Homeಚಳವಳಿರೈತರ ಹತ್ಯಾಕಾಂಡ: ಪರಿಹಾರ ನನ್ನ ಮಗನನ್ನು ವಾಪಸ್ ತರುವುದಿಲ್ಲ, ನಮಗೆ ನ್ಯಾಯ ಬೇಕು- ಮೃತರ ತಂದೆ

ರೈತರ ಹತ್ಯಾಕಾಂಡ: ಪರಿಹಾರ ನನ್ನ ಮಗನನ್ನು ವಾಪಸ್ ತರುವುದಿಲ್ಲ, ನಮಗೆ ನ್ಯಾಯ ಬೇಕು- ಮೃತರ ತಂದೆ

- Advertisement -
- Advertisement -

ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ರಾಜೀನಾಮೆ ನೀಡಬೇಕು, ಆತನ ಮಗನನ್ನು ತಕ್ಷಣ ಬಂಧಿಸಬೇಕು ಆಗ ನಮಗೆ ನ್ಯಾಯ ಸಿಗುತ್ತದೆ ಎಂಬುದು ಲಖಿಂಪುರ್‌ ಕೇರಿ ಹತ್ಯಾಕಾಂಡದಲ್ಲಿ ಹತ್ಯೆಗೀಡಾದ 19 ವರ್ಷದ ಲವ್‌ಪ್ರೀತ್ ಸಿಂಗ್ ಅವರ ತಂದೆ ಸತ್ನಾಮ್ ಸಿಂಗ್ ಮನವಿ.

“ಸರ್ಕಾರಗಳು ನೀಡುವ ಪರಿಹಾರವು ನನ್ನ ಮಗನನ್ನು ಮರಳಿ ತರುವುದಿಲ್ಲ. ಆತನನ್ನು ಕೊಲೆ ಮಾಡಿದ ಎಲ್ಲರನ್ನು ಬಂಧಿಸಿದಾಗ ಮಾತ್ರ ನಮಗೆ ನ್ಯಾಯ ಸಿಗುತ್ತದೆ. ಸರ್ಕಾರದಿಂದ ಪರಿಹಾರ ಘೋಷಿಸಿದ ಮಾತ್ರಕ್ಕೆ ತನ್ನ ಮಗನ ಹಂತಕರು ಮುಕ್ತವಾಗಿ ತಿರುಗಾಡಲು ಯಾರಾದರೂ ಅನುಮತಿ ನೀಡಬಹುದೇ?” ಎಂದು ಮಗನ ಸಾವಿನಿಂದ ನೊಂದಿರುವ ಸತ್ನಾಮ್ ಸಿಂಗ್ ಪ್ರಶ್ನಿಸಿದ್ದಾರೆ.

ಸತ್ನಾಮ್ ಸಿಂಗ್ ಮತ್ತು ಸತ್ವಿಂದರ್ ಕೌರ್ ಅವರ ಮೂವರು ಮಕ್ಕಳಲ್ಲಿ ಲವ್‌ಪ್ರೀತ್ ಸಿಂಗ್ ಹಿರಿಯರು. “ಲವ್‌ಪ್ರೀತ್ ಸಿಂಗ್ ಅವರ ಒಬ್ಬನೇ ಮಗ. ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ, ಕೆನಡಾಕ್ಕೆ ಹೋಗಲು ಅಂತಾರಾಷ್ಟ್ರೀಯ ಇಂಗ್ಲಿಷ್ ಭಾಷಾ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರು. ಆದರೆ ಅಕ್ಟೋಬರ್ 3 ರಂದು ಕುಟುಂಬದ ಕನಸುಗಳನ್ನು ಕನಸಾಗಿಯೇ ಉಳಿಯುವಂತೆ ಈ ಘಟನೆ ಮಾಡಿದೆ” ಎಂದು ಹಳ್ಳಿಯ ಪ್ರಧಾನ ಸುಖದೇವ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ಆಶಿಶ್ ಮಿಶ್ರಾ ನೇಪಾಳಕ್ಕೆ ಪರಾರಿಯಾಗಿದ್ದಾನೆ – ರೈತರ ಆರೋಪ

” ಲವ್‌ಪ್ರೀತ್ ಸಿಂಗ್ ಸರಳ ಮತ್ತು ಸ್ನೇಹಪರ ಹುಡುಗ. ಎಲ್ಲರಿಗೂ ಎಲ್ಲಾ ಸಮಯದಲ್ಲಿಯೂ ಸಹಾಯ ಮಾಡಲು ಸಿದ್ಧರಾಗಿದ್ದರು. ಅವರು ರೈತರ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದರು. ಅಕ್ಟೋಬರ್ 3 ರಂದು, ಹಳ್ಳಿಯ ಇತರ ಕೆಲವು ಯುವಕರೊಂದಿಗೆ ಟಿಕುನಿಯಾ ಪಟ್ಟಣದಲ್ಲಿ ನಡೆಯುತ್ತಿದ್ದ ಪ್ರತಿಭಟನೆಗೆ ಹೋಗಿದ್ದರು. ಆದರೆ, ಸಚಿವರ ಮಗನ ಕಾರು ಹರಿದು ಕೊಲೆಯಾಗಿದ್ದಾರೆ” ಎಂದು ಹಳ್ಳಿಯ ಪ್ರಧಾನ್ ಮಾಹಿತಿ ನೀಡಿದ್ದಾರೆ.

ಮಗನ ಸಾವಿನ ನಂತರ ಗಂಭೀರ ಸ್ಥಿತಿಯಲ್ಲಿದ್ದ ಲವ್‌ಪ್ರೀತ್ ತಾಯಿಗೆ ಸರಿಯಾದ ವೈದ್ಯಕೀಯ ಆರೈಕೆಯನ್ನು ತಕ್ಷಣವೇ ನೀಡುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹಿಂದಿನ ದಿನವೇ ಸೂಚಿಸಿತ್ತು.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿ ವಿರೋಧಿಸಿ ಭಾನುವಾರ ಲಖಿಂಪುರ್‌ ಖೇರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ, ಸಚಿವ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಿದವರಲ್ಲಿ 19 ವರ್ಷದ ಯುವ ರೈತ ಲವ್‌ಪ್ರೀತ್ ಸಿಂಗ್‌ ಕೂಡ ಸೇರಿದ್ದಾರೆ. ವೇಗವಾಗಿ ನುಗ್ಗಿದ ಕಾರಿಗೆ ಸಿಲುಕಿ, ಗಂಭೀರವಾಗಿ ಗಾಯಗೊಂಡಿದ್ದವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ಈ ವೇಳೆ ಆಸ್ಪತ್ರೆಗೆ ಬರುವಂತೆ ತಮ್ಮ ತಂದೆಗೆ ಕರೆ ಮಾಡಿ ತಿಳಿಸಿದ್ದರು. ಆದರೆ, ಮನೆಯವರು ಲಖಿಂಪುರ್‌ ಆಸ್ಪತ್ರೆಗೆ ತೆರುವ ವೇಳೆಗೆ ಲವ್‌ಪ್ರೀತ್ ಸಿಂಗ್ ಸಾವನ್ನಪ್ಪಿದ್ದರು.


ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ ತಪ್ಪಿಸಿಕೊಳ್ಳಲು ಯುಪಿ ಪೊಲೀಸರೇ ಅನುಕೂಲ ಮಾಡಿಕೊಟ್ಟರು- ಎಸ್‌ಕೆಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...