Homeಚಳವಳಿನಾವು ಕೂಡ ರೈತರು, ಪ್ರಿಯಾಂಕ, ರಾಹುಲ್ ಅವರನ್ನು ಸ್ವಾಗತಿಸುತ್ತೇವೆ: ಬಿಜೆಪಿ ಕಾರ್ಯಕರ್ತನ ಕುಟುಂಬ

ನಾವು ಕೂಡ ರೈತರು, ಪ್ರಿಯಾಂಕ, ರಾಹುಲ್ ಅವರನ್ನು ಸ್ವಾಗತಿಸುತ್ತೇವೆ: ಬಿಜೆಪಿ ಕಾರ್ಯಕರ್ತನ ಕುಟುಂಬ

ಕೇಸರಿ ಪಕ್ಷವಾದ ಬಿಜೆಪಿ, ಶುಭಂ ಅವರನ್ನು ‘ಹರಕೆಯ ಕುರಿ’ (‘sacrificial goat’) ರೀತಿ ಬಳಸಿಕೊಂಡಿರಬಹುದು ಎಂದು ಕುಟುಂಬ ಹೇಳಿರುವುದಾಗಿ `ದಿ ವೈರ್’ ವರದಿ ಮಾಡಿದೆ.

- Advertisement -
- Advertisement -

“ನಾವು ಕೂಡ ರೈತರು, ಕಾಂಗ್ರೆಸ್ ನಾಯಕರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಸ್ವಾಗತಿಸುತ್ತೇವೆ” ಎಂದು ಲಖಿಂಪುರ ಖೇರಿ ಘಟನೆಯಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತನ ಕುಟುಂಬ ಹೇಳಿರುವುದಾಗಿ ‘ದಿ ವೈರ್‌’ ಜಾಲತಾಣದಲ್ಲಿ ಪತ್ರಕರ್ತೆ ಇಸ್ಮತ್‌ ಅರ ವರದಿ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತರಾದ ಶುಭಂ ಮಿಶ್ರಾ ಅವರ ಕುಟುಂಬವು, “ಕೆಲವು ಸ್ಥಳೀಯ ಬಿಜೆಪಿ ನಾಯಕರು ನಮ್ಮಲ್ಲಿಗೆ ಬಂದು ಧೈರ್ಯ ತುಂಬಿದ್ದರೂ, ಬಿಜೆಪಿಯ ಹಿರಿಯ ನಾಯಕರು ಯಾರೂ ಬಂದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದೆ.

ಅಕ್ಟೋಬರ್‌ 3ರಂದು ಪ್ರತಿಭಟನೆ ನಡೆಸಿ ಹಿಂತಿರುಗುತ್ತಿದ್ದ ರೈತರ ಮೇಲೆ ವಾಹನಗಳನ್ನು ಹತ್ತಿಸಿದಾಗ ಮೃತಪಟ್ಟವರ ಕುಟುಂಬಗಳನ್ನು ಅಕ್ಟೋಬರ್‌ 6ರಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಪಕ್ಷದ ನಾಯಕ ರಾಹುಲ್‌ ಗಾಂಧಿ ಭೇಟಿಯಾಗಿದ್ದರು. ಜೊತೆಗೆ ಘಟನೆಯಲ್ಲಿ ಅಸುನೀಗಿದ ಪತ್ರಕರ್ತ ರಮಣ್‌ ಕಶ್ಯಪ್‌ ಅವರ ಕುಟುಂಬವನ್ನೂ ಭೇಟಿಯಾಗಿದ್ದರು.

ಘಟನೆಯಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತ ಶುಭಂ ಮಿಶ್ರಾ ಅವರ ಕುಟುಂಬವು, “ಪ್ರಿಯಾಂಕ ಹಾಗೂ ರಾಹುಲ್‌ ಅವರು ತಮ್ಮನ್ನೂ ಭೇಟಿಯಾಗುವುದನ್ನು ಸ್ವಾಗತಿಸಿದೆ” ಎಂದು ಒಂದು ದಿನದ ಬಳಿಕ ಹೇಳಿದೆ.

ಶುಭಂ ಮಿಶ್ರಾ ಅವರ ಒಂದು ವರ್ಷದ ಮಗುವಿನೊಂದಿಗೆ ಶುಭಂ ಮಿಶ್ರಾ ಅವರ ತಂದೆ ವಿಜಯ್‌ ಮಿಶ್ರಾ (ಚಿತ್ರಕೃಪೆ: ದಿ ವೈರ್‌, ಇಸ್ಮತ್‌ ಅರ)

