Homeಕರ್ನಾಟಕಕರ್ನಾಟಕದಲ್ಲಿ ಕಾಂಗ್ರೆಸ್ ಗೆ ವಿಲನ್ ಆದರೆ ಸಿದ್ದರಾಮಯ್ಯ?

ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ವಿಲನ್ ಆದರೆ ಸಿದ್ದರಾಮಯ್ಯ?

ಮೋದಿ ಎದುರು ಸಮರ್ಥವಾದ ಸೈದ್ಧಾಂತಿಕ ನಾಯಕತ್ವ ನೀಡುವರೆಂಬ ನಿರೀಕ್ಷೆ ಹುಟ್ಟಿಸಿದ್ದ ಸಿದ್ದರಾಮಯ್ಯನವರು ಹೀಗೆ ಮಾಡಿದ್ದು ಹೌದೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕಿದೆ.

- Advertisement -
- Advertisement -

| ಸುನೀಲ್ ಶಿರಸಿಂಗಿ |

ಕರ್ನಾಟಕ ಕಾಂಗ್ರೆಸ್‍ನ ದಂಡನಾಯಕನಾಗಿ, ಯಶಸ್ವಿ ಮುಖ್ಯಮಂತ್ರಿಯಾಗಿ 5 ವರ್ಷ ಪೂರೈಸಿ, ಬಡ ಮಧ್ಯಮ ವರ್ಗದ ಆಶಾಕಿರಣವಾಗಿದ್ದ ಸಿದ್ಧರಾಮಯ್ಯ ಇಂದು ಅದೇ ಕಾಂಗ್ರೆಸ್ ಪಕ್ಷದ ವಿಲನ್ ಆಗಿ ಕಾಣುತ್ತಿದ್ದಾರೆ. ಎಕ್ಸಿಟ್ ಪೋಲ್ ಬಂದತಕ್ಷಣ ಭಿನ್ನಮತದ ಮಾತುಗಳನ್ನು ಆಡಲು ಶುರು ಮಾಡಿದ ರೋಷನ್‍ಬೇಗ್‍ರ ಪ್ರಧಾನ ಟಾರ್ಗೆಟ್ ಸಿದ್ದರಾಮಯ್ಯನವರೇ ಆಗಿದ್ದರು. ಬಹುಶಃ ಈ ವರಸೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.

ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ, ಕಾಂಗ್ರೆಸ್ ವಲಯದಿಂದ ಹೊರಬಿದ್ದ ಅಸಮಾಧಾನದ ದನಿಗಳು ಹೀಗಿವೆ. ‘ನಾವು ಹೀಗೆ ಹೇಳಿದರೆ ಬೇರೆಯವರು ನಂಬದಿರಬಹುದು. ಆದರೆ, ಕಾಂಗ್ರೆಸ್ ಪಕ್ಷದ ಸಂಸದೀಯ ಪಕ್ಷದ ನಾಯಕನಾಗಿ ಮಿಂಚುತ್ತಿರುವ ಸಿದ್ಧರಾಮಯ್ಯನವರಿಗೆ ಕಾಂಗ್ರೆಸ್ ಪಕ್ಷ ಎಲ್ಲವನ್ನು ನೀಡಿದೆ. ಅವರ ಕನಸಾಗಿದ್ದ ಮುಖ್ಯಮಂತ್ರಿ ಪಟ್ಟವನ್ನು ಕಟ್ಟಿದೆ.. ಆದರೆ ಇದು ನಿಜ. ಕಳೆದೆರಡು ವರ್ಷಗಳಲ್ಲಿ ಅವರ ನಡೆಗಳನ್ನು ನೋಡುತ್ತಾ ಬಂದರೆ, ಅವರ ರಾಜಕೀಯ ಲೆಕ್ಕಾಚಾರದ ಒಳಸುಳಿಗಳನ್ನು ಬಿಡಿಸುತ್ತಾ ಬಂದರೆ ಕಾಣುವುದು ಅವರ ಸ್ವಾರ್ಥ ರಾಜಕೀಯ ಮತ್ತು ದುರಹಂಕಾರದ ನಡೆ ಬಿಟ್ಟು ಮತ್ತೇನು ಇಲ್ಲ.’

