Homeಮುಖಪುಟಮುಸ್ಲಿಂ ಮತಗಳು ಬೇಕಾಗಿಲ್ಲ; ಅದಕ್ಕಾಗಿ ಅವರ ಬಳಿ ಹೋಗುವುದಿಲ್ಲ: ಅಸ್ಸಾಂ ಸಿಎಂ

ಮುಸ್ಲಿಂ ಮತಗಳು ಬೇಕಾಗಿಲ್ಲ; ಅದಕ್ಕಾಗಿ ಅವರ ಬಳಿ ಹೋಗುವುದಿಲ್ಲ: ಅಸ್ಸಾಂ ಸಿಎಂ

- Advertisement -
- Advertisement -

ಅಸ್ಸಾಂನಲ್ಲಿ ಬಂಗಾಳಿ ಮೂಲದ ಮುಸ್ಲಿಂ ಸಮುದಾಯದ ಮತಗಳು ಬಿಜೆಪಿಗೆ ಅಗತ್ಯವಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಶನಿವಾರ ಹೇಳಿದ್ದಾರೆ. ‘ಇಂಡಿಯಾ ಟುಡೇ ಕಾನ್ಕ್ಲೇವ್-2021’ ಕಾರ್ಯಕ್ರದಲ್ಲಿ ಅವರು ಮಾತನಾಡುತ್ತಿದ್ದರು.

“ನನಗೆ ಮಿಯಾ ಮತಗಳು ಬೇಡ, ನಾವು ಸಾಮರಸ್ಯದಿಂದ ಬದುಕುತ್ತೇವೆ. ನಾನು ಅವರ ಬಳಿ ಮತಕ್ಕಾಗಿ ಹೋಗುವುದಿಲ್ಲ, ಅವರು ನನ್ನ ಬಳಿಗೆ ಬರುವುದಿಲ್ಲ. ಅಸ್ಸಾಂ ಅಸ್ಮಿತೆ, ಸಂಸ್ಕೃತಿ ಮತ್ತು ಭೂಮಿಯನ್ನು ಕಳೆದುಕೊಂಡಿರುವುದಕ್ಕೆ ಮೂಲ ಕಾರಣ, ವಲಸಿಗ ಮುಸ್ಲಿಮರು ಎಂದು ರಾಜ್ಯದ ಅನೇಕ ಜನರು ನಂಬಿದ್ದಾರೆ” ಎಂದು ಹಿಮಾಂತ ಶರ್ಮಾ ಹೇದ್ದಾರೆ.

ಇದನ್ನೂ ಓದಿ: ಅಸ್ಸಾಂ: ಕ್ಯಾಮರಾ ಮುಂದೆಯೆ ಪೊಲೀಸರಿಂದ ಕ್ರೂರವಾಗಿ ಹತ್ಯೆಯಾದ ವ್ಯಕ್ತಿ ಅಕ್ರಮ ನಿವಾಸಿಯಲ್ಲ!

ಅಸ್ಸಾಂನಲ್ಲಿ ಬಂಗಾಳಿ ಆಡುಭಾಷೆಯ ಮುಸ್ಲಿಂ ಸಮುದಾಯವನ್ನು ‘ಮಿಯಾ ಮುಸ್ಲಿಮರು’ ಎಂದು ಸಾಮಾನ್ಯವಾಗಿ ಆಡುಮಾತಿನಲ್ಲಿ ಕರೆಯಲಾಗುತ್ತದೆ.

“ವಲಸಿಗ ಮುಸ್ಲಿಮರು ಜನಸಂಖ್ಯೆ ಹೆಚ್ಚಿಸುತ್ತಿರುವುದರಿಂದ ಅತಿಕ್ರಮಣ ನಡೆಯುತ್ತಿದೆ. ಅನೇಕ ಅಸ್ಸಾಮಿ ಜನರು ಈ ರೀತಿ ಯೋಚಿಸುತ್ತಾರೆ. ಈ ಪ್ರಕ್ರಿಯೆಯು ಸ್ವಾತಂತ್ರ್ಯ ಪೂರ್ವದಲ್ಲಿ ಆರಂಭವಾಯಿತು. ನಾನು ಈ ಇತಿಹಾಸದ ಹೊರೆಯನ್ನು ನನ್ನೊಂದಿಗೆ ಹೊತ್ತುಕೊಂಡಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮತದಾರರು ಮೂರ್ಖರಲ್ಲ, ಕಾಂಗ್ರೆಸ್‌ನ ಗೆಲ್ಲುವ ಅಭ್ಯರ್ಥಿಗೆ ಮತ ನೀಡುತ್ತಾರೆ: ಸಿದ್ದರಾಮಯ್ಯ

