Homeಮುಖಪುಟಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನ

ಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನ

ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆತನನ್ನು ಕೊಲೆಗೈಯಲಾಗಿದೆ ಮತ್ತು ಹುಡುಗಿಯ ಕುಟುಂಬಸ್ಥರು ಕೊಲೆಗೆ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಅರ್ಬಾಜ್ ಮುಲ್ಲಾ ಎಂಬ ಮುಸ್ಲಿಂ ಯುವಕನನ್ನು ಬರ್ಬರವಾಗಿ ಕೊಲೆಗೈದು, ತಲೆ ಮತ್ತು ಕಾಲುಗಳನ್ನು ಕತ್ತರಿಸಿ ಬೆಳಗಾವಿ ಜಿಲ್ಲೆಯ ಖಾನಪುರದ ರೈಲ್ವೆ ಹಳಿ ಮೇಲೆ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟನೆಯ ಮುಖ್ಯಸ್ಥ ಪುಂಡಲಿಕ್ ಮಹಾರಾಜ್ ಮುಟ್ಗೇಕರ್ ಸೇರಿದಂತೆ ಒಟ್ಟು 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಅರ್ಬಾಜ್ ಪ್ರೀತಿಸುತ್ತಿದ್ದ ಹುಡುಗಿಯ ಕುಟುಂಬಸ್ಥರು ಸೇರಿದ್ದಾರೆ.

ಸೆಪ್ಟಂಬರ್ 29 ರಂದು ಅರ್ಬಾಜ್ ಮುಲ್ಲಾ ಎಂಬ ಯುವಕನ ಛಿದ್ರವಾದ ಶವ ಪತ್ತೆಯಾಗಿತ್ತು. ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಅವರನ್ನು ಕೊಲೆಗೈಯಲಾಗಿದೆ ಮತ್ತು ಹುಡುಗಿಯ ಕುಟುಂಬಸ್ಥರು ಕೊಲೆಗೆ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದೇ ಆರೋಪವನ್ನು ಕೊಲೆ ನಡೆದ ದಿನದಿಂದಲೇ ಅರ್ಬಾಜ್ ತಾಯಿ ನಜೀಮ ಶೇಖ್ ಮಾಡಿದ್ದರು.

ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ನಿವಾಸಿ ಅರ್ಬಾಜ್ ಅಫ್ತಾಬ್ ಮುಲ್ಲಾ (24) ಸೆಪ್ಟಂಬರ್ 28 ರಿಂದ ಕಾಣೆಯಾಗಿದ್ದನು ಎಂದು ಅವರ ಪೋಷಕರು ದೂರಿದ್ದರು. ಅವರ ತಾಯಿ ನಜೀಮ ಶೇಖ್ ‘ಶ್ರೀರಾಮಸೇನೆ ಹಿಂದೂಸ್ತಾನ್’ ಎನ್ನುವ ಸಂಘಟನೆಯ ಯುವಕರು ನನ್ನ ಮಗನಿಗೆ ಬೆದರಿಕೆ ಹಾಕಿದ್ದರು. ಹುಡುಗಿಯೊಂದಿಗೆ ಸೇರಿ ಹಣ ವಸೂಲಿ ಮಾಡಿದ್ದರು ಎಂದು ದೂರಿದ್ದರು.

2018ರಲ್ಲಿ ಶ್ರೀರಾಮ ಸೇನೆಯಿಂದ ಹೊರಬಂದು ಶ್ರೀರಾಮಸೇನೆ ಹಿಂದೂಸ್ತಾನ್ ಎಂಬ ಸಂಘಟನೆ ಕಟ್ಟಿಕೊಂಡಿದ್ದ ಪುಂಡಲಿಕ್ ಮಹಾರಾಜ್ ಮುಟ್ಗೇಕರ್ ಈ ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗಿದೆ. ಹುಡುಗಿಯ ಪೋಷಕರಾದ ಶುಶೀಲ ಈರಪ್ಪ (42) ಮತ್ತು ಈರಪ್ಪ ಬಸವಣ್ಣಿ ಕುಂಬಾರ (54) ಅರ್ಬಾಜ್‌ನನ್ನು ಕೊಲೆಗೈಯಲು ಗುತ್ತಿಗೆ ಕೊಲೆಗಾರರನ್ನು ನೇಮಿಸಿಕೊಂಡಿದ್ದಾರೆ ಎಂದು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಥಬುದ್ಧಿನ್ ಅಲ್ಲಾಬಕ್ಷ್ (36), ಮಾರುತಿ ಪ್ರಹ್ಲಾದ್ (30), ಮಂಜುನಾಥ್ ತುಕಾರಾಂ (25), ಗಣಪತಿ ಜ್ಞಾನೇಶ್ವರ (27), ಪ್ರಶಾಂತ್ ಕಲ್ಲಪ್ಪ (28) ಮತ್ತು ಪ್ರವೀಣ್ ಶಂಕರ್ (28)  ಮತ್ತು ಶ್ರೀಧರ್ ಮಹದೇವದೋಣಿ (30) ಇತರ ಬಂಧಿತರಾಗಿದ್ದಾರೆ.

