Homeಮುಖಪುಟಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಋತುರಾಜ್‌ ನೇಮಕ

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಋತುರಾಜ್‌ ನೇಮಕ

- Advertisement -
- Advertisement -

ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ಋತುರಾಜ್ ಅವಸ್ಥಿ ನೇಮಕವಾಗಿದ್ದಾರೆ. ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಅವರನ್ನು ಕರ್ನಾಟಕಕ್ಕೆ ವರ್ಗಾಯಿಸಿ, ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ.

1960ರಲ್ಲಿ ಜನಿಸಿರುವ ಋತುರಾಜ್‌ ಅವರು, ಲಖನೌ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿದ್ದು, ನ್ಯಾಯಾಂಗದಲ್ಲಿ ಸುದೀರ್ಘ ಸೇವೆ ಮಾಡಿದ್ದಾರೆ. 1987ರಲ್ಲಿ ವಕೀಲ ವೃತ್ತಿ ಆರಂಭಿಸಿ, ಸಹಾಯಕ ಸಾಲಿಸಿಟರ್ ಜನರಲ್ ಆಗಿ ಸೇವೆ ಸಲ್ಲಿಸಿದ್ದಾರೆ. 2009ರ ಏಪ್ರಿಲ್‌ 13ರಂದು ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠದ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು. 2010ರ ಡಿಸೆಂಬರ್ 24ರಂದು ಖಾಯಂ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಇದನ್ನೂ ಓದಿರಿ: ನ್ಯಾಯಾಂಗದಲ್ಲಿ ಶೇ. 50 ಮಹಿಳಾ ಮೀಸಲಾತಿಗೆ ಸಿಜೆಐ ಕರೆ

ಏಳು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ನೇಮಕ ಹಾಗೂ ಐದು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಅರವಿಂದ ಕುಮಾರ್ ಅವರನ್ನು ಗುಜರಾತ್ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನಾಗಿ ಹಾಗೂ ಹಿಮಾಚಲ ಪ್ರದೇಶ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲ್ಲಿಸುತ್ತಿದ್ದ ಆರ್.ವಿ. ಮಳಿಮಠ ಅವರನ್ನು ಮಧ್ಯಪ್ರದೇಶ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಿರುವುದಾಗಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಸತೀಶಚಂದ್ರ ಶರ್ಮಾ ಅವರನ್ನು ತೆಲಂಗಾಣ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನಾಗಿ, ಕಲ್ಕತ್ತಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರನ್ನು ಅಲಹಾಬಾದ್ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾಯಿಸಲಾಗಿದೆ.

ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಕೊಲಿಜಿಯಂ, ಸೆಪ್ಟೆಂಬರ್‌ನಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಶಿಫಾರಸ್ಸು ಮಾಡಿತ್ತು. ನೇಮಕಾತಿ ವಿಳಂಬವೂ ಆಗಿದೆ. ಈ ಕುರಿತು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಆಕ್ಷೇಪಗಳೂ ವ್ಯಕ್ತವಾಗಿವೆ.

12 ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳ ನೇಮಕಾತಿಗಾಗಿ ಕೊಲಿಜಿಯಂ ನೀಡಿರುವ ಶಿಫಾರಸ್ಸಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಉನ್ನತ ಮೂಲಗಳು ಈ ಹಿಂದೆಯೇ ಆರೋಪಿಸಿವೆ.

ಒಟ್ಟು 68 ನ್ಯಾಯಮೂರ್ತಿಗಳ ನೇಮಕ ಮಾಡುವಂತೆ ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಶಿಫಾರಸ್ಸು ಮಾಡಿದ್ದು, ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಟೀಕೆಗಳು ವ್ಯಕ್ತವಾಗಿರುವುದು ಈಗಾಗಲೇ ವರದಿಯಾಗಿದೆ. ಆಗಸ್ಟ್‌ 25ರಿಂದ ಸೆಪ್ಟೆಂಬರ್ 1ರವರೆಗೆ ನಡೆದ ಕೊಲಿಜಿಯಂ ಪರಿಶೀಲನೆಯ ಮುಂದೆ 112 ಮಂದಿಯ ಹೆಸರುಗಳಿದ್ದವು. ಶಿಫಾರಸ್ಸು ಮಾಡಲಾಗಿರುವ 68 ಹೆಸರುಗಳಲ್ಲಿ 44 ನ್ಯಾಯಾವಾದಿ ಹಿನ್ನೆಲೆಯವರಾಗಿದ್ದು, 24 ಮಂದಿ ನ್ಯಾಯಾಂಗದ ಸೇವೆಯ ಹಿನ್ನೆಲೆಯವರಾಗಿದ್ದಾರೆ.

