Homeಮುಖಪುಟಮುಸ್ಲಿಂ ಮತಗಳು ಬೇಕಾಗಿಲ್ಲ; ಅದಕ್ಕಾಗಿ ಅವರ ಬಳಿ ಹೋಗುವುದಿಲ್ಲ: ಅಸ್ಸಾಂ ಸಿಎಂ

ಮುಸ್ಲಿಂ ಮತಗಳು ಬೇಕಾಗಿಲ್ಲ; ಅದಕ್ಕಾಗಿ ಅವರ ಬಳಿ ಹೋಗುವುದಿಲ್ಲ: ಅಸ್ಸಾಂ ಸಿಎಂ

- Advertisement -
- Advertisement -

ಅಸ್ಸಾಂನಲ್ಲಿ ಬಂಗಾಳಿ ಮೂಲದ ಮುಸ್ಲಿಂ ಸಮುದಾಯದ ಮತಗಳು ಬಿಜೆಪಿಗೆ ಅಗತ್ಯವಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಶನಿವಾರ ಹೇಳಿದ್ದಾರೆ. ‘ಇಂಡಿಯಾ ಟುಡೇ ಕಾನ್ಕ್ಲೇವ್-2021’ ಕಾರ್ಯಕ್ರದಲ್ಲಿ ಅವರು ಮಾತನಾಡುತ್ತಿದ್ದರು.

“ನನಗೆ ಮಿಯಾ ಮತಗಳು ಬೇಡ, ನಾವು ಸಾಮರಸ್ಯದಿಂದ ಬದುಕುತ್ತೇವೆ. ನಾನು ಅವರ ಬಳಿ ಮತಕ್ಕಾಗಿ ಹೋಗುವುದಿಲ್ಲ, ಅವರು ನನ್ನ ಬಳಿಗೆ ಬರುವುದಿಲ್ಲ. ಅಸ್ಸಾಂ ಅಸ್ಮಿತೆ, ಸಂಸ್ಕೃತಿ ಮತ್ತು ಭೂಮಿಯನ್ನು ಕಳೆದುಕೊಂಡಿರುವುದಕ್ಕೆ ಮೂಲ ಕಾರಣ, ವಲಸಿಗ ಮುಸ್ಲಿಮರು ಎಂದು ರಾಜ್ಯದ ಅನೇಕ ಜನರು ನಂಬಿದ್ದಾರೆ” ಎಂದು ಹಿಮಾಂತ ಶರ್ಮಾ ಹೇದ್ದಾರೆ.

ಇದನ್ನೂ ಓದಿ: ಅಸ್ಸಾಂ: ಕ್ಯಾಮರಾ ಮುಂದೆಯೆ ಪೊಲೀಸರಿಂದ ಕ್ರೂರವಾಗಿ ಹತ್ಯೆಯಾದ ವ್ಯಕ್ತಿ ಅಕ್ರಮ ನಿವಾಸಿಯಲ್ಲ!

ಅಸ್ಸಾಂನಲ್ಲಿ ಬಂಗಾಳಿ ಆಡುಭಾಷೆಯ ಮುಸ್ಲಿಂ ಸಮುದಾಯವನ್ನು ‘ಮಿಯಾ ಮುಸ್ಲಿಮರು’ ಎಂದು ಸಾಮಾನ್ಯವಾಗಿ ಆಡುಮಾತಿನಲ್ಲಿ ಕರೆಯಲಾಗುತ್ತದೆ.

“ವಲಸಿಗ ಮುಸ್ಲಿಮರು ಜನಸಂಖ್ಯೆ ಹೆಚ್ಚಿಸುತ್ತಿರುವುದರಿಂದ ಅತಿಕ್ರಮಣ ನಡೆಯುತ್ತಿದೆ. ಅನೇಕ ಅಸ್ಸಾಮಿ ಜನರು ಈ ರೀತಿ ಯೋಚಿಸುತ್ತಾರೆ. ಈ ಪ್ರಕ್ರಿಯೆಯು ಸ್ವಾತಂತ್ರ್ಯ ಪೂರ್ವದಲ್ಲಿ ಆರಂಭವಾಯಿತು. ನಾನು ಈ ಇತಿಹಾಸದ ಹೊರೆಯನ್ನು ನನ್ನೊಂದಿಗೆ ಹೊತ್ತುಕೊಂಡಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮತದಾರರು ಮೂರ್ಖರಲ್ಲ, ಕಾಂಗ್ರೆಸ್‌ನ ಗೆಲ್ಲುವ ಅಭ್ಯರ್ಥಿಗೆ ಮತ ನೀಡುತ್ತಾರೆ: ಸಿದ್ದರಾಮಯ್ಯ