‘ಮುಖ್ಯಮಂತ್ರಿಯ ಪಟ್ಟ ತಪ್ಪಿದ್ದರಿಂದ ಹತಾಶಗೊಂಡಿದ್ದ ಅಹಿಂದ ನಾಯಕ ಸಿದ್ಧರಾಮಯ್ಯರನ್ನು, ಕಾಂಗ್ರೆಸ್ ಪಕ್ಷ ರತ್ನಗಂಬಳಿ ಹಾಸಿ ಸ್ವಾಗತಿಸಿತು. ನಂತರ ಪಕ್ಷದ ನಿಷ್ಠಾವಂತ ಮಲ್ಲಿಕಾರ್ಜುನ ಖರ್ಗೆಯವರ ಹಿರಿತನವನ್ನು ಕಡೆಗಣಿಸಿ ಮುಖ್ಯಮಂತ್ರಿಯನ್ನಾಗಿ ಮಾಡಿತು. ಅಧಿಕಾರ ಸಿಕ್ಕ ಕೆಲದಿನಗಳ ಮಟ್ಟಿಗೆ ಶಾಂತವಾಗಿದ್ದ ಸಿದ್ದು, ನಂತರ ತಮ್ಮ ಬತ್ತಳಿಕೆಯಿಂದ ಒಂದೊಂದೆ ಬಾಣಗಳನ್ನು ಬಿಡತೊಡಗಿದರು. ತಮ್ಮನ್ನು ಕಾಂಗ್ರೆಸ್ ಪಕ್ಷದಲ್ಲಿ ಸ್ಥಾಪಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದ ಎಚ್.ವಿಶ್ವನಾಥ್‍ರನ್ನು ನಿರ್ಲಕ್ಷಿಸಿ ದೂರ ಮಾಡಿಕೊಂಡರು.’

ಈ ಅವಧಿಯಲ್ಲಿ ಕಾಂಗ್ರೆಸ್‍ನ ಜನಪ್ರಿಯತೆಯನ್ನು ಹೆಚ್ಚಿಸಿದ್ದು ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಸೋತರೂ ಮತಪ್ರಮಾಣ ಹೆಚ್ಚಿಸುವಲ್ಲಿ ಸಿದ್ದರಾಮಯ್ಯನವರ ಪಾತ್ರ ಇಲ್ಲವೇ? ‘ಹೌದು ಇದೆ. ಅದರಲ್ಲಿ ಸಂಶಯವಿಲ್ಲ. ಜೊತೆಗೆ ಈ ಅವಧಿಯಲ್ಲಿ ಅವರು ಯಡಿಯೂರಪ್ಪನವರಿಗಿಂತ ದೊಡ್ಡ ಮಾಸ್ ಲೀಡರ್ ಆಗಿ ಬೆಳೆದರು. ಅವರನ್ನು ಯಾರೂ ನಿರ್ಲಕ್ಷಿಸಲಾಗದ ಪ್ರಮಾಣಕ್ಕೆ ಸಿದ್ದರಾಮಯ್ಯನವರ ಶಕ್ತಿ ಹೆಚ್ಚಿತು. ಅದೇ ಮುಳುವಾದದ್ದು. ಏಕೆಂದರೆ, ಒಂದು ಸಮತೋಲನ ಕಾಪಾಡಬೇಕಿದ್ದ ಕಾಂಗ್ರೆಸ್ ಪಕ್ಷ ಸಿದ್ದುರ ಅಲೆಯಲ್ಲಿ ತೇಲಿ ಹೋಯಿತು. ನಂತರ ಮಲ್ಲಿಕಾರ್ಜುನ ಖರ್ಗೆ ಹೆಗಲ ಮೇಲೆ ಬಂದೂಕ ಇಟ್ಟು ಮುಸ್ಲಿಂ ನಾಯಕ ಖಮರುಲ್ ಇಸ್ಲಾಂ ಮತ್ತು ಹಳೆ ಮೈಸೂರು ಭಾಗದ ಹಿರಿಯ ದಲಿತ ನಾಯಕ ಶ್ರೀನಿವಾಸ ಪ್ರಸಾದ್ ಮೇಲೆ ಗುಂಡು ಹಾರಿಸಿದರು. ಅಂದರೆ ಒಂದು ಹಂತದಲ್ಲಿ ರಾಜಕೀಯವಾಗಿ ಗೆದ್ದರು. ಆದರೆ ನಾಯಕನಾಗಿ, ಮುತ್ಸದ್ದಿಯಾಗಿ ಸೋಲುತ್ತಾ ಸಾಗಿದ್ದರು.’

