Homeಕರ್ನಾಟಕಅಸೂಕ್ಷ್ಮ, ಪ್ರೊಪಗಂಡಾ ಮತ್ತು ಕ್ರಿಮಿನಲ್‌ಗಳಿಗೆ ಮಾರ್ಗದರ್ಶಿಯಂತಿರುವ ಕ್ರೈಮ್ ಸ್ಟೋರೀಸ್ ಇಂಡಿಯಾ ಡಿಟೆಕ್ಟಿವ್ಸ್

ಅಸೂಕ್ಷ್ಮ, ಪ್ರೊಪಗಂಡಾ ಮತ್ತು ಕ್ರಿಮಿನಲ್‌ಗಳಿಗೆ ಮಾರ್ಗದರ್ಶಿಯಂತಿರುವ ಕ್ರೈಮ್ ಸ್ಟೋರೀಸ್ ಇಂಡಿಯಾ ಡಿಟೆಕ್ಟಿವ್ಸ್

- Advertisement -
- Advertisement -

ಪ್ರಸ್ತುತ ನೆಟ್‌ಫ್ಲಿಕ್ಸ್ ಒಟಿಟಿ ವೇದಿಕೆಯಲ್ಲಿ ಪ್ರಸಾರವಾಗುತ್ತಿರುವ ’ಕ್ರೈಮ್ ಸ್ಟೋರಿಸ್: ಇಂಡಿಯಾ ಡಿಟೆಕ್ಟಿವ್ಸ್’ನ ಎಲ್ಲಾ ಸಂಚಿಕೆಗಳು ಈ ನೆಲದ ಕಾನೂನುಗಳ ಸ್ಪಷ್ಟ ಉಲ್ಲಂಘನೆಯ ಕಾರಣಕ್ಕಾಗಿ ವೀಕ್ಷಿಸಲು ಅನರ್ಹವಾಗಿವೆ. ಹಾಗಾಗಿ ಅವುಗಳ ಪ್ರಸಾರವನ್ನು ನೆಟ್‌ಫ್ಲಿಕ್ಸ್ ನಿಲ್ಲಿಸಬೇಕೆನ್ನುವ ಕೂಗು ಸಕಾರಣದಿಂದ ಕೂಡಿದೆ.

ನಾಲ್ಕು ಸಂಚಿಕೆಗಳ ಈ ಡಾಕ್ಯುಮೆಂಟರಿ ಸರಣಿಯಲ್ಲಿ ಬೆಂಗಳೂರು ಪೊಲೀಸ್ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳ ವಿಚಾರಣೆಯನ್ನು ಯಾವುದೇ ನಿರ್ಬಂಧಗಳನ್ನು ಹೇರಿಕೊಳ್ಳದೆ, ಕ್ಯಾಮರಾಕ್ಕೆ ಯಾವುದೇ ರೀತಿಯ ತಡೆಗೋಡೆಗಳನ್ನು ಹಾಕಿಕೊಳ್ಳದೆ ನೇರವಾಗಿ ತೋರಿಸಲಾಗಿದೆ. ಕಾನೂನು ಎಚ್ಚರಿಕೆಗಳನ್ನು ಸ್ಪಷ್ಟವಾಗಿ ಗಾಳಿಗೆ ತೂರಲಾಗಿದೆ. ಪ್ರಕರಣವೊಂದರ ತನಿಖೆಯ ವೇಳೆ ಅದರ ವಿವರಗಳನ್ನು ಯಾವುದೇ ಪ್ರಕಾರದ ಮಾಧ್ಯಮಗಳಿಗೆ ನೀಡಬಾರದು ಎಂಬ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳ ನಿರ್ದೇಶನವನ್ನು ಈ ಚಿತ್ರದಲ್ಲಿ ಕಾಣಿಸಿಕೊಂಡ ಪೊಲೀಸ್ ಅಧಿಕಾರಿಗಳು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ.

