Homeಕರ್ನಾಟಕಬದುಕು ಸಂಸ್ಥೆಯಿಂದ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್: ಅರ್ಜಿ ಕರೆ

ಬದುಕು ಸಂಸ್ಥೆಯಿಂದ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್: ಅರ್ಜಿ ಕರೆ

ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಅಂಚಿನಲ್ಲಿರುವವರು ಈ ಕ್ಷೇತ್ರಗಳಲ್ಲಿ ಇರಬೇಕೆಂಬುದು ಬದುಕು ಸಂಸ್ಥೆಯ ಉದ್ದೇಶ: ಮುರಳಿ ಮೋಹನ್‌ ಕಾಟಿ

- Advertisement -
- Advertisement -

ಬದುಕು ಸೆಂಟರ್‌ ಫಾರ್‌ ಲೈವ್ಲಿಹುಡ್ಸ್‌ ಲರ್ನಿಂಗ್ ಸಂಸ್ಥೆಯಿಂದ ಸಂವಹನ ಮತ್ತು ಪತ್ರಿಕೋದ್ಯಮ ವಿಷಯಕ್ಕೆ ಸಂಬಂಧಿಸಿದಂತೆ ‘ಕ್ರಿಯಾಶೀಲ ಮಾಧ್ಯಮ’ ಹೆಸರಲ್ಲಿ ಒಂದು ವರ್ಷದ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್ ನಡೆಸಲಾಗುತ್ತಿದ್ದು ಅರ್ಜಿ ಆಹ್ವಾನಿಸಲಾಗಿದೆ.

ವರದಿಗಾರಿಕೆ, ಸುದ್ದಿ ಸಂಪಾದನೆ, ಭಾಷಾಂತರದ ಜೊತೆಗೆ ಕಿರುತೆರೆ-ಹಿರಿತೆರೆಗಳಿವೆ ಸೃಜನಶೀಲ ಸ್ಕ್ರಿಪ್ಟ್‌ ಬರವಣಿಗೆಯ ಪ್ರಾಯೋಗಿಕ ಕಲಿಕೆ, ಕ್ಯಾಮೆರಾ ನಿರ್ವಹಣೆ, ವಿಡಿಯೊ ಎಡಿಟಿಂಗ್‌ (ಪ್ರಿಂಟ್‌ ವೆಬ್‌) ಬಗ್ಗೆ ಅನುಭವಿ ತಂತ್ರಜ್ಞರಿಂದ ತರಗತಿ, ಮೊಬೈಲ್ ಜರ್ನಲಿಸಂ, ವೆಬ್‌ಸೈಟ್‌, ಸೋಷಿಯಲ್ ಮೀಡಿಯಾ ಹ್ಯಾಂಡ್ಲಿಂಗ್‌, ಆನ್‌‌ಲೈನ್‌ ಜರ್ನಲಿಸಂನ ಆಧುನಿಕ ತಂತ್ರಜ್ಞಾನ ಕೌಶಲಗಳ ತರಬೇತಿ, ಇಂಗ್ಲಿಷ್ ಭಾಷೆ, ಭಾಷಾಂತರ ಕಲೆ, ಬರವಣಿಗೆ ಮುಂತಾದ ಕೌಶಲಗಳ ಕುರಿತು ಬೆಳಕು ಚೆಲ್ಲಲಾಗುವುದು, ಮಾಧ್ಯಮ ಸಂಸ್ಥೆಗಳು ಮತ್ತು ಮನೋರಂಜನ ಕ್ಷೇತ್ರದಲ್ಲಿ ಇಂಟರ್‌ಶಿಪ್‌, ಉದ್ಯೋಗವಕಾಶ ಕಲ್ಪಿಸಲಾಗುವುದು ಬದುಕು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಪತ್ರಿಕೆ, ಸುದ್ದಿವಾಹಿನಿ, ಮನರಂಜನಾ ವಾಹಿನಿ, ಸಿನಿಮಾ, ಡಿಜಿಟಲ್ ಮೀಡಿಯಾದಲ್ಲಿ ತೊಡಗಿಸಿಕೊಳ್ಳಲು ಬಯಸುವವರಿಗೆ ಈ ಕೋರ್ಸ್ ನಡೆಸಲಾಗುತ್ತಿದೆ. ಹೀಗಾಗಲೇ ಯುವತಿಯರ ಪ್ರವೇಶಾತಿ ನಡೆದಿರುವುದರಿಂದ ಕೆಲವೇ ಕೆಲವು ಯುವತಿಯರಿಗೆ ಮಾತ್ರ ಸೀಟುಗಳು ಲಭ್ಯವಿದೆ. ಅಭ್ಯರ್ಥಿಗಳ ಸಾಮಾಜಿಕ-ಆರ್ಥಿಕ ಹಿನ್ನೆಲೆಗೆ ಅನುಗುಣವಾಗಿ ತರಬೇತಿ ಶುಲ್ಕ, ಸೂಕ್ತ ಅಭ್ಯರ್ಥಿಗಳಿಗೆ ವಿಶೇಷ ಸ್ಕಾಲರ್‌ಶಿಪ್, ಫೆಲೋಶಿಪ್‌ಗಳಿಗೆ ಅವಕಾಶವಿದೆ. ಅಗತ್ಯವಿರುವವರಿಗೆ ಉಚಿತ ವಸತಿ ಸೌಕರ್ಯ ನೀಡಲಾಗುವುದು ಎಂದು ಸಂಸ್ಥೆ ಹೇಳಿದೆ.

