Homeಮುಖಪುಟಕಲಾವಿದ ಸೈಯದ್‌, ಸತ್ಯಜಿತ್‌ ಆದ ಕತೆ; ಅಗಲಿದ ಹಿರಿಯ ನಟನಿಗೆ ನಮನ

ಕಲಾವಿದ ಸೈಯದ್‌, ಸತ್ಯಜಿತ್‌ ಆದ ಕತೆ; ಅಗಲಿದ ಹಿರಿಯ ನಟನಿಗೆ ನಮನ

- Advertisement -
- Advertisement -

ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ಸತ್ಯಜಿತ್‌ ಅವರು ಭಾನುವಾರ ಮುಂಜಾನೆ ನಿಧನರಾಗಿದ್ದು, ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ವಾರದ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೇತರಿಸಿಕೊಂಡು ಡಿಸ್ಚಾರ್ಜ್‌ ಆಗಿದ್ದ ಅವರ ಆರೋಗ್ಯ ಏರುಪೇರಾಗಿದ್ದರಿಂದ ಮತ್ತೆ ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿ ಕೊನೆಯುಸಿರೆಳೆದಿದ್ದಾರೆ.

2016ರಲ್ಲಿ ಗ್ಯಾಂಗ್ರೀನ್‌ಗೆ ತುತ್ತಾಗಿದ್ದ ಅವರು ಎಡಗಾಲನ್ನು ಕಳೆದುಕೊಂಡಿದ್ದರು. ಆನಂತರವೂ ನಟಿಸಿದ್ದ ಅವರು, ಈವರೆಗೆ ಸುಮಾರು 600 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಖಳನಾಯಕ ಪಾತ್ರಗಳ ಮೂಲಕ ಕನ್ನಡ ಸಿನಿ ರಸಿಕರ ಮನಸೂರೆಗೊಂಡಿದ್ದಾರೆ.

ಇದನ್ನೂ ಓದಿರಿ: ನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್

ಸತ್ಯಜಿತ್‌ ಇತ್ತೀಚಿನ ವರ್ಷಗಳಿಂದ ಅನಾರೋಗ್ಯದಿಂದ ತೀವ್ರ ಬಳಲಿದ್ದರು. ಅಲ್ಲದೇ ಇವರ ಪುತ್ರಿ, “ನಮ್ಮ ತಂದೆ ಹಣಕ್ಕಾಗಿ ಪೀಡಿಸುತ್ತಿದ್ದಾರೆ” ಎಂದು ಪೊಲೀಸರಿಗೆ ದೂರು ನೀಡಿದ್ದರು. ನಂತರ ಸತ್ಯಜಿತ್‌ ಇದಕ್ಕೆ ಸ್ಪಷ್ಟನೆ ನೀಡಿದ್ದರು.

ಸತ್ಯಜೀತ್ ಅವರಿಗೆ ಕೆಲ ದಿನಗಳ ಹಿಂದೆ ಅವರಿಗೆ ಜಾಂಡೀಸ್ ಆಗಿತ್ತು. ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಹೃದಯಾಘಾತವೂ ಆಗಿತ್ತು. ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದ ಬಳಿಕ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟು, ಭಾನುವಾರ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗ್ಯಾಂಗ್ರಿನ್ ಬಲಗಾಲಿಗೂ  ಹರಡಲಾರಂಭಿಸಿತ್ತು.

ವಿಶಿಷ್ಟ ಧ್ವನಿಯ ಮೂಲಕ ಗಮನ ಕನ್ನಡ ಚಿತ್ರಪ್ರೇಮಿಗಳ ಮನದಲ್ಲಿ ನೆಲಸಿರುವ ಸತ್ಯಜಿತ್‌, ಖಳನಾಯಕ ಹಾಗೂ ಪೋಷಕ ಪಾತ್ರಗಳಿಗೆ ಜೀವ ತುಂಬಿದವರು. ‘ಅಂಕುಶ್‌’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟು ಸುಮಾರು 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ​ಸತ್ಯಜಿತ್​ ಅವರು 1995ರಲ್ಲಿ ಪುಟ್ನಂಜ ಸಿನಿಮಾದಲ್ಲಿ, 1988ರಲ್ಲಿ ಶಿವ ಮೆಚ್ಚಿದ ಕಣ್ಣಪ್ಪ, 1992ರಲ್ಲಿ ಚೈತ್ರಾದ ಪ್ರೇಮಾಂಜಲಿ ಸಿನಿಮಾದಲ್ಲಿ ಅಭಿನಯಿಸಿ ನಟನೆಯಲ್ಲಿ ಗಮನ ಸೆಳೆದರು. 2004ರಲ್ಲಿ ತೆರೆಕಂಡ ‘ಆಪ್ತಮಿತ್ರ’ ಸಿನಿಮಾದಲ್ಲಿನ ಅವರ ಅಭಿನಯ ಅನನ್ಯವಾದದ್ದು.