ಕ್ರೈಮ್ ರಿಪೋರ್ಟರ್‌ಗಳು ತನಿಖಾ ಅಧಿಕಾರಿಗಳಿಂದ ಮತ್ತು ಹಿರಿಯ ಶ್ರೇಣಿಯ ಅಧಿಕಾರಿಗಳಿಂದ ತನಿಖೆಯ ಕೆಲ ವಿವರಗಳನ್ನು ಪಡೆಯಲು ದಿನನಿತ್ಯ ಹೆಣಗಾಡುತ್ತಿರುವ ಸಂದರ್ಭದಲ್ಲಿ, ಪೊಲೀಸರು ತಮ್ಮ ತಥಾಕಥಿತ ತನಿಖೆಯ ಕೌಶಲ್ಯದ ಪ್ರೊಪಗಾಂಡವನ್ನು ಬಿತ್ತಲು ಹಾಗೂ ಪ್ರದರ್ಶಿಸಿಕೊಳ್ಳಲು ಈ ಡಾಕ್ಯುಮೆಂಟರಿ ಸರಣಿಯನ್ನು ವೇದಿಕೆಯಾಗಿ ಬಳಸಿಕೊಂಡಿದ್ದಾರೆ. ಬೆಂಗಳೂರು ಪೊಲೀಸರ ತನಿಖಾ ಶೈಲಿಯನ್ನು ಪ್ರದರ್ಶಿಸಿಕೊಳ್ಳಲು ಹೋಗಿ, ಕ್ರಿಮಿನಲ್‌ಗಳಿಗೆ ಮಾರ್ಗದರ್ಶನ ನೀಡುವ ರೀತಿಯಲ್ಲಿ ಸರಣಿ ಅಂತ್ಯಗೊಂಡಿದೆ ಎಂದು ಕೆಲ ಹಿರಿಯ ಪೊಲೀಸ್ ಅಧಿಕಾರಿಗಳು ಹೇಳುತ್ತಾರೆ. ಪ್ರಚಾರಕ್ಕಾಗಿ ಹಸಿದಿದ್ದ ಪೊಲೀಸ್ ಅಧಿಕಾರಿಗಳನ್ನು ಯಶಸ್ವಿಯಾಗಿ ಮರಳು ಮಾಡಿದ ಈ ಸರಣಿ ತಯಾರಕರಿಗೆ ಧನ್ಯವಾದ ತಿಳಿಸಬೇಕಾಗಿದೆ.

ಕಾನೂನು ಉಲ್ಲಂಘನೆಗಳಿಗಿಂತಲೂ ಈ ಸರಣಿಯು ಆರೋಪಿಗಳು ಮತ್ತು ಸಂತ್ರಸ್ತರ ಬಗ್ಗೆ ಅಸೂಕ್ಷ್ಮತೆಯನ್ನು ಮೆರೆಯುತ್ತದೆ. ಅದಕ್ಕಾಗಿ ಸರಣಿಯು ಸೂಕ್ತ ಬೆಲೆ ಕೂಡ ತೆತ್ತಿದೆ. ಆರೋಪಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಸರಣಿಯ ಮೊದಲ ಸಂಚಿಕೆಯಲ್ಲಿ (A murdered mother) ತಮ್ಮ ಪ್ರಕರಣ ಇನ್ನೂ ವಿಚಾರಣೆಯಲ್ಲಿರುವ ಸಂದರ್ಭದಲ್ಲಿಯೇ ತನ್ನನ್ನು ಕೆಟ್ಟದಾಗಿ ತೋರಿಸಲಾಗಿದೆ ಮತ್ತು ನಾನೇ ನನ್ನ ಸ್ವಂತ ತಾಯಿಯನ್ನು ಕೊಂದೆ ಎನ್ನುವ ರೀತಿ ಬಿಂಬಿಸಲಾಗಿದೆ ಎಂದು ದೂರಿ, ಸರಣಿಯ ಆ ಸಂಚಿಕೆಯನ್ನು ತಡೆಹಿಡಿಯುವಂತೆ ಕೋರಿದ್ದರು. ಯಾವುದೇ ಮಾಧ್ಯಮಗಳಿಗೆ ಆರೋಪಿಗಳನ್ನು ಅಪರಾಧಿಗಳ ರೀತಿ ತೋರಿಸುವ ಹಕ್ಕು ಇಲ್ಲ. ಅಲ್ಲದೇ ಪ್ರತಿಯೊಬ್ಬ ಆರೋಪಿಗೂ ಸಹ ತನ್ನನ್ನು ಸಮರ್ಥಿಸಿಕೊಳ್ಳುವ ಹಕ್ಕು ಇದೆ. ಕರ್ನಾಟಕ ಹೈಕೋರ್ಟ್ ಈ ವಿಷಯದಲ್ಲಿ ಮಧ್ಯಂತರ ಆದೇಶ ನೀಡಿದ್ದು ಆ ಮೊದಲ ಸಂಚಿಕೆಯನ್ನು ಪ್ರಸಾರ ಮಾಡದಂತೆ ನೆಟ್‌ಫ್ಲಿಕ್ಸ್‌ಗೆ ಆದೇಶಿಸಿದೆ.

