Homeಮುಖಪುಟಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನ

ಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನ

ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆತನನ್ನು ಕೊಲೆಗೈಯಲಾಗಿದೆ ಮತ್ತು ಹುಡುಗಿಯ ಕುಟುಂಬಸ್ಥರು ಕೊಲೆಗೆ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಅರ್ಬಾಜ್ ಮುಲ್ಲಾ ಎಂಬ ಮುಸ್ಲಿಂ ಯುವಕನನ್ನು ಬರ್ಬರವಾಗಿ ಕೊಲೆಗೈದು, ತಲೆ ಮತ್ತು ಕಾಲುಗಳನ್ನು ಕತ್ತರಿಸಿ ಬೆಳಗಾವಿ ಜಿಲ್ಲೆಯ ಖಾನಪುರದ ರೈಲ್ವೆ ಹಳಿ ಮೇಲೆ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟನೆಯ ಮುಖ್ಯಸ್ಥ ಪುಂಡಲಿಕ್ ಮಹಾರಾಜ್ ಮುಟ್ಗೇಕರ್ ಸೇರಿದಂತೆ ಒಟ್ಟು 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಅರ್ಬಾಜ್ ಪ್ರೀತಿಸುತ್ತಿದ್ದ ಹುಡುಗಿಯ ಕುಟುಂಬಸ್ಥರು ಸೇರಿದ್ದಾರೆ.

ಸೆಪ್ಟಂಬರ್ 29 ರಂದು ಅರ್ಬಾಜ್ ಮುಲ್ಲಾ ಎಂಬ ಯುವಕನ ಛಿದ್ರವಾದ ಶವ ಪತ್ತೆಯಾಗಿತ್ತು. ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಅವರನ್ನು ಕೊಲೆಗೈಯಲಾಗಿದೆ ಮತ್ತು ಹುಡುಗಿಯ ಕುಟುಂಬಸ್ಥರು ಕೊಲೆಗೆ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದೇ ಆರೋಪವನ್ನು ಕೊಲೆ ನಡೆದ ದಿನದಿಂದಲೇ ಅರ್ಬಾಜ್ ತಾಯಿ ನಜೀಮ ಶೇಖ್ ಮಾಡಿದ್ದರು.

ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ನಿವಾಸಿ ಅರ್ಬಾಜ್ ಅಫ್ತಾಬ್ ಮುಲ್ಲಾ (24) ಸೆಪ್ಟಂಬರ್ 28 ರಿಂದ ಕಾಣೆಯಾಗಿದ್ದನು ಎಂದು ಅವರ ಪೋಷಕರು ದೂರಿದ್ದರು. ಅವರ ತಾಯಿ ನಜೀಮ ಶೇಖ್ ‘ಶ್ರೀರಾಮಸೇನೆ ಹಿಂದೂಸ್ತಾನ್’ ಎನ್ನುವ ಸಂಘಟನೆಯ ಯುವಕರು ನನ್ನ ಮಗನಿಗೆ ಬೆದರಿಕೆ ಹಾಕಿದ್ದರು. ಹುಡುಗಿಯೊಂದಿಗೆ ಸೇರಿ ಹಣ ವಸೂಲಿ ಮಾಡಿದ್ದರು ಎಂದು ದೂರಿದ್ದರು.

2018ರಲ್ಲಿ ಶ್ರೀರಾಮ ಸೇನೆಯಿಂದ ಹೊರಬಂದು ಶ್ರೀರಾಮಸೇನೆ ಹಿಂದೂಸ್ತಾನ್ ಎಂಬ ಸಂಘಟನೆ ಕಟ್ಟಿಕೊಂಡಿದ್ದ ಪುಂಡಲಿಕ್ ಮಹಾರಾಜ್ ಮುಟ್ಗೇಕರ್ ಈ ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗಿದೆ. ಹುಡುಗಿಯ ಪೋಷಕರಾದ ಶುಶೀಲ ಈರಪ್ಪ (42) ಮತ್ತು ಈರಪ್ಪ ಬಸವಣ್ಣಿ ಕುಂಬಾರ (54) ಅರ್ಬಾಜ್‌ನನ್ನು ಕೊಲೆಗೈಯಲು ಗುತ್ತಿಗೆ ಕೊಲೆಗಾರರನ್ನು ನೇಮಿಸಿಕೊಂಡಿದ್ದಾರೆ ಎಂದು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಥಬುದ್ಧಿನ್ ಅಲ್ಲಾಬಕ್ಷ್ (36), ಮಾರುತಿ ಪ್ರಹ್ಲಾದ್ (30), ಮಂಜುನಾಥ್ ತುಕಾರಾಂ (25), ಗಣಪತಿ ಜ್ಞಾನೇಶ್ವರ (27), ಪ್ರಶಾಂತ್ ಕಲ್ಲಪ್ಪ (28) ಮತ್ತು ಪ್ರವೀಣ್ ಶಂಕರ್ (28)  ಮತ್ತು ಶ್ರೀಧರ್ ಮಹದೇವದೋಣಿ (30) ಇತರ ಬಂಧಿತರಾಗಿದ್ದಾರೆ.