ಕಳೆದ ತಿಂಗಳಷ್ಟೇ ಸಿಪಜಾರ್‌ನ ಧೋಲ್ಪುರ್-3 ಗ್ರಾಮದಲ್ಲಿ ಒಕ್ಕಲೆಬ್ಬಿಸುವುದರ ವಿರುದ್ದ ಘರ್ಷಣೆಗಳು ನಡೆದಿದ್ದವು. ಈ ಘರ್ಷನೆಯಲ್ಲಿ ನಡೆದ ಪೊಲೀಸ್ ಗುಂಡಿನ ದಾಳಿಯಲ್ಲಿ ಇಬ್ಬರು ನಾಗರಿಕರು ಸಾವನ್ನಪ್ಪಿದ್ದರು. ಒಬ್ಬ ಪೊಲೀಸ್ ಸೇರಿದಂತೆ ಕನಿಷ್ಠ 12 ಮಂದಿ ಗಾಯಗೊಂಡಿದ್ದರು.

ಪೊಲೀಸರ ಗುಂಡಿಗೆ ನೆಲಕ್ಕುರುಳಿದ ವ್ಯಕ್ತಿಯನ್ನು ಪೋಲಿಸರ ಗುಂಪು ಥಳಿಸಿದ್ದು ಮಾತ್ರವಲ್ಲದೆ, ಸರ್ಕಾರಿ ಛಾಯಾಗ್ರಾಹಕ ಕೂಡಾ ವ್ಯಕ್ತಿಯ ಎದೆಯ ಮೇಲೆ ಕುಪ್ಪಳಿಸಿ ಅಮಾನವೀಯವಾಗಿ ಹಲ್ಲೆ ನಡೆಸಿದ್ದನು. ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ವಿಶ್ವದಾದ್ಯಂತ ಆಕ್ರೋಶಕ್ಕೆ ಕಾರಣವಾಯಿತು.

“ಅಸ್ಸಾಂನಲ್ಲಿ ಯಾವುದೇ ದ್ವೇಷದ ಪ್ರತಿಪಾದನೆಯನ್ನು ಮಾಡುತ್ತಿಲ್ಲ. ಸಾವಿರ ಕುಟುಂಬದ ಬಳಿ 77,000 ಎಕರೆ ಭೂಮಿ ಇರುವುದರಿಂದ ನಾವು ಅವರನ್ನು ಹೊರಹಾಕಿದ್ದೇವೆ. ನಮ್ಮ ನೀತಿಯೆಂದರೆ ಒಂದು ಕುಟುಂಬವು 2 ಎಕರೆಗಿಂತ ಹೆಚ್ಚು ಭೂಮಿಯನ್ನು ಆಕ್ರಮಿಸಬಾರದು. ನಾವು ಅನೇಕ ಜನರಿಗೆ ಭೂಮಿಯನ್ನು ನೀಡಬೇಕು. ಜನರು ಭೂಮಿಯನ್ನು ಅತಿಕ್ರಮಿಸಿದರೆ ನಾವು ಅವರನ್ನು ಹೊರಹಾಕಬೇಕು. ಹೊರಹಾಕುವುದು ನಿರಂತರ ಪ್ರಕ್ರಿಯೆ” ಎಂದು ಅಸ್ಸಾಂನಲ್ಲಿ ನಡೆಯುತ್ತಿರುವ ಒಕ್ಕಲೆಬ್ಬಿಸುವ ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಪೂರ್ವ ಸಮೀಕ್ಷೆಗಳನ್ನು ನಿಷೇಧಿಸಲು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಸ್ಸಾಂನಲ್ಲಿ 10 ಎಕರೆಗಿಂತ ಹೆಚ್ಚು ಜಮೀನು ಇರುವಕುಟುಂಬಗಳ ಸಂಖ್ಯೆ 89000. ಅದರಲ್ಲಿ, 1000 ಕುಟುಂಬಗಳನ್ನು, ಸೆಲೆಕ್ಟ್ ಮಾಡಿ ಹೊರ ಹಾಕಿದರೆ ನ್ಯಾಯವೆ? ರಾಜ್ಯ ಮುಖಂಡರು ಜಾತಿ, ಧರ್ಮ ಆಧರಿಸಿ ಈ ರೀತಿಯ ನ್ಯಾಯ ಕೊಟ್ಟರೆ, ಇವರು ಜನನಾಯಕರಾಗಲು ಯೋಗ್ಯರೇ?

  2. “ಮುಸ್ಲಿಮರ ಮತಗಳು ಬೇಕಾಗಿಲ್ಲ” ಎಂದು ಹೇಳುವುದು ಸಂವಿಧಾನ ವಿರೋಧಿ ಹೇಳಿಕೆ.

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....