Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿದು ರೈತರು ಹಾಗೂ ಬಿಜೆಪಿ ಕಾರ್ಯಕರ್ತರು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದ ಬಳಿಕ, ಖಾಲಿಸ್ತಾನಿ ಬೆಂಬಲಿಗರ ಗುಂಪು ಭಾರತದ ಭಾವುಟವನ್ನು ಹರಿದಿದ್ದಾರೆ ಎಂಬ ಒಕ್ಕಣೆಯೊಂದಿಗೆ ಒಂದು ಪೋಸ್ಟ್‌‌ ಮಾಡಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್‌ ಆಗಿದೆ. ಈ ವಿಡಿಯೋವನ್ನು ಭಾರತದಲ್ಲಿನ ರೈತರ ಹೋರಾಟ ಹಾಗೂ ಉತ್ತರ ಪ್ರದೇಶದ ಘಟನೆಗೆ ತಳುಕು ಹಾಕಲಾಗಿದೆ.

ಉತ್ತರ ಪ್ರದೇಶದಲ್ಲಿ ಪ್ರತಿಭಟಿಸುತ್ತಿರುವ ರೈತರು ಭಾರತದ ಭಾವುಟವನ್ನು ಹಾಗೂ ಹರಿದು ಹಾಕುತ್ತಿರುವುದು ಎಂಬ ಒಕ್ಕಣೆಯೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಈ ವಿಡಿಯೋದ ಹಿಂದಿನ ಸತ್ಯವನ್ನು ಫ್ಯಾಕ್ಟಿ.ಇನ್‌ ಜಾಲತಾಣ ಬಯಲಿಗೆಳೆದಿದೆ. ಪ್ರಧಾನಿ ನರೇಂದ್ರ ಮೋದಿಯವರು ಕಳೆದ ತಿಂಗಳು ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದಾಗ ನ್ಯೂಯಾರ್ಕ್‌ನಲ್ಲಿನ ವಿಶ್ವಸಂಸ್ಥೆಯ ಕಚೇರಿಯ ಹೊರಗೆ ಖಾಲಿಸ್ತಾನಿ ಬೆಂಬಲಿಗರು ನಡೆಸಿದ ಪ್ರತಿಭಟನೆಯ ವಿಡಿಯೋ ಇದಾಗಿದೆ. ಕೆಲವು ಆನ್‌ಲೈನ್‌ ನ್ಯೂಸ್ ಪೋರ್ಟಲ್‌ಗಳು ಇದೇ ಥರದ ವಿಡಿಯೋದ ವರದಿ ಮಾಡಿದ್ದಾರೆ. ಈ ವಿಡಿಯೋ ಭಾರತಕ್ಕೆ ಅಥವಾ ಲಖಿಂಪುರ್‌ ಖೇರಿ ಘಟನೆಗೆ ಸಂಬಂಧಿಸಿದ್ದಲ್ಲ. ಈ ಪೋಸ್ಟ್‌ನಲ್ಲಿ ಪ್ರತಿಪಾದಿಸಿರುವುದು ಸುಳ್ಳಾಗಿದೆ.

ಇದನ್ನೂ ಓದಿರಿ: ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ಸಂಬಂಧಪಟ್ಟ ಕೀವರ್ಡ್‌‌ಗಳೊಂದಿಗೆ ಗೂಗಲ್‌ ಸರ್ಚ್ ಮಾಡಿದಾಗ ಇದೇ ವಿಡಿಯೋವನ್ನು ಎನ್‌‌ಆರ್‌ಐ ಹೆರಾಲ್ಡ್‌ ಟ್ಟೀಟ್ ಮಾಡಿ ಶೇ‌ರ್ ಮಾಡಿರುವುದು ಕಂಡುಬಂದಿದೆ. “ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ವೇಳೆ ನ್ಯೂಯಾರ್ಕ್ ನಲ್ಲಿ ಖಲಿಸ್ತಾನಿ ಸಿಖ್ ಬಂಡುಕೋರರು ಭಾರತೀಯ ರಾಷ್ಟ್ರೀಯ ಧ್ವಜವನ್ನು ಹರಿದು ಹಾಕಿ, ಉಗ್ರ ಘೋಷಣೆಗಳನ್ನು ಕೂಗಿದರು” ಎಂಬ ವಿವರಣೆಯನ್ನು ಶೇರ್‌ ಮಾಡಲಾಗಿರುವ ವಿಡಿಯೋಕ್ಕೆ ನೀಡಲಾಗಿದೆ. ‘ಎನ್ ಆರ್ ಐ ಹೆರಾಲ್ಡ್’ ಆಸ್ಟ್ರೇಲಿಯಾ ಮೂಲದ ವೆಬ್ ನ್ಯೂಸ್ ಪೋರ್ಟಲ್ ಆಗಿದ್ದು, ಇದು ಹೆಚ್ಚಾಗಿ ಭಾರತಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಒಳಗೊಂಡಿರುತ್ತದೆ. ಎನ್ ಆರ್ ಐ ಹೆರಾಲ್ಡ್ ಇದೇ ವಿಡಿಯೋವನ್ನು ತಮ್ಮ ಫೇಸ್ ಬುಕ್ ಪೇಜ್‌ನಲ್ಲೂ ಹಂಚಿಕೊಂಡಿದೆ.