“ಮೃತಪಟ್ಟ ರೈತರ ಕುಟುಂಬಗಳಿಗೆ ಧೈರ್ಯ ತುಂಬಲು ರಾಹುಲ್‌ ಹಾಗೂ ಪ್ರಿಯಾಂಕ ಆಗಮಿಸಿದ್ದರು. ನಾವು ಕೂಡ ರೈತರು. ನಮ್ಮ ಕುಟುಂಬದ ಸದಸ್ಯನನ್ನೂ ಈ ಘಟನೆಯಲ್ಲಿ ಕಳೆದುಕೊಂಡಿದ್ದೇವೆ. ನಮ್ಮ ಮನೆಗೆ ಅವರು ಭೇಟಿ ನೀಡುವುದಾದರೆ ಸಂತೋಷದಿಂದ ಸ್ವಾಗತಿಸುತ್ತೇವೆ” ಎಂದು ಶುಭಂ ಮಿಶ್ರಾ ಅವರ ತಂದೆ ವಿಜಯ್‌ ಮಿಶ್ರಾ ಹೇಳಿದ್ದಾರೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಇದನ್ನೂ ಓದಿರಿ: ಸಾಕ್ಷಿಯಿಲ್ಲದೆ ಒತ್ತಡದಿಂದ ಯಾರ ಮೇಲೂ ಕ್ರಮ ಕೈಗೊಳ್ಳುವುದಿಲ್ಲ-ಯೋಗಿ ಆದಿತ್ಯನಾಥ್

ಶುಭಂ ಮಿಶ್ರಾ ಅವರು ಲಖಿಂಪುರ್‌ ಖೇರಿ ಜಿಲ್ಲೆಯಲ್ಲಿ ಬಿಜೆಪಿ ಬೂತ್‌ ಮಟ್ಟದ ಅಧ್ಯಕ್ಷರಾಗಿದ್ದರು. ಕೇಸರಿ ಪಕ್ಷವಾದ ಬಿಜೆಪಿ ಶುಭಂ ಅವರನ್ನು ‘ಹರಕೆಯ ಕುರಿ’ (‘sacrificial goat’) ರೀತಿ ಬಳಸಿಕೊಂಡಿರಬಹುದು ಎಂದು ಕುಟುಂಬ ಹೇಳಿದೆ. “ಸ್ಥಳೀಯ ಬಿಜೆಪಿ ನಾಯಕರು ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. ಆದರೆ ಬಿಜೆಪಿಯ ಯಾವುದೇ ಹಿರಿಯ ನಾಯಕರು ಕುಟುಂಬವನ್ನು ಭೇಟಿಯಾಗಿಲ್ಲ” ಎಂದು ಹೇಳಿದೆ.

ಬಿಜೆಪಿಯನ್ನು ಬೇರು ಮಟ್ಟದಿಂದ ಕಟ್ಟಿದ ಸಾವಿರಾರು ಕಾರ್ಯಕರ್ತರಲ್ಲಿ ಮಿಶ್ರಾ ಕೂಡ ಒಬ್ಬರಾಗಿದ್ದರು. ಆದರೆ ಮಿಶ್ರಾ ಸಾವಿಗೆ ಬಿಜೆಪಿಯು ‘ಹುತಾತ್ಮ’ ಸ್ಥಾನವನ್ನು ನೀಡುವ ಅಧಿಕೃತ ಹೇಳಿಕೆಯನ್ನು ಪಕ್ಷ ಈವರೆಗೆ ನೀಡಿಲ್ಲ ಎಂದು ಮಿಶ್ರಾ ಕುಟುಂಬ ಹೇಳಿರುವುದಾಗಿ ದಿ ವೈರ್‌ ಇದಕ್ಕೂ ಮುಂಚೆ ವರದಿ ಮಾಡಿತ್ತು.

“ನಾವು ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದೇವೆ, ಆದರೆ ಅವರು ಭೇಟಿ ನೀಡಿದ್ದರೆ ನಾವು ಅವರನ್ನು ದೂರವಿಡುತ್ತಿರಲಿಲ್ಲ” ಎಂದು ಕುಟುಂಬ ಹೇಳಿದ್ದು, “ನಾವು ಎಲ್ಲ ಕಡೆಯಿಂದಲೂ ದೂರವಾಗುತ್ತಿರುವ ಅನುಭವವಾಗುತ್ತಿದೆ. ಮಾಧ್ಯಮಗಳು ಕೂಡ ಮಿಶ್ರಾ ಅವರನ್ನು ‘ಖಳನಾಯಕ’ ಎಂದು ಬಿಂಬಿಸುತ್ತಿವೆ” ಎಂದು ಅವರು ಹೇಳಿರುವುದಾಗಿ ದಿ ವೈರ್‌ಗೆ ತಿಳಿಸಿದ್ದಾರೆ.

“ನಮ್ಮ ಬಗ್ಗೆ ಯಾರೂ ಮಾತನಾಡುತ್ತಿಲ್ಲ, ನಮ್ಮನ್ನು ಯಾರೂ ಗಮನಿಸುತ್ತಿಲ್ಲ. ರಾಹುಲ್ ಹಾಗೂ ಪ್ರಿಯಾಂಕ ಅವರು ಸಂತ್ರಸ್ತ ರೈತ ಕುಟುಂಬವನ್ನು ಭೇಟಿ ಮಾಡುವುದಾಗಿ ಹೇಳಿದರು, ನಾವು ರೈತರಲ್ಲವೇ? ಸಂತ್ರಸ್ತರನ್ನು ಭೇಟಿ ಮಾಡುವುದಾಗಿ ಅವರು ಹೇಳಿದರು. ನಾವೂ ಸಂತ್ರಸ್ತರಲ್ಲವೇ? ನಾವೂ ನಮ್ಮ ಮಗನನ್ನೂ ಕಳೆದುಕೊಂಡಿದ್ದೇವೆಯಲ್ಲವೇ?” ಎಂದು ವಿಜಯ ಮಿಶ್ರಾ ಕೇಳಿದ್ದಾರೆ.

ಶುಭಂ ಮಿಶ್ರಾ ಅವರ ಸ್ನೇಹಿತ ಪ್ರವೀಣ್‌ ಮಿಶ್ರಾ ಅವರು, “ಶುಭಂ ಒಳ್ಳೆಯ ಮನುಷ್ಯ. ಯಾವುದೇ ಜಾತಿ, ಧರ್ಮವನ್ನು ಲೆಕ್ಕಿಸದೆ ಕೋವಿಡ್‌ ಬಿಕ್ಕಟ್ಟಿನ ವೇಳೆ ಜನರಿಗೆ ಸಹಾಯ ಮಾಡಿದ್ದಾರೆ. ಹಿಂದೂ ಮುಸ್ಲಿಮರನೇಕರಿಗೆ ಪಡಿತರ ವಿತರಿಸಿದ್ದಾರೆ. ದುಃಖಕ್ಕೆ ಧರ್ಮ, ಜಾತಿ, ರಾಜಕೀಯವಿರುವುದಿಲ್ಲ” ಎಂದಿರುವುದ್ದಾರೆ.

“ಕಾಂಗ್ರೆಸ್‌ ಅಧಿಕಾರ ನಡೆಸುತ್ತಿರುವ ಪಂಜಾಬ್‌ ಮತ್ತು ಛತ್ತೀಸ್‌ಘಡ ಮುಖ್ಯಮಂತ್ರಿಗಳು (ಚರಣ್‌ಜಿತ್‌ ಸಿಂಗ್‌ ಹಾಗೂ ಭೂಪೇಶ್ ಭಾಗೇಲ್‌) ಮೃತ ರೈತ ಕುಟುಂಬಗಳಿಗೆ ಐವತ್ತು ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದು, ನಮಗೂ ಪರಿಹಾರ ನೀಡಬೇಕು” ಎಂದು ಕುಟುಂಬ ಕೇಳಿಕೊಂಡಿರುವುದಾಗಿ ವರದಿ ಹೇಳಿದೆ.

“ಶುಭಂ ಅವರು ಹೆಂಡತಿ ಹಾಗೂ ಪುಟ್ಟ ಮಗಳನ್ನು ಅಗಲಿದ್ದಾರೆ. ನಮ್ಮ ಆರ್ಥಿಕ ಸ್ಥಿತಿ ಕೂಡ ಸುಭದ್ರವಾಗಿಲ್ಲ. ದುಃಖದಲ್ಲಿ ಯಾವುದೇ ಪಕ್ಷದ ರಾಜಕೀಯ ಇರಬಾರದು” ಎಂದು ವಿಶ್ರಾ ಅವರ ತಂದೆ ಹೇಳಿದ್ದಾರೆ.

ದಿ ವೈರ್‌ ವರದಿಗಾರ್ತಿ ವಿಜಯ್‌ಮಿಶ್ರಾ ಅವರನ್ನು ಮಾತನಾಡಿಸಿ ಹಿಂದಿರುಗುವಾಗ, “ನಮ್ಮ ದುಃಖವನ್ನು ಹಂಚಿಕೊಳ್ಳಲು ರಾಹುಲ್‌ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ನಾವು ಆಹ್ವಾನಿಸುತ್ತೇವೆ ಎಂಬುದನ್ನು ತಪ್ಪದೇ ಬರೆಯಿರಿ” ಎಂದು ಹೇಳಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕೃಪೆ: ದಿ ವೈರ್‌

ಇದನ್ನೂ ಓದಿರಿ: ಲಖಿಂಪುರ್‌ ಖೇರಿ ಪ್ರಕರಣ: ಯುಪಿ ಸರ್ಕಾರದ ವಿರುದ್ಧ ಸುಪ್ರೀಂ ಮತ್ತೆ ಅತೃಪ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...