Homeಕರ್ನಾಟಕಕಾಲೇಜ್‌‌ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ‘ಗೂಂಡಾ ಸಂಘಟನೆ’ಗಳಿಗೆ ಹಕ್ಕಿಲ್ಲ: ಅಲೋಶಿಯಸ್‌‌ ಬೆಂಬಲಕ್ಕೆ ನಿಂತ ಜನಪರ ಸಂಘಟನೆಗಳು

ಕಾಲೇಜ್‌‌ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ‘ಗೂಂಡಾ ಸಂಘಟನೆ’ಗಳಿಗೆ ಹಕ್ಕಿಲ್ಲ: ಅಲೋಶಿಯಸ್‌‌ ಬೆಂಬಲಕ್ಕೆ ನಿಂತ ಜನಪರ ಸಂಘಟನೆಗಳು

ಏನೇ ಆದರೂ ಸರಿಯೇ, ನಾವು ಫಾದರ್ ಸ್ಟಾನ್‌ ಸ್ವಾಮಿ ಪರ ನಿಲ್ಲುತ್ತೇವೆ ಎಂದು ಜನಪರ ಸಂಘಟನೆಗಳು ಮತ್ತು ಹಳೆ ವಿದ್ಯಾರ್ಥಿಗಳು ಹೇಳಿದ್ದಾರೆ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಸಂತ ಅಲೋಶಿಯಸ್‌‌ ಸ್ವಾಯತ್ತ ಕಾಲೇಜ್‌ ತನ್ನ ಕ್ಯಾಂಪಸ್‌ನಲ್ಲಿ ಇರುವ ಉದ್ಯಾನವನಕ್ಕೆ, ದೇಶದ ಖ್ಯಾತ ಮಾನವಹಕ್ಕು ಕಾರ್ಯಕರ್ತ ದಿವಂಗತ ಫಾದರ್‌ ಸ್ಟಾನ್ ಸ್ವಾಮಿ ಅವರ ಹೆಸರನ್ನು ಇಡಲು ನಿರ್ಧರಿಸಿದೆ. ಆದರೆ ಇದಕ್ಕೆ ಬಿಜೆಪಿ ಪರ ಸಂಘಟನೆಗಳಾದ ಬಜರಂಗದಳ ಮತ್ತು ವಿಎಚ್‌ಪಿ ವಿರೋಧ ವ್ಯಕ್ತಪಡಿಸಿತ್ತು. ಈ ದಾಳಿಯನ್ನು ವಿರೋಧಿಸಿರುವ ಜನಪರ ಸಂಘಟನೆಗಳು ಮತ್ತು ಕಾಲೇಜಿನ ಹಳೆ ವಿದ್ಯಾರ್ಥಿಗಳು ಕಾಲೇಜನ್ನು ಬೆಂಬಲಿಸಿ ಬಹಿರಂಗ ಪತ್ರ ಬರೆದಿದ್ದಾರೆ.

ಜನಪರ ಸಂಘಟನೆಗಳು ಮತ್ತು ಕಾಲೇಜಿನ ಹಳೆ ವಿದ್ಯಾರ್ಥಿಗಳು ಬರೆದ ಬಹಿರಂಗ ಪತ್ರದಲ್ಲಿ, ‘‘ಖಾಸಗಿ ಸ್ವಾಯತ್ತ ಕಾಲೇಜು ತೆಗೆದುಕೊಳ್ಳುವ ಸಮಾಜಮುಖಿ ನಿರ್ಧಾರಗಳ ಮೇಲೆ ಹಸ್ತಕ್ಷೇಪ ಮಾಡಲು ಗೂಂಡಾ ಸಂಸ್ಥೆಗಳಿಗೆ ಯಾವುದೆ ಹಕ್ಕಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆದರಿಕೆ ಹಾಕುವ ಈ ಸಂಘಟನೆಗಳ ವಿರುದ್ದ ತಕ್ಷಣ ಕ್ರಮಕೈಗೊಳ್ಳಬೇಕು ಮತ್ತು ಕಾಲೇಜಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಪೊಲೀಸರಿಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ – ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

