Homeಕರ್ನಾಟಕಬದುಕು ಸಂಸ್ಥೆಯಿಂದ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್: ಅರ್ಜಿ ಕರೆ

ಬದುಕು ಸಂಸ್ಥೆಯಿಂದ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್: ಅರ್ಜಿ ಕರೆ

ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಅಂಚಿನಲ್ಲಿರುವವರು ಈ ಕ್ಷೇತ್ರಗಳಲ್ಲಿ ಇರಬೇಕೆಂಬುದು ಬದುಕು ಸಂಸ್ಥೆಯ ಉದ್ದೇಶ: ಮುರಳಿ ಮೋಹನ್‌ ಕಾಟಿ

- Advertisement -
- Advertisement -

ಬದುಕು ಸೆಂಟರ್‌ ಫಾರ್‌ ಲೈವ್ಲಿಹುಡ್ಸ್‌ ಲರ್ನಿಂಗ್ ಸಂಸ್ಥೆಯಿಂದ ಸಂವಹನ ಮತ್ತು ಪತ್ರಿಕೋದ್ಯಮ ವಿಷಯಕ್ಕೆ ಸಂಬಂಧಿಸಿದಂತೆ ‘ಕ್ರಿಯಾಶೀಲ ಮಾಧ್ಯಮ’ ಹೆಸರಲ್ಲಿ ಒಂದು ವರ್ಷದ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್ ನಡೆಸಲಾಗುತ್ತಿದ್ದು ಅರ್ಜಿ ಆಹ್ವಾನಿಸಲಾಗಿದೆ.

ವರದಿಗಾರಿಕೆ, ಸುದ್ದಿ ಸಂಪಾದನೆ, ಭಾಷಾಂತರದ ಜೊತೆಗೆ ಕಿರುತೆರೆ-ಹಿರಿತೆರೆಗಳಿವೆ ಸೃಜನಶೀಲ ಸ್ಕ್ರಿಪ್ಟ್‌ ಬರವಣಿಗೆಯ ಪ್ರಾಯೋಗಿಕ ಕಲಿಕೆ, ಕ್ಯಾಮೆರಾ ನಿರ್ವಹಣೆ, ವಿಡಿಯೊ ಎಡಿಟಿಂಗ್‌ (ಪ್ರಿಂಟ್‌ ವೆಬ್‌) ಬಗ್ಗೆ ಅನುಭವಿ ತಂತ್ರಜ್ಞರಿಂದ ತರಗತಿ, ಮೊಬೈಲ್ ಜರ್ನಲಿಸಂ, ವೆಬ್‌ಸೈಟ್‌, ಸೋಷಿಯಲ್ ಮೀಡಿಯಾ ಹ್ಯಾಂಡ್ಲಿಂಗ್‌, ಆನ್‌‌ಲೈನ್‌ ಜರ್ನಲಿಸಂನ ಆಧುನಿಕ ತಂತ್ರಜ್ಞಾನ ಕೌಶಲಗಳ ತರಬೇತಿ, ಇಂಗ್ಲಿಷ್ ಭಾಷೆ, ಭಾಷಾಂತರ ಕಲೆ, ಬರವಣಿಗೆ ಮುಂತಾದ ಕೌಶಲಗಳ ಕುರಿತು ಬೆಳಕು ಚೆಲ್ಲಲಾಗುವುದು, ಮಾಧ್ಯಮ ಸಂಸ್ಥೆಗಳು ಮತ್ತು ಮನೋರಂಜನ ಕ್ಷೇತ್ರದಲ್ಲಿ ಇಂಟರ್‌ಶಿಪ್‌, ಉದ್ಯೋಗವಕಾಶ ಕಲ್ಪಿಸಲಾಗುವುದು ಬದುಕು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಪತ್ರಿಕೆ, ಸುದ್ದಿವಾಹಿನಿ, ಮನರಂಜನಾ ವಾಹಿನಿ, ಸಿನಿಮಾ, ಡಿಜಿಟಲ್ ಮೀಡಿಯಾದಲ್ಲಿ ತೊಡಗಿಸಿಕೊಳ್ಳಲು ಬಯಸುವವರಿಗೆ ಈ ಕೋರ್ಸ್ ನಡೆಸಲಾಗುತ್ತಿದೆ. ಹೀಗಾಗಲೇ ಯುವತಿಯರ ಪ್ರವೇಶಾತಿ ನಡೆದಿರುವುದರಿಂದ ಕೆಲವೇ ಕೆಲವು ಯುವತಿಯರಿಗೆ ಮಾತ್ರ ಸೀಟುಗಳು ಲಭ್ಯವಿದೆ. ಅಭ್ಯರ್ಥಿಗಳ ಸಾಮಾಜಿಕ-ಆರ್ಥಿಕ ಹಿನ್ನೆಲೆಗೆ ಅನುಗುಣವಾಗಿ ತರಬೇತಿ ಶುಲ್ಕ, ಸೂಕ್ತ ಅಭ್ಯರ್ಥಿಗಳಿಗೆ ವಿಶೇಷ ಸ್ಕಾಲರ್‌ಶಿಪ್, ಫೆಲೋಶಿಪ್‌ಗಳಿಗೆ ಅವಕಾಶವಿದೆ. ಅಗತ್ಯವಿರುವವರಿಗೆ ಉಚಿತ ವಸತಿ ಸೌಕರ್ಯ ನೀಡಲಾಗುವುದು ಎಂದು ಸಂಸ್ಥೆ ಹೇಳಿದೆ.

