Homeಚಳವಳಿಲಖಿಂಪುರ್ ಖೇರಿ ಹತ್ಯಾಕಾಂಡ: ಇಂದು ಸಚಿವ ಅಜಯ್ ಮಿಶ್ರಾ ಮಗನ ವಿಚಾರಣೆ, ಮಧ್ಯಾಹ್ನ ಎಸ್‌ಕೆಎಂನಿಂದ ಸುದ್ದಿಗೋಷ್ಠಿ

ಲಖಿಂಪುರ್ ಖೇರಿ ಹತ್ಯಾಕಾಂಡ: ಇಂದು ಸಚಿವ ಅಜಯ್ ಮಿಶ್ರಾ ಮಗನ ವಿಚಾರಣೆ, ಮಧ್ಯಾಹ್ನ ಎಸ್‌ಕೆಎಂನಿಂದ ಸುದ್ದಿಗೋಷ್ಠಿ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಮುಖ ಆರೋಪಿ ಅಜಯ್ ಮಿಶ್ರಾ ತೇನಿ ಅವರ ಮಗ ಆಶಿಶ್ ಮಿಶ್ರಾರನ್ನು ಯುಪಿ ಪೊಲೀಸರು ಇಂದು (ಅ.09) ವಿಚಾರಣೆಗೆ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರ ಮನೆಗೆ ಭಾರಿ ಭದ್ರತೆ ನೀಡಲಾಗಿದೆ.

ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ನಾಲ್ವರು ರೈತರು ಸೇರಿದಂತೆ 8 ಜನರು ಮೃತಪಟ್ಟಿದ್ದಾರೆ. 6 ದಿನಗಳಾದರೂ ಪ್ರಕರಣದ ಆರೋಪಿ ಅಶಿಶ್ ಮಿಶ್ರಾರನ್ನು ಬಂಧಿಸಿರದಿದ್ದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಶುಕ್ರವಾರವೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ, ಆಶಿಶ್ ಮೋನು ಮಿಶ್ರಾ ವಿಚಾರಣೆಗೆ ಹಾಜರಾಗಿರಲಿಲ್ಲ.

ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಲುವಕುಶ್ ಮತ್ತು ಆಶಿಶ್ ಪಾಂಡೆ ಎಂಬ ಇಬ್ಬರು ಆರೋಪಿಗಳನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಹತ್ಯಾಕಾಂಡದಲ್ಲಿ ಯುಪಿ ಪೊಲೀಸರು ಆಶಿಶ್ ಮಿಶ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ ಆದರೆ ಇದುವರೆಗೂ ಆತನನ್ನು ಬಂಧಿಸಿಲ್ಲ. ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ವಾಪಸ್ ತೆರಳುತ್ತಿದ್ದ ರೈತರ ಮೇಲೆ ಹರಿದ ಎಸ್‌ಯುವಿ ವಾಹನ ತನಗೆ ಸೇರಿದ್ದು ಎಂದು ಒಪ್ಪಿಕೊಂಡಿದ್ದರೂ, ವಾಹನದಲ್ಲಿ ತನ್ನ ಮಗ ಇರಲ್ಲಿಲ್ಲ ಎಂದು ಕೇಂದ್ರ ಸಚಿವರು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ರೈತರ ಹತ್ಯಾಕಾಂಡ: ಪರಿಹಾರ ನನ್ನ ಮಗನನ್ನು ವಾಪಸ್ ತರುವುದಿಲ್ಲ, ನಮಗೆ ನ್ಯಾಯ ಬೇಕು- ಮೃತರ ತಂದೆ