“ಗಂಭೀರವಾದ ಅಪರಾಧಿಕ ಬೆದರಿಕೆಗಳನ್ನು ಹಾಕುವುದರಲ್ಲಿ ತೊಡಗಿಸಿಕೊಂಡಿರುವ ಗೂಂಡಾ ಸಂಸ್ಥೆಗಳ ವಿರುದ್ದ ಪೊಲೀಸರು ತಕ್ಷಣ ಕ್ರಮಕೈಗೊಳ್ಳಬೇಕು. ಖಾಸಗಿ ಸ್ವಾಯತ್ತ ಕಾಲೇಜು ತೆಗೆದುಕೊಳ್ಳುವ ಸಮಾಜಮುಖಿ ನಿರ್ಧಾರಗಳ ಮೇಲೆ ಹಸ್ತಕ್ಷೇಪ ಮಾಡಲು ಗೂಂಡಾ ಸಂಸ್ಥೆಗಳಿಗೆ ಯಾವುದೆ ಹಕ್ಕಿಲ್ಲ. ಈ ಸಂಘಟನೆಗಳಿಗೆ ಒಂದು ನಿರ್ಧಿಷ್ಟ ಉದ್ದೇಶಿತ ಕಾರ್ಯಸೂಚಿಯಿದ್ದು, ಅದರ ಈಡೇರಿಕೆಗಾಗಿ ಹಿಂಸೆ ಮತ್ತು ಕೋಮುವಾದ ಹರಡಿರುವುದರಲ್ಲಿ ಕುಖ್ಯಾತ ಇತಿಹಾಸವನ್ನು ಹೊಂದಿವೆ” ಎಂದು ಉಲ್ಲೇಖಿಸಲಾಗಿದೆ.

“ಗೂಂಡಾ ಸಂಸ್ಕೃತಿಯನ್ನು ಹೊಂದಿರುವ ಫ್ಯಾಸಿಸ್ಟ್‌‌ ಸಂಘಟನೆಗಳು ಕರಾವಳಿ ಕರ್ನಾಟಕದಲ್ಲಿ ನಾಗರೀಕರ ಖಾಸಗಿ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡುತ್ತಿದೆ. ಯಾವುದೆ ಭಯವಿಲ್ಲದೆ ದಿನನಿತ್ಯ ಹಿಂಸಾಚಾರ ಮತ್ತು ಬೆದರಿಕೆಯನ್ನು ಒಡ್ಡುವುದು ಕೆಲಸವನ್ನಾಗಿ ಮಾಡಿಕೊಂಡಿದೆ. ಏನೇ ಆದರೂ ಸರಿಯೇ, ನಾವು ಫಾದರ್ ಸ್ಟಾನ್‌ ಸ್ವಾಮಿ ಪರ ನಿಲ್ಲುತ್ತೇವೆ. ಬೆದರಿಕೆ ಹಾಕುವ ಈ ಸಂಘಟನೆಗಳ ವಿರುದ್ದ ತಕ್ಷಣ ಕ್ರಮಕೈಗೊಳ್ಳಬೇಕು ಮತ್ತು ಕಾಲೇಜಿಗೆ ಸೂಕ್ತ ರಕ್ಷಣೆ ಒದಗಿಸಬೇಕು” ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಪೊಲೀಸರಿಗೆ ಆಗ್ರಹಿಸಿದ್ದಾರೆ.

ಕ್ಯಾಥೋಲಿಕ್ ಪಾದ್ರಿಯಾಗಿದ್ದ ಸ್ಟಾನ್ ಸ್ವಾಮಿ ಕೇರಳ ಮೂಲದವರಾಗಿದ್ದು ತಮ್ಮ ಜೀವನದ 50 ವರ್ಷಗಳ ಕಾಲ ಮಾನವ ಹಕ್ಕು ಮತ್ತು ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡಿದ್ದಾರೆ. ಹಲವು ರೀತಿಯ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಎಲ್ಗರ್‌ ಪರಿಷತ್ ಪ್ರಕರಣದಲ್ಲಿ NIA ಕಳೆದ ವರ್ಷ ಅಕ್ಟೋಬರ್‌ 8 ರಂದು ಬಂಧಿಸಿತ್ತು. ಅವರು ಪ್ರಕರಣದ ಸಂಬಂಧ ಬಂಧನಕ್ಕೊಳಗಾದ 16 ನೇ ವ್ಯಕ್ತಿಯಾಗಿದ್ದು, ಇದುವರೆಗೂ ಬಂಧಿಸಿದವರಲ್ಲಿ ಹಿರಿಯರಾಗಿದ್ದರು. ಸುಮಾರು ಒಂಬತ್ತು ತಿಂಗಳು ಜೈಲಿನಲ್ಲೇ ಇದ್ದ ಅವರು ಕಳೆದ ಜುಲೈ 5 ರಂದು ಮೃತಪಟ್ಟಿದ್ದರು. ಅವರ ಹೆಸರನ್ನು ಕಾಲೇಜಿನ ಉದ್ಯಾನವೊಂದಕ್ಕೆ ಇಡುವುದಾಗಿ ಕಾಲೇಜು ಮಂಡಳಿ ನಿರ್ಧರಿಸಿತ್ತು.

ಪತ್ರವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಇದನ್ನೂ ಓದಿ: ಸ್ಟ್ಯಾನ್‌ ಸ್ವಾಮಿ ನಿಧನಕ್ಕೆ ಕಾರಣರಾದವರನ್ನು ಇತಿಹಾಸ ಕ್ಷಮಿಸುವುದಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...