Homeಕರ್ನಾಟಕನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್

ನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್

ಅವರದೇ ಚಾನೆಲ್‌‌ನಲ್ಲಿ ನಟಿ ಹನುಮಕ್ಕನವರ್‌‌ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ

- Advertisement -
- Advertisement -

ನಟಿ ಸಂಜನಾ ಗರ್ಲಾನಿ ಅವರು ಖಾಸಗಿ ಸುದ್ದಿ ವಾಹಿನಿ ಸುವರ್ಣ ಚಾನೆಲ್ ಆಂಕರ್‌‌ ಅಜಿತ್ ಹನುಮಕ್ಕನವರ್‌ ಅವರಿಗೆ, ಅವರದೇ ವಾಹಿನಿಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವಾರು ಜನರು ನಟಿ ಸಂಜನಾ ಗಲ್ರಾನಿ ಅವರ ವಾದ ಸರಣಿಯನ್ನು ಅಭಿನಂದಿಸಿದ್ದಾರೆ.

ಸುವರ್ಣ ಚಾನೆಲ್ ಆಂಕರ್‌ ಅಜಿತ್ ಹನುಮಕ್ಕನವರ್‌ ಅವರು, ಕಾರು ಡ್ರೈವರ್‌ ಅವರೊಂದಿಗೆ ನಟಿ ಸಂಜನಾ ಕೆಟ್ಟದಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಕಾರ್ಯಕ್ರಮವೊಂದನ್ನು ನಡೆಸಿದ್ದರು. ಈ ಬಗ್ಗೆ ಸ್ಪಷ್ಟನೆಗಾಗಿ ಸಂಜನಾ ಅವರಿಗೆ ಸುವರ್ಣ ವಾಹಿನಿ ಕರೆ ಮಾಡಿತ್ತು. ಅವರ ಕರೆ ಸ್ವೀಕರಿಸುತ್ತಲೆ ಸಂಜನಾ, “ನಿಮ್ಮ ಚಾನೆಲ್‌ ಅವರು ನನ್ನೊಂದಿಗೆ ಮಾತನಾಡಲು ವಿನಂತಿ ಮಾಡಿದ್ದರು. ಆದರೆ ನಾನು ಮಾತನಾಡುವುದಕ್ಕೆ ಮೊದಲೇ ನನ್ನ ಬಗ್ಗೆ ತೀರ್ಮಾನ ತೆಗೆದುಕೊಂಡು ಬಿಟ್ಟಿದ್ದೀರಾ” ಎಂದು ಕಾರ್ಯಕ್ರಮಕ್ಕೆ ನೀಡಿರುವ ಶೀರ್ಷಿಕೆಯನ್ನು ಉಲ್ಲೇಖಿಸಿ ಹೇಳಿದ್ದರು.

ಇದನ್ನೂ ಓದಿ: ‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

ಕಾರ್ಯಕ್ರಮಕ್ಕೆ ‘ಕಿರಿಕ್ ಸಂಜನಾ’ ಎಂದು ಶೀರ್ಷಿಕೆ ನೀಡಲಾಗಿತ್ತು.

ಶೀರ್ಷಿಕೆಯ ಬಗ್ಗೆ ನಟಿ ಪ್ರಶ್ನಿಸಿದ್ದಕ್ಕೆ ಉದ್ದಟತನದಿಂದ ವರ್ತಿಸಿದ ಅಜಿತ್ ಅವರು, ಇನ್ನೇನು ಶೀರ್ಷಿಕೆ ನೀಡಬೇಕಿತ್ತು ಎಂದು ಪ್ರಶ್ನಿಸಿದ್ದಾರೆ. ಆದರೆ ಇದಕ್ಕೆ ಉತ್ತರಿಸಿದ ಸಂಜನಾ ಅವರು ತಮಗೆ ಆಗಿರುವ ಅನ್ಯಾಯದ ಬಗ್ಗೆ ಅಲ್ಲಿ ಹೇಳಿದ್ದಾರೆ. ಆದರೆ ಇಷ್ಟಕ್ಕೆ ಸುಮ್ಮನಾಗದ ಅಜಿತ್, ಸಂಜನಾರನ್ನು ಮಾತನಾಡಲು ಬಿಡದೆ, ಅವರ ಮಾತನ್ನು ತಿರುಚುವ ಪ್ರಯತ್ನ ಮಾಡಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಂಜನಾ, “ಮೊದಲನೆಯದಾಗಿ, ಮಾತನಾಡಲು ಒಂದು ರೀತಿಯಿರುತ್ತದೆ. ನೀವು ನಿಮ್ಮ ವಾದಕ್ಕೆ ಮಸಾಲೆ ಹಾಕಿಬಿಟ್ಟು ಈಗಾಗಲೆ ಒಂದು ತೀರ್ಮಾನಕ್ಕೆ ಬಂದುಬಿಟ್ಟಿದ್ದೀರಿ. ಇಷ್ಟೆಲ್ಲಾ ಆದ ನಂತರ ನನಗೆ ಯಾಕೆ ಫೋನ್ ಮಾಡಿ ಸ್ಪಷ್ಟನೆ ಕೇಳುತ್ತಿದ್ದೀರಾ?” ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಉತ್ತರಿಸಿದ ಅಜಿತ್, ಅಲ್ಲಿ ಏನು ನಡೆದಿದೆ ಎಂದು ಗೊತ್ತಾಗಬೇಕಲ್ವಾ ಎಂದು ಹೇಳಿದ್ದಾರೆ.