ಮೇಲಿನ ಟ್ವೀಟ್‌ನಿಂದ ಒಂದು ಸುಳಿವು ಪಡೆದು ಹುಡುಕಾಡಿದಾಗ, ಕಳೆದ ತಿಂಗಳು (ಸೆಪ್ಟೆಂಬರ್‌ 2021) ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಹೊರಗೆ ಪ್ರತಿಭಟನೆ ನಡೆದಿರುವ ವರದಿಯ ಕೆಲವು ಆನ್‌ಲೈನ್‌ ನ್ಯೂಸ್‌ಗಳು (ಇಲ್ಲಿ ಮತ್ತು ಇಲ್ಲಿ) ದೊರೆತಿವೆ. ಈ ಲೇಖನಗಳು ಪ್ರತಿಭಟನೆಗೆ ಸಂಬಂಧಿಸಿದ ಫೋಟೋಗಳನ್ನೂ ಪ್ರಕಟಿಸಿದ್ದು, ವೈರಲ್‌ ವಿಡಿಯೋದಲ್ಲಿ ಭಾರತದ ರಾಷ್ಟ್ರೀಯ ಧ್ವಜವನ್ನು ಸುಟ್ಟುಹಾಕಿದ ಅದೇ ಇಬ್ಬರು ಪ್ರತಿಭಟನಾಕಾರರನ್ನು ಈ ಚಿತ್ರಗಳಲ್ಲೂ ಕಾಣಬಹುದು.

ಕಳೆದ ತಿಂಗಳು ಮೋದಿಯವರು ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡುವ ಸಂದರ್ಭದಲ್ಲಿ ಈ ಮೇಲೆ ನಮೂದಿಸಲಾಗಿರುವ ಪ್ರತಿಭಟನೆಯ ನೇರಪ್ರಸಾರವನ್ನು ಯೂಟ್ಯೂಬ್‌ ಚಾನೆಲ್‌ವೊಂದು ಮಾಡಿದೆ. ವೈರಲ್‌ ಆಗಿರುವ ವಿಡಿಯೋದಲ್ಲಿರುವ ಇಬ್ಬರು ವ್ಯಕ್ತಿಗಳೇ ಈ ವಿಡಿಯೋದಲ್ಲೂ ಇರುವುದನ್ನು ಕಾಣಬಹುದು. ಅದಲ್ಲದೆ ವಿಶ್ವಸಂಸ್ಥೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವ ವೇಳೆ ಪ್ರತಿಭಟನೆ ನಡೆದಿರುವ ಕುರಿತು ಮುಖ್ಯವಾಹಿನಿ ಸುದ್ದಿ ಸಂಸ್ಥೆಗಳೂ (ಇಲ್ಲಿ ಮತ್ತು ಇಲ್ಲಿ) ವರದಿ ಮಾಡಿವೆ. ಇವೆಲ್ಲವುಗಳಿಂದ ತಿಳಿಯುವುದೇನೆಂದರೆ ಕಳೆದ ತಿಂಗಳು ಮೋದಿಯವರು ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡುವ ವೇಳೆ ಖಾಲಿಸ್ಥಾನಿ ಬೆಂಬಲಿಗರು ಪ್ರತಿಭಟಿಸಿರುವುದು ಈ ವಿಡಿಯೋದಲ್ಲಿ ಕಂಡು ಬರುತ್ತದೆ. ಭಾರತ ಅಥವಾ ಲಖಿಂಪುರ್‌ಖೇರಿ ಘಟನೆಗೂ ಇದು ಸಂಬಂಧಿಸಿದ್ದಲ್ಲ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಪ್ರಧಾನಿ ಮೋದಿಯವರ ವಿಶ್ವಸಂಸ್ಥೆಯ ಭಾಷಣದ ವೇಳೆ ಖಲಿಸ್ತಾನ್ ಬೆಂಬಲಿಗರು ನ್ಯೂಯಾರ್ಕ್‌ನ ವಿಶ್ವಸಂಸ್ಥೆಯ ಕಟ್ಟಡದ ಹೊರಗೆ ಭಾರತೀಯ ರಾಷ್ಟ್ರ ಧ್ವಜವನ್ನು ಹರಿದು ಹಾಕಿದ ವಿಡಿಯೋವನ್ನು ಲಖಿಂಪುರ್ ಖೇರಿ ಘಟನೆಗೆ ಆರೋಪಿಸಲಾಗಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಮಹಿಳೆಯರನ್ನು ಅವಮಾನಿಸಿಲ್ಲ, ಅರ್ಧ ಭಾಷಣ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...