‘2018ರ ವಿಧಾನ ಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ಸ್ಪಷ್ಟ ಸಾಧ್ಯತೆಗಳಿದ್ದವು. ಆದರೆ ಅವರ ಕೆಲವು ತಪ್ಪು ನಡೆ ಮತ್ತು ಅತೀ ಆತ್ಮವಿಶ್ವಾಸದಿಂದ ಆ ಅವಕಾಶವನ್ನು ಹಾಳುಮಾಡಿದರು. ಮೊದಲಿಗೆ ತಮ್ಮ ಸ್ವಂತ ಕ್ಷೇತ್ರವಾದ ವರುಣಾದಲ್ಲಿ ರಾಜಕೀಯದ ಆಸಕ್ತಿಯೇ ಇಲ್ಲದಿದ್ದ ತಮ್ಮ ಮಗನನ್ನು ಸ್ಥಾಪಿಸಲು ಹೊರಟಿದ್ದರು. ತಾವು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹಾರಿದ್ದು ಒಂದೆಡೆಯಾದರೆ, ಬಾದಾಮಿಯಲ್ಲಿ ಸ್ಪರ್ಧಿಸಿದ್ದು ಪಕ್ಷಕ್ಕೆ ದೊಡ್ಡ ಹೊಡೆತ ಕೊಟ್ಟಿತು. ಜೊತೆಗೆ ರಾಜ್ಯದಲ್ಲಿ ಪ್ರಬಲ ಕೋಮುಗಳ ಧೃವೀಕರಣದ ಸ್ಪಷ್ಟ ಸೂಚನೆಗಳಿದ್ದರು, ಅದಕ್ಕೆ ಪ್ರತಿ ತಂತ್ರ ಹೆಣೆಯುವುದನ್ನು ಬಿಟ್ಟು ದೊಡ್ಡಗೌಡರನ್ನು ಏಕವಚನದಲ್ಲಿ ನಿಂದಿಸುತ್ತಾ ಸಾಗಿದ್ದು ಪಕ್ಷಕ್ಕೆ ಇನ್ನಷ್ಡು ಹೊಡೆತ ಕೊಟ್ಟಿತು’.

‘ಪಕ್ಷ ಬಹುಮತ ಪಡೆಯದೆ JDS ಜೊತೆ ಅಧಿಕಾರ ಹಂಚಿಕೊಳ್ಳಬೇಕಾಗಿ ಬಂದಿದ್ದರಿಂದ ಇನ್ನಾದರು ಸಿದ್ದು ನಡೆಗಳಿಗೆ ಬ್ರೇಕ್ ಬೀಳುತ್ತೆ ಅಂತ ಅಂದುಕೊಂಡಿದ್ದ ಅವರ ಅಭಿಮಾನಿಗಳಿಗೆ ಭಾರಿ ನಿರಾಶೆ ಕಾದಿತ್ತು. ದೋಸ್ತಿ ಸರಕಾರದಲ್ಲಿ ಬಂಡಾಯವೆದ್ದ ಕಾಂಗ್ರೆಸ್ ಪಕ್ಷದ ಶಾಸಕರ ಬೆನ್ನಿಗೆ ಸಿದ್ದು ಕೈ ಇದ್ದದ್ದು ಹೈಕಮಾಂಡ್ ಗಮನಿಸಲೇ ಇಲ್ಲ.’ ಇಲ್ಲಿಂದಾಚೆಗೆ ಹೇಳುವ ಮಾತುಗಳು ಆಶ್ಚರ್ಯಕರವಾಗಿದೆ. ‘ಇಷ್ಟಾದರು ಸುಮ್ಮನಾಗದ ಸಿದ್ಧರಾಮಯ್ಯ ರಾಜ್ಯ ಕಾಂಗ್ರೆಸ್ ಪಕ್ಷದ ಪಕ್ಷಾತೀತ ನಾಯಕನಾಗಲು ಹೊರಟರು. ಅದರ ಭಾಗವಾಗಿ ಅವರ ಮುಂದಿನ ಗುರಿ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ.

