Homeಕರ್ನಾಟಕಅಸೂಕ್ಷ್ಮ, ಪ್ರೊಪಗಂಡಾ ಮತ್ತು ಕ್ರಿಮಿನಲ್‌ಗಳಿಗೆ ಮಾರ್ಗದರ್ಶಿಯಂತಿರುವ ಕ್ರೈಮ್ ಸ್ಟೋರೀಸ್ ಇಂಡಿಯಾ ಡಿಟೆಕ್ಟಿವ್ಸ್

ಅಸೂಕ್ಷ್ಮ, ಪ್ರೊಪಗಂಡಾ ಮತ್ತು ಕ್ರಿಮಿನಲ್‌ಗಳಿಗೆ ಮಾರ್ಗದರ್ಶಿಯಂತಿರುವ ಕ್ರೈಮ್ ಸ್ಟೋರೀಸ್ ಇಂಡಿಯಾ ಡಿಟೆಕ್ಟಿವ್ಸ್

- Advertisement -
- Advertisement -

ಪ್ರಸ್ತುತ ನೆಟ್‌ಫ್ಲಿಕ್ಸ್ ಒಟಿಟಿ ವೇದಿಕೆಯಲ್ಲಿ ಪ್ರಸಾರವಾಗುತ್ತಿರುವ ’ಕ್ರೈಮ್ ಸ್ಟೋರಿಸ್: ಇಂಡಿಯಾ ಡಿಟೆಕ್ಟಿವ್ಸ್’ನ ಎಲ್ಲಾ ಸಂಚಿಕೆಗಳು ಈ ನೆಲದ ಕಾನೂನುಗಳ ಸ್ಪಷ್ಟ ಉಲ್ಲಂಘನೆಯ ಕಾರಣಕ್ಕಾಗಿ ವೀಕ್ಷಿಸಲು ಅನರ್ಹವಾಗಿವೆ. ಹಾಗಾಗಿ ಅವುಗಳ ಪ್ರಸಾರವನ್ನು ನೆಟ್‌ಫ್ಲಿಕ್ಸ್ ನಿಲ್ಲಿಸಬೇಕೆನ್ನುವ ಕೂಗು ಸಕಾರಣದಿಂದ ಕೂಡಿದೆ.

ನಾಲ್ಕು ಸಂಚಿಕೆಗಳ ಈ ಡಾಕ್ಯುಮೆಂಟರಿ ಸರಣಿಯಲ್ಲಿ ಬೆಂಗಳೂರು ಪೊಲೀಸ್ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳ ವಿಚಾರಣೆಯನ್ನು ಯಾವುದೇ ನಿರ್ಬಂಧಗಳನ್ನು ಹೇರಿಕೊಳ್ಳದೆ, ಕ್ಯಾಮರಾಕ್ಕೆ ಯಾವುದೇ ರೀತಿಯ ತಡೆಗೋಡೆಗಳನ್ನು ಹಾಕಿಕೊಳ್ಳದೆ ನೇರವಾಗಿ ತೋರಿಸಲಾಗಿದೆ. ಕಾನೂನು ಎಚ್ಚರಿಕೆಗಳನ್ನು ಸ್ಪಷ್ಟವಾಗಿ ಗಾಳಿಗೆ ತೂರಲಾಗಿದೆ. ಪ್ರಕರಣವೊಂದರ ತನಿಖೆಯ ವೇಳೆ ಅದರ ವಿವರಗಳನ್ನು ಯಾವುದೇ ಪ್ರಕಾರದ ಮಾಧ್ಯಮಗಳಿಗೆ ನೀಡಬಾರದು ಎಂಬ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳ ನಿರ್ದೇಶನವನ್ನು ಈ ಚಿತ್ರದಲ್ಲಿ ಕಾಣಿಸಿಕೊಂಡ ಪೊಲೀಸ್ ಅಧಿಕಾರಿಗಳು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ.

