Homeಕರ್ನಾಟಕನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್

ನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್

ಅವರದೇ ಚಾನೆಲ್‌‌ನಲ್ಲಿ ನಟಿ ಹನುಮಕ್ಕನವರ್‌‌ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ

- Advertisement -
- Advertisement -

ನಟಿ ಸಂಜನಾ ಗರ್ಲಾನಿ ಅವರು ಖಾಸಗಿ ಸುದ್ದಿ ವಾಹಿನಿ ಸುವರ್ಣ ಚಾನೆಲ್ ಆಂಕರ್‌‌ ಅಜಿತ್ ಹನುಮಕ್ಕನವರ್‌ ಅವರಿಗೆ, ಅವರದೇ ವಾಹಿನಿಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವಾರು ಜನರು ನಟಿ ಸಂಜನಾ ಗಲ್ರಾನಿ ಅವರ ವಾದ ಸರಣಿಯನ್ನು ಅಭಿನಂದಿಸಿದ್ದಾರೆ.

ಸುವರ್ಣ ಚಾನೆಲ್ ಆಂಕರ್‌ ಅಜಿತ್ ಹನುಮಕ್ಕನವರ್‌ ಅವರು, ಕಾರು ಡ್ರೈವರ್‌ ಅವರೊಂದಿಗೆ ನಟಿ ಸಂಜನಾ ಕೆಟ್ಟದಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಕಾರ್ಯಕ್ರಮವೊಂದನ್ನು ನಡೆಸಿದ್ದರು. ಈ ಬಗ್ಗೆ ಸ್ಪಷ್ಟನೆಗಾಗಿ ಸಂಜನಾ ಅವರಿಗೆ ಸುವರ್ಣ ವಾಹಿನಿ ಕರೆ ಮಾಡಿತ್ತು. ಅವರ ಕರೆ ಸ್ವೀಕರಿಸುತ್ತಲೆ ಸಂಜನಾ, “ನಿಮ್ಮ ಚಾನೆಲ್‌ ಅವರು ನನ್ನೊಂದಿಗೆ ಮಾತನಾಡಲು ವಿನಂತಿ ಮಾಡಿದ್ದರು. ಆದರೆ ನಾನು ಮಾತನಾಡುವುದಕ್ಕೆ ಮೊದಲೇ ನನ್ನ ಬಗ್ಗೆ ತೀರ್ಮಾನ ತೆಗೆದುಕೊಂಡು ಬಿಟ್ಟಿದ್ದೀರಾ” ಎಂದು ಕಾರ್ಯಕ್ರಮಕ್ಕೆ ನೀಡಿರುವ ಶೀರ್ಷಿಕೆಯನ್ನು ಉಲ್ಲೇಖಿಸಿ ಹೇಳಿದ್ದರು.

ಇದನ್ನೂ ಓದಿ: ‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

ಕಾರ್ಯಕ್ರಮಕ್ಕೆ ‘ಕಿರಿಕ್ ಸಂಜನಾ’ ಎಂದು ಶೀರ್ಷಿಕೆ ನೀಡಲಾಗಿತ್ತು.

ಶೀರ್ಷಿಕೆಯ ಬಗ್ಗೆ ನಟಿ ಪ್ರಶ್ನಿಸಿದ್ದಕ್ಕೆ ಉದ್ದಟತನದಿಂದ ವರ್ತಿಸಿದ ಅಜಿತ್ ಅವರು, ಇನ್ನೇನು ಶೀರ್ಷಿಕೆ ನೀಡಬೇಕಿತ್ತು ಎಂದು ಪ್ರಶ್ನಿಸಿದ್ದಾರೆ. ಆದರೆ ಇದಕ್ಕೆ ಉತ್ತರಿಸಿದ ಸಂಜನಾ ಅವರು ತಮಗೆ ಆಗಿರುವ ಅನ್ಯಾಯದ ಬಗ್ಗೆ ಅಲ್ಲಿ ಹೇಳಿದ್ದಾರೆ. ಆದರೆ ಇಷ್ಟಕ್ಕೆ ಸುಮ್ಮನಾಗದ ಅಜಿತ್, ಸಂಜನಾರನ್ನು ಮಾತನಾಡಲು ಬಿಡದೆ, ಅವರ ಮಾತನ್ನು ತಿರುಚುವ ಪ್ರಯತ್ನ ಮಾಡಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಂಜನಾ, “ಮೊದಲನೆಯದಾಗಿ, ಮಾತನಾಡಲು ಒಂದು ರೀತಿಯಿರುತ್ತದೆ. ನೀವು ನಿಮ್ಮ ವಾದಕ್ಕೆ ಮಸಾಲೆ ಹಾಕಿಬಿಟ್ಟು ಈಗಾಗಲೆ ಒಂದು ತೀರ್ಮಾನಕ್ಕೆ ಬಂದುಬಿಟ್ಟಿದ್ದೀರಿ. ಇಷ್ಟೆಲ್ಲಾ ಆದ ನಂತರ ನನಗೆ ಯಾಕೆ ಫೋನ್ ಮಾಡಿ ಸ್ಪಷ್ಟನೆ ಕೇಳುತ್ತಿದ್ದೀರಾ?” ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಉತ್ತರಿಸಿದ ಅಜಿತ್, ಅಲ್ಲಿ ಏನು ನಡೆದಿದೆ ಎಂದು ಗೊತ್ತಾಗಬೇಕಲ್ವಾ ಎಂದು ಹೇಳಿದ್ದಾರೆ.

