Homeಚಳವಳಿಸಾಕ್ಷಿಯಿಲ್ಲದೆ ಒತ್ತಡದಿಂದ ಯಾರ ಮೇಲೂ ಕ್ರಮ ಕೈಗೊಳ್ಳುವುದಿಲ್ಲ-ಯೋಗಿ ಆದಿತ್ಯನಾಥ್

ಸಾಕ್ಷಿಯಿಲ್ಲದೆ ಒತ್ತಡದಿಂದ ಯಾರ ಮೇಲೂ ಕ್ರಮ ಕೈಗೊಳ್ಳುವುದಿಲ್ಲ-ಯೋಗಿ ಆದಿತ್ಯನಾಥ್

- Advertisement -
- Advertisement -

ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣದಲ್ಲಿ ಯಾವುದೇ ಒತ್ತಡದಿಂದ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಸಾಕ್ಷಿ ಸಿಕ್ಕ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ.

ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಅವರ ಮಗ ಆಶಿಶ್ ಮಿಶ್ರಾರನ್ನು ಬಂಧಿಸುವಂತೆ ಪ್ರತಿಪಕ್ಷಗಳು ಆಗ್ರಹಿಸಿದ ಹಿನ್ನೆಲೆಯಲ್ಲಿ, ಹತ್ಯಾಕಾಂಡ ನಡೆದು ಐದು ದಿನಗಳ ಬಳಿಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಪ್ರತಿಕ್ರಿಯೆ ನೀಡಿದ್ದಾರೆ.

ನಾಲ್ವರು ರೈತರು ಸೇರಿದಂತೆ ಎಂಟು ಜನರು ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ಮೃತಪಟ್ಟಿದ್ದಾರೆ. ಈ ಘಟನೆ ದುರದೃಷ್ಟಕರ ಎಂದಿರುವ ಅವರು, ಸರ್ಕಾರವು ಘಟನೆಯ ವಿವರಗಳನ್ನು ಆಳವಾಗಿ ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ.

“ಕಾನೂನು ಪ್ರತಿಯೊಬ್ಬರಿಗೂ ಭದ್ರತೆ ನೀಡುವ ಭರವಸೆ ನೀಡುವಾಗ, ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ. ಅವರು ಯಾರೇ ಆಗಿರಲಿ ಕಾನೂನು ಕೈಗೆ ತೆಗೆದುಕೊಳ್ಳುವ ಅಗತ್ಯವಿಲ್ಲ” ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ ತಪ್ಪಿಸಿಕೊಳ್ಳಲು ಯುಪಿ ಪೊಲೀಸರೇ ಅನುಕೂಲ ಮಾಡಿಕೊಟ್ಟರು- ಎಸ್‌ಕೆಎಂ

ಈ ಪ್ರಕರಣದಲ್ಲಿ ಸಚಿವರ ಮಗ ಆಶಿಶ್ ಮಿಶ್ರಾ ಅವರನ್ನು ರಕ್ಷಿಸಲು ಪ್ರಯತ್ನಿಸಲಾಗುತ್ತಿದೆ ಎಂಬ ಆರೋಪಕ್ಕೆ ಉತ್ತರಿಸಿರುವ ಆದಿತ್ಯನಾಥ್, “ಅಂತಹ ಯಾವುದೇ ವಿಡಿಯೋ ಇಲ್ಲ. ನಾವು ದೂರವಾಣಿ ಸಂಖ್ಯೆಗಳನ್ನು ನೀಡಿದ್ದೇವೆ. ಅಂತಹ ಯಾವುದಾದರೂ ಸಾಕ್ಷ್ಯಗಳು ಯಾರ ಬಳಿಯಾದರೂ ಇದ್ದರೇ, ಅವರು ಅದನ್ನು ಅಪ್ಲೋಡ್ ಮಾಡಬಹುದು. ಎಲ್ಲವೂ ಸ್ಪಷ್ಟವಾಗಿದೆ. ಯಾರೊಂದಿಗೂ ಅನ್ಯಾಯವಾಗುವುದಿಲ್ಲ. ಕಾನೂನನ್ನು ಕೈಗೆ ತೆಗೆದುಕೊಳ್ಳಲು ಯಾರಿಗೂ ಅವಕಾಶವಿಲ್ಲ. ಆದರೆ, ಯಾವುದೇ ಒತ್ತಡದಿಂದ ಯಾರ ಮೇಲೆಯೂ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ” ಎಂದಿದ್ದಾರೆ.