ಇಂಗ್ಲಿಷ್‌ ಕಲಿಕೆ-ಬಳಕೆಯೊಂದಿಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಇರಲಿದೆ. ಗೂಗಲ್‌ ಫಾರ್ಮ್ ಮೂಲಕ ಅರ್ಜಿ ಸಲ್ಲಿಸಲು https://forms.gle/NmSpEjkQFpiY998ZA ಲಿಂಕ್‌‌ ಬಳಸಬಹುದು. ಸ್ವವಿವರ ಹಾಗೂ ಅರ್ಜಿಯನ್ನು [email protected]ಗೆ ಇಮೇಲ್‌ ಮಾಡಬಹುದು. ಕಚೇರಿ ವಿಳಾಸ: ಬದುಕು- ಎ ಸೆಂಟರ್‌ ಫಾರ್‌ ಲಿವ್ಲಿಹುಡ್ಸ್‌‌ ಲರ್ನಿಂಗ್ಸ್‌ #136/7, 2ನೇ ಅಡ್ಡರಸ್ತೆ, ಎಲಿಫ್ಯಾಂಟ್‌ ರಸ್ತೆ, ಸೌತ್‌ ಎಂಡ್‌ ಸರ್ಕಲ್, ಲೈಬ್ರರಿ ಹಿಂಭಾಗ, 3ನೇ ಬ್ಲಾಕ್‌, ಜಯನಗರ, ಬೆಂಗಳೂರು- 560011. ಹೆಚ್ಚಿನ ವಿವರಗಳಿಗೆ 9916376954, 9945065060, 99720 89471 ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್‌ 15 ಕೊನೆಯದಿನವಾಗಿದೆ ಎಂದು ತಿಳಿಸಿದೆ.

