Homeಮುಖಪುಟ‘ನೂರು ಜನರ ಗುಂಪು ಹಲ್ಲೆ ಮಾಡಿತು; ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಸೂಚಿಸಿತು’

‘ನೂರು ಜನರ ಗುಂಪು ಹಲ್ಲೆ ಮಾಡಿತು; ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಸೂಚಿಸಿತು’

- Advertisement -
- Advertisement -

“ನೂರು ಜನರ ಗುಂಪು ಹಲ್ಲೆ ಮಾಡಿತು, ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಎಚ್ಚರಿಸಿತು” – ಹೀಗೆ ಮಧ್ಯಪ್ರದೇಶದ ಮುಸ್ಲಿಂ ಕುಟುಂಬವೊಂದು ಆರೋಪಿಸಿದೆ.

ಮಧ್ಯಪ್ರದೇಶದ ಇಂದೋರ್‌ ಸಮೀಪದ ಕಂಪೆಲ್‌ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಏಳು ಜನರಿರುವ ಮುಸ್ಲಿಂ ಕುಟುಂಬದ ಮೇಲೆ ಶನಿವಾರ ರಾತ್ರಿ 8.30ರ ವೇಳೆಗೆ ಸುಮಾರು ನೂರು ಜನರಿದ್ದ ಕೇಸರಿಪಡೆ ಹಲ್ಲೆ ನಡೆಸಿದೆ. ಅಲ್ಲದೆ ಮನೆ ಖಾಲಿ ಮಾಡಿ, ಊರು ಬಿಡುವಂತೆ ಹಲ್ಲೆಕೋರ ಗುಂಪು ಮುಸ್ಲಿಂ ಕುಟುಂಬಕ್ಕೆ ಧಮ್ಕಿ ಹಾಕಿದೆ.

ಒಂದು ತಿಂಗಳ ಹಿಂದೆಯೇ ಊರು ಬಿಡುವಂತೆ ಈ ಹಲ್ಲೆಕೋರ ಗುಂಪು ಎಚ್ಚರಿಸಿತ್ತು. ಶನಿವಾರದೊಳಗೆ ಮನೆ ಖಾಲಿ ಮಾಡುವಂತೆ ಎಚ್ಚರಿಸಿತ್ತು. ಕುಟುಂಬ ಊರು ಬಿಟ್ಟು ಹೋಗಲಿಲ್ಲವೆಂದು ಶನಿವಾರ ದಾಳಿ ಮಾಡಿರುವ ಹಲ್ಲೆಕೋರರು, `ಜೈಶ್ರೀರಾಮ್‌’ ಎಂದು ಘೋಷಣೆ ಕೂಗಿದ್ದಾರೆ ಎಂದು ದಾಳಿಗೊಳಗಾದ ಕುಟುಂಬ ಆರೋಪಿಸಿದೆ. ಆದರೆ, “ಎರಡು ಗುಂಪುಗಳ ನಡುವೆ ಹಣದ ವಿಚಾರವಾಗಿ ಜಗಳವಾಗಿದೆ. ಎರಡು ಗುಂಪುಗಳಿಂದಲೂ ದೂರುಗಳು ಬಂದಿವೆ” ಎಂದು ಪೊಲೀಸರು ಹೇಳಿದ್ದಾರೆ.

ಈ ಕುಟುಂಬವು ಎರಡು ವರ್ಷಗಳ ಹಿಂದೆ ನೀಮಾರ್‌ನಿಂದ ಕಂಪೇಲ್‌ಗೆ ಬಂದು ನೆಲೆಸಿತ್ತು. ಜೀವನೋಪಾಯಕ್ಕಾಗಿ ಟ್ರಾಲಿಗಳು ಹಾಗೂ ಇತರ ಕೃಷಿ ಉಪಕರಣಗಳನ್ನು ತಯಾರಿಸಿ ಮಾರುತ್ತಿತ್ತು ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿರಿ: ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