ಇಂಗ್ಲಿಷ್‌ ಕಲಿಕೆ-ಬಳಕೆಯೊಂದಿಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಇರಲಿದೆ. ಗೂಗಲ್‌ ಫಾರ್ಮ್ ಮೂಲಕ ಅರ್ಜಿ ಸಲ್ಲಿಸಲು https://forms.gle/NmSpEjkQFpiY998ZA ಲಿಂಕ್‌‌ ಬಳಸಬಹುದು. ಸ್ವವಿವರ ಹಾಗೂ ಅರ್ಜಿಯನ್ನು [email protected]ಗೆ ಇಮೇಲ್‌ ಮಾಡಬಹುದು. ಕಚೇರಿ ವಿಳಾಸ: ಬದುಕು- ಎ ಸೆಂಟರ್‌ ಫಾರ್‌ ಲಿವ್ಲಿಹುಡ್ಸ್‌‌ ಲರ್ನಿಂಗ್ಸ್‌ #136/7, 2ನೇ ಅಡ್ಡರಸ್ತೆ, ಎಲಿಫ್ಯಾಂಟ್‌ ರಸ್ತೆ, ಸೌತ್‌ ಎಂಡ್‌ ಸರ್ಕಲ್, ಲೈಬ್ರರಿ ಹಿಂಭಾಗ, 3ನೇ ಬ್ಲಾಕ್‌, ಜಯನಗರ, ಬೆಂಗಳೂರು- 560011. ಹೆಚ್ಚಿನ ವಿವರಗಳಿಗೆ 9916376954, 9945065060, 99720 89471 ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್‌ 15 ಕೊನೆಯದಿನವಾಗಿದೆ ಎಂದು ತಿಳಿಸಿದೆ.