‘ನಾನುಗೌರಿ.ಕಾಮ್‌’ನೊಂದಿಗೆ ಮಾತನಾಡಿದ ಬದುಕು ಸಂಸ್ಥೆಯ ಪ್ರೋಗ್ರಾಮ್‌ ಕನ್ವಿನರ್‌ ಮುರಳಿ ಮೋಹನ್‌ ಕಾಟಿ, “ಸಮಾಜದಲ್ಲಿ ಪರಿಣಾಮ ಬೀರುವಂತಹ ಕೋರ್ಸ್‌‌ಗಳಲ್ಲಿ ಎಲ್ಲರನ್ನೂ ಒಳಗೊಳ್ಳುವ ಸ್ಥಿತಿ ಇಲ್ಲವಾಗಿದೆ. ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಅಂಚಿನಲ್ಲಿರುವವರು ಈ ಕ್ಷೇತ್ರಗಳಲ್ಲಿ ಇಲ್ಲ. ಅವರು ಕೂಡ ಈ ಕ್ಷೇತ್ರಗಳಲ್ಲಿ ಕಾಲಿಟ್ಟರೆ ಪರಿಣಾಮ ಬೇರೆಯದ್ದೇ ಆಗಿರುತ್ತದೆ ಎಂಬುದು ಬದುಕು ಸಂಸ್ಥೆಯ ಉದ್ದೇಶವಾಗಿತ್ತು. ಕಳೆದ ಹನ್ನೆರಡು ವರ್ಷಗಳಿಂದ ಬದುಕು ಸಂಸ್ಥೆಯು ಕೆಲಸ ಮಾಡುತ್ತಿದೆ” ಎಂದು ಹೇಳಿದರು.

“ಪತ್ರಿಕೋದ್ಯಮ, ಆಪ್ತಸಮಾಲೋಚನೆ, ವೃತ್ತಿಪರ ಮಾರ್ಗದರ್ಶನ, ತ್ಯಾಜ್ಯ ನಿರ್ವಹಣೆ, ಸುಸ್ಥಿರ ಕೃಷಿ, ಫಿಲ್ಮ್‌ ಮೇಕಿಂಗ್, ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೋರ್ಸ್‌ಗಳನ್ನು ನಡೆಸಲಾಗುತ್ತಿದೆ. ಪ್ರತಿವರ್ಷ ಪ್ರತಿ ಕೋರ್ಸ್‌ಗೆ ಇಪ್ಪತ್ತು ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತೇವೆ. ಕೃಷಿ ಸಂಬಂಧಿತ ಕೋರ್ಸ್ ತರಗತಿಗೆ ಸೀಮಿತವಾಗಿರುವುದಿಲ್ಲ. ತರಗತಿ ಕಲಿಕೆ ತುಂಬಾ ಕಡಿಮೆ ಇರುತ್ತದೆ. ರೈತರ ಹೊಲಗಳೇ ಕಲಿಕಾ ಕೇಂದ್ರಗಳಾಗಿರುತ್ತವೆ. ಯಶಸ್ವಿಯಾಗಿ ಸುಸ್ಥಿರ ಕೃಷಿ ಮಾಡುತ್ತಿರುವವರಲ್ಲಿಗೆ ಹೋಗಿ ಕಲಿಯಲಾಗುತ್ತದೆ. ಉಳಿದ ತರಗತಿಗಳು ತರಗತಿಯಲ್ಲಿ ನಡೆಯುತ್ತವೆ. ಊಟ, ವಸತಿ ಉಚಿತವಾಗಿ ನೀಡುತ್ತೇವೆ. ಕೋರ್ಸ್ ಶುಲ್ಕವು ಕೂಡ ಕಡಿಮೆ ಇರುತ್ತದೆ. ಅದರಲ್ಲೂ ತುಂಬಾ ಆರ್ಥಿಕವಾಗಿ ಹಿಂದುಳಿದ ಶೇ. 25 ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿ ನೀಡುತ್ತೇವೆ” ಎಂದರು.

“ನಾಲ್ಕು ತರಗತಿ ಕೊಠಡಿಗಳಿರುವ ತರಬೇತಿ ಕೇಂದ್ರ ಕಟ್ಟಿದ್ದೇವೆ. ಸ್ಥಳಾವಕಾಶದ ಕೊರತೆಯಿಂದಾಗಿ ಮೊದಲೆಲ್ಲ ಒಂದು ಕೋರ್ಸ್ ಮುಗಿದ ಬಳಿಕ ಮತ್ತೊಂದು ಕೋರ್ಸ್ ನಡೆಸುತ್ತಿದ್ದೆವು. ಈಗ ನಾಲ್ಕು ಕೋರ್ಸ್ ಒಟ್ಟಿಗೆ ನಡೆಯಲಿವೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿರಿ: ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...