ನಂತರ ತಮ್ಮ ಮಾತನ್ನು ಮುಂದುವರೆಸಿದ ಸಂಜನಾ, “ಮರ್ಯಾದೆ ಕೊಟ್ಟು ಮಾತನಾಡಲು ಆಗಿಲ್ಲ ಅಂದರೆ ಯಾಕೆ ನನಗೆ ಫೋನ್ ಮಾಡಿ, ಸಮಯ ಕೊಡಿ ಎಂದು ವಿನಂತಿಸುತ್ತೀರಾ?” ಎಂದು ಕೇಳಿದ್ದಾರೆ. ಇದಕ್ಕೆ ಅಜಿತ್, “ನಾವು ನಿಮ್ಮ ವರ್ಷನ್ ತಗೊಂಡಿಲ್ಲ ಎಂದು ಆರೋಪ ಬರಬಾರದು ಅಲ್ವಾ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ಇದಕ್ಕೆ ಮತ್ತೇ ಆಕ್ರೋಶಗೊಂಡ ಸಂಜನಾ, “ನನ್ನ ವರ್ಷನ್ ತಗೋ ಬೇಡಿ. ಈ ರೀತಿ ಒರಟಾಗಿ ಯಾರಾದರೂ ಮಾತನಾಡುತ್ತಾರ? ಅದೂ ಕೂಡಾ ಲೈವ್ ಅಲ್ಲಿ, ಇಡೀ ಕರ್ನಾಟಕ ನೋಡ್ತಾ ಇದೆ. ಈ ತರ ಒರಟಾಗಿ ಮತ್ತು ಗಲೀಜಾಗಿ ಮಾತನಾಡುವುದು ಸರಿಯಾ?” ಎಂದು ಹೇಳಿದ್ದಾರೆ.

ಇದಕ್ಕೆ, “ಹೇಗೆ ನಡೆದುಕೊಳ್ಳಬೇಕು ಎಂದು ನನಗೆ ಪಾಠ ಮಾಡಲು ಬರಬೇಡಿ” ಎಂದು ಅಜಿತ್ ಅವರು ಮತ್ತೇ ಉದ್ಧಟತನದಿಂದ ಮಾತನಾಡಿದ್ದಾರೆ.

ಇದಕ್ಕೆ ಉತ್ತರಿಸಿದ ಸಂಜನಾ, “ನೀವು ಸಾರ್ವಜನಿಕವಾಗಿ ಹೇಗೆ ಬೇಕಾದರೂ ವರ್ತಿಸಿ. ಆದರೆ ನನ್ನೊಂದಿಗೆ ಹೀಗೆ ವರ್ತಿಸಬೇಡಿ. ಫೋನ್ ಮಾಡಿ, ‘ದಯವಿಟ್ಟು ಫೋನ್ ಅಲ್ಲಿ ಬನ್ನಿ ಮೇಡಂ’ ಅಂತ ಕೈಕಾಲ್ ಮುಗೀತೀರಾ. ಫೋನಲ್ಲಿ ಬಂದಾಗ ಕಿರಿಕ್ ಅಂತ ಹೇಳ್ತೀರಾ. ನಾಚಿಕೆ ಇಲ್ಲವೆ ನಿಮಗೆ? ಈ ಕರೆ ನನ್ನ ವಾದ ಏನೆಂದು ಕೇಳುವ ರೀತಿ ಇಲ್ಲ. ಮೊದಲಿಗೆ ಮರ್ಯಾದೆಯಾಗಿ ಮಾತನಾಡುವುದು ಕಲೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ, ನಮಗೆ ಎರಡೂ ಕಡೆಯ ವಾದಗಳು ಬೇಕು ಎನ್ನುದಕ್ಕಾಗಿ ನಿಮಗೆ ಕರೆ ಮಾಡಿದ್ದೇವೆ ಎಂದು ಅಜಿತ್ ಮತ್ತೇ ಹೇಳುತ್ತಾರೆ.