ಈ ಹಿಂದೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕೊಲಿಜಿಯಂ ಶಿಫಾರಸು ಮಾಡಿದ್ದ ಎಲ್ಲ ಹೆಸರುಗಳಿಗೆ ಕೇಂದ್ರ ಸರ್ಕಾರ ತ್ವರಿತವಾಗಿ ಅನುಮೋದನೆ ನೀಡಿತ್ತು. ಆಗಸ್ಟ್‌ 31ರಂದು ಮೂವರು ಮಹಿಳೆಯರು ಸೇರಿದಂತೆ 9 ಮಂದಿ ನ್ಯಾಯಮೂರ್ತಿಗಳು ಪ್ರಮಾಣ ವಚನ ಸ್ವೀಕರಿಸಿದ್ದರು. ಹೈಕೋರ್ಟ್‌ಗಳಲ್ಲಿ ತೀವ್ರತರನಾಗಿ ನ್ಯಾಯಮೂರ್ತಿಗಳ ಕೊರತೆ ಇದ್ದು, ಖಾಲಿ ಹುದ್ದೆಗಳನ್ನು ತುಂಬುವ ನಿಟ್ಟಿನಲ್ಲಿ 12 ಹೈಕೋರ್ಟ್‌ಗಳಿಗೆ ಒಮ್ಮೆಲೆ 68 ನ್ಯಾಯಮೂರ್ತಿಗಳನ್ನು ನೇಮಕ ಮಾಡುವಂತೆ ಕೊಲಿಜಿಯಂ ಸೂಚಿಸಿದ್ದು, ಅಪೂತಪೂರ್ವ ಕ್ಷಣವೆಂದೇ ವಿಶ್ಲೇಷಿಸಲಾಗಿತ್ತು.

ಜಸ್ಟೀಸ್‌ ಎನ್.ವಿ.ರಮಣ, ಜಸ್ಟೀಸ್‌ ಯು.ಯು.ಲಲಿತ್‌, ಜಸ್ಟೀಸ್‌ ಎ.ಎಂ.ಖಾನ್ವಿಲ್ಖರ್‌ ಅವರನ್ನು ಒಳಗೊಂಡಿದ್ದ ಕೊಲಿಜಿಯಂ, 8 ನ್ಯಾಯಮೂರ್ತಿಗಳನ್ನು ಕೇರಳ ಹೈಕೋರ್ಟ್‌ಗೆ, ಕೊಲ್ಕತ್ತ ಹಾಗೂ ರಾಜಸ್ಥಾನಕ್ಕೆ ತಲಾ 6, ಗುಜರಾತ್‌ ಮತ್ತು ಜಾರ್ಖಾಂಡ್‌ಗೆ ತಲಾ 5, ಪಂಜಾಬ್‌, ಹರಿಯಾಣ, ಮದ್ರಾಸ್‌ಗೆ ತಲಾ 4, ಛತ್ತೀಸ್‌ಗಡಕ್ಕೆ ಇಬ್ಬರು, ಮಧ್ಯಪ್ರದೇಶಕ್ಕೆ ಒಬ್ಬರು ನ್ಯಾಯಮೂರ್ತಿಗಳನ್ನು ನೇಮಿಸುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ.

ಮಿಜೋರಂನ ಮೊದಲ ಮಹಿಳಾ ನ್ಯಾಯಾಂಗ ಅಧಿಕಾರಿಯೆಂದು ಗುರುತಿಸಲಾಗಿರುವ ಮರ್ಲಿ ವಂಕಂಗ್‌ ಹೆಸರನ್ನು ಗುವಾಹತಿ ಹೈಕೋರ್ಟ್‌ಗೆ ಶಿಫಾರಸ್ಸು ಮಾಡಲಾಗಿತ್ತು. ಪರಿಶಿಷ್ಟ ಪಂಗಡದವರೂ ಆಗಿರುವ ಮರ್ಲಿ ಅವರನ್ನು ಒಳಗೊಂಡಂತೆ 9 ಮಹಿಳೆಯರ ಹೆಸರುಗಳನ್ನು ವಿವಿಧ ಕೋರ್ಟ್‌ಗಳಿಗೆ ನೇಮಿಸಲು ಕೊಲಿಂಜಿಯಂ ಶಿಫಾರಸ್ಸು ಮಾಡಿತ್ತು.

ತೆಲಂಗಾಣ ಹೈಕೋರ್ಟ್‌ಗೆ ನೇಮಕ ಮಾಡುವಂತೆ 7 ಮಂದಿಯ ಹೆಸರನ್ನು ಆ.17ರಂದು ಶಿಫಾರಸು ಮಾಡಿದ್ದ ಐವರು ನ್ಯಾಯಮೂರ್ತಿಗಳಿದ್ದ ಕೊಲಿಜಿಯಂ, ಮೂವರು ಮಹಿಳಾ ನ್ಯಾಯಮೂರ್ತಿಗಳನ್ನು ಒಳಗೊಂಡಂತೆ 9 ಮಂದಿಯನ್ನು ಸುಪ್ರೀಂ ಕೋರ್ಟ್‌ಗೆ ನೇಮಿಸುವಂತೆ ಐತಿಹಾಸಿಕ ನಿರ್ಧಾರ ಪ್ರಕಟಿಸಿತ್ತು. ಅದರಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿತ್ತು. ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ್ ಓಕಾ, ವಿಕ್ರಮ್ ನಾಥ್‌, ಜೀತೇಂದ್ರಕುಮಾರ್‌ ಮಹೇಶ್ವರಿ, ಹಿಮಾ ಕೊಹ್ಲಿ, ಬಿ.ವಿ.ನಾಗರತ್ನ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಈಚೆಗೆ ಪ್ರಮಾಣ ವಚನ ಸ್ವೀಕರಿಸಿದ್ದರು.

ಇದನ್ನೂ ಓದಿ:‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...