PC : The Economic Times

ಈ ಸರಣಿಯಲ್ಲಿ ಬರುವ ಮಹಿಳೆಯರು, ಮಕ್ಕಳು ಸೇರಿದಂತೆ ಆರೋಪಿಗಳು, ಶಂಕಿತರು, ಸಂತ್ರಸ್ತರು ಯಾರೊಬ್ಬರ ಮುಖವನ್ನು ಸಹ ಬ್ಲರ್ ಮಾಡದೇ ನೇರವಾಗಿ ತೋರಿಸಲಾಗಿದೆ. ಇದು ಆತಂಕಕಾರಿ ಪ್ರವೃತ್ತಿಯಾಗಿದೆ. ಆರೋಪಿ ಮತ್ತು ಸಂತ್ರಸ್ತರ ಒಪ್ಪಿಗೆಯಿಲ್ಲದೆ ಅವರನ್ನು ತೋರಿಸುವ ಹಕ್ಕು ಅಥವಾ ಅಧಿಕಾರ ಯಾವ ಮಾಧ್ಯಮಗಳಿಗೂ ಇಲ್ಲ ಎಂದು ಖ್ಯಾತ ವಕೀಲರಾದ ಬಿ.ಟಿ ವೆಂಕಟೇಶ್ ಹೇಳುತ್ತಾರೆ. ಒಂದು ವೇಳೆ ಅವರ ಒಪ್ಪಿಗೆ ಸಿಕ್ಕಿದರೂ ಸಹ ಅದನ್ನು ತಿರುಚುವ ಕೆಲಸವನ್ನು ಮಾಧ್ಯಮಗಳು ಮಾಡಬಾರದು. ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರೊಂದಿಗೆ ವ್ಯವಹರಿಸುವಾಗ ಮಾಧ್ಯಮಗಳು ಹೆಚ್ಚು ಎಚ್ಚರಿಕೆ ಮತ್ತು ಜಾಗೃತರಾಗಿರಬೇಕು.

Body in the Bag ಎಂಬ ಸಂಚಿಕೆಯಲ್ಲಿ ಪೊಲೀಸರು ಕೊಲೆಯಾದ ಸಂತ್ರಸ್ತನ ತಾಯಿಯ ಆರೋಪದ ಮೇಲೆ, ಆರಂಭದಲ್ಲಿಯೇ ಕೊಲೆಯಾದವನ ಹೆಂಡತಿ ಮತ್ತು ಆಕೆಯ ತಾಯಿಯ ಮೇಲೆ ಶಂಕೆ ವ್ಯಕ್ತಪಡಿಸಿ ವಶಕ್ಕೆ ಪಡೆಯುತ್ತಾರೆ. ಪೊಲೀಸರು ಅವರ ವಿರುದ್ಧ ಒಂದು ಸಣ್ಣ ಸಾಕ್ಷ್ಯ ಕೂಡ ಸಂಗ್ರಹಿಸಲು ವಿಫಲವಾದರೂ, ಸಂಚಿಕೆಯುದ್ದಕ್ಕೂ ಅವರಿಬ್ಬರೆ ಕೊಲೆಗಾರರು ಎಂಬ ಭಾವನೆ ನೋಡುಗರಲ್ಲಿ ಉಳಿಯುತ್ತದೆ. ಅವರಿಬ್ಬರ ಮೇಲೆ ಈ ಸರಣಿ ತಯಾರಕರಾದ ಎನ್ ಅಮಿತ್ ಮತ್ತು ಜಾಕ್ ರ್‍ಯಾಂಪ್ಲಿಂಗ್‌ರವರು ಸಂಚಿಕೆಯ ಕೊನೆಯವರೆಗೂ ಯಾವುದೇ ಕರುಣೆ ತೋರಿಸುವುದಿಲ್ಲ. ಆದರೆ ಸಂಚಿಕೆಯ ಕೊನೆಯಲ್ಲಿ ಆ ಕೊಲೆ ಮಾಡಿದ ಇನ್ನೊಂದು ಜೋಡಿ ಸಿಕ್ಕ ನಂತರ ಮಾತ್ರ ಆರಂಭದಿಂದಲೂ ಶಂಕಿತರಾಗಿದ್ದ ಇವರನ್ನು ಅಕ್ರಮ ಬಂಧನದಿಂದ ಬಿಡುಗಡೆ ಮಾಡಲಾಗುತ್ತದೆ. ಯಾವುದೇ ವಾರೆಂಟ್ ಇಲ್ಲದೆ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿರುತ್ತದೆ!

