Homeಕರ್ನಾಟಕಬದುಕು ಸಂಸ್ಥೆಯಿಂದ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್: ಅರ್ಜಿ ಕರೆ

ಬದುಕು ಸಂಸ್ಥೆಯಿಂದ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್: ಅರ್ಜಿ ಕರೆ

ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಅಂಚಿನಲ್ಲಿರುವವರು ಈ ಕ್ಷೇತ್ರಗಳಲ್ಲಿ ಇರಬೇಕೆಂಬುದು ಬದುಕು ಸಂಸ್ಥೆಯ ಉದ್ದೇಶ: ಮುರಳಿ ಮೋಹನ್‌ ಕಾಟಿ

- Advertisement -
- Advertisement -

ಬದುಕು ಸೆಂಟರ್‌ ಫಾರ್‌ ಲೈವ್ಲಿಹುಡ್ಸ್‌ ಲರ್ನಿಂಗ್ ಸಂಸ್ಥೆಯಿಂದ ಸಂವಹನ ಮತ್ತು ಪತ್ರಿಕೋದ್ಯಮ ವಿಷಯಕ್ಕೆ ಸಂಬಂಧಿಸಿದಂತೆ ‘ಕ್ರಿಯಾಶೀಲ ಮಾಧ್ಯಮ’ ಹೆಸರಲ್ಲಿ ಒಂದು ವರ್ಷದ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್ ನಡೆಸಲಾಗುತ್ತಿದ್ದು ಅರ್ಜಿ ಆಹ್ವಾನಿಸಲಾಗಿದೆ.

ವರದಿಗಾರಿಕೆ, ಸುದ್ದಿ ಸಂಪಾದನೆ, ಭಾಷಾಂತರದ ಜೊತೆಗೆ ಕಿರುತೆರೆ-ಹಿರಿತೆರೆಗಳಿವೆ ಸೃಜನಶೀಲ ಸ್ಕ್ರಿಪ್ಟ್‌ ಬರವಣಿಗೆಯ ಪ್ರಾಯೋಗಿಕ ಕಲಿಕೆ, ಕ್ಯಾಮೆರಾ ನಿರ್ವಹಣೆ, ವಿಡಿಯೊ ಎಡಿಟಿಂಗ್‌ (ಪ್ರಿಂಟ್‌ ವೆಬ್‌) ಬಗ್ಗೆ ಅನುಭವಿ ತಂತ್ರಜ್ಞರಿಂದ ತರಗತಿ, ಮೊಬೈಲ್ ಜರ್ನಲಿಸಂ, ವೆಬ್‌ಸೈಟ್‌, ಸೋಷಿಯಲ್ ಮೀಡಿಯಾ ಹ್ಯಾಂಡ್ಲಿಂಗ್‌, ಆನ್‌‌ಲೈನ್‌ ಜರ್ನಲಿಸಂನ ಆಧುನಿಕ ತಂತ್ರಜ್ಞಾನ ಕೌಶಲಗಳ ತರಬೇತಿ, ಇಂಗ್ಲಿಷ್ ಭಾಷೆ, ಭಾಷಾಂತರ ಕಲೆ, ಬರವಣಿಗೆ ಮುಂತಾದ ಕೌಶಲಗಳ ಕುರಿತು ಬೆಳಕು ಚೆಲ್ಲಲಾಗುವುದು, ಮಾಧ್ಯಮ ಸಂಸ್ಥೆಗಳು ಮತ್ತು ಮನೋರಂಜನ ಕ್ಷೇತ್ರದಲ್ಲಿ ಇಂಟರ್‌ಶಿಪ್‌, ಉದ್ಯೋಗವಕಾಶ ಕಲ್ಪಿಸಲಾಗುವುದು ಬದುಕು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಪತ್ರಿಕೆ, ಸುದ್ದಿವಾಹಿನಿ, ಮನರಂಜನಾ ವಾಹಿನಿ, ಸಿನಿಮಾ, ಡಿಜಿಟಲ್ ಮೀಡಿಯಾದಲ್ಲಿ ತೊಡಗಿಸಿಕೊಳ್ಳಲು ಬಯಸುವವರಿಗೆ ಈ ಕೋರ್ಸ್ ನಡೆಸಲಾಗುತ್ತಿದೆ. ಹೀಗಾಗಲೇ ಯುವತಿಯರ ಪ್ರವೇಶಾತಿ ನಡೆದಿರುವುದರಿಂದ ಕೆಲವೇ ಕೆಲವು ಯುವತಿಯರಿಗೆ ಮಾತ್ರ ಸೀಟುಗಳು ಲಭ್ಯವಿದೆ. ಅಭ್ಯರ್ಥಿಗಳ ಸಾಮಾಜಿಕ-ಆರ್ಥಿಕ ಹಿನ್ನೆಲೆಗೆ ಅನುಗುಣವಾಗಿ ತರಬೇತಿ ಶುಲ್ಕ, ಸೂಕ್ತ ಅಭ್ಯರ್ಥಿಗಳಿಗೆ ವಿಶೇಷ ಸ್ಕಾಲರ್‌ಶಿಪ್, ಫೆಲೋಶಿಪ್‌ಗಳಿಗೆ ಅವಕಾಶವಿದೆ. ಅಗತ್ಯವಿರುವವರಿಗೆ ಉಚಿತ ವಸತಿ ಸೌಕರ್ಯ ನೀಡಲಾಗುವುದು ಎಂದು ಸಂಸ್ಥೆ ಹೇಳಿದೆ.

