Homeಚಳವಳಿಲಖಿಂಪುರ್‌ಖೇರಿ: ಆಶೀಶ್‌ ಮಿಶ್ರಾ ಅರೆಸ್ಟ್‌, ವಿಚಾರಣೆಗೆ ಸಹಕರಿಸಿಲ್ಲ ಎಂದ ಪೊಲೀಸರು!

ಲಖಿಂಪುರ್‌ಖೇರಿ: ಆಶೀಶ್‌ ಮಿಶ್ರಾ ಅರೆಸ್ಟ್‌, ವಿಚಾರಣೆಗೆ ಸಹಕರಿಸಿಲ್ಲ ಎಂದ ಪೊಲೀಸರು!

ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ, ರೈತರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಆಶೀಶ್‌ನನ್ನು ಶನಿವಾರ 12 ಗಂಟೆಗಳ ವಿಚಾರಣೆ ನಡೆಸಿದ ಬಳಿಕ ಪೊಲೀಸರು ಬಂಧಿಸಿದ್ದು, ಆತ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ, ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಉನ್ನತ ಮೂಲಗಳು ಹೇಳಿವೆ.

- Advertisement -
- Advertisement -

ಉತ್ತರಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತರ ಮೇಲೆ ವಾಹನ ಚಲಾಯಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಆಶೀಶ್‌ ಮಿಶ್ರಾ (ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ) ಅವರನ್ನು ಶನಿವಾರ 12 ಗಂಟೆಗಳ ವಿಚಾರಣೆ ನಡೆಸಿದ ಬಳಿಕ ಬಂಧಿಸಿದ್ದು, “ಆತ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ, ವಿಚಾರಣೆಗೆ ಸಹಕರಿಸುತ್ತಿಲ್ಲ” ಎಂದು ಪೊಲೀಸರು ಹೇಳಿದ್ದಾರೆ.

ಕೊಲೆ ಪ್ರಕರಣದಲ್ಲಿ ಆಶೀಶ್‌ ಮಿಶ್ರಾ ಹೆಸರು ದಾಖಲಾದ ಐದು ದಿನಗಳ ಬಳಿಕ ಆತನನ್ನು ಬಂಧಿಸಲಾಗಿದೆ. ಕೊಲೆ ಆರೋಪಿಗಳನ್ನು ಸಾಮಾನ್ಯವಾಗಿ ತಕ್ಷಣ ಬಂಧಿಸಲಾಗುತ್ತದೆ. ಆದರೆ ಆಶೀಶ್‌ನ ತಂದೆ ಸಚಿವನಾದ ಕಾರಣಕ್ಕೆ ಇಷ್ಟು ದಿನವಾದರೂ ಬಂಧನವಾಗಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು. ಸುಪ್ರೀಂ ಕೋರ್ಟ್‌ ‘ಏಕೆ ಇನ್ನೂ ಆರೋಪಿಯನ್ನು ಬಂಧಿಸಿಲ್ಲ’ ಎಂದು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತ್ತು.

ಆಶೀಶ್‌ ಮಿಶ್ರಾ

“ಕಳೆದ ಭಾನುವಾರ ನಡೆದ ಘಟನೆಯ ವೇಳೆ ಸಚಿವರ ಮಗ ಸ್ಥಳದಲ್ಲಿ ಇದ್ದ ಕುರಿತು ಹಲವು ಅಂಶಗಳನ್ನು ವಿವರಿಸಲು ಸಾಧ್ಯವಾಗಿಲ್ಲ. ಆತ ಅಂದು ಮಧ್ಯಾಹ್ನ 2ರಿಂದ 4 ಗಂಟೆಗಳ ನಡುವೆ ಘಟನಾ ಸ್ಥಳದಲ್ಲಿ ಇದ್ದ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಆತನ ಫೋನ್ ಸಿಗ್ನಲ್‌ ಕೂಡ ಘಟನಾ ಸ್ಥಳದ ಹತ್ತಿರಕ್ಕೆ ತೋರಿಸಿದೆ. ರೈತರನ್ನು ಮೇಲೆ ಹತ್ತಿದ ಎಸ್‌ಯುವಿ ಚಾಲನೆ ಕುರಿತು ಆತ ಹೇಳುತ್ತಿರುವ ವಿವರಣೆಗಳು ಹೊಂದಿಕೆಯಾಗುತ್ತಿಲ್ಲ” ಎಂದು ಉತ್ತರ ಪ್ರದೇಶ ಪೊಲೀಸ್‌ ಉತ್ನತ ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿರಿ: ರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್

ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಪ್ರಕರಣದಲ್ಲಿ ಸಾವನ್ನಪ್ಪಿದ್ದಾರೆ. “ಉತ್ತರ ಪ್ರದೇಶ ಸರ್ಕಾರ ಸಾಕಷ್ಟು ಕೆಲಸ ಮಾಡಿಲ್ಲ” ಎಂದು ಸುಪ್ರೀಂಕೋರ್ಟ್ ಹೇಳಿತ್ತು. “ಉತ್ತರ ಪ್ರದೇಶ ಸರ್ಕಾರ ಕೈಗೊಂಡಿರುವ ಕ್ರಮಗಳಿಂದ ನಾವು ತೃಪ್ತರಾಗಿಲ್ಲ. ಜವಾಬ್ದಾರಿಯುತ ಸರ್ಕಾರ ಹಾಗೂ ಪೊಲೀಸ್‌ ವ್ಯವಸ್ಥೆಯನ್ನು ನಾವು ನಿರೀಕ್ಷಿಸುತ್ತೇವೆ. ಬಂದೂಕನ್ನು ಬಳಸಿ ಕೊಲ್ಲಲಾಗಿದೆ ಎಂಬುದನ್ನು ಒಳಗೊಂಡಂತೆ ಈಗ ಕೇಳಿ ಬಂದಿರುವ ಆರೋಪಗಳು ತೀವ್ರ ಗಂಭೀರವಾಗಿವೆ” ಎಂದು ಸುಪ್ರೀಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಆತಂಕ ವ್ಯಕ್ತಪಡಿಸಿದ್ದರು.

“ಯಾವ ಸಂದೇಶವನ್ನು ನೀವು ಕಳುಹಿಸುತ್ತಿದ್ದೀರಿ? ಸಾಮಾನ್ಯ ಸಂದರ್ಭಗಳಲ್ಲಿ ಕೂಡ ಪೊಲೀಸರು ತಕ್ಷಣ ಹೋಗಿ ಆರೋಪಿಗಳನ್ನು ಬಂಧಿಸುವುದಿಲ್ಲ. ಇರಬೇಕಾದ ರೀತಿಯಲ್ಲಿ ಕೆಲಸಗಳು ಆಗುತ್ತಿಲ್ಲ. ಇದು ಕೇವಲ ಮಾತಿಗೆ ಸೀಮಿತವಾಗಿದೆ ಹೊರತು ಕ್ರಿಯೆಗಳಲ್ಲಿ ಕಂಡು ಬರುತ್ತಿಲ್ಲ” ಎಂದು ಸಿಜೆಐ ತೀಕ್ಷ್ಣವಾಗಿ ಖಂಡಿಸಿದ್ದರು.

ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮೇಲೆ ಲವ್‌ಖುಷ್‌ ಹಾಗೂ ಆಶೀಶ್‌ ಪಾಂಡೆ ಎಂಬ ಆರೋಪಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದರು. ಇದರ ನಡುವೆ ಪ್ರಕರಣದ ವಿಳಂಬದಿಂದಾಗಿ ಉತ್ತರ ಪ್ರದೇಶ ಸರ್ಕಾರ ತೀವ್ರ ಟೀಕೆಗೆ ಒಳಗಾಗಿತ್ತು. “ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣದಲ್ಲಿ ಯಾವುದೇ ಒತ್ತಡದಿಂದ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಸಾಕ್ಷಿ ಸಿಕ್ಕ ಬಳಿಕ ಕ್ರಮ ಕೈಗೊಳ್ಳುತ್ತೇವೆ” ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದರು.

“ಕಾನೂನು ಪ್ರತಿಯೊಬ್ಬರಿಗೂ ಭದ್ರತೆ ನೀಡುವ ಭರವಸೆ ನೀಡುವಾಗ, ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ. ಅವರು ಯಾರೇ ಆಗಿರಲಿ ಕಾನೂನು ಕೈಗೆ ತೆಗೆದುಕೊಳ್ಳುವ ಅಗತ್ಯವಿಲ್ಲ” ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿರಿ: ಲಖಿಂಪುರ್‌‌ ಪ್ರಕರಣ ವಿಳಂಬಕ್ಕೆ ವಿರೋಧ ಪಕ್ಷಗಳನ್ನು ದೂರಿದ ಯುಪಿ ಎಡಿಜಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗೇಂದ್ರ ರಾಜೀನಾಮೆ: ಬಡಿಗೆ ಕೊಟ್ಟು ಹೊಡೆಸಿಕೊಂಡಂತಾಯ್ತು ಕಾಂಗ್ರೆಸ್ ಪರಿಸ್ಥಿತಿ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ 136 ಸ್ಥಾನಗಳ ಅಭೂತಪೂರ್ವ ಬಹುಮತಕ್ಕೆ ಪ್ರಮುಖ ಕಾರಣ '40% ಸರ್ಕಾರ' ಮತ್ತು 'ಪೇ ಸಿಎಂ' ಅಭಿಯಾನಗಳು. ಬಿಜೆಪಿಯ ಭ್ರಷ್ಟಾಚಾರವನ್ನು ಅಸ್ತ್ರವಾಗಿಸಿಕೊಂಡು ಆಡಳಿತ ಹಿಡಿದ ಕಾಂಗ್ರೆಸ್‌ಗೆ,...

SIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್‌ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು ಅಲೆಯಬೇಕೇ ?