‘ನಾನುಗೌರಿ.ಕಾಮ್‌’ನೊಂದಿಗೆ ಮಾತನಾಡಿದ ಬದುಕು ಸಂಸ್ಥೆಯ ಪ್ರೋಗ್ರಾಮ್‌ ಕನ್ವಿನರ್‌ ಮುರಳಿ ಮೋಹನ್‌ ಕಾಟಿ, “ಸಮಾಜದಲ್ಲಿ ಪರಿಣಾಮ ಬೀರುವಂತಹ ಕೋರ್ಸ್‌‌ಗಳಲ್ಲಿ ಎಲ್ಲರನ್ನೂ ಒಳಗೊಳ್ಳುವ ಸ್ಥಿತಿ ಇಲ್ಲವಾಗಿದೆ. ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಅಂಚಿನಲ್ಲಿರುವವರು ಈ ಕ್ಷೇತ್ರಗಳಲ್ಲಿ ಇಲ್ಲ. ಅವರು ಕೂಡ ಈ ಕ್ಷೇತ್ರಗಳಲ್ಲಿ ಕಾಲಿಟ್ಟರೆ ಪರಿಣಾಮ ಬೇರೆಯದ್ದೇ ಆಗಿರುತ್ತದೆ ಎಂಬುದು ಬದುಕು ಸಂಸ್ಥೆಯ ಉದ್ದೇಶವಾಗಿತ್ತು. ಕಳೆದ ಹನ್ನೆರಡು ವರ್ಷಗಳಿಂದ ಬದುಕು ಸಂಸ್ಥೆಯು ಕೆಲಸ ಮಾಡುತ್ತಿದೆ” ಎಂದು ಹೇಳಿದರು.

“ಪತ್ರಿಕೋದ್ಯಮ, ಆಪ್ತಸಮಾಲೋಚನೆ, ವೃತ್ತಿಪರ ಮಾರ್ಗದರ್ಶನ, ತ್ಯಾಜ್ಯ ನಿರ್ವಹಣೆ, ಸುಸ್ಥಿರ ಕೃಷಿ, ಫಿಲ್ಮ್‌ ಮೇಕಿಂಗ್, ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೋರ್ಸ್‌ಗಳನ್ನು ನಡೆಸಲಾಗುತ್ತಿದೆ. ಪ್ರತಿವರ್ಷ ಪ್ರತಿ ಕೋರ್ಸ್‌ಗೆ ಇಪ್ಪತ್ತು ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತೇವೆ. ಕೃಷಿ ಸಂಬಂಧಿತ ಕೋರ್ಸ್ ತರಗತಿಗೆ ಸೀಮಿತವಾಗಿರುವುದಿಲ್ಲ. ತರಗತಿ ಕಲಿಕೆ ತುಂಬಾ ಕಡಿಮೆ ಇರುತ್ತದೆ. ರೈತರ ಹೊಲಗಳೇ ಕಲಿಕಾ ಕೇಂದ್ರಗಳಾಗಿರುತ್ತವೆ. ಯಶಸ್ವಿಯಾಗಿ ಸುಸ್ಥಿರ ಕೃಷಿ ಮಾಡುತ್ತಿರುವವರಲ್ಲಿಗೆ ಹೋಗಿ ಕಲಿಯಲಾಗುತ್ತದೆ. ಉಳಿದ ತರಗತಿಗಳು ತರಗತಿಯಲ್ಲಿ ನಡೆಯುತ್ತವೆ. ಊಟ, ವಸತಿ ಉಚಿತವಾಗಿ ನೀಡುತ್ತೇವೆ. ಕೋರ್ಸ್ ಶುಲ್ಕವು ಕೂಡ ಕಡಿಮೆ ಇರುತ್ತದೆ. ಅದರಲ್ಲೂ ತುಂಬಾ ಆರ್ಥಿಕವಾಗಿ ಹಿಂದುಳಿದ ಶೇ. 25 ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿ ನೀಡುತ್ತೇವೆ” ಎಂದರು.

“ನಾಲ್ಕು ತರಗತಿ ಕೊಠಡಿಗಳಿರುವ ತರಬೇತಿ ಕೇಂದ್ರ ಕಟ್ಟಿದ್ದೇವೆ. ಸ್ಥಳಾವಕಾಶದ ಕೊರತೆಯಿಂದಾಗಿ ಮೊದಲೆಲ್ಲ ಒಂದು ಕೋರ್ಸ್ ಮುಗಿದ ಬಳಿಕ ಮತ್ತೊಂದು ಕೋರ್ಸ್ ನಡೆಸುತ್ತಿದ್ದೆವು. ಈಗ ನಾಲ್ಕು ಕೋರ್ಸ್ ಒಟ್ಟಿಗೆ ನಡೆಯಲಿವೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿರಿ: ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...