ಇಂಗ್ಲಿಷ್‌ ಕಲಿಕೆ-ಬಳಕೆಯೊಂದಿಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಇರಲಿದೆ. ಗೂಗಲ್‌ ಫಾರ್ಮ್ ಮೂಲಕ ಅರ್ಜಿ ಸಲ್ಲಿಸಲು https://forms.gle/NmSpEjkQFpiY998ZA ಲಿಂಕ್‌‌ ಬಳಸಬಹುದು. ಸ್ವವಿವರ ಹಾಗೂ ಅರ್ಜಿಯನ್ನು [email protected]ಗೆ ಇಮೇಲ್‌ ಮಾಡಬಹುದು. ಕಚೇರಿ ವಿಳಾಸ: ಬದುಕು- ಎ ಸೆಂಟರ್‌ ಫಾರ್‌ ಲಿವ್ಲಿಹುಡ್ಸ್‌‌ ಲರ್ನಿಂಗ್ಸ್‌ #136/7, 2ನೇ ಅಡ್ಡರಸ್ತೆ, ಎಲಿಫ್ಯಾಂಟ್‌ ರಸ್ತೆ, ಸೌತ್‌ ಎಂಡ್‌ ಸರ್ಕಲ್, ಲೈಬ್ರರಿ ಹಿಂಭಾಗ, 3ನೇ ಬ್ಲಾಕ್‌, ಜಯನಗರ, ಬೆಂಗಳೂರು- 560011. ಹೆಚ್ಚಿನ ವಿವರಗಳಿಗೆ 9916376954, 9945065060, 99720 89471 ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್‌ 15 ಕೊನೆಯದಿನವಾಗಿದೆ ಎಂದು ತಿಳಿಸಿದೆ.