ಕ್ರೈಮ್ ರಿಪೋರ್ಟರ್‌ಗಳು ತನಿಖಾ ಅಧಿಕಾರಿಗಳಿಂದ ಮತ್ತು ಹಿರಿಯ ಶ್ರೇಣಿಯ ಅಧಿಕಾರಿಗಳಿಂದ ತನಿಖೆಯ ಕೆಲ ವಿವರಗಳನ್ನು ಪಡೆಯಲು ದಿನನಿತ್ಯ ಹೆಣಗಾಡುತ್ತಿರುವ ಸಂದರ್ಭದಲ್ಲಿ, ಪೊಲೀಸರು ತಮ್ಮ ತಥಾಕಥಿತ ತನಿಖೆಯ ಕೌಶಲ್ಯದ ಪ್ರೊಪಗಾಂಡವನ್ನು ಬಿತ್ತಲು ಹಾಗೂ ಪ್ರದರ್ಶಿಸಿಕೊಳ್ಳಲು ಈ ಡಾಕ್ಯುಮೆಂಟರಿ ಸರಣಿಯನ್ನು ವೇದಿಕೆಯಾಗಿ ಬಳಸಿಕೊಂಡಿದ್ದಾರೆ. ಬೆಂಗಳೂರು ಪೊಲೀಸರ ತನಿಖಾ ಶೈಲಿಯನ್ನು ಪ್ರದರ್ಶಿಸಿಕೊಳ್ಳಲು ಹೋಗಿ, ಕ್ರಿಮಿನಲ್‌ಗಳಿಗೆ ಮಾರ್ಗದರ್ಶನ ನೀಡುವ ರೀತಿಯಲ್ಲಿ ಸರಣಿ ಅಂತ್ಯಗೊಂಡಿದೆ ಎಂದು ಕೆಲ ಹಿರಿಯ ಪೊಲೀಸ್ ಅಧಿಕಾರಿಗಳು ಹೇಳುತ್ತಾರೆ. ಪ್ರಚಾರಕ್ಕಾಗಿ ಹಸಿದಿದ್ದ ಪೊಲೀಸ್ ಅಧಿಕಾರಿಗಳನ್ನು ಯಶಸ್ವಿಯಾಗಿ ಮರಳು ಮಾಡಿದ ಈ ಸರಣಿ ತಯಾರಕರಿಗೆ ಧನ್ಯವಾದ ತಿಳಿಸಬೇಕಾಗಿದೆ.

ಕಾನೂನು ಉಲ್ಲಂಘನೆಗಳಿಗಿಂತಲೂ ಈ ಸರಣಿಯು ಆರೋಪಿಗಳು ಮತ್ತು ಸಂತ್ರಸ್ತರ ಬಗ್ಗೆ ಅಸೂಕ್ಷ್ಮತೆಯನ್ನು ಮೆರೆಯುತ್ತದೆ. ಅದಕ್ಕಾಗಿ ಸರಣಿಯು ಸೂಕ್ತ ಬೆಲೆ ಕೂಡ ತೆತ್ತಿದೆ. ಆರೋಪಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಸರಣಿಯ ಮೊದಲ ಸಂಚಿಕೆಯಲ್ಲಿ (A murdered mother) ತಮ್ಮ ಪ್ರಕರಣ ಇನ್ನೂ ವಿಚಾರಣೆಯಲ್ಲಿರುವ ಸಂದರ್ಭದಲ್ಲಿಯೇ ತನ್ನನ್ನು ಕೆಟ್ಟದಾಗಿ ತೋರಿಸಲಾಗಿದೆ ಮತ್ತು ನಾನೇ ನನ್ನ ಸ್ವಂತ ತಾಯಿಯನ್ನು ಕೊಂದೆ ಎನ್ನುವ ರೀತಿ ಬಿಂಬಿಸಲಾಗಿದೆ ಎಂದು ದೂರಿ, ಸರಣಿಯ ಆ ಸಂಚಿಕೆಯನ್ನು ತಡೆಹಿಡಿಯುವಂತೆ ಕೋರಿದ್ದರು. ಯಾವುದೇ ಮಾಧ್ಯಮಗಳಿಗೆ ಆರೋಪಿಗಳನ್ನು ಅಪರಾಧಿಗಳ ರೀತಿ ತೋರಿಸುವ ಹಕ್ಕು ಇಲ್ಲ. ಅಲ್ಲದೇ ಪ್ರತಿಯೊಬ್ಬ ಆರೋಪಿಗೂ ಸಹ ತನ್ನನ್ನು ಸಮರ್ಥಿಸಿಕೊಳ್ಳುವ ಹಕ್ಕು ಇದೆ. ಕರ್ನಾಟಕ ಹೈಕೋರ್ಟ್ ಈ ವಿಷಯದಲ್ಲಿ ಮಧ್ಯಂತರ ಆದೇಶ ನೀಡಿದ್ದು ಆ ಮೊದಲ ಸಂಚಿಕೆಯನ್ನು ಪ್ರಸಾರ ಮಾಡದಂತೆ ನೆಟ್‌ಫ್ಲಿಕ್ಸ್‌ಗೆ ಆದೇಶಿಸಿದೆ.