ದಿ ಟೆಲಿಗ್ರಾಫ್‌ನೊಂದಿಗೆ ಮಾತನಾಡಿರುವ ಉರ್ದು ಶಾಲೆಯ ಶಿಕ್ಷಕಿಯಾಗಿರುವ ನಜೀಮ ಶೇಖ್ “ನನ್ನ ಮಗ ಅರ್ಬಾಜ್, ಕುಂಬಾರ್ ಎಂಬುವವರ ಮಗಳನ್ನು ಪ್ರೀತಿಸುತ್ತಿರುವುದು ತಿಳಿದುಬಂದಿತ್ತು. ಆಗ ನಾನು ಅದನ್ನು ತಪ್ಪಿಸಲು ನಮ್ಮ ಮನೆಯಿಂದ ಖಾನಪುರದಿಂದ ಬೆಳಗಾವಿಗೆ ಬದಲಿಸಿದ್ದೆ. ಇದೆಲ್ಲ ಸರಿ ಬರುವುದಿಲ್ಲವೆಂದು ಬುದ್ದಿವಾದ ಹೇಳಿದ್ದೆ. ಆದರೆ ಒಂದು ದಿನ ಕುಂಬಾರ್‌ನೊಂದಿಗೆ ಶ್ರೀರಾಮ ಸೇನೆಯ ಪುಂಡಲಿಕ್ ಮಹಾರಾಜ್, ಬಿರ್ಜೆ ಎಂಬುವವರ ಬಂದು ನಮಗೆ ಧಮಕಿ ಹಾಕಿದರು. ಕೊಲೆ ಬೆದರಿಕೆ ಹಾಕಿದರು. ನನ್ನ ಮಗನ ಫೋನ್ ಕಿತ್ತುಕೊಂಡು ಎಲ್ಲಾ ನಂಬರ್ ಗಳನ್ನು ಡಿಲೀಟ್ ಮಾಡಿದ್ದರು” ಎಂದಿದ್ದಾರೆ.

ಆಗ ನನ್ನ ಮಗ ಆ ಹುಡುಗಿಯನ್ನು ಮರೆತಿದ್ದ. ಆದರೆ ಸೆಪ್ಟಂಬರ್ 26 ರಂದು ಪುಂಡಲಿಕ್ ಮಹಾರಾಜ್ ಬಂದು ನಮ್ಮಲ್ಲಿ ಮತ್ತೆ ಜಗಳ ಮಾಡಿದ್ದರು. ಈಗಾಗಲೇ ನನ್ನ ಮೇಲೆ 40 ಪ್ರಕರಣಗಳಿವೆ. ಇನ್ನೊಂದು ಆದರೆ ದೊಡ್ಡದೇನಲ್ಲ ಎಂದು ಬೆದರಿಸಿದ್ದ. ಅದೇ ಸಮಯಕ್ಕೆ ಆ ಹುಡುಗಿ ಫೋನ್ ಮಾಡಿ 7,000 ಹಣದ ಬೇಡಿಕೆ ಇಟ್ಟಿದ್ದಳು. ನಾವದನ್ನು ಪಾವತಿಸಿದೆವು. ನಂತರ ಮತ್ತೆ 90,000 ಬೇಡಿಕೆ ಇಟ್ಟಿದ್ದಳು. ಆಗ ನನ್ನ ಮಗ ತನ್ನ ಕಾರನ್ನು 70,000 ರೂಗೆ ಮಾರಿದ್ದ. ಆ ಹಣ ಎಲ್ಲಿಗೆ ಹೋಯಿತು ಎಂದು ತಿಳಿದಿಲ್ಲ, ನನ್ನ ಮಗನನ್ನೂ ಕಳೆದುಕೊಂಡೆ ಎಂದು ಅವರು ಕಣ್ಣೀರು ಹಾಕಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ, ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...