Homeಚಳವಳಿಲಖಿಂಪುರ್‌‌ ಪ್ರಕರಣ ವಿಳಂಬಕ್ಕೆ ವಿರೋಧ ಪಕ್ಷಗಳನ್ನು ದೂರಿದ ಯುಪಿ ಎಡಿಜಿ?

ಲಖಿಂಪುರ್‌‌ ಪ್ರಕರಣ ವಿಳಂಬಕ್ಕೆ ವಿರೋಧ ಪಕ್ಷಗಳನ್ನು ದೂರಿದ ಯುಪಿ ಎಡಿಜಿ?

- Advertisement -
- Advertisement -

“ಲಖಿಂಪುರ್‌ ಖೇರಿ ರೈತರ ಹತ್ಯೆಯ ಪ್ರಮುಖ ಆರೋಪಿ ಆಶೀಶ್‌ ಮಿಶ್ರಾ (ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ) ಬಂಧನಕ್ಕೆ ಒತ್ತಾಯ ಕೇಳಿಬಂದಿದ್ದು, ಆಶೀಶ್‌‌ ಮಿಶ್ರಾ ಶನಿವಾರ ವಿಚಾರಣೆಗೆ ಹಾಜರಾಗಿದ್ದರು.

ಸುಪ್ರೀಂ ಕೋರ್ಟ್ ಕೂಡ ಆರೋಪಿಗಳ ಬಂಧನಕ್ಕೆ ವಿಳಂಬ ಯಾಕೆ ಆಗುತ್ತಿದೆ ಎಂದು ಎರಡು ಬಾರಿ ಎಚ್ಚರಿಸಿದೆ. ಆದರೂ ಪ್ರಕರಣವನ್ನು ವಿಳಂಬ ಮಾಡುತ್ತಿರುವ ಉತ್ತರ ಪ್ರದೇಶದ ಪೊಲೀಸರು, “ವಿಳಂಬಕ್ಕೆ ಮತ್ತೊಂದು ಕಾರಣವನ್ನು ಶೋಧಿಸಿದ್ದಾರೆ.”

“ಮರಣೋತ್ತರ ಪರೀಕ್ಷೆ, ಶವಸಂಸ್ಕಾರದಲ್ಲಿ ಭಾಗಿಯಾದ್ದರಿಂದ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿರಲಿಲ್ಲ” ಎಂದು ಪೊಲೀಸರು ಈ ಮೊದಲು ಹೇಳಿದ್ದರು. ಆದಾಗ್ಯೂ ವಿಳಂಬ ಆಗುತ್ತಿರುವುದು ಏತಕ್ಕೆ ಎಂದು ಕೇಳಿದರೆ ಉತ್ತರ ಪ್ರದೇಶದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಮತ್ತೊಂದು ಕಾರಣವನ್ನು ಹೇಳಿದ್ದಾರೆ. “ವಿವಿಐಪಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರಿಂದ ನಮ್ಮ ಸಮಯ ವ್ಯರ್ಥವಾಗಿದೆ” ಎಂದು ಎಡಿಜಿ ಪ್ರಶಾಂತ್‌ಕುಮಾರ್‌ ತಿಳಿಸಿರುವುದಾಗಿ ‘ದಿ ವೈರ್‌’ ಸುದ್ದಿಜಾಲತಾಣ ವಿಶೇಷ ವರದಿ ಮಾಡಿದೆ.

ಉತ್ತರ ಪ್ರದೇಶದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಅತ್ಯುನ್ನತ ಸ್ಥಾನದಲ್ಲಿ ಕುಳಿತಿರುವ ಪ್ರಶಾಂತ್‌ಕುಮಾರ್‌‌ ದಿ ವೈರ್‌ನೊಂದಿಗೆ ಮಾತನಾಡುತ್ತಾ, “ಲಖಿಂಪುರ್‌ ಘಟನೆಯ ನಂತರ ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಯುಪಿ ಪೊಲೀಸರು ತಮ್ಮ ಕೈಲಾದಷ್ಟು ಕೆಲಸ ಮಾಡಿದ್ದಾರೆ. ರಾಜಕೀಯ ಮೈಲೇಜ್‌‌ ಪಡೆಯಲು ಬಂದ ಪಕ್ಷಗಳು ಹಾಗೂ ವಿವಿಐಪಿಗಳ ಭೇಟಿಯಿಂದಾಗಿ ಸಮಯ ವ್ಯರ್ಥವಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್

ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ಕಡೆಗಳಿಂದ ಒತ್ತಡ ಹೆಚ್ಚಾದ ಕಾರಣದಿಂದಾಗ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ, ಶನಿವಾರ ಉತ್ತರ ಪ್ರದೇಶ ಪೊಲೀಸರ ಅಪರಾಧ ವಿಭಾಗದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಅಕ್ಟೋಬರ್‌ 03 ರಂದು (ಭಾನುವಾರ) ನಡೆದ ರೈತರ ಹತ್ಯಾಕಾಂಡ ಇಡೀ ದೇಶವನ್ನೇ ತಲ್ಲಣಗೊಳಿಸಿತ್ತು. ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ದೇಶದಾದ್ಯಂತ ಪ್ರತಿಭಟನೆ ನಡೆದಿತ್ತ. ಬಳಿಕ ಸೋಮವಾರ ಉತ್ತರ ಪ್ರದೇಶ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದರು.

ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರಿಗೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ ಬಹಿರಂಗ ಬೆದರಿಕೆ ಹಾಕಿದ್ದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರು, ಉತ್ತರ ಪ್ರದೇಶದ ಲಖಿಂಪುರ್ ಖೇರಿಯ ಹೆಲಿಪ್ಯಾಡ್ ಅನ್ನು ಆಕ್ರಮಿಸಿಕೊಂಡಿದ್ದರು. ಈ ವೇಳೆ ಪ್ರತಿಭಟನೆ ನಡೆಸಿ ವಾಪಸ್ ತೆರಳುತ್ತಿದ್ದ ರೈತರ ಮೇಲೆ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ರೈತರ ಮೇಳೆ ಕಾರು ಹರಿಸಿ ನಾಲ್ವರ ರೈತರ ಹತ್ಯೆಗೆ ಕಾರಣರಾಗಿದ್ದಾರೆ ಎಂದು ರೈತರು ಆರೋಪಿಸಿದ್ದರು.

ರೈತರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಆಶಿಶ್ ಮಿಶ್ರಾ ಮತ್ತು 15 ರಿಂದ 20 ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಕೊಲೆ, ಕ್ರಿಮಿನಲ್ ಪಿತೂರಿ ಮತ್ತು ಗಲಭೆ ಇತ್ಯಾದಿ ಪ್ರಕರಣಗಳನ್ನು ದಾಖಲಿಸಲಾಗಿದೆ.

ಐದು ದಿನಗಳ ನಂತರವೂ ಆಶಿಶ್‌ನನ್ನು ಬಂಧಿಸದಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಯುಪಿ ಪೊಲೀಸರು ಗುರುವಾರ ಆಶಿಶ್ ಮಿಶ್ರಾಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಆದರೆ, ಆವರು ಹಾಜರಾಗಿರಲಿಲ್ಲ.

ನಂತರ ಪೊಲೀಸ್ ಅಧಿಕಾರಿಗಳು ಶುಕ್ರವಾರ ಎರಡನೇ ಬಾರಿ ಸಮನ್ಸ್ ನೀಡಿದ್ದರು. ಆರೋಪಿ ಆಶಿಶ್ ಲಖಿಂಪುರದಲ್ಲಿ ಶನಿವಾರ ಬೆಳಿಗ್ಗೆ 11 ಗಂಟೆಯೊಳಗೆ ವಿಚಾರಣೆಗಾಗಿ ಅಪರಾಧ ವಿಭಾಗದ ಮುಂದೆ ಹಾಜರುಪಡಿಸುವಂತೆ ಹೇಳಿದ್ದರು.

ಆಶಿಶ್ ನೇಪಾಳಕ್ಕೆ ಪರಾರಿಯಾಗಿದ್ದಾರೆ ಮತ್ತು ತಾನಿರುವ ಸ್ಥಳವನ್ನು ಪದೇ ಪದೇ ಬದಲಾಯಿಸುತ್ತಿದ್ದನೆಂಬ ಮಾಧ್ಯಮದ ವರದಿಗಳನ್ನು ನಿರಾಕರಿಸಿದ್ದ ಸಚಿವ ಅಜಯ್ ಮಿಶ್ರಾ, ತನ್ನ ಮಗ ಲಖಿಂಪುರದ ಮನೆಯಲ್ಲಿದ್ದಾನೆ. ಆತ ಶನಿವಾರ ಪೊಲೀಸರ ಮುಂದೆ ಹಾಜರಾಗುತ್ತಾನೆ ಎಂದು ಹೇಳಿದ್ದರು.

ಇದನ್ನೂ ಓದಿರಿ: ನಾವು ಕೂಡ ರೈತರು, ಪ್ರಿಯಾಂಕ, ರಾಹುಲ್ ಅವರನ್ನು ಸ್ವಾಗತಿಸುತ್ತೇವೆ: ಬಿಜೆಪಿ ಕಾರ್ಯಕರ್ತನ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...