PC : The Economic Times

ಈ ಸರಣಿಯಲ್ಲಿ ಬರುವ ಮಹಿಳೆಯರು, ಮಕ್ಕಳು ಸೇರಿದಂತೆ ಆರೋಪಿಗಳು, ಶಂಕಿತರು, ಸಂತ್ರಸ್ತರು ಯಾರೊಬ್ಬರ ಮುಖವನ್ನು ಸಹ ಬ್ಲರ್ ಮಾಡದೇ ನೇರವಾಗಿ ತೋರಿಸಲಾಗಿದೆ. ಇದು ಆತಂಕಕಾರಿ ಪ್ರವೃತ್ತಿಯಾಗಿದೆ. ಆರೋಪಿ ಮತ್ತು ಸಂತ್ರಸ್ತರ ಒಪ್ಪಿಗೆಯಿಲ್ಲದೆ ಅವರನ್ನು ತೋರಿಸುವ ಹಕ್ಕು ಅಥವಾ ಅಧಿಕಾರ ಯಾವ ಮಾಧ್ಯಮಗಳಿಗೂ ಇಲ್ಲ ಎಂದು ಖ್ಯಾತ ವಕೀಲರಾದ ಬಿ.ಟಿ ವೆಂಕಟೇಶ್ ಹೇಳುತ್ತಾರೆ. ಒಂದು ವೇಳೆ ಅವರ ಒಪ್ಪಿಗೆ ಸಿಕ್ಕಿದರೂ ಸಹ ಅದನ್ನು ತಿರುಚುವ ಕೆಲಸವನ್ನು ಮಾಧ್ಯಮಗಳು ಮಾಡಬಾರದು. ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರೊಂದಿಗೆ ವ್ಯವಹರಿಸುವಾಗ ಮಾಧ್ಯಮಗಳು ಹೆಚ್ಚು ಎಚ್ಚರಿಕೆ ಮತ್ತು ಜಾಗೃತರಾಗಿರಬೇಕು.

Body in the Bag ಎಂಬ ಸಂಚಿಕೆಯಲ್ಲಿ ಪೊಲೀಸರು ಕೊಲೆಯಾದ ಸಂತ್ರಸ್ತನ ತಾಯಿಯ ಆರೋಪದ ಮೇಲೆ, ಆರಂಭದಲ್ಲಿಯೇ ಕೊಲೆಯಾದವನ ಹೆಂಡತಿ ಮತ್ತು ಆಕೆಯ ತಾಯಿಯ ಮೇಲೆ ಶಂಕೆ ವ್ಯಕ್ತಪಡಿಸಿ ವಶಕ್ಕೆ ಪಡೆಯುತ್ತಾರೆ. ಪೊಲೀಸರು ಅವರ ವಿರುದ್ಧ ಒಂದು ಸಣ್ಣ ಸಾಕ್ಷ್ಯ ಕೂಡ ಸಂಗ್ರಹಿಸಲು ವಿಫಲವಾದರೂ, ಸಂಚಿಕೆಯುದ್ದಕ್ಕೂ ಅವರಿಬ್ಬರೆ ಕೊಲೆಗಾರರು ಎಂಬ ಭಾವನೆ ನೋಡುಗರಲ್ಲಿ ಉಳಿಯುತ್ತದೆ. ಅವರಿಬ್ಬರ ಮೇಲೆ ಈ ಸರಣಿ ತಯಾರಕರಾದ ಎನ್ ಅಮಿತ್ ಮತ್ತು ಜಾಕ್ ರ್‍ಯಾಂಪ್ಲಿಂಗ್‌ರವರು ಸಂಚಿಕೆಯ ಕೊನೆಯವರೆಗೂ ಯಾವುದೇ ಕರುಣೆ ತೋರಿಸುವುದಿಲ್ಲ. ಆದರೆ ಸಂಚಿಕೆಯ ಕೊನೆಯಲ್ಲಿ ಆ ಕೊಲೆ ಮಾಡಿದ ಇನ್ನೊಂದು ಜೋಡಿ ಸಿಕ್ಕ ನಂತರ ಮಾತ್ರ ಆರಂಭದಿಂದಲೂ ಶಂಕಿತರಾಗಿದ್ದ ಇವರನ್ನು ಅಕ್ರಮ ಬಂಧನದಿಂದ ಬಿಡುಗಡೆ ಮಾಡಲಾಗುತ್ತದೆ. ಯಾವುದೇ ವಾರೆಂಟ್ ಇಲ್ಲದೆ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿರುತ್ತದೆ!