ಇದನ್ನೂ ಓದಿರಿ: ಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

‘ಅರುಣ ರಾಗ’, ‘ಅಂತಿಮ ತೀರ್ಪು’, ‘ರಣರಂಗ’, ‘ನಮ್ಮೂರ ರಾಜ’, ‘ನ್ಯಾಯಕ್ಕಾಗಿ ನಾನು’, ‘ಯುದ್ಧಕಾಂಡ’, ‘ಇಂದ್ರಜಿತ್’, ‘ನಮ್ಮೂರ ಹಮ್ಮೀರ’, ‘ಪೊಲೀಸ್ ಲಾಕಪ್’, ‘ಮನೆದೇವ್ರು’, ‘ಮಂಡ್ಯದ ಗಂಡು’, ‘ಪೊಲೀಸ್ ಸ್ಟೋರಿ’, ‘ಸರ್ಕಲ್ ಇನ್ಸ್‌ಪೆಕ್ಟರ್’, ‘ಪಟೇಲ’, ‘ದುರ್ಗದ ಹುಲಿ’, ‘ಅಪ್ಪು’, ‘ಧಮ್’, ‘ಅಭಿ’, ‘ಅರಸು’, ‘ಇಂದ್ರ’, ‘ಭಾಗ್ಯದ ಬಳೇಗಾರ’, ‘ಕಲ್ಪನಾ’, ‘ಗಾಡ್ ಫಾದರ್’, ‘ಲಕ್ಕಿ’, ‘ಉಪ್ಪಿ 2’, ‘ಮಾಣಿಕ್ಯ’, ‘ರನ್ನ’, ‘ರಣವಿಕ್ರಮ’, ‘ಮೈತ್ರಿ’ ಮೊದಲಾದ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು.

ಅಂದಹಾಗೆ ಸತ್ಯಜಿತ್‌ ಅವರ ನಿಜವಾದ ಹೆಸರು ನಿಜಾಮುದ್ದೀನ್‌ ಸೈಯದ್‌. ಒಬ್ಬ ಸಾಮಾನ್ಯ ವ್ಯಕ್ತಿ ‘ಸತ್ಯಜಿತ್‌’ ಆಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದು ಗಮನಾರ್ಹ. ಹುಬ್ಬಳ್ಳಿಯಲ್ಲಿ ಕೆಎಸ್‌ಆರ್‌ಟಿಸಿಯಲ್ಲಿ ಬಸ್‌ ಡ್ರೈವರ್‌ ಆಗಿದ್ದ ಸೈಯದ್‌, ಇಲ್ಲಿನ ಹವ್ಯಾಸ ರಂಗತಂಡದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ನಾಟಕ ಪ್ರದರ್ಶನಕ್ಕಾಗಿ ಮುಂಬೈಗೆ ಹೋಗಿದ್ದಾಗ ತಂತ್ರಜ್ಞರು ಸೈಯದ್‌ರನ್ನು ಗುರುತಿಸಿ, ಚಿತ್ರರಂಗಕ್ಕೆ ಕರೆತಂದರು.

ಮೇರು ನಟ ನಾನಾ ಪಾಟೇಕರ್‌ ಅವರು ನಾಯಕನಟರಾಗಿ ಅಭಿನಯಿಸಿದ್ದ ‘ಅಂಕುಶ್‌’ ಹಿಂದಿ ಸಿನಿಮಾದಲ್ಲಿ ಸೈಯದ್ ಅಭಿನಯಿಸಿ ಚಿತ್ರಂಗಕ್ಕೆ ಕಾಲಿಟ್ಟರು. ಅಂಕುಶ್‌ ಸಿನಿಮಾದ ಟೈಟಲ್‌ ಕಾರ್ಡ್‌‌ನಲ್ಲೇ ‘ಸತ್ಯಜಿತ್‌’ ಎಂದು ಕರೆಯಲಾಯಿತು. ಮುಂದೆ ಸತ್ಯಜಿತ್‌ ಎಂದೇ ಗುರುತಿಸಿಕೊಂಡ ಸೈಯದ್ ಕನ್ನಡ ಚಿತ್ರರಂಗದಲ್ಲಿ ಮನೆಮಾತಾದರು. ಹಿರಿಯ ನಟ ಸತ್ಯಜಿತ್‌‌ ನಿಧನಕ್ಕೆ, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಹಲವು ನಟ-ನಟಿಯರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿರಿ: ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...