‘ನಾನುಗೌರಿ.ಕಾಮ್‌’ನೊಂದಿಗೆ ಮಾತನಾಡಿದ ಬದುಕು ಸಂಸ್ಥೆಯ ಪ್ರೋಗ್ರಾಮ್‌ ಕನ್ವಿನರ್‌ ಮುರಳಿ ಮೋಹನ್‌ ಕಾಟಿ, “ಸಮಾಜದಲ್ಲಿ ಪರಿಣಾಮ ಬೀರುವಂತಹ ಕೋರ್ಸ್‌‌ಗಳಲ್ಲಿ ಎಲ್ಲರನ್ನೂ ಒಳಗೊಳ್ಳುವ ಸ್ಥಿತಿ ಇಲ್ಲವಾಗಿದೆ. ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಅಂಚಿನಲ್ಲಿರುವವರು ಈ ಕ್ಷೇತ್ರಗಳಲ್ಲಿ ಇಲ್ಲ. ಅವರು ಕೂಡ ಈ ಕ್ಷೇತ್ರಗಳಲ್ಲಿ ಕಾಲಿಟ್ಟರೆ ಪರಿಣಾಮ ಬೇರೆಯದ್ದೇ ಆಗಿರುತ್ತದೆ ಎಂಬುದು ಬದುಕು ಸಂಸ್ಥೆಯ ಉದ್ದೇಶವಾಗಿತ್ತು. ಕಳೆದ ಹನ್ನೆರಡು ವರ್ಷಗಳಿಂದ ಬದುಕು ಸಂಸ್ಥೆಯು ಕೆಲಸ ಮಾಡುತ್ತಿದೆ” ಎಂದು ಹೇಳಿದರು.

“ಪತ್ರಿಕೋದ್ಯಮ, ಆಪ್ತಸಮಾಲೋಚನೆ, ವೃತ್ತಿಪರ ಮಾರ್ಗದರ್ಶನ, ತ್ಯಾಜ್ಯ ನಿರ್ವಹಣೆ, ಸುಸ್ಥಿರ ಕೃಷಿ, ಫಿಲ್ಮ್‌ ಮೇಕಿಂಗ್, ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೋರ್ಸ್‌ಗಳನ್ನು ನಡೆಸಲಾಗುತ್ತಿದೆ. ಪ್ರತಿವರ್ಷ ಪ್ರತಿ ಕೋರ್ಸ್‌ಗೆ ಇಪ್ಪತ್ತು ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತೇವೆ. ಕೃಷಿ ಸಂಬಂಧಿತ ಕೋರ್ಸ್ ತರಗತಿಗೆ ಸೀಮಿತವಾಗಿರುವುದಿಲ್ಲ. ತರಗತಿ ಕಲಿಕೆ ತುಂಬಾ ಕಡಿಮೆ ಇರುತ್ತದೆ. ರೈತರ ಹೊಲಗಳೇ ಕಲಿಕಾ ಕೇಂದ್ರಗಳಾಗಿರುತ್ತವೆ. ಯಶಸ್ವಿಯಾಗಿ ಸುಸ್ಥಿರ ಕೃಷಿ ಮಾಡುತ್ತಿರುವವರಲ್ಲಿಗೆ ಹೋಗಿ ಕಲಿಯಲಾಗುತ್ತದೆ. ಉಳಿದ ತರಗತಿಗಳು ತರಗತಿಯಲ್ಲಿ ನಡೆಯುತ್ತವೆ. ಊಟ, ವಸತಿ ಉಚಿತವಾಗಿ ನೀಡುತ್ತೇವೆ. ಕೋರ್ಸ್ ಶುಲ್ಕವು ಕೂಡ ಕಡಿಮೆ ಇರುತ್ತದೆ. ಅದರಲ್ಲೂ ತುಂಬಾ ಆರ್ಥಿಕವಾಗಿ ಹಿಂದುಳಿದ ಶೇ. 25 ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿ ನೀಡುತ್ತೇವೆ” ಎಂದರು.

“ನಾಲ್ಕು ತರಗತಿ ಕೊಠಡಿಗಳಿರುವ ತರಬೇತಿ ಕೇಂದ್ರ ಕಟ್ಟಿದ್ದೇವೆ. ಸ್ಥಳಾವಕಾಶದ ಕೊರತೆಯಿಂದಾಗಿ ಮೊದಲೆಲ್ಲ ಒಂದು ಕೋರ್ಸ್ ಮುಗಿದ ಬಳಿಕ ಮತ್ತೊಂದು ಕೋರ್ಸ್ ನಡೆಸುತ್ತಿದ್ದೆವು. ಈಗ ನಾಲ್ಕು ಕೋರ್ಸ್ ಒಟ್ಟಿಗೆ ನಡೆಯಲಿವೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿರಿ: ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...