Dying for Protection ಸಂಚಿಕೆಯಲ್ಲಿ ಕೊಲೆಯಾದ ವೇಶ್ಯೆಯೊಬ್ಬರ ಮಗನನ್ನು ಅಪ್ರಾಪ್ತ ಎಂಬುದನ್ನು ಕೂಡ ಲೆಕ್ಕಿಸದೇ ಅಕ್ರಮವಾಗಿ ವಶಕ್ಕೆ ಪಡೆಯಲಾಗುತ್ತದೆ. ಆತನ ವಿರುದ್ಧ ಪೊಲೀಸರು ಅಶ್ಲೀಲ ಪದಗಳನ್ನು ಬಳಸುತ್ತಾರೆ. ಇಡೀ ಘಟನೆಯನ್ನು ವೈಭವೀಕರಿಸುವುದು ನಿರ್ದೇಶಕರಿಗೆ ಸಮಸ್ಯೆ ಅನ್ನಿಸುವುದಿಲ್ಲ. ಆದರೂ ಕೊನೆಗೆ ಆಕೆಯ ಗ್ರಾಹಕನಾಗಿದ್ದವನನ್ನು ಈ ಪ್ರಕರಣದಲ್ಲಿ ಪೊಲೀಸರು ಬಂಧಿಸುತ್ತಾರೆ. ಇಲ್ಲಿ ಅಪ್ರಾಪ್ತ ಬಾಲಕನ ಹಕ್ಕುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಮತ್ತು ಯಾರಾದರೂ ಈ ವಿಷಯದಲ್ಲಿ ತಯಾರಕರ ವಿರುದ್ಧ ದೂರು ನೀಡಿದರೆ ಪ್ರಕರಣ ದಾಖಲಾಗುವುದರಲ್ಲಿ ಅನುಮಾನವಿಲ್ಲ. ಕೊನೆಯ Stolen Baby ಸಂಚಿಕೆಯಲ್ಲಿ ಚಿಕ್ಕ ಮಕ್ಕಳನ್ನು ಕೂಡ ಪೊಲೀಸ್ ಠಾಣೆಯಲ್ಲಿ ನಿಲ್ಲಿಸಿ, ಮಗುವನ್ನು ಕಳೆದುಕೊಂಡ ದುಃಖಿತ ತಾಯಿ ಮತ್ತು ತಂದೆಯೊಂದಿಗೆ ತೋರಿಸಲಾಗಿದೆ.

ಈ ಉಲ್ಲಂಘನೆಗಳಿಗೆ, ನಿರ್ದಿಷ್ಟವಾಗಿ ಸಂತ್ರಸ್ತರು ಮತ್ತು ಆರೋಪಿಗಳ ಹಕ್ಕುಗಳನ್ನು ಉಲ್ಲಂಘಿಸಿರುವುದಕ್ಕೆ ನಿರ್ದೇಶಕರು, ನಿರ್ಮಾಪಕರು ಮತ್ತು ಪೊಲೀಸ್ ಅಧಿಕಾರಿಗಳ ಮೇಲೆ ಕೋರ್ಟ್‌ಗಳು ಕ್ರಮ ತೆಗೆದುಕೊಳ್ಳಬಹುದಾಗಿದೆ ಎಂದು ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳುತ್ತಾರೆ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳ ಹಲವು ನಿರ್ದೇಶನಗಳನ್ನು ಉಲ್ಲಂಘಿಸಿರುವ ಪೊಲೀಸರು ಕೂಡ ಶಿಸ್ತು ಕ್ರಮ ಎದುರಿಸುವ ಸಾಧ್ಯತೆ ಇದೆ. ಈ ಸರಣಿಯನ್ನು ನೋಡುವ ಕ್ರಿಮಿನಲ್‌ಗಳಿಗೆ ಇದು ಪೊಲೀಸರನ್ನು ದಿಕ್ಕು ತಪ್ಪಿಸಲು ಮತ್ತು ಸಾಕ್ಷ್ಯಗಳನ್ನು ನಾಶಮಾಡಲು ಉತ್ತಮ ಅಧ್ಯಯನವಾಗಲಿದೆ.

ಮಧು ಜಿ.ಸಿ
ಮಣಿಪಾಲ್ ವಿಶ್ವವಿದ್ಯಾಲಯದಿಂದ ಸಾಮಾಜಿಕ ಮಾನವಶಾಸ್ತ್ರ ವಿಭಾಗದಲ್ಲಿ ಪದವಿ ಪಡೆದಿದ್ದಾರೆ ಮತ್ತು ಸಾಮಾಜಿಕ ಸಮಸ್ಯೆಗಳಿಗೆ ಸಕ್ರಿಯವಾಗಿ ಸ್ಪಂದಿಸುತ್ತಾರೆ.

ಕನ್ನಡಕ್ಕೆ: ಮುತ್ತುರಾಜ್


ಇದನ್ನೂ ಓದಿ: ವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...