“ನಿಮಗೆ ಬೇಕಾದ್ರೆ ಬೇಕಾಗಲಿ. ನನಗೆ ನಿಮ್ಮ ಬಳಿ ಸ್ಪಷ್ಟನೆ ಕೊಡುವ ಅವಶ್ಯಕತೆ ಇಲ್ಲ. ಕಾರ್‌ ಕಂಪೆನಿ ಅವರೇ ನನ್ನೊಂದಿಗೆ ಕ್ಷಮೆ ಕೇಳಿದ್ದಾರೆ. ಮಹಿಳೆಯರೊಂದಿಗೆ ಹೇಗೆ ಮಾತನಾಡಬೇಕು ಎಂದು ಮೊದಲು ಕಲಿತುಕೊಳ್ಳಿ. ನಿಮಗೆ ನನ್ನೊಂದಿಗೆ ಈ ರೀತಿ ಮಾತನಾಡುವ ಅಧಿಕಾರ ಇಲ್ಲ. ಅದಕ್ಕೂ ಮೊದಲು ಒಬ್ಬ ಸಭ್ಯ ನಿರೂಪಕನ ಕೈಯ್ಯಲ್ಲಿ ಫೋನ್ ಮಾಡಿಸಿ. ಸಭ್ಯ ನಿರೂಪಕ ಮರ್ಯಾದೆ ಕೊಟ್ಟು ಮಾತನಾಡಿದರೆ ನಾನು ಖಂಡಿತಾ ಮಾತನಾಡುತ್ತೇನೆ” ಎಂದು ಹೇಳಿದ್ದ ಸಂಜನಾ ಅವರು ಫೋನ್ ಕಟ್ ಮಾಡಿದ್ದಾರೆ.

ಸಂಜನಾ ಅವರ ವಾದ ಸರಣಿ ಮತ್ತು ಪ್ರಸ್ತುತ ಕಾರ್ಯಕ್ರಮದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ನಟಿಯ ಮಾತುಗಳನ್ನು ಮೆಚ್ಚಿಕೊಂಡಿದ್ದಾರೆ. ಈ ಬಗ್ಗೆ ಹಲವಾರು ಜನರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ದ್ವೇಷಬಿತ್ತುವ ಟಿವಿ ಚಾನೆಲ್‌ಗಳನ್ನು ಬಂದ್‌ ಮಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

ಸಾಮಾಜಿಕ ಕಾರ್ಯಕರ್ತ ದಿನೇಶ್ ಕುಮಾರ ಅವರು, “ಟೀವಿ ಆಂಕರುಗಳು ಪ್ರತಿಕ್ರಿಯೆಗಳಿಗೆ ಫೋನ್ ಮಾಡಿದಾಗ ಕನಿಷ್ಠ ಸೌಜನ್ಯವನ್ನಾದರೂ ತೋರಿಸಬೇಕು. ಫೋನ್ ಕನೆಕ್ಟ್ ಮಾಡುವಾಗ ಅಂಗಲಾಚಿ ಬೇಡಿಕೊಳ್ಳೋದು, ಲೈವ್ ಟೆಲಿಕಾಸ್ಟ್‌ನಲ್ಲಿ ಬಾಯಿಗೆ ಬಂದಂತೆ ಮಾತಾಡೋದು ಮಾಡಿದರೆ ಯಾರಿಗಾದರೂ ಕೋಪ ಬರುತ್ತದೆ. ಇದೊಂಥರ ಉತ್ತರನ ಪೌರುಷ ಒಲೆ ಮುಂದೆ ಎಂಬಂತಾಗುತ್ತದೆ. ನಂಗೇನೋ ಸಂಜನಾ ಸರಿಯಾಗೇ ಮಾತಾಡಿದ್ದಾರೆ ಅನ್ನಿಸಿತು. ಟೀವಿ ಆಂಕರುಗಳು ತಾವೇ ಧರೆಗಿಳಿದ ದೇವರುಗಳು ಎಂಬ ಭ್ರಮೆಯಿಂದ ಹೊರಗೆ ಬರಬೇಕು. ಇಲ್ಲವಾದಲ್ಲಿ ಹೀಗೆ ಗಲೀಜಾಗಿ ಮಾತಾಡೋ ಡೀಸೆಂಟ್ ಅಲ್ಲದ ಆಂಕರ್ ಅನಿಸಿಕೊಳ್ಳಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪತ್ರಿಕಾ ಧರ್ಮ ಹಳ್ಳ ಹಿಡಿಸಿರುವ ಯುದ್ಧೋನ್ಮಾದಿ ಸಂಪಾದಕರು: ಮದ್ದೆರೆಯಬೇಕಾದ ಸಾಂಸ್ಕೃತಿಕ ಲೋಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಅಜಿತ್ ಹನುಮಕ್ಕನವರಿಗೆ ಹೀರೋ ಆಗುವ ತವಕ. ಈ ಟೀವಿಯವರಿಗೆ ಈತ ಒಂದು ನ್ಯೂಸೆನ್ಸ್ ಅನ್ನೋದು ಯಾಕೆ ಇಲ್ಲೀವರೆಗೂ ಅರ್ಥ ಆಗಿಲ್ಲ?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...