ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ಕಡೆಗಳಿಂದ ಒತ್ತಡ ಹೆಚ್ಚಾದ ಕಾರಣದಿಂದಾಗ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ, ಶನಿವಾರ ಉತ್ತರ ಪ್ರದೇಶ ಪೊಲೀಸರ ಅಪರಾಧ ವಿಭಾಗದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಅಕ್ಟೋಬರ್ 03 ರಂದು (ಭಾನುವಾರ) ನಡೆದ ರೈತರ ಹತ್ಯಾಕಾಂಡ ಇಡೀ ದೇಶವನ್ನೇ ತಲ್ಲಣಗೊಳಿಸಿತ್ತು. ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ದೇಶದಾದ್ಯಂತ ಪ್ರತಿಭಟನೆ ನಡೆದಿತ್ತ. ಬಳಿಕ ಸೋಮವಾರ ಉತ್ತರ ಪ್ರದೇಶ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದರು.
ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರಿಗೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ ಬಹಿರಂಗ ಬೆದರಿಕೆ ಹಾಕಿದ್ದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರು, ಉತ್ತರ ಪ್ರದೇಶದ ಲಖಿಂಪುರ್ ಖೇರಿಯ ಹೆಲಿಪ್ಯಾಡ್ ಅನ್ನು ಆಕ್ರಮಿಸಿಕೊಂಡಿದ್ದರು. ಈ ವೇಳೆ ಪ್ರತಿಭಟನೆ ನಡೆಸಿ ವಾಪಸ್ ತೆರಳುತ್ತಿದ್ದ ರೈತರ ಮೇಲೆ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ರೈತರ ಮೇಳೆ ಕಾರು ಹರಿಸಿ ನಾಲ್ವರ ರೈತರ ಹತ್ಯೆಗೆ ಕಾರಣರಾಗಿದ್ದಾರೆ ಎಂದು ರೈತರು ಆರೋಪಿಸಿದ್ದರು.
ಇದನ್ನೂ ಓದಿ: ಸಾಕ್ಷಿಯಿಲ್ಲದೆ ಒತ್ತಡದಿಂದ ಯಾರ ಮೇಲೂ ಕ್ರಮ ಕೈಗೊಳ್ಳುವುದಿಲ್ಲ-ಯೋಗಿ ಆದಿತ್ಯನಾಥ್
#WATCH Son of MoS Home Ajay Mishra Teni, Ashish Mishra arrives at Crime Branch office, Lakhimpur
He was summoned by UP Police in connection with Lakhimpur violence. pic.twitter.com/g6wMpHYOKr
— ANI UP (@ANINewsUP) October 9, 2021
ರೈತರ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಆಶಿಶ್ ಮಿಶ್ರಾ ಮತ್ತು 15 ರಿಂದ 20 ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಕೊಲೆ, ಕ್ರಿಮಿನಲ್ ಪಿತೂರಿ ಮತ್ತು ಗಲಭೆ ಇತ್ಯಾದಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ಐದು ದಿನಗಳ ನಂತರವೂ ಆಶಿಶ್ನನ್ನು ಬಂಧಿಸದಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಯುಪಿ ಪೊಲೀಸರು ಗುರುವಾರ ಆಶಿಶ್ ಮಿಶ್ರಾಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಆದರೆ, ಆವರು ಹಾಜರಾಗಿರಲಿಲ್ಲ.
ನಂತರ ಪೊಲೀಸ್ ಅಧಿಕಾರಿಗಳು ಶುಕ್ರವಾರ ಎರಡನೇ ಬಾರಿ ಸಮನ್ಸ್ ನೀಡಿದ್ದರು. ಆರೋಪಿ ಆಶಿಶ್ ಲಖಿಂಪುರದಲ್ಲಿ ಶನಿವಾರ ಬೆಳಿಗ್ಗೆ 11 ಗಂಟೆಯೊಳಗೆ ವಿಚಾರಣೆಗಾಗಿ ಅಪರಾಧ ವಿಭಾಗದ ಮುಂದೆ ಹಾಜರುಪಡಿಸುವಂತೆ ಹೇಳಿದ್ದರು.
ಆಶಿಶ್ ನೇಪಾಳಕ್ಕೆ ಪರಾರಿಯಾಗಿದ್ದಾರೆ ಮತ್ತು ತಾನಿರುವ ಸ್ಥಳವನ್ನು ಪದೇ ಪದೇ ಬದಲಾಯಿಸುತ್ತಿದ್ದನೆಂಬ ಮಾಧ್ಯಮದ ವರದಿಗಳನ್ನು ನಿರಾಕರಿಸಿದ್ದ ಸಚಿವ ಅಜಯ್ ಮಿಶ್ರಾ, ತನ್ನ ಮಗ ಲಖಿಂಪುರದ ಮನೆಯಲ್ಲಿದ್ದಾನೆ. ಆತ ಶನಿವಾರ ಪೊಲೀಸರ ಮುಂದೆ ಹಾಜರಾಗುತ್ತಾನೆ ಎಂದು ಹೇಳಿದ್ದರು.
ಇನ್ನು, ಹತ್ಯಾಕಾಂಡ ಮತ್ತು ಮುಂದಿನ ಕ್ರಮಗಳ ಕುರಿತು ತೆಗೆದುಕೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಶನಿವಾರ ಮಧ್ಯಾಹ್ನ ದೆಹಲಿಯ ಪ್ರೆಸ್ ಕ್ಲಬ್ ಆಫ್ ಇಂಡಿಯಾದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾಗೋಷ್ಠಿ ಆಯೋಜಿಸಿದೆ.
ಇದನ್ನೂ ಓದಿ: ನಾವು ಕೂಡ ರೈತರು, ಪ್ರಿಯಾಂಕ, ರಾಹುಲ್ ಅವರನ್ನು ಸ್ವಾಗತಿಸುತ್ತೇವೆ: ಬಿಜೆಪಿ ಕಾರ್ಯಕರ್ತನ ಕುಟುಂಬ