ಹಲ್ಲೆಗೊಳಗಾದ 46 ವರ್ಷದ ಫಾರುಕ್‌ ಲೋಹರ್‌ ಅವರ ಪುತ್ರ ಶಾರುಖ್‌ ಲೋಹರ್‌‌ ಅವರು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದು, “ಅವರು ಒಳಗೆ ನುಗ್ಗಿ ರಾಡ್‌ಗಳನ್ನು ಬಳಸಿ ನಮ್ಮನ್ನು ಹೊಡೆಯಲು ಪ್ರಾರಂಭಿಸಿದರು. ಅವರು ನನ್ನ ತಂದೆಯನ್ನು ಪದೇ ಪದೇ ಹೊಡೆಯಲು ಪ್ರಾರಂಭಿಸಿದರು. ನನ್ನ ಚಿಕ್ಕಪ್ಪ ಮಧ್ಯಪ್ರವೇಶಿಸಿದಾಗ ಅವರನ್ನೂ ಹೊಡೆದರು. ‘ನಾವು ನಿಮಗೆ ಖಾಲಿ ಮಾಡುವಂತೆ ಹೇಳಿದ್ದೆವು, ಇಲ್ಲದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕೆಂದು ಎಚ್ಚರಿಸಿದ್ದೆವು’ ಎಂಬುದಾಗಿ ಹೇಳಿದರು” ಎಂದು ಶಾರುಖ್‌ ಆರೋಪಿಸಿದ್ದಾರೆ.

ಕುಟುಂಬವನ್ನು ನೋಡಲು ಬಂದಿದ್ದ ಶಾರುಖ್‌ ಅವರ ಸಹೋದರಿ ಫೌಸಿಯಾ ಕೂಡ ಘಟನೆ ವೇಳೆ ಸ್ಥಳದಲ್ಲಿದ್ದು, ಅವರು ಕೂಡ ಪತ್ರಿಕೆಯೊಂದಿಗೆ ಮಾತನಾಡಿದ್ದಾರೆ. “ಕಾರಿನಲ್ಲಿ ಬಂದ ಈ ಜನರ ಕೈಯಲ್ಲಿ ರಾಡುಗಳು ಇದ್ದವು. ಈ ಘಟನೆಯ ಚಿತ್ರೀಕರಣ ಮಾಡಲು ನಾನು ಮೊಬೈಲ್‌ ತೆಗೆದುಕೊಂಡಾಗ ನನ್ನ ಕೈ ಹಿಡಿದು ಎಳೆದು ಮೊಬೈಲ್‌ ಕಿತ್ತುಕೊಂಡು ಪುಡಿಪುಡಿ ಮಾಡಿದರು” ಎಂದು ಆಪಾದಿಸಿದ್ದಾರೆ.

ಸುಮಾರು 25 ನಿಮಿಷಗಳ ಕಾಲ ಘಟನೆ ನಡೆದಿದೆ. ನಂತರ ಕುಟುಂಬವು ಖುಡೆಲ್ ಪೊಲೀಸ್ ಠಾಣೆಗೆ ಧಾವಿಸಿದೆ, ಅಲ್ಲಿಂದ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಇಂದೋರ್‌ನ ಮಹಾರಾಜ ಯಶವಂತರಾವ್ ಆಸ್ಪತ್ರೆಗೆ ಕಳುಹಿಸಲಾಯಿತು. ನಂತರ ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

“ಕಳೆದ ತಿಂಗಳು ಅದೇ ಯುವಕರು ಬಂದು ಊರು ಬಿಟ್ಟು ಹೋಗುವಂತೆ ನಮಗೆ ಸೂಚಿಸಿದ್ದರು. ನಾವು ನಮ್ಮ ಮನೆಯ ಹತ್ತಿರ ನಿವೇಶನ ಖರೀದಿಸಲಿದ್ದೇವೆ ಎಂದು ಅವರಿಗೆ ತಿಳಿದಿತ್ತು. ಅವರು ಅದನ್ನು ಇಷ್ಟಪಡಲಿಲ್ಲ. ನಾವು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರಿಂದ, ಮನೆಯ ಹತ್ತಿರದಲ್ಲಿ ಒಂದು ನಿವೇಶನ ಖರೀದಿಸಬೇಕೆಂದಿದ್ದೆವು. ಆದರೆ ಅವರ ಬೆದರಿಕೆಯ ನಂತರ, ನಾವು ಭೂ ಒಪ್ಪಂದವನ್ನು ರದ್ದುಗೊಳಿಸಿದೆವು. ಪ್ಲಾಟ್ ಅನ್ನು ಖರೀದಿಸಲಿಲ್ಲ. ಆದರೆ ಸರ್ಪಂಚ್ ಅವರು ಬಂದು -ಆ ಹುಡುಗರು ಕೇವಲ ಬಿಸಿ ರಕ್ತದವರು. ಚಿಂತೆ ಮಾಡಬೇಡಿ- ಎಂದು ಹೇಳಿದ್ದರಿಂದ ನಾವು ಮನೆ ಖಾಲಿ ಮಾಡಲಿಲ್ಲ” ಎಂದು ಶಾರುಖ್ ಹೇಳಿಕೆ ನೀಡಿದ್ದಾರೆ.