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇದೀಗ ಲಕ್ಷಾಂತರ ನಾಗರಿಕರನ್ನು ಅತಂತ್ರ ಸ್ಥಿತಿಗೆ ತಳ್ಳಿದೆ.ಚುನಾವಣಾ ಆಯೋಗವು ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ ಸುಮಾರು 1.08...

ದಿಮಾಗಿ ನಕ್ಸಲ್: ರೈತ, ವಿದ್ಯಾರ್ಥಿ ಹೋರಾಟಗಳೂ ದೇಶದ್ರೋಹವೇ? RSS ಪತ್ರಿಕೆಯ ವಿವಾದಾತ್ಮಕ ಪ್ರತಿಪಾದನೆ

ಶಿಕ್ಷಣ, ಆರೋಗ್ಯ ಮತ್ತು ಒಟ್ಟಾರೆ ಅಭಿವೃದ್ಧಿ ಮಾದರಿಗೆ ತೀವ್ರ ಸ್ವರೂಪದ ಸುಧಾರಣೆಗಳ ಅಗತ್ಯವಿದೆ. ಆದರೆ ಈ ಸಮಸ್ಯೆಗಳು ಕಳೆದ ಹನ್ನೆರಡು ವರ್ಷಗಳಲ್ಲಿ ಹುಟ್ಟಿಕೊಂಡಿದ್ದಲ್ಲ ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳಿಗಷ್ಟೇ ಸೀಮಿತವಾಗಿಲ್ಲ. ಹಿಂದುತ್ವವನ್ನು ದಮನಕಾರಿ...

ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ...

‘ಆರ್‌ಎಸ್‌ಎಸ್-ಬಿಜೆಪಿಯ ರಕ್ತನಾಳಗಳಲ್ಲಿ ತಾರತಮ್ಯ ಹರಿಯುತ್ತಿದೆ’: ಖರ್ಗೆ ರ್ಯಾಲಿ ಸ್ಥಳದ ‘ಶುದ್ಧೀಕರಣ’ ಸಮರ್ಥಿಸಿಕೊಂಡ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ಕಾಂಗ್ರೆಸ್ ಕಿಡಿ

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಸ್ಥಳೀಯ ‘ಶುದ್ಧೀಕರಣ’ ಸಮಾರಂಭದ ಸುತ್ತಲಿನ ರಾಜಕೀಯ ವಿವಾದವು ತೀವ್ರ ಸ್ವರೂಪ...

ಯುಜಿಸಿಇಟಿ ಸೀಟು ರದ್ದುಗೊಳಿಸಲು ರೂ.5,000 ಶುಲ್ಕ; ಕೆಇಎ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಯುಜಿಸಿಇಟಿ 2026ರ ಎರಡನೇ ಹಂತದ ಕೌನ್ಸಿಲಿಂಗ್‌ನಲ್ಲಿ ಹಂಚಿಕೆಯಾದ ಸೀಟುಗಳನ್ನು ರದ್ದುಗೊಳಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ರೂ.5,000 ದಂಡ ವಿಧಿಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಮಲ್ಲೇಶ್ವರದಲ್ಲಿರುವ ಕೆಇಎ...

162 ವರ್ಷಗಳ ಇತಿಹಾಸದಲ್ಲೇ ಪ್ರಥಮ: ಬಾಂಬೆ ಹೈಕೋರ್ಟ್ ವಕೀಲರ ಸಂಘಕ್ಕೆ ಮಹಿಳಾ ಅಧ್ಯಕ್ಷೆ! 

ಮುಂಬೈ: ಭಾರತೀಯ ನ್ಯಾಯಾಂಗ ರಂಗದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಮತ್ತು ಕ್ರಾಂತಿಕಾರಿ ನಿರ್ಧಾರವೊಂದನ್ನು ಬಾಂಬೆ ಹೈಕೋರ್ಟ್‌ನ ಪ್ರತಿಷ್ಠಿತ ವಕೀಲರ ಸಂಘಟನೆಯಾದ 'ಅಸೋಸಿಯೇಷನ್‌ ಆಫ್‌ ಅಡ್ವೊಕೇಟ್ಸ್‌ ಆಫ್‌ ವೆಸ್ಟರ್ನ್ ಇಂಡಿಯಾ' (AAWI) ಕೈಗೊಂಡಿದೆ ಎಂದು...

ಫ್ರೀಡಂ ಪಾರ್ಕ್‌: ಧರಣಿಗೆ 1 ಲಕ್ಷ ರೂ. ಶುಲ್ಕ? ಜಿಬಿಎ ನಡೆಗೆ ಹೋರಾಟಗಾರರ ಆಕ್ರೋಶ

ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಾಗೂ ಧರಣಿ ನಡೆಸಲು ದಿನಕ್ಕೆ 1 ಲಕ್ಷ ರೂ. ಶುಲ್ಕ ಮತ್ತು 10,000 ರೂ. ಮುಂಗಡ ಠೇವಣಿ ವಿಧಿಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕ ಹಾಗೂ ಹೋರಾಟಗಾರರ...

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...