ಅದಕ್ಕಾಗಿ ಬತ್ತಳಿಕೆಯಿಂದ ಹೊರಬಿದ್ದ ಬಾಣವೇ ಉಮೇಶ್ ಜಾಧವ್. ಧರ್ಮಸಿಂಗ್ ಸಾವಿನ ನಂತರ ಅನಾಥವಾಗಿದ್ದ ಜಾಧವರನ್ನು ಬಳಸಿ ಮಲ್ಲಿಕಾರ್ಜುನ ಖರ್ಗೆ ಬಗ್ಗುಬಡೆಯುವ ಪ್ಲಾನ್ ಮಾಡಿದರು. ಕಲಬುರಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿದ್ಧರಾಮಯ್ಯ ದ್ರೋಹ ಬಗೆದರು. ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಖರ್ಗೆ ಅವರು ಸಿದ್ಧರಾಮಯ್ಯರ ಜೊತೆಗೆ ನಿಂತಿದ್ದರು. ಖರ್ಗೆ ಅವರ ವಿರುದ್ಧ ಉಮೇಶ್ ಜಾಧವ ಅವರನ್ನು ಕಳಿಸುವ ಆಟ ಆಡಲು ಪ್ರಯತ್ನಿಸಿದರು. ಅದು ಕೈಮೀರಿ ಹೋದ ನಂತರ ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನಿಸಿದರೂ ಫಲಕಾರಿಯಾಗಲಿಲ್ಲ. ಬಿಜೆಪಿ ಸೇರಲಿಕ್ಕೆ ಜಾರಕಿಹೊಳಿ ಜೊತೆ ಮುಂಬೈಗೆ ಹೋದ ಜಾಧವ್ ನಂತರ ಕಾಂಗ್ರೆಸ್ಸಿಗರ ಕೈಗೆ ಸಿಗಲಿಲ್ಲ.’

‘ಮಂಡ್ಯದಲ್ಲಿ ಗೌಡರ ಕುಟುಂಬವನ್ನು ಹತೋಟಿಯಲ್ಲಿ ಇಡುವುದಕ್ಕಾಗಿ ಚಿತ್ರನಟ ಅಂಬರೀಶ ಅವರ ಪತ್ನಿ ಸುಮಲತಾ ಅವರನ್ನು ಕಣಕ್ಕೆ ಇಳಿಯುವಂತೆ ನೋಡಿಕೊಂಡರು. ಸುಮಲತಾ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೂ ಸಿದ್ಧರಾಮಯ್ಯ ಅವರ ಬಣದ ಕಾಂಗ್ರೆಸ್ಸಿಗರು ಅವರ ಜೊತೆಗಿದ್ದರು ಎಂಬುದು ಗುಟ್ಟಿನ ಸಂಗತಿಯೇನಲ್ಲ. ಸುಮಲತಾ ಅವರಿಗೆ ದೊರೆತ ಕಾಂಗ್ರೆಸ್ ಬೆಂಬಲದ ಕಾರಣದಿಂದ ಮೈಸೂರು ಮತ್ತಿತರ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್‍ಗೆ ಜೆಡಿಎಸ್ ತನ್ನ ಸಂಪೂರ್ಣ ಸಹಕಾರ ನೀಡಲು ಸಾಧ್ಯವಾಗಲಿಲ್ಲ. ಕಲಬುರ್ಗಿಯ ಖರ್ಗೆಯವರ ಹಿನ್ನಡೆ ಬೀದರ್, ಕೊಪ್ಪಳ, ರಾಯಚೂರು, ಬಳ್ಳಾರಿ ಕ್ಷೇತ್ರಗಳ ಮೇಲೆಯೂ ಪರಿಣಾಮ ಬೀರಿತು. ಜೆಡಿಎಸ್ ತನ್ನ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಹೆಣಗಾಡುವಂತೆ ಮಾಡಿದ ಕಾಂಗ್ರೆಸ್ ಮತ್ತು ಸಿದ್ಧರಾಮಯ್ಯ ಅದಕ್ಕಾಗಿ ಬೆಲೆ ತೆರಬೇಕಾಯಿತು.’

ಮೇಲಿನ ಮಾತುಗಳೆಲ್ಲವೂ ಸತ್ಯ ಎಂದು ಹೇಳಲಾಗದೇ ಇದ್ದರೂ, ಸಂಪೂರ್ಣ ಅಲ್ಲಗಳೆಯುವುದೂ ಸಾಧ್ಯವಿಲ್ಲ ಎನ್ನುವ ರೀತಿಯಲ್ಲಿ ಸಿದ್ದರಾಮಯ್ಯನವರ ನಡೆಗಳಿವೆ. ಮೋದಿ ಎದುರು ಸಮರ್ಥವಾದ ಸೈದ್ಧಾಂತಿಕ ನಾಯಕತ್ವ ನೀಡುವರೆಂಬ ನಿರೀಕ್ಷೆ ಹುಟ್ಟಿಸಿದ್ದ ಸಿದ್ದರಾಮಯ್ಯನವರು ಹೀಗೆ ಮಾಡಿದ್ದು ಹೌದೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...