ಲೋಹರ್‌ ಕುಟುಂಬದ ದೂರಿನ ಅನ್ವಯ ಖುದೀಲ್‌‌ ಪೊಲೀಸರು 9 ಮಂದಿಯ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 323, 506 , 29, 427, 147, 148 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಬ್ ಇನ್ಸ್‌ಪೆಕ್ಟರ್ ವಿಶ್ವಜೀತ್ ತೋಮರ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದು, “ಲೋಹರ್ ಕುಟುಂಬಕ್ಕೆ ಟ್ರಾಲಿ ನಿರ್ಮಿಸಲು ಇತರ ಗುಂಪಿನಿಂದ ಸ್ವಲ್ಪ ಹಣವನ್ನು ನೀಡಲಾಗಿತ್ತು. ಆದರೆ ಅವರು ಟ್ರಾಲಿಯನ್ನು ತಯಾರಿಸಲಿಲ್ಲ ಅಥವಾ ಹಣವನ್ನು ಹಿಂದಿರುಗಿಸಲಿಲ್ಲ, ಅದು ಘಟನೆಯನ್ನು ಪ್ರಚೋದಿಸಿದಂತೆ ತೋರುತ್ತದೆ. ಎರಡು ಗುಂಪುಗಳು ಜಗಳವಾಡಿಕೊಂಡಿವೆ. ಹಳ್ಳಿಯ ಬಳಿ ವಾಸಿಸುತ್ತಿರುವ ವಿಕಾಸ್ ಪಟೇಲ್ ದೂರಿನ ಆಧಾರದ ಮೇಲೆ ಪ್ರತಿದೂರು ದಾಖಲಿಸಲಾಗಿದೆ” ಎಂದಿದ್ದಾರೆ.

“ಈ ಹಲ್ಲೆಕೋರರು ಆರ್‌ಎಸ್‌ಎಸ್‌ಗೆ ಸೇರಿದವರು ಮತ್ತು ಒಂದು ತಿಂಗಳ ಹಿಂದೆ ಗ್ರಾಮವನ್ನು ತೊರೆಯುವಂತೆ ಬೆದರಿಕೆ ಹಾಕಿದ್ದಾರೆ” ಎಂದು ಕುಟುಂಬದ ಆರೋಪದ ಬಗ್ಗೆ ಕೇಳಿದಾಗ ಇನ್‌ಸ್ಪೆಕ್ಟರ್‌ ತೋಮರ, “ಅಂತಹ ಯಾವುದೇ ಮಾಹಿತಿ ನಮಗೆ ದೊರೆತ್ತಿಲ್ಲ. ಎಫ್‌ಐಆರ್ ನೋಂದಾಯಿಸುವಾಗ ಈ ಮಾಹಿತಿಯನ್ನು ನಮಗೆ ನೀಡಲಾಗಿಲ್ಲ. ನಮಗೆ ಅದರ ಅರಿವಿಲ್ಲ” ಎಂದಿದ್ದಾರೆ.

ಇದನ್ನೂ ಓದಿರಿ: ಮುಸ್ಲಿಂ ಮತಗಳು ಬೇಕಾಗಿಲ್ಲ; ಅದಕ್ಕಾಗಿ ಅವರ ಬಳಿ ಹೋಗುವುದಿಲ್ಲ: ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮುಸ್ಲಿಂ ಕುಟುಂಬದ ಮೇಲೆ ಹಲ್ಲೆ ಮಾಡಿ, ಅವರನ್ನು ಊರು ಬಿಡುವಂತೆ ಬೆದರಿಕೆ ಹಾಕಿರುವ ಈ ದುರ್ಘಟನೆ ಖಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...