ಕಳೆದ ತಿಂಗಳಷ್ಟೇ ಸಿಪಜಾರ್‌ನ ಧೋಲ್ಪುರ್-3 ಗ್ರಾಮದಲ್ಲಿ ಒಕ್ಕಲೆಬ್ಬಿಸುವುದರ ವಿರುದ್ದ ಘರ್ಷಣೆಗಳು ನಡೆದಿದ್ದವು. ಈ ಘರ್ಷನೆಯಲ್ಲಿ ನಡೆದ ಪೊಲೀಸ್ ಗುಂಡಿನ ದಾಳಿಯಲ್ಲಿ ಇಬ್ಬರು ನಾಗರಿಕರು ಸಾವನ್ನಪ್ಪಿದ್ದರು. ಒಬ್ಬ ಪೊಲೀಸ್ ಸೇರಿದಂತೆ ಕನಿಷ್ಠ 12 ಮಂದಿ ಗಾಯಗೊಂಡಿದ್ದರು.

ಪೊಲೀಸರ ಗುಂಡಿಗೆ ನೆಲಕ್ಕುರುಳಿದ ವ್ಯಕ್ತಿಯನ್ನು ಪೋಲಿಸರ ಗುಂಪು ಥಳಿಸಿದ್ದು ಮಾತ್ರವಲ್ಲದೆ, ಸರ್ಕಾರಿ ಛಾಯಾಗ್ರಾಹಕ ಕೂಡಾ ವ್ಯಕ್ತಿಯ ಎದೆಯ ಮೇಲೆ ಕುಪ್ಪಳಿಸಿ ಅಮಾನವೀಯವಾಗಿ ಹಲ್ಲೆ ನಡೆಸಿದ್ದನು. ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ವಿಶ್ವದಾದ್ಯಂತ ಆಕ್ರೋಶಕ್ಕೆ ಕಾರಣವಾಯಿತು.

“ಅಸ್ಸಾಂನಲ್ಲಿ ಯಾವುದೇ ದ್ವೇಷದ ಪ್ರತಿಪಾದನೆಯನ್ನು ಮಾಡುತ್ತಿಲ್ಲ. ಸಾವಿರ ಕುಟುಂಬದ ಬಳಿ 77,000 ಎಕರೆ ಭೂಮಿ ಇರುವುದರಿಂದ ನಾವು ಅವರನ್ನು ಹೊರಹಾಕಿದ್ದೇವೆ. ನಮ್ಮ ನೀತಿಯೆಂದರೆ ಒಂದು ಕುಟುಂಬವು 2 ಎಕರೆಗಿಂತ ಹೆಚ್ಚು ಭೂಮಿಯನ್ನು ಆಕ್ರಮಿಸಬಾರದು. ನಾವು ಅನೇಕ ಜನರಿಗೆ ಭೂಮಿಯನ್ನು ನೀಡಬೇಕು. ಜನರು ಭೂಮಿಯನ್ನು ಅತಿಕ್ರಮಿಸಿದರೆ ನಾವು ಅವರನ್ನು ಹೊರಹಾಕಬೇಕು. ಹೊರಹಾಕುವುದು ನಿರಂತರ ಪ್ರಕ್ರಿಯೆ” ಎಂದು ಅಸ್ಸಾಂನಲ್ಲಿ ನಡೆಯುತ್ತಿರುವ ಒಕ್ಕಲೆಬ್ಬಿಸುವ ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಪೂರ್ವ ಸಮೀಕ್ಷೆಗಳನ್ನು ನಿಷೇಧಿಸಲು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಸ್ಸಾಂನಲ್ಲಿ 10 ಎಕರೆಗಿಂತ ಹೆಚ್ಚು ಜಮೀನು ಇರುವಕುಟುಂಬಗಳ ಸಂಖ್ಯೆ 89000. ಅದರಲ್ಲಿ, 1000 ಕುಟುಂಬಗಳನ್ನು, ಸೆಲೆಕ್ಟ್ ಮಾಡಿ ಹೊರ ಹಾಕಿದರೆ ನ್ಯಾಯವೆ? ರಾಜ್ಯ ಮುಖಂಡರು ಜಾತಿ, ಧರ್ಮ ಆಧರಿಸಿ ಈ ರೀತಿಯ ನ್ಯಾಯ ಕೊಟ್ಟರೆ, ಇವರು ಜನನಾಯಕರಾಗಲು ಯೋಗ್ಯರೇ?

  2. “ಮುಸ್ಲಿಮರ ಮತಗಳು ಬೇಕಾಗಿಲ್ಲ” ಎಂದು ಹೇಳುವುದು ಸಂವಿಧಾನ ವಿರೋಧಿ ಹೇಳಿಕೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...