Homeಕರ್ನಾಟಕ‘ತೋಂಟದ ಶ್ರೀ ಪ್ರಶಸ್ತಿಯ 5 ಲಕ್ಷ ರೂ.ಗಳನ್ನೂ ಸಂವಿಧಾನ ಓದು ಅಭಿಯಾನಕ್ಕೆ ಬಳಸುವೆ’

‘ತೋಂಟದ ಶ್ರೀ ಪ್ರಶಸ್ತಿಯ 5 ಲಕ್ಷ ರೂ.ಗಳನ್ನೂ ಸಂವಿಧಾನ ಓದು ಅಭಿಯಾನಕ್ಕೆ ಬಳಸುವೆ’

ನಮ್ಮ ಜಾತಿಯವರನ್ನು ಎಂಎಲ್‌ಎ, ಎಂ.ಪಿ., ಮುಖ್ಯಮಂತ್ರಿ ಮಾಡಿ, ಮುಖ್ಯಮಂತ್ರಿಯನ್ನು ಕೆಳಗೆ ಇಳಿಸಬೇಡಿ ಎಂದು ಸ್ವಾಮೀಜಿಗಳು ಫರ್ಮಾನು ಹೊರಡಿಸುತ್ತಿರುವ ದಿನಗಳಿವು. ಆದರೆ ತೋಂಟದ ಸಿದ್ಧಲಿಂಗ ಸ್ವಾಮೀಜಿ ವಚನಗಳನ್ನು ಪಾಲಿಸಿ, ಅದರಂತೆ ನಡೆದ ಮಹಾತ್ಮ: ಜಸ್ಟೀಸ್ ದಾಸ್‌

- Advertisement -
- Advertisement -

“ಗದುಗಿನ ತೋಂಟದ ಸಿದ್ದಲಿಂಗ ಸ್ವಾಮೀಜಿ ಅವರ ಹೆಸರಿನಲ್ಲಿ ನೀಡಲಾಗುತ್ತಿರುವ ರಾಷ್ಟ್ರೀಯ ಪ್ರಶಸ್ತಿಯ ಹಣವನ್ನು ಸಂವಿಧಾನ ಓದು ಅಭಿಯಾನಕ್ಕೆ ಬಳಸುವೆ” ಎಂದು ಜಸ್ಟೀಸ್‌ ಎಚ್.ಎನ್‌.ನಾಗಮೋಹನ ದಾಸ್‌ ತಿಳಿಸಿದರು.

ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ’ನಾನು ಗೌರಿ.ಕಾಮ್‌’ನೊಂದಿಗೆ ಮಾತನಾಡಿದ ಅವರು, “ಕೆಲವು ವ್ಯಕ್ತಿಗಳಿಗೆ ಪ್ರಶಸ್ತಿ ನೀಡುವುದರಿಂದ ಪ್ರಶಸ್ತಿಯ ಗೌರವ ಹೆಚ್ಚಾಲಿದೆ. ಕೆಲವರಿಗೆ ಕೆಲವು ಪ್ರಶಸ್ತಿಗಳನ್ನು ನೀಡುವುದರಿಂದ ವ್ಯಕ್ತಿಗಳ ಗೌರವ ಹೆಚ್ಚಾಗುತ್ತದೆ. ನನ್ನಂಥ ಸಾಧಾರಣ ನ್ಯಾಯಾಧೀಶನನ್ನು ಗುರುತಿಸಿ, ಈ ಪ್ರಶಸ್ತಿಯನ್ನು ನೀಡುತ್ತಿರುವುದು ನನ್ನ ಪಾಲಿಗೆ ಮಹತ್ತರವಾದ ದಿನ. ಇದಕ್ಕಿಂತ ಹೆಚ್ಚು ನಾನು ಆಪೇಕ್ಷಿಸುವುದೂ ಇಲ್ಲ. ಈ ಪ್ರಶಸ್ತಿಯಿಂದಾಗಿ ನನ್ನ ಜವಾಬ್ದಾರಿಯೂ ಹೆಚ್ಚಾಗಿದೆ. ಕಾಯಕ ಚಳವಳಿಯ ಸಂದೇಶವನ್ನು, ವಚನ ಚಳವಳಿಯ ಸಂದೇಶವನ್ನು ಇನ್ನೂ ಹೆಚ್ಚು ಜನರಿಗೆ ತಲುಪಿಸುವ ಕೆಲಸವನ್ನು ನಾನು ಮಾಡಬೇಕಾಗಿದೆ” ಎಂದು ಹೇಳಿದರು.