ಪ್ರಕರಣದಲ್ಲಿ ಸ್ವಯಂ ಪ್ರೇರಿತ ಕೇಸ್‌ ದಾಖಲಿಸಿಕೊಂಡಿರುವ ಸುಪ್ರೀಕೋರ್ಟ್, “ಉತ್ತರ ಪ್ರದೇಶ ಸರ್ಕಾರ ಸಾಕಷ್ಟು ಕೆಲಸ ಮಾಡಿಲ್ಲ” ಎಂದಿದೆ. “ಉತ್ತರ ಪ್ರದೇಶ ಸರ್ಕಾರ ಕೈಗೊಂಡಿರುವ ಕ್ರಮಗಳಿಂದ ನಾವು ತೃಪ್ತರಾಗಿಲ್ಲ. ಜವಾಬ್ದಾರಿಯುತ ಸರ್ಕಾರ ಹಾಗೂ ಪೊಲೀಸ್‌ ವ್ಯವಸ್ಥೆಯನ್ನು ನಾವು ನಿರೀಕ್ಷಿಸುತ್ತೇವೆ. ಬಂದೂಕನ್ನು ಬಳಸಿ ಕೊಲ್ಲಲಾಗಿದೆ ಎಂಬುದನ್ನು ಒಳಗೊಂಡಂತೆ ಈಗ ಕೇಳಿ ಬಂದಿರುವ ಆರೋಪಗಳು ತೀವ್ರ ಗಂಭೀರವಾಗಿವೆ” ಎಂದು ಸುಪ್ರೀಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಆತಂಕ ವ್ಯಕ್ತಪಡಿಸಿದ್ದಾರೆ.

“ಈ ರೀತಿ ಯಾವ ಸಂದೇಶವನ್ನು ನೀವು ಕಳುಹಿಸುತ್ತಿದ್ದೀರಿ? ಸಾಮಾನ್ಯ ಸಂದರ್ಭಗಳಲ್ಲಿ ಕೂಡ ಪೊಲೀಸರು ತಕ್ಷಣ ಹೋಗಿ ಆರೋಪಿಗಳನ್ನು ಬಂಧಿಸುವುದಿಲ್ಲ. ಇರಬೇಕಾದ ರೀತಿಯಲ್ಲಿ ಕೆಲಸಗಳು ಆಗುತ್ತಿಲ್ಲ. ಇದು ಕೇವಲ ಮಾತಿಗೆ ಸೀಮಿತವಾಗಿದೆ ಹೊರತು ಕ್ರಿಯೆಗಳಲ್ಲಿ ಕಂಡು ಬರುತ್ತಿಲ್ಲ” ಎಂದು ಉತ್ತರ ಪ್ರದೇಶ ಪೊಲೀಸರನ್ನು ಸಿಜೆಐ ತೀಕ್ಷ್ಣವಾಗಿ ಖಂಡಿಸಿದ್ದಾರೆ.

ಇತ್ತ, ಹತ್ಯಾಕಾಂಡ ಮತ್ತು ಮುಂದಿನ ಕ್ರಮಗಳ ಕುರಿತು ತೆಗೆದುಕೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಶನಿವಾರ ಮಧ್ಯಾಹ್ನ ದೆಹಲಿಯ ಪ್ರೆಸ್ ಕ್ಲಬ್ ಆಫ್ ಇಂಡಿಯಾದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾಗೋಷ್ಠಿ ಆಯೋಜಿಸಿದೆ.

ರೈತ ಮುಖಂಡರಾದ ದರ್ಶನ್ ಪಾಲ್, ಹನ್ನಾನ್ ಮೊಲ್ಲಾ, ಹರಪಾಲ್ ಬಿಲಾರಿ, ಜೋಗಿಂದರ್ ಉಗ್ರನ್, ರಾಕೇಶ್ ಟಿಕಾಯತ್‌, ಸುರೇಶ್ ಕೌತ್, ಯೋಗೇಂದ್ರ ಯಾದವ್ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.


ಇದನ್ನೂ ಓದಿ: ಸಾಕ್ಷಿಯಿಲ್ಲದೆ ಒತ್ತಡದಿಂದ ಯಾರ ಮೇಲೂ ಕ್ರಮ ಕೈಗೊಳ್ಳುವುದಿಲ್ಲ-ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...