Dying for Protection ಸಂಚಿಕೆಯಲ್ಲಿ ಕೊಲೆಯಾದ ವೇಶ್ಯೆಯೊಬ್ಬರ ಮಗನನ್ನು ಅಪ್ರಾಪ್ತ ಎಂಬುದನ್ನು ಕೂಡ ಲೆಕ್ಕಿಸದೇ ಅಕ್ರಮವಾಗಿ ವಶಕ್ಕೆ ಪಡೆಯಲಾಗುತ್ತದೆ. ಆತನ ವಿರುದ್ಧ ಪೊಲೀಸರು ಅಶ್ಲೀಲ ಪದಗಳನ್ನು ಬಳಸುತ್ತಾರೆ. ಇಡೀ ಘಟನೆಯನ್ನು ವೈಭವೀಕರಿಸುವುದು ನಿರ್ದೇಶಕರಿಗೆ ಸಮಸ್ಯೆ ಅನ್ನಿಸುವುದಿಲ್ಲ. ಆದರೂ ಕೊನೆಗೆ ಆಕೆಯ ಗ್ರಾಹಕನಾಗಿದ್ದವನನ್ನು ಈ ಪ್ರಕರಣದಲ್ಲಿ ಪೊಲೀಸರು ಬಂಧಿಸುತ್ತಾರೆ. ಇಲ್ಲಿ ಅಪ್ರಾಪ್ತ ಬಾಲಕನ ಹಕ್ಕುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಮತ್ತು ಯಾರಾದರೂ ಈ ವಿಷಯದಲ್ಲಿ ತಯಾರಕರ ವಿರುದ್ಧ ದೂರು ನೀಡಿದರೆ ಪ್ರಕರಣ ದಾಖಲಾಗುವುದರಲ್ಲಿ ಅನುಮಾನವಿಲ್ಲ. ಕೊನೆಯ Stolen Baby ಸಂಚಿಕೆಯಲ್ಲಿ ಚಿಕ್ಕ ಮಕ್ಕಳನ್ನು ಕೂಡ ಪೊಲೀಸ್ ಠಾಣೆಯಲ್ಲಿ ನಿಲ್ಲಿಸಿ, ಮಗುವನ್ನು ಕಳೆದುಕೊಂಡ ದುಃಖಿತ ತಾಯಿ ಮತ್ತು ತಂದೆಯೊಂದಿಗೆ ತೋರಿಸಲಾಗಿದೆ.

ಈ ಉಲ್ಲಂಘನೆಗಳಿಗೆ, ನಿರ್ದಿಷ್ಟವಾಗಿ ಸಂತ್ರಸ್ತರು ಮತ್ತು ಆರೋಪಿಗಳ ಹಕ್ಕುಗಳನ್ನು ಉಲ್ಲಂಘಿಸಿರುವುದಕ್ಕೆ ನಿರ್ದೇಶಕರು, ನಿರ್ಮಾಪಕರು ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಕೋರ್ಟ್‌ಗಳು ಕ್ರಮ ತೆಗೆದುಕೊಳ್ಳಬಹುದಾಗಿದೆ ಎಂದು ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳುತ್ತಾರೆ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳ ಹಲವು ನಿರ್ದೇಶನಗಳನ್ನು ಉಲ್ಲಂಘಿಸಿರುವ ಪೊಲೀಸರು ಕೂಡ ಶಿಸ್ತು ಕ್ರಮ ಎದುರಿಸುವ ಸಾಧ್ಯತೆ ಇದೆ. ಈ ಸರಣಿಯನ್ನು ನೋಡುವ ಕ್ರಿಮಿನಲ್‌ಗಳಿಗೆ ಇದು ಪೊಲೀಸರನ್ನು ದಿಕ್ಕು ತಪ್ಪಿಸಲು ಮತ್ತು ಸಾಕ್ಷ್ಯಗಳನ್ನು ನಾಶಮಾಡಲು ಉತ್ತಮ ಅಧ್ಯಯನವಾಗಲಿದೆ.

ಮಧು ಜಿ.ಸಿ
ಮಣಿಪಾಲ್ ವಿಶ್ವವಿದ್ಯಾಲಯದಿಂದ ಸಾಮಾಜಿಕ ಮಾನವಶಾಸ್ತ್ರ ವಿಭಾಗದಲ್ಲಿ ಪದವಿ ಪಡೆದಿದ್ದಾರೆ ಮತ್ತು ಸಾಮಾಜಿಕ ಸಮಸ್ಯೆಗಳಿಗೆ ಸಕ್ರಿಯವಾಗಿ ಸ್ಪಂದಿಸುತ್ತಾರೆ.

ಕನ್ನಡಕ್ಕೆ: ಮುತ್ತುರಾಜ್


ಇದನ್ನೂ ಓದಿ: ವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...