ನಂತರ ತಮ್ಮ ಮಾತನ್ನು ಮುಂದುವರೆಸಿದ ಸಂಜನಾ, “ಮರ್ಯಾದೆ ಕೊಟ್ಟು ಮಾತನಾಡಲು ಆಗಿಲ್ಲ ಅಂದರೆ ಯಾಕೆ ನನಗೆ ಫೋನ್ ಮಾಡಿ, ಸಮಯ ಕೊಡಿ ಎಂದು ವಿನಂತಿಸುತ್ತೀರಾ?” ಎಂದು ಕೇಳಿದ್ದಾರೆ. ಇದಕ್ಕೆ ಅಜಿತ್, “ನಾವು ನಿಮ್ಮ ವರ್ಷನ್ ತಗೊಂಡಿಲ್ಲ ಎಂದು ಆರೋಪ ಬರಬಾರದು ಅಲ್ವಾ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ಇದಕ್ಕೆ ಮತ್ತೇ ಆಕ್ರೋಶಗೊಂಡ ಸಂಜನಾ, “ನನ್ನ ವರ್ಷನ್ ತಗೋ ಬೇಡಿ. ಈ ರೀತಿ ಒರಟಾಗಿ ಯಾರಾದರೂ ಮಾತನಾಡುತ್ತಾರ? ಅದೂ ಕೂಡಾ ಲೈವ್ ಅಲ್ಲಿ, ಇಡೀ ಕರ್ನಾಟಕ ನೋಡ್ತಾ ಇದೆ. ಈ ತರ ಒರಟಾಗಿ ಮತ್ತು ಗಲೀಜಾಗಿ ಮಾತನಾಡುವುದು ಸರಿಯಾ?” ಎಂದು ಹೇಳಿದ್ದಾರೆ.

ಇದಕ್ಕೆ, “ಹೇಗೆ ನಡೆದುಕೊಳ್ಳಬೇಕು ಎಂದು ನನಗೆ ಪಾಠ ಮಾಡಲು ಬರಬೇಡಿ” ಎಂದು ಅಜಿತ್ ಅವರು ಮತ್ತೇ ಉದ್ಧಟತನದಿಂದ ಮಾತನಾಡಿದ್ದಾರೆ.

ಇದಕ್ಕೆ ಉತ್ತರಿಸಿದ ಸಂಜನಾ, “ನೀವು ಸಾರ್ವಜನಿಕವಾಗಿ ಹೇಗೆ ಬೇಕಾದರೂ ವರ್ತಿಸಿ. ಆದರೆ ನನ್ನೊಂದಿಗೆ ಹೀಗೆ ವರ್ತಿಸಬೇಡಿ. ಫೋನ್ ಮಾಡಿ, ‘ದಯವಿಟ್ಟು ಫೋನ್ ಅಲ್ಲಿ ಬನ್ನಿ ಮೇಡಂ’ ಅಂತ ಕೈಕಾಲ್ ಮುಗೀತೀರಾ. ಫೋನಲ್ಲಿ ಬಂದಾಗ ಕಿರಿಕ್ ಅಂತ ಹೇಳ್ತೀರಾ. ನಾಚಿಕೆ ಇಲ್ಲವೆ ನಿಮಗೆ? ಈ ಕರೆ ನನ್ನ ವಾದ ಏನೆಂದು ಕೇಳುವ ರೀತಿ ಇಲ್ಲ. ಮೊದಲಿಗೆ ಮರ್ಯಾದೆಯಾಗಿ ಮಾತನಾಡುವುದು ಕಲೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ, ನಮಗೆ ಎರಡೂ ಕಡೆಯ ವಾದಗಳು ಬೇಕು ಎನ್ನುದಕ್ಕಾಗಿ ನಿಮಗೆ ಕರೆ ಮಾಡಿದ್ದೇವೆ ಎಂದು ಅಜಿತ್ ಮತ್ತೇ ಹೇಳುತ್ತಾರೆ.