“ಬಿಜೆಪಿ ಶಾಸಕರಾಗಿರಲಿ, ಪ್ರತಿಪಕ್ಷದ ಶಾಸಕರಾಗಿರಲಿ ಅಥವಾ ಯಾವುದೇ ಹುದ್ದೆಯಲ್ಲಿರುವವರಾಗಿರಲಿ. ನಾವು ಕ್ರಮ ಕೈಗೊಳ್ಳಲು ಎಂದಿಗೂ ಹಿಂಜರಿದಿಲ್ಲ. ಲಖಿಂಪುರ್ ಖೇರಿ ಘಟನೆಯಲ್ಲೂ ಸರ್ಕಾರ ಅದೇ ಕೆಲಸ ಮಾಡುತ್ತಿದೆ. ಸರ್ಕಾರದಿಂದ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ)ಮತ್ತು ನ್ಯಾಯಾಂಗ ಆಯೋಗವನ್ನೂ ರಚಿಸಲಾಗಿದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಸದ್ಯ ಈ ಪ್ರಕರಣದಲ್ಲಿ ಲುವಕುಶ್ ಮತ್ತು ಆಶಿಶ್ ಪಾಂಡೆ ಎಂಬುವವರನ್ನು ಬಂಧಿಸಲಾಗಿದ್ದು, ಪೊಲೀಸರು ಶುಕ್ರವಾರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಸಮನ್ಸ್ ನೀಡಿದ್ದರೂ, ಅವರು ವಿಚಾರಣೆಗೆ ಹಾಜರಾಗಿಲ್ಲ.

ಇತ್ತ, ಆರೋಪಿಗಳನ್ನು ಇನ್ನು ಬಂಧಿಸಿರದ ಕುರಿತು ರೈತ ಸಂಘಟನೆ ಎಸ್‌ಕೆಎಂ ಆಕ್ರೋಶ ವ್ಯಕ್ತಪಡಿಸಿದೆ. ಘಟನೆ ನಡೆದು ಐದು ದಿನಗಳಾಗಿವೆ. ಆರೋಪಿ ಆಶಿಶ್ ಮಿಶ್ರಾ ರೈತರು ಕೊಲೆಯಾದ ಘಟನೆಯ ಸ್ಥಳದಲ್ಲಿ ಇರದಿದ್ದರೆ, ಬೇರೆ ಎಲ್ಲಿದ್ದರು ಎಂದು ಇದುವರೆಗೂ ಏಕೆ ಸಾಬೀತುಪಡಿಸಿಲ್ಲ ಎಂದು ರೈತರು ಪ್ರಶ್ನಿಸಿದ್ದಾರೆ.

ಲಖಿಂಪುರ್ ಖೇರಿ ಘಟನೆಯಲ್ಲಿ ಆಶಿಶ್ ಮಿಶ್ರಾ ಕೈವಾಡವಿಲ್ಲದಿದ್ದರೆ, ಆತನು ನೇಪಾಳಕ್ಕೆ ಏಕೆ ಓಡಿಹೋಗಿದ್ದಾನೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಪ್ರಶ್ನಿಸಿದೆ.


ಇದನ್ನೂ ಓದಿ: ರೈತರ ಹತ್ಯಾಕಾಂಡ: ಪರಿಹಾರ ನನ್ನ ಮಗನನ್ನು ವಾಪಸ್ ತರುವುದಿಲ್ಲ, ನಮಗೆ ನ್ಯಾಯ ಬೇಕು- ಮೃತರ ತಂದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...