ದಿ ಟೆಲಿಗ್ರಾಫ್‌ನೊಂದಿಗೆ ಮಾತನಾಡಿರುವ ಉರ್ದು ಶಾಲೆಯ ಶಿಕ್ಷಕಿಯಾಗಿರುವ ನಜೀಮ ಶೇಖ್ “ನನ್ನ ಮಗ ಅರ್ಬಾಜ್, ಕುಂಬಾರ್ ಎಂಬುವವರ ಮಗಳನ್ನು ಪ್ರೀತಿಸುತ್ತಿರುವುದು ತಿಳಿದುಬಂದಿತ್ತು. ಆಗ ನಾನು ಅದನ್ನು ತಪ್ಪಿಸಲು ನಮ್ಮ ಮನೆಯಿಂದ ಖಾನಪುರದಿಂದ ಬೆಳಗಾವಿಗೆ ಬದಲಿಸಿದ್ದೆ. ಇದೆಲ್ಲ ಸರಿ ಬರುವುದಿಲ್ಲವೆಂದು ಬುದ್ದಿವಾದ ಹೇಳಿದ್ದೆ. ಆದರೆ ಒಂದು ದಿನ ಕುಂಬಾರ್‌ನೊಂದಿಗೆ ಶ್ರೀರಾಮ ಸೇನೆಯ ಪುಂಡಲಿಕ್ ಮಹಾರಾಜ್, ಬಿರ್ಜೆ ಎಂಬುವವರ ಬಂದು ನಮಗೆ ಧಮಕಿ ಹಾಕಿದರು. ಕೊಲೆ ಬೆದರಿಕೆ ಹಾಕಿದರು. ನನ್ನ ಮಗನ ಫೋನ್ ಕಿತ್ತುಕೊಂಡು ಎಲ್ಲಾ ನಂಬರ್ ಗಳನ್ನು ಡಿಲೀಟ್ ಮಾಡಿದ್ದರು” ಎಂದಿದ್ದಾರೆ.

ಆಗ ನನ್ನ ಮಗ ಆ ಹುಡುಗಿಯನ್ನು ಮರೆತಿದ್ದ. ಆದರೆ ಸೆಪ್ಟಂಬರ್ 26 ರಂದು ಪುಂಡಲಿಕ್ ಮಹಾರಾಜ್ ಬಂದು ನಮ್ಮಲ್ಲಿ ಮತ್ತೆ ಜಗಳ ಮಾಡಿದ್ದರು. ಈಗಾಗಲೇ ನನ್ನ ಮೇಲೆ 40 ಪ್ರಕರಣಗಳಿವೆ. ಇನ್ನೊಂದು ಆದರೆ ದೊಡ್ಡದೇನಲ್ಲ ಎಂದು ಬೆದರಿಸಿದ್ದ. ಅದೇ ಸಮಯಕ್ಕೆ ಆ ಹುಡುಗಿ ಫೋನ್ ಮಾಡಿ 7,000 ಹಣದ ಬೇಡಿಕೆ ಇಟ್ಟಿದ್ದಳು. ನಾವದನ್ನು ಪಾವತಿಸಿದೆವು. ನಂತರ ಮತ್ತೆ 90,000 ಬೇಡಿಕೆ ಇಟ್ಟಿದ್ದಳು. ಆಗ ನನ್ನ ಮಗ ತನ್ನ ಕಾರನ್ನು 70,000 ರೂಗೆ ಮಾರಿದ್ದ. ಆ ಹಣ ಎಲ್ಲಿಗೆ ಹೋಯಿತು ಎಂದು ತಿಳಿದಿಲ್ಲ, ನನ್ನ ಮಗನನ್ನೂ ಕಳೆದುಕೊಂಡೆ ಎಂದು ಅವರು ಕಣ್ಣೀರು ಹಾಕಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ, ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...