“ನಿಮಗೆ ಬೇಕಾದ್ರೆ ಬೇಕಾಗಲಿ. ನನಗೆ ನಿಮ್ಮ ಬಳಿ ಸ್ಪಷ್ಟನೆ ಕೊಡುವ ಅವಶ್ಯಕತೆ ಇಲ್ಲ. ಕಾರ್‌ ಕಂಪೆನಿ ಅವರೇ ನನ್ನೊಂದಿಗೆ ಕ್ಷಮೆ ಕೇಳಿದ್ದಾರೆ. ಮಹಿಳೆಯರೊಂದಿಗೆ ಹೇಗೆ ಮಾತನಾಡಬೇಕು ಎಂದು ಮೊದಲು ಕಲಿತುಕೊಳ್ಳಿ. ನಿಮಗೆ ನನ್ನೊಂದಿಗೆ ಈ ರೀತಿ ಮಾತನಾಡುವ ಅಧಿಕಾರ ಇಲ್ಲ. ಅದಕ್ಕೂ ಮೊದಲು ಒಬ್ಬ ಸಭ್ಯ ನಿರೂಪಕನ ಕೈಯ್ಯಲ್ಲಿ ಫೋನ್ ಮಾಡಿಸಿ. ಸಭ್ಯ ನಿರೂಪಕ ಮರ್ಯಾದೆ ಕೊಟ್ಟು ಮಾತನಾಡಿದರೆ ನಾನು ಖಂಡಿತಾ ಮಾತನಾಡುತ್ತೇನೆ” ಎಂದು ಹೇಳಿದ್ದ ಸಂಜನಾ ಅವರು ಫೋನ್ ಕಟ್ ಮಾಡಿದ್ದಾರೆ.

ಸಂಜನಾ ಅವರ ವಾದ ಸರಣಿ ಮತ್ತು ಪ್ರಸ್ತುತ ಕಾರ್ಯಕ್ರಮದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ನಟಿಯ ಮಾತುಗಳನ್ನು ಮೆಚ್ಚಿಕೊಂಡಿದ್ದಾರೆ. ಈ ಬಗ್ಗೆ ಹಲವಾರು ಜನರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ದ್ವೇಷಬಿತ್ತುವ ಟಿವಿ ಚಾನೆಲ್‌ಗಳನ್ನು ಬಂದ್‌ ಮಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

ಸಾಮಾಜಿಕ ಕಾರ್ಯಕರ್ತ ದಿನೇಶ್ ಕುಮಾರ ಅವರು, “ಟೀವಿ ಆಂಕರುಗಳು ಪ್ರತಿಕ್ರಿಯೆಗಳಿಗೆ ಫೋನ್ ಮಾಡಿದಾಗ ಕನಿಷ್ಠ ಸೌಜನ್ಯವನ್ನಾದರೂ ತೋರಿಸಬೇಕು. ಫೋನ್ ಕನೆಕ್ಟ್ ಮಾಡುವಾಗ ಅಂಗಲಾಚಿ ಬೇಡಿಕೊಳ್ಳೋದು, ಲೈವ್ ಟೆಲಿಕಾಸ್ಟ್‌ನಲ್ಲಿ ಬಾಯಿಗೆ ಬಂದಂತೆ ಮಾತಾಡೋದು ಮಾಡಿದರೆ ಯಾರಿಗಾದರೂ ಕೋಪ ಬರುತ್ತದೆ. ಇದೊಂಥರ ಉತ್ತರನ ಪೌರುಷ ಒಲೆ ಮುಂದೆ ಎಂಬಂತಾಗುತ್ತದೆ. ನಂಗೇನೋ ಸಂಜನಾ ಸರಿಯಾಗೇ ಮಾತಾಡಿದ್ದಾರೆ ಅನ್ನಿಸಿತು. ಟೀವಿ ಆಂಕರುಗಳು ತಾವೇ ಧರೆಗಿಳಿದ ದೇವರುಗಳು ಎಂಬ ಭ್ರಮೆಯಿಂದ ಹೊರಗೆ ಬರಬೇಕು. ಇಲ್ಲವಾದಲ್ಲಿ ಹೀಗೆ ಗಲೀಜಾಗಿ ಮಾತಾಡೋ ಡೀಸೆಂಟ್ ಅಲ್ಲದ ಆಂಕರ್ ಅನಿಸಿಕೊಳ್ಳಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪತ್ರಿಕಾ ಧರ್ಮ ಹಳ್ಳ ಹಿಡಿಸಿರುವ ಯುದ್ಧೋನ್ಮಾದಿ ಸಂಪಾದಕರು: ಮದ್ದೆರೆಯಬೇಕಾದ ಸಾಂಸ್ಕೃತಿಕ ಲೋಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಅಜಿತ್ ಹನುಮಕ್ಕನವರಿಗೆ ಹೀರೋ ಆಗುವ ತವಕ. ಈ ಟೀವಿಯವರಿಗೆ ಈತ ಒಂದು ನ್ಯೂಸೆನ್ಸ್ ಅನ್ನೋದು ಯಾಕೆ ಇಲ್ಲೀವರೆಗೂ ಅರ್ಥ ಆಗಿಲ್ಲ?

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....