“ಇಂದು ಎಂತಹ ಪರಿಸ್ಥಿತಿ ಇದೆ ಎಂದರೆ ಬಸವಣ್ಣನವರ ಫೋಟೋ ಹಾಕಿಕೊಂಡು ವಚನ ಹೇಳುತ್ತಾರೆ. ಆದರೆ ವಚನ ಸಂದೇಶ ಪಾಲಿಸುವುದಿಲ್ಲ. ಜನಹಿತಕ್ಕೆ ಶರಣಾಗಬೇಕಾದವರು, ಜಾತಿಹಿತಕ್ಕೆ ಶರಣಾಗಿ ಹೋದರು. ನಮ್ಮ ಜಾತಿಯವರನ್ನು ಎಂಎಲ್‌ಎ, ಎಂ.ಪಿ., ಮುಖ್ಯಮಂತ್ರಿ ಮಾಡಿ, ಮುಖ್ಯಮಂತ್ರಿಯನ್ನು ಕೆಳಗೆ ಇಳಿಸಬೇಡಿ, ನಮ್ಮ ಫರ್ಮಾನುಗಳಿಗೆ ನೀವು ಗೌರವ ಕೊಡದಿದ್ದರೆ ನಿಮಗೆ ಬುದ್ಧಿ ಕಲಿಸುತ್ತೇವೆ. ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ ಎಂದು ಧಮ್ಕಿ ಹಾಕುವ ಪರಿಸ್ಥಿತಿ ಈಗ ಇದೆ. ಯಾವ ಸ್ವಾಮೀಜಿಗಳ ಬಗ್ಗೆ ಗೌರವ ಇಟ್ಟುಕೊಂಡು, ನಂಬಿಕೆ ಇಟ್ಟುಕೊಂಡು ಮಹಾತ್ಮರು ಎಂದು ತಿಳಿದುಕೊಂಡಿದ್ದೆವೆಯೋ ಅಂತಹ ಸ್ವಾಮೀಜಿಗಳು ನಮ್ಮನ್ನು ನಿರಾಶೆಗೊಳಿಸಿದರು. ಏಕೆ ಹೀಗೆ ಸ್ವಾಮೀಜಿಗಳು ನಡೆದುಕೊಳ್ಳುತ್ತಿದ್ದಾರೆ ಎಂದು ತುಂಬಾ ನೊಂದಿಕೊಂಡಿದ್ದೆ. ಅಂತಹ ಸನ್ನಿವೇಶದಲ್ಲಿ ವಚನಗಳನ್ನು ಓದಿಕೊಂಡು ಅರ್ಥಮಾಡಿಕೊಂಡು ಅದರಂತೆ ಬದುಕಿ ಮಾದರಿಯಾದಂತಹ ಒಬ್ಬ ದಾರ್ಶನಿಕ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಅವರ ಹೆಸರಿನ ಪ್ರಶಸ್ತಿ ಬಂದಿರುವುದು ನನ್ನ ಸೌಭಾಗ್ಯ” ಎಂದು ಸಂತಸ ವ್ಯಕ್ತಪಡಿಸಿದರು.

“ಅಡ್ಡಪಲ್ಲಕ್ಕಿಯನ್ನು ತೊರೆದು, ಪಾದಪೂಜೆಯನ್ನು ನಿರಾಕರಿಸಿದ ಸಿದ್ಧಲಿಂಗ ಸ್ವಾಮೀಜಿ, ಇಡೀ ಮಠ ಸಂಸ್ಕೃತಿಗೆ ಹೊಸ ತೋರಣ ಕಟ್ಟಿದವರು; ಅದಕ್ಕೆ ಹೊಸ ತಾತ್ಪರ್ಯವನ್ನು ಬರೆದವರು. ಮಠಾಧೀಶರ ಮಡಿವಂತಿಕೆಯನ್ನು ದೂರ ಸರಿಸಿ ಎಲ್ಲ ಜಾತಿಯ, ಧರ್ಮದ ಜನರ ಹತ್ತಿರವಾಗಿ ಸಾಮಾನ್ಯರಲ್ಲಿ, ಸಾಮಾನ್ಯರಾಗಿ ಬಾಳಿದರು. ಕನ್ನಡಪರ ಕೆಲಸ, ಗಡಿ ಕೆಲಸ, ನಾಡಿನ ಪರಿಸರ ಸಂರಕ್ಷಣೆಯ ಕೆಲಸ ಮಾಡಿದರು. ಭ್ರಷ್ಟಾಚಾರದ ವಿರುದ್ಧ, ಕೋಮುವಾದದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿದರು. ಎಲ್ಲ ಧರ್ಮದ ಜನರ ನಡುವೆ ಭಾವೈಕ್ಯತೆಯನ್ನು ಬೆಳೆಸಿದರು. ಅಂತಹ ಮಹಾನ್‌ ಚಿಂತಕ, ಕ್ರಾಂತಿಕಾರಿ ಎಂದರೆ ತೋಂಟದ ಸಿದ್ಧಲಿಂಗ ಸ್ವಾಮೀಜಿ. ಅಂತಹ ಮಹಾತ್ಮರ ಹೆಸರಲ್ಲಿ ನನಗೆ ಪ್ರಶಸ್ತಿ ಬಂದಿರುವುದಕ್ಕಿಂತ ಸಂತೋಷದ ಸಂಗತಿ ಮತ್ತೊಂದಿಲ್ಲ. ಈ ಪ್ರಶಸ್ತಿಯ ಹಣವನ್ನು ಸತ್ಕಾರ್ಯಕ್ಕೆ ಬಳಸಲು ನಿರ್ಧರಿಸಿದ್ದೇನೆ. ಈ ಹಣವನ್ನು ಸಂವಿಧಾನ ಓದು ಅಭಿಯಾನಕ್ಕೆ ಬಳಸಲು ತೀರ್ಮಾನಿಸಿದ್ದೇನೆ” ಎಂದರು.

 ಇದನ್ನೂ ಓದಿರಿ: ಕರ್ನಾಟಕದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ ಸ್ವೀಕಾರಾರ್ಹವೇ?

“ನನಗೆ ಬರುವ ಪಿಂಚಣಿ ಹಣವೇ ಜೀವನಕ್ಕೆ ಸಾಕು” ಎನ್ನುವ ಜಸ್ಟೀಸ್‌ ನಾಗಮೋಹನ ದಾಸ್ ಅವರು ಇದುವರೆಗೂ ಬಂದಿರುವ ಪ್ರಶಸ್ತಿಗಳ ಹಣವನ್ನು ಸಾಮಾಜಿಕ ಕೆಲಸಗಳಿಗೆ ವಿನಿಯೋಗಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ, ಬೀದರ್‌ನ ಬಸವ ಪ್ರಶಸ್ತಿ, ಮುರುಘಾ ಮಠದ ಜಯದೇವ ಪ್ರಶಸ್ತಿ, ಮಂಡ್ಯದ ಮಾದೇಗೌಡರ ಪ್ರಶಸ್ತಿ… ಹೀಗೆ ಬಂದ ಅನೇಕ  ಪ್ರಶಸ್ತಿಗಳ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ಅವರು ಈ ಹಿಂದೆಯೂ ಬಳಸಿದ್ದಾರೆ.

“ಸಂವಿಧಾನ ಓದು ಅಭಿಯಾನ ಹೇಗೆ ನಡೆಯುತ್ತಿದೆ?” ಎಂದು ಅವರಲ್ಲಿ ಕೇಳಿದಾಗ, “ಸಂವಿಧಾನ ಓದು ಅಭಿಯಾನವನ್ನು ನಿರಂತರವಾಗಿ ಮೂರು ವರ್ಷಗಳಿಂದ ನಡೆಸಲಾಗುತ್ತಿದೆ. ಕೊರೊನಾ ಇದ್ದರೂ ಚಿಂತಿಸದೆ ಆ‌ನ್‌ಲೈನ್‌ ಮೂಲಕ ಅಭಿಯಾನವನ್ನು ನಡೆಸಿದ್ದೇವೆ. ಪ್ರತಿ ತಿಂಗಳು ಸುಮಾರು 20 ಕಾರ್ಯಕ್ರಮ ನಡೆಸಲಾಗಿದೆ. ಈಗಲೂ ಆನ್‌ಲೈನ್‌ನಲ್ಲಿ ಕಾರ್ಯಕ್ರಮ ಮುಂದುವರಿದಿದೆ. ಕೊರೊನಾ ಕಡಿಮೆಯಾಗಿರುವುದರಿಂದ ಆಹ್ವಾನ ಬಂದಿವೆ. ಹೋಗಲು ಆರಂಭಿಸಿದ್ದೇನೆ. ‘ಸಂವಿಧಾನ ಓದು’ ಕೃತಿಯ ಸುಮಾರು 2 ಲಕ್ಷ ಪ್ರತಿಗಳು ಮಾರಾಟವಾಗಿವೆ. ಈ ಕೃತಿ ಇಂಗ್ಲಿಷ್‌, ಹಿಂದಿಗೆ ಭಾಷಾಂತರವಾಗಿದೆ. ಮಲಯಾಳಂಗೂ ತರ್ಜುಮೆಯಾಗಿದ್ದು, ಬಿಡುಗಡೆಯಾಗಬೇಕಿದೆ. ರಾಜ್ಯದ  ಎಲ್ಲ ಜಿಲ್ಲೆಗಳಲ್ಲೂ ಕಾರ್ಯಕ್ರಮ ನಡೆದಿದ್ದು, ವಿದ್ಯಾರ್ಥಿ ಯುವಜನರು ಕಾರ್ಯಕ್ರಮ ಕೇಳಿದ್ದಾರೆ. ಎಲ್ಲ ಜನವರ್ಗವೂ ಈ ಕಾರ್ಯಕ್ರಮಗಳನ್ನು ನಡೆಸಬೇಕೆಂದು ಕೇಳಿಕೊಳ್ಳುತ್ತಿದೆ. ಮಠಗಳಲ್ಲಿ ಕಾರ್ಯಕ್ರಮವನ್ನು ನಡೆಸಲಾಗಿದೆ. ಹೀಗೆ ಸಂವಿಧಾನ ಓದು ಅಭಿಯಾನ ಮುಂದುವರಿದಿದೆ” ಎಂದರು.

ಸಮಸಮಾಜದ ನಿರ್ಮಾಣಕ್ಕಾಗಿ ಜೀವನವಿಡೀ ಸೇವೆ ಸಲ್ಲಿಸಿದ ಗದುಗಿನ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿಯವರ ಮೂರನೇ ವರ್ಷದ ಸ್ಮರಣೆ ಅಂಗವಾಗಿ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಪ್ರಶಸ್ತಿ ಪ್ರದಾನ, ಸಂಮಾನ ಗ್ರಂಥಗಳ ಬಿಡುಗಡೆ ಸಮಾರಂಭವನ್ನು ಅಕ್ಟೋಬರ್‌ 16ರಂದು ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್‌ 16ರಂದು ಗದಗದ ತೋಂಟದ ಸಿದ್ಧಲಿಂಗ ಸ್ವಾಮೀಜಿ ಶಿವಾನುಭವ ಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಪ್ರಶಸ್ತಿ ಫಲಕದೊಂದಿಗೆ 5 ಲಕ್ಷ ರೂ. ನಗದು ಪುರಸ್ಕಾರವನ್ನು ಜಸ್ಟೀಸ್‌ ನಾಗಮೋಹನ ದಾಸ್‌ ಅವರಿಗೆ ನೀಡಲಾಗುತ್ತಿದೆ.

ಇದನ್ನೂ ಓದಿರಿ: ತೋಂಟದ ಸಿದ್ಧಲಿಂಗಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಜಸ್ಟೀಸ್‌ ನಾಗಮೋಹನ ದಾಸ್‌‌ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Shubhavagali,
    Justice sahebarige prashasti needirudarinda bahala santoshavaagide,
    Avara ” samvidhana vodu chaluvali” bagge bahala aasakti moodide , ei mahattara chaluvaliya bhaaga vaagi deshada seve maadalichesuttene eidara bagge maahiti kodabekendu kelikolluttene.

  2. Shubhavagali,
    Justice sahebarige prashasti needirudarinda bahala santoshavaagide,
    Avara ” samvidhana vodu abhiyana” bagge bahala aasakti moodide , ei mahattara abhiyaanada bhaaga vaagi deshada seve maadalichesuttene eidara bagge maahiti kodabekendu kelikolluttene.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...