಯಾಣ ನಾಡಿನಲ್ಲಿ ಕೋಮುವಾದಕ್ಕೆ ಮಣೆ”: ಹೈ.ಕ ಚುನಾವಣಾ ಫಲಿತಾಂಶ ವಿಶ್ಲೇಷಣೆ

- Advertisement -
- Advertisement -

| ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ |

ಕೊನೆಗೂ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿವೆ. ಹೈದರಾಬಾದ್ ಕರ್ನಾಟಕದಲ್ಲಿ 5ಕ್ಕೆ 5 ಸ್ಥಾನಗಳನ್ನೂ ಬಿಜೆಪಿ ಗೆದ್ದುಕೊಂಡು ಈ ಭಾಗದಲ್ಲಿ ಹೊಸ ದಾಖಲೆ ಮಾಡಿದೆ. ಈ ಐದರಲ್ಲಿ ಎರಡು ಕ್ಷೇತ್ರಗಳು ( ಬಳ್ಳಾರಿ, ರಾಯಚೂರು) ಪರಿಶಿಷ್ಟ ಪಂಗಡದವರಿಗೆ ಮೀಸಲಾಗಿದ್ದು, ಒಂದು ( ಕಲ್ಬುರ್ಗಿ) ಕ್ಷೇತ್ರ ಪರಿಶಿಷ್ಟ ಜಾತಿಯವರಿಗೆ ಮೀಸಲಿದೆ.

ಎರಡು ಕ್ಷೇತ್ರಗಳು ಸಾಮಾನ್ಯ ವರ್ಗಕ್ಕೆ ಸೇರಿವೆ. 2009 ಹಾಗೂ2014ರಲ್ಲಿ ಕಾಂಗ್ರೆಸ್ 2 ಮತ್ತು ಬಿಜೆಪಿ 3 ಸ್ಥಾನಗಳಲ್ಲಿ ಜಯಗಳಿಸಿದ್ದವು. ಆದರೆ ಈ ಬಾರಿ ಮಾತ್ರ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿಬಿಟ್ಟಿತು. ಮಲ್ಲಿಕಾರ್ಜುನ ಖರ್ಗೆ, ಈಶ್ವರ ಖಂಡ್ರೆ ಹಾಗೂ ವಿ.ಎಸ್.ಉಗ್ರಪ್ಪ ನಂತಹ ದಿಗ್ಗಜರು ಸೋಲಿನ ರುಚಿ ನೋಡಬೇಕಾಯಿತು.

ಖರ್ಗೆಗೆ ಮುಳುವಾದ ಪುತ್ರ ವ್ಯಾಮೋಹ:
ಪುರಾಣದಲ್ಲಿನ ಯಯಾತಿಯ ಕಥೆ ಖರ್ಗೆ ವಿಷಯದಲ್ಲಿ ತಿರುವು ಮುರುವಾಗಿದೆ. ಆ ಕತೆಯಲ್ಲಿ ತಂದೆ ಯಯಾತಿ ಮಗ ಪುರುವಿನ ಯೌವ್ವನವನ್ನು ಕಡವಾಗಿ ಪಡೆದರೆ, ಇಲ್ಲಿ ಪ್ರಿಯಾಂಕ ಖರ್ಗೆ ತಂದೆಯ ರಾಜಕೀಯ ಆಯುಷ್ಯವನ್ನೇ ಎರವಲು ಪಡೆದುಬಿಟ್ಟ. ಕಳೆದ ಸಿದ್ಧರಾಮಯ್ಯನವರ ಸರ್ಕಾರದಲ್ಲಿ ಮಗನನ್ನು ಮಂತ್ರಿಯನ್ನಾಗಿ ಮಾಡುವ ಹಟಕ್ಕೆ ಬಿದ್ದ ಖರ್ಗೆಯವರು ಕಮರುಲ್ ಇಸ್ಲಾಂ, ಬಾಬುರಾವ್ ಚಿಂಚನಸೂರ್ ಹಾಗು ಮಾಲಿಕಯ್ಯ ಗುತ್ತೇದಾರ್‌ರಂತಹ ಹಿರಿಯ ನಾಯಕರನ್ನು ಮೂಲೆಗುಂಪು ಮಾಡಿ ಅವರ ವಿರೋಧ ಕಟ್ಟಿಕೊಳ್ಳಬೇಕಾಯಿತು.

ಮಾಲಿಕಯ್ಯ, ಬಾಬುರಾವ್‌ರಂತಹ ಹಿಂದುಳಿದ ವರ್ಗಗಳ ಪ್ರಬಲ ನಾಯಕರು ಬಿಜೆಪಿ ಸೇರಿ ಖರ್ಗೆ ಸೋಲಿಸಲು ಟೊಂಕ ಕಟ್ಟಿ ನಿಂತುಬಿಟ್ಟರು. ಒಂದು ರೀತಿಯಲ್ಲಿ ಹೇಳುವುದಾದರೆ ಖರ್ಗೆಯವರನ್ನು ಸೋಲಿಸುವ ಸಂಚು ಒಂದು ವರ್ಷದ ಹಿಂದೆಯೇ ರೂಪುಗೊಂಡಿತ್ತು. ಅಸ್ಪೃಶ್ಯ ದಲಿತ ಸಮುದಾಯದ ಖರ್ಗೆ ವಿರುದ್ಧ, ಅಸ್ಪೃಶ್ಯೇತರ ದಲಿತರಾದ ಉಮೇಶ್ ಜಾಧವ್‌ರನ್ನು ಆಪರೇಷನ್ ಕಮಲದ ಮೂಲಕ ಸೆಳೆದು ಅಭ್ಯರ್ಥಿಯಾಗಿಸುವ ಮೂಲಕ ಬಿಜೆಪಿ ತನ್ನ ಜಾತಿ ರಾಜಕಾರಣದ ಅಸ್ತ್ರ ಪ್ರಯೋಗ ಮಾಡಿತು.

ಇದನ್ನು ಓದಿ: ಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

ಕಳೆದೆರೆಡು ಚುನಾವಣೆಯಲ್ಲಿ ಅದೇ ಲಂಬಾಣಿ ಸಮುದಾಯದ ರೇವುನಾಯಕ್ ಬೆಳಮಗಿ ವಿರುದ್ದ ಒಮ್ಮೆ14 ಸಾವಿರ, ಮತ್ತೊಮ್ಮೆ 75 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಖರ್ಗೆಯವರು ಈ ಬಾರಿ ಜಾಧವ್ ಎದುರು 85 ಸಾವಿರ ಮತಗಳಿಂದ ಸೋಲುಣಬೇಕಾಯಿತು. ತಮ್ಮ ಮಗನಿಗಾಗಿ ನಮ್ಮ ಕೋಲಿ ಸಮಾಜಕ್ಕೆ ದೊರಕಿದ್ದ ಏಕೈಕ ಮಂತ್ರಿಸ್ಥಾನವನ್ನೂ ಕಿತ್ತುಕೊಂಡರೆಂದು ಖರ್ಗೆ ವಿರುದ್ಧ ಅಸಮಧಾನಗೊಂಡಿದ್ದ ಆ ಸಮಾಜದವರನ್ನು ಬಾಬುರಾವ್ ಚಿಂಚನಸೂರ್ ನೇತೃತ್ವದಲ್ಲಿ ವ್ಯವಸ್ಥಿತವಾಗಿ ಸಂಘಟಿಸಿದ್ದೇ ಸಂಘ ಪರಿವಾರ.

ಕಲ್ಬುರ್ಗಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 3 ಲಕ್ಷದಷ್ಟಿರುವ ಈ ಕೋಲಿ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡುವ ಹುಸಿ ಭರವಸೆ ನೀಡುವ ಮೂಲಕ ಸಾರಾಸಗಟಾಗಿ ಬಿಜೆಪಿಗೆ ಮತ ಚಲಾಯಿಸುವಂತೆ ನೋಡಿಕೊಳ್ಳಲಾಯಿತು. ಕೊನೆಗೆ 371j ಹಾಗು ತಾವು ಮಾಡಿದ ಅಭಿವೃದ್ಧಿ ಕಾರ್ಯಗಳು ಕೂಡಾ ಖರ್ಗೆಯವರ ಕೈ ಹಿಡಿಯಲಿಲ್ಲ.

ಖಂಡ್ರೆ

ಇನ್ನು ಬೀದರ್‌ನಲ್ಲಿ ಗೆಲ್ಲಲು ವಿಫುಲ ಅವಕಾಶಗಳಿದ್ದ ಈಶ್ವರ ಖಂಡ್ರೆಯವರು 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದಾರೆ. ಈ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳನ್ನು ಹೊಂದಿದ ಲಿಂಗಾಯತ ಹಾಗೂ ದಲಿತರು ಬಿಜೆಪಿಗೆ ಹೆಚ್ಚು ಒಲವು ತೋರಿದ್ದಾರೆನ್ನಲಾಗಿದೆ. ಈ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಐವರು ಮೈತ್ರಿಕೂಟದ ಶಾಸಕರಿದ್ದು ಅದರಲ್ಲಿ ಮೂವರು ಸಚಿವರಾಗಿದ್ದಾರೆ. ಆದರೂ ಖಂಡ್ರೆ ಸೋತಿದ್ದು ವಿಪರ್ಯಾಸವೇ ಸರಿ.

ರಾಯಚೂರು-ಕೊಪ್ಪಳ : ಕಳೆದ ಬಾರಿ ಕೇವಲ ಒಂದೂವರೆ ಸಾವಿರ ಮತಗಳ ಅಂತರದಿಂದ ಗೆದ್ದಿದ್ದ ಬಿ.ವಿ.ನಾಯಕ ತನ್ನ ಸೋಮಾರಿತನದಿಂದಲೇ ಈ ಬಾರಿ ಸೋಲತ್ತಾರೆನ್ನುವುದು  ಹೆಚ್ಚು ಕಡಿಮೆ ಖಚಿತವಾಗಿತ್ತು. ಅದೇ ರೀತಿ ಆಗಿದೆ. ಇತ್ತ ಕೊಪ್ಪಳದಲ್ಲಿ ರಾಯರೆಡ್ಡಿ ಅಥವಾ ಬಸವನಗೌಡ ಬಾದರ್ಲಿ ಯವರಿಗೆ ಟಿಕೆಟ್ ಕೊಟ್ಟಿದ್ದರ ಕಾಂಗ್ರೆಸ್ ಗೆಲ್ಲಬಹುದಾಗಿತ್ತು. ಆದರೆ ಸಿದ್ಧರಾಮಯಯ್ಯನವರ ಹಠಮಾರಿತನದಿಂದಾಗಿ ಸ್ವಜಾತಿಯ ರಾಜಶೇಖರ ಹಿಟ್ನಾಳರು ಸ್ಪರ್ಧಿಸಿ ಕೇವಲ ಕುರುಬರ ಹಾಗೂ ಮುಸ್ಲಿಮರ ಮತ ಪಡೆದು ಸೋಲಬೇಕಾಯಿತು.

ಬಳ್ಳಾರಿ:  ಗಣಿನಾಡು ಬಳ್ಳಾರಿಯಲ್ಲಿ ಕಳೆದ ಆರು ತಿಂಗಳ ಹಿಂದಷ್ಟೇ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನ ಉಗ್ರಪ್ಪ ಗೆದ್ದಿದ್ದರು.ಆದರೆ ನಂತರದ ದಿನಗಳಲ್ಲಿ ನಡೆದಿದ್ದ ಆನಂದ್‌ಸಿಂಗ್, ಕಂಪ್ಲಿ ಗಣೇಶ್ ಹಾಗೂ ಭೀಮಾನಾಯ್ಕ್ ಮಧ್ಯೆ ನಡೆದಿದ್ದ ಮಾರಾಮಾರಿ, ಅತಿಥಿ ಉಸ್ತುವಾರಿ ಸಚಿವ ಡಿ.ಕೆ‌.ಶಿವಕುಮಾರ್‌ರವರ ಅತಿಯಾದ ಆತ್ಮವಿಶ್ವಾಸಗಳು ಈಗಾಗಲೇ ಉಗ್ರಪ್ಪನವರ ಸೋಲಿಗೆ ಮುನ್ನುಡಿ ಬರೆದಿದ್ದವು. ಹೀಗಾಗಿ ಕ್ಷೇತ್ರದಲ್ಲಿ ಐವರು ಶಾಸಕರು, ಅದರಲ್ಲಿ ಇಬ್ಬರು ಸಚಿವರಾಗಿದ್ದರೂ ಕೂಡಾ ಉಗ್ರಪ್ಪನವರು ಐವತ್ತಾರು ಸಾವಿರ ಮತಗಳ ಅಂತರದಿಂದ ಸೋಲಬೇಕಾಯಿತು. ಒಟ್ಟಿನಲ್ಲಿ ಹೇಳುವುದಾದರೆ ಕಲ್ಯಾಣದ ನಾಡಿನಲ್ಲಿ ಕೋಮುವಾದದ ಕಮಲ ಸಂಪೂರ